AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೂರಸಂಪರ್ಕ ಇಲಾಖೆಯಿಂದ ಏರ್​ಟೆಲ್​, VILಗೆ ರೂ. 3050 ಕೋಟಿ ದಂಡ; ಪಾವತಿಸಲು 3 ವಾರದ ಗಡುವು

2016ರಲ್ಲಿ ಟ್ರಾಯ್​ನಿಂದ ಮಾಡಲಾದ ಶಿಫಾರಸಿಗೆ ದೂರಸಂಪರ್ಕ ಇಲಾಖೆಯು ವೊಡಾಫೋನ್ ಐಡಿಯಾ ಹಾಗೂ ಭಾರ್ತಿ ಏರ್​ಟೆಲ್​ಗೆ ರೂ. 3050 ಕೋಟಿ ದಂಡ ಹಾಕಲಾಗಿದೆ.

ದೂರಸಂಪರ್ಕ ಇಲಾಖೆಯಿಂದ ಏರ್​ಟೆಲ್​, VILಗೆ ರೂ. 3050 ಕೋಟಿ ದಂಡ; ಪಾವತಿಸಲು 3 ವಾರದ ಗಡುವು
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Oct 01, 2021 | 5:39 PM

Share

ಭಾರತೀಯ ದೂರಸಂಪರ್ಕ ನಿಯಂತ್ರಕ ಪ್ರಾಧಿಕಾರ (Trai) 5 ವರ್ಷದ ಹಿಂದೆ ಮಾಡಿದ ಶಿಫಾರಸಿನ ಅನ್ವಯ ದೂರ ಸಂಪರ್ಕ ಇಲಾಖೆಯು (DoT) ವೊಡಾಫೋನ್ ಐಡಿಯಾಗೆ ರೂ. 2000 ಕೋಟಿ ಮತ್ತು ಭಾರ್ತಿ ಏರ್​ಟೆಲ್​ಗೆ 1050 ಕೋಟಿ ರೂಪಾಯಿ ದಂಡ ವಿಧಿಸಿದೆ ಎಂದು ಮೂಲಗಳು ತಿಳಿಸಿವೆ. ದೂರಸಂಪರ್ಕ ಇಲಾಖೆಯು ಟೆಲಿಕಾಂ ಆಪರೇಟರ್​ಗಳಿಗೆ ದಂಡ ಪಾವತಿಸಲು ಮೂರು ವಾರಗಳ ಗಡುವು ನೀಡಿದೆ. ಗುರುವಾರದಂದು ಈ ಸಂಬಂಧ ಕಂಪೆನಿಗಳಿಗೆ ಡಿಮ್ಯಾಂಡ್​ ನೋಟಿಸ್ ನೀಡಲಾಗಿದೆ ಎಂದು ಮಾಹಿತಿ ಸಿಕ್ಕಿದೆ. ಇದೇ ವಿಚಾರವಾಗಿ ಭಾರ್ತಿ ಏರ್​ಟೆಲ್​ ವಕ್ತಾರರನ್ನು ಮಾಧ್ಯಮದವರು ಸಂಪರ್ಕಿಸಿದಾಗ, 2016ರಲ್ಲಿ ಟ್ರಾಯ್ ಮಾಡಿದ ಶಿಫಾರಸುಗಳ ಆಧಾರದ ಮೇಲೆ ಅನಿಯಂತ್ರಿತ ಮತ್ತು ಅನ್ಯಾಯದ ಬೇಡಿಕೆ ಇಟ್ಟಿರುವುದರಿಂದ ನಾವು ತೀವ್ರವಾಗಿ ನಿರಾಶೆಗೊಂಡಿದ್ದೇವೆ. ಹೊಸ ಆಪರೇಟರ್‌ಗೆ ಪರಸ್ಪರ ಸಂಪರ್ಕ ಮಟ್ಟದ ನಿಬಂಧನೆಗಳಿಗೆ ಸಂಬಂಧಿಸಿದೆ. ಈ ಆರೋಪಗಳು ಕ್ಷುಲ್ಲಕ ಮತ್ತು ಉದ್ದೇಶಪೂರಿತ ಎಂದಿದ್ದಾರೆ.

“ಭಾರತಿ ಏರ್‌ಟೆಲ್ ಉನ್ನತ ಗುಣಮಟ್ಟದ ನಿಯಮಾವಳಿಗಳನ್ನು ನಿರ್ವಹಿಸುವುದಕ್ಕೆ ಹೆಮ್ಮೆ ಪಡುತ್ತದೆ ಮತ್ತು ಯಾವಾಗಲೂ ದೇಶದ ಕಾನೂನನ್ನು ಅನುಸರಿಸುತ್ತಿದೆ. ನಾವು ಈ ಬೇಡಿಕೆಯನ್ನು ಪ್ರಶ್ನಿಸುತ್ತೇವೆ ಹಾಗೂ ನಮಗೆ ಲಭ್ಯ ಇರುವ ಕಾನೂನು ಆಯ್ಕೆಗಳನ್ನು ಅನುಸರಿಸುತ್ತೇವೆ,” ಎಂದಿದ್ದಾರೆ. ತಕ್ಷಣಕ್ಕೆ ವೊಡಾಫೋನ್ ಐಡಿಯಾದ ಕಡೆಯಿಂದ ಯಾವುದೇ ಪ್ರತಿಕ್ರಿಯೆಯೂ ಬಂದಿಲ್ಲ. ರಿಲಯನ್ಸ್​ ಜಿಯೋಗೆ ಇಂಟರ್​ಕನೆಕ್ಟಿವಿಟಿ ನಿರಾಕರಿಸಿದ ಆರೋಪದ ಮೇಲೆ 2016ರ ಅಕ್ಟೋಬರ್​ನಲ್ಲಿ ಭಾರತೀಯ ದೂರಸಂಪರ್ಕ ನಿಯಂತ್ರಕ ಪ್ರಾಧಿಕಾರ (Trai) ಏರ್​ಟೆಲ್ ಮತ್ತು ವೊಡಾಫೋನ್​ ಮತ್ತು ಐಡಿಯಾಗೆ (ಈಗ ವಿಲೀನ ಆಗಿದೆ) 3050 ಕೋಟಿ ರೂಪಾಯಿ ದಂಡ ವಿಧಿಸಲು ಶಿಫಾರಸು ಮಾಡಿತ್ತು.

ಆಗ ನಿಯಂತ್ರಕ ಸಂಸ್ಥೆಯಾಗಿದ್ದದ್ದು ಟೆಲಿಕಾಂ ಲೈಸೆನ್ಸ್ ರದ್ದು ಮಾಡುವ ಶಿಫಾರಸನ್ನು ನಿಲ್ಲಿಸಿತ್ತು. ಇದರಿಂದ ಅಪಾರ ಸಂಖ್ಯೆಯ ಗ್ರಾಹಕರಿಗೆ ಸಮಸ್ಯೆ ಆಗಬಹುದು ಎಂದು ಇಂಥ ನಿರ್ಧಾರ ಕೈಗೊಳ್ಳಲಾಗಿತ್ತು. ಶೇ 75ರಷ್ಟು ಅದರ ನೆಟ್​ವರ್ಕ್​ನಲ್ಲಿನ ಕರೆಗಳು ವಿಫಲವಾಗುತ್ತಿವೆ. ಅದಕ್ಕೆ ಪಾಯಿಂಟ್ಸ್ ಆಫ್ ಇಂಟರ್​ಫೇಸ್​ (PoIs) ಅಗತ್ಯ ಪ್ರಮಾಣದಲ್ಲಿ ಬಿಡುಗಡೆ ಮಾಡದಿರುವುದೇ ಕಾರಣ ಎಂದು ರಿಲಯನ್ಸ್​ ಜಿಯೋ ದೂರು ನೀಡಿತ್ತು. ಊರಸಂಪರ್ಕ ಇಲಾಖೆಯ ನಿರ್ಧಾರ ತೆಗೆದುಕೊಳ್ಳುವ ಡಿಜಿಟಲ್ ಕಮ್ಯುನಿಕೇಷನ್ ಆಯೋಗವು 2019ರಲ್ಲಿ ಕ್ಯುಮ್ಯುಲೇಟಿವ್ ದಂಡವನ್ನು ವಿಧಿಸುವುದಕ್ಕೆ ಅನುಮತಿ ನೀಡಿತ್ತು.

ಇದನ್ನೂ ಓದಿ: ಟ್ರಾಯ್ ವರದಿ: 4G ಡೌನ್‌ಲೋಡ್ ವೇಗದಲ್ಲಿ ಜೂನ್ ತಿಂಗಳಲ್ಲಿಯೂ ಪಾರಮ್ಯ ಮೆರೆದ ಜಿಯೋ

Published On - 4:57 pm, Fri, 1 October 21

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ