AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

LPG Gas Cylinder Price: ಗೃಹಬಳಕೆ ಸಿಲಿಂಡರ್ ಬೆಲೆ 50 ರೂಪಾಯಿ ಏರಿಕೆ

Gas Cylinder Price in Bengaluru: 19 ಕೆಜಿ ತೂಕದ ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆಯು ₹ 8.50 ಹೆಚ್ಚಾಗಿದೆ.

LPG Gas Cylinder Price: ಗೃಹಬಳಕೆ ಸಿಲಿಂಡರ್ ಬೆಲೆ 50 ರೂಪಾಯಿ ಏರಿಕೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Jul 06, 2022 | 9:47 AM

Share

ಬೆಂಗಳೂರು: ಗೃಹಬಳಕೆ ಮತ್ತು ವಾಣಿಜ್ಯ ಬಳಕೆಯ ಎಲ್​ಪಿಜಿ ಸಿಲಿಂಡರ್​ ಬೆಲೆಯನ್ನು ಬುಧವಾರದಿಂದ (ಜುಲೈ 6) ಹೆಚ್ಚಿಸಲಾಗಿದೆ. ಗೃಹಬಳಕೆ ಸಿಲಿಂಡರ್​ ದರ ₹ 50 ಹೆಚ್ಚಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸಿಲಿಂಡರ್ ಬೆಲೆಯು ಈವರೆಗೆ ₹ 1,003 ಇತ್ತು. ಇನ್ನು ಮುಂದೆ ₹ 1,053 ಆಗಲಿದೆ. ಬೆಂಗಳೂರಿನಲ್ಲಿ ಈವರೆಗೆ ₹ 1,005.50 ಇತ್ತು. ಇನ್ನು ಮುಂದೆ ಇದು ₹ 1,055.50 ಆಗಲಿದೆ. ಕಳೆದ ಏಪ್ರಿಲ್ ತಿಂಗಳಲ್ಲಿ ಸಿಲಿಂಡರ್ ಬೆಲೆಯನ್ನು ₹ 53.5ರಷ್ಟು ಹೆಚ್ಚಿಸಿತ್ತು.

ಭಾರತದ ವಿವಿಧ ಪ್ರಮುಖ ನಗರಗಳಲ್ಲಿ 14.2 ಕೆಜಿ ತೂಕದ, ಸಬ್ಸಿಡಿ ರಹಿತ, ಗೃಹಬಳಕೆ ಎಲ್​ಪಿಜಿ ಸಿಲಿಂಡರ್​ ಬೆಲೆಯು ಹೀಗಿದೆ. ದೆಹಲಿ; ₹ 1,053, ಮುಂಬೈ; ₹ 1,052, ಕೊಲ್ಕತ್ತಾ; ₹ 1,079, ಚೆನ್ನೈ; ₹ 1068.50.

5 ಕೆಜಿ ತೂಕದ ಗೃಹಬಳಕೆ ಸಿಲಿಂಡರ್​ ದರವನ್ನೂ ಪೆಟ್ರೋಲಿಯಂ ಕಂಪನಿಗಳು (Oil Marketing Companies – OMCs) ಹೆಚ್ಚಿಸಿವೆ. ಪ್ರತಿ 5 ಕೆಜಿ ತೂಕದ ಸಿಲಿಂಡರ್ ಬೆಲೆಯು ₹ 18 ಹೆಚ್ಚಾಗಿದೆ. 19 ಕೆಜಿ ತೂಕದ ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆಯು ₹ 8.50 ಹೆಚ್ಚಾಗಿದೆ. ಈ ಹಿಂದೆ ಮೇ 19ರಂದು ವಾಣಿಜ್ಯ ಬಳಕೆ ಸಿಲಿಂಡರ್​ಗಳ ಬೆಲೆ ₹ 3ರಷ್ಟು ಹೆಚ್ಚಾಗಿತ್ತು. ಅದಕ್ಕೂ ಮೊದಲು ಮೇ 7ರಂದು ₹ 50 ಹೆಚ್ಚಾಗಿತ್ತು.

ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆಯು ಜುಲೈ 1ರಂದು ₹ 198 ಇಳಿಕೆ ಕಂಡಿತ್ತು. ಈ ಇಳಿಕೆಯ ನಂತರ ಬೆಂಗಳೂರಿನಲ್ಲಿ ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆಯು ₹ 2021 ಆಗಿತ್ತು. ಪ್ರಸ್ತುತ ಬೆಂಗಳೂರಿನಲ್ಲಿ ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆಯು ₹ 2029.50 ಇದೆ.

Published On - 9:15 am, Wed, 6 July 22

ರಾಹುಲ್ ಗಾಂಧಿಗೆ ಕಪ್ಪು ಬಾವುಟ ತೋರಿದ ಬಿಜೆಪಿ ಕಾರ್ಯಕರ್ತರು
ರಾಹುಲ್ ಗಾಂಧಿಗೆ ಕಪ್ಪು ಬಾವುಟ ತೋರಿದ ಬಿಜೆಪಿ ಕಾರ್ಯಕರ್ತರು
ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ