AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

AI Content Regulations: ಎಐ ಸೃಷ್ಟಿತ ಕಂಟೆಂಟ್; ಸೋಷಿಯಲ್ ಮೀಡಿಯಾಗಳಿಗೆ ಜವಾಬ್ದಾರಿ; ಬರಲಿದೆ ಹೊಸ ಕಾನೂನು

Social Media AI Policy: ಡೀಪ್​ಫೇಕ್ ಕಂಟೆಂಟ್​ಗಳು ಅಮಾಯಕ ಜನರನ್ನು ವಂಚಿಸುವ ಕೆಲಸ ಮಾಡುತ್ತಿವೆ. ಬಹಳ ಜನರು ಇಂಥ ವಂಚಕರ ಜಾಲಕ್ಕೆ ಬಿದ್ದು ಮೋಸ ಹೋಗುತ್ತಿದ್ದಾರೆ. ಇದಕ್ಕೆ ಕಡಿವಾಣ ಹಾಕು ಸರ್ಕಾರ ಕರಡು ನಿಯಮಗಳನ್ನು ರೂಪಿಸಿದೆ. ಈ ನಿಯಮಗಳನ್ನು ಸಾಕಷ್ಟು ಪರಾಮರ್ಶೆಗೆ ಒಳಪಡಿಸಿ, ಕಾನೂನು ತಿದ್ದುಪಡಿ ಮಾಡಲು ಸರ್ಕಾರ ಅಣಿಯಾಗಿದೆ.

AI Content Regulations: ಎಐ ಸೃಷ್ಟಿತ ಕಂಟೆಂಟ್; ಸೋಷಿಯಲ್ ಮೀಡಿಯಾಗಳಿಗೆ ಜವಾಬ್ದಾರಿ; ಬರಲಿದೆ ಹೊಸ ಕಾನೂನು
ಡೀಪ್​ಫೇಕ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Nov 12, 2025 | 3:45 PM

Share

ನವದೆಹಲಿ, ನವೆಂಬರ್ 12: ಡೀಪ್​ಫೇಕ್ ವಿಡಿಯೋಗಳ (Deepfake Videos) ಹಾವಳಿ ವಿಪರೀತವಾಗಿ ಹೆಚ್ಚುತ್ತಿದೆ. ಸೆಲಬ್ರಿಟಿಗಳ ಧ್ವನಿಯನ್ನೋ, ದೃಶ್ಯವನ್ನೋ ನಕಲು ಮಾಡಿ, ತಿರುಚಿ ತೋರಿಸಿ ವಂಚಿಸುತ್ತಿರುವ ಪ್ರಕರಣಗಳು ಬಹಳಷ್ಟಿವೆ. ರಶ್ಮಿಕಾ ಮಂದಣ್ಣರ ಬಾತ್​ರೂಮ್ ವಿಡಿಯೋ, ನರೇಂದ್ರ ಮೋದಿ ಅವರ ಭಾಷಣದ ತುಣುಕು ಹೀಗೆ ನಿತ್ಯವೂ ಹಲವಾರು ಡೀಪ್​ಫೇಕ್ ವಿಡಿಯೋಗಳು ಎಐ ಮೂಲಕ ಜನರೇಟ್ ಆಗಿ ಸೋಷಿಯಲ್ ಮೀಡಿಯಾದಲ್ಲಿ ಹರಡುತ್ತಿವೆ. ನಿರ್ಮಲಾ ಸೀತಾರಾಮನ್ ಅವರ ಡೀಪ್​ಫೇಕ್ ವಿಡಿಯೋದ ಮೆಸೇಜ್ ನೋಡಿ ಬೆಂಗಳೂರಿನ ಮಹಿಳೆಯೊಬ್ಬಳು 43 ಲಕ್ಷ ರೂ ಕಳೆದುಕೊಂಡ ಘಟನೆ ಕಳೆದ ವಾರ ಬೆಳಕಿಗೆ ಬಂದಿತ್ತು. ಇಂಥ ಹಾವಳಿ ತಪ್ಪಿಸಲು ಸರ್ಕಾರ ಕಠಿಣ ಕಾಯ್ದೆ ರೂಪಿಸುತ್ತಿದೆ.

ಸೋಷಿಯಲ್ ಮೀಡಿಯಾದಲ್ಲಿ ಎಐ ಸೃಷ್ಟಿತ ಕಂಟೆಂಟ್​ಗಳಿಗೆ ನಿರ್ಬಂಧಗಳನ್ನು ಹಾಕುವ ಕರಡು ನಿಯಮಗಳನ್ನು ಸರ್ಕಾರ ರೂಪಿಸಿದೆ. 2021ರ ಮಾಹಿತಿ ತಂತ್ರಜ್ಞಾನ ಮಧ್ಯಂತರ ಮಾರ್ಗಸೂಚಿ ಮತ್ತು ಡಿಜಿಟಲ್ ಮೀಡಿಯಾ ನೀತಿ ಸಂಹಿತೆ ನಿಯಮಗಳಿಗೆ ತಿದ್ದುಪಡಿ ತರುವ ಈ ಕರಡು ನಿಯಮಗಳ ಬಗ್ಗೆ ಸಲಹೆ, ಟೀಕೆ, ಟಿಪ್ಪಣಿಗಳನ್ನು ಸರ್ಕಾರ ಆಹ್ವಾನಿಸಿದೆ.

ಇದನ್ನೂ ಓದಿ: ನಿರ್ಮಲಾ ಸೀತಾರಾಮನ್ ಸಹಿ ನಕಲು ಮಾಡಿ ಮಹಿಳೆಯೊಬ್ಬಳಿಂದ ಕೋಟಿ ರೂ ವಸೂಲಿ ಮಾಡಿದ ದುಷ್ಕರ್ಮಿಗಳು

ಎಐ ಸೃಷ್ಟಿತ ಕಂಟೆಂಟ್ ಕುರಿತ ಸರ್ಕಾರದ ಕರಡು ನಿಯಮಗಳು ಏನಿವೆ?

ಯೂಟ್ಯೂಬ್, ಇನ್ಸ್​ಟಾಗ್ರಾಮ್, ಫೇಸ್​ಬುಕ್ ಇತ್ಯಾದಿ ಸೋಷಿಯಲ್ ಮೀಡಿಯಾ ಪ್ಲಾಟ್​ಫಾರ್ಮ್​ಗಳು ತಮ್ಮಲ್ಲಿ ಕಂಟೆಂಟ್ ಅಪ್​ಲೋಡ್ ಮಾಡುವ ಜನರಿಂದ ಡಿಕ್ಲರೇಶನ್ ಪಡೆಯಬೇಕು. ಅಂದರೆ, ಈ ಕಂಟೆಂಟ್ ಕೃತಕವಾಗಿ ಸೃಷ್ಟಿಸಲಾಗಿದ್ದಾ ಅಲ್ಲವಾ ಎಂದು ಬಳಕೆದಾರರಿಂದಲೇ ದೃಢೀಕರಣ ಪಡೆಯಬೇಕು ಎನ್ನುತ್ತದೆ ಡ್ರಾಫ್ಟ್​ನ ಒಂದು ನಿಯಮ.

ಎಐ ಸೃಷ್ಟಿತ ಕಂಟೆಂಟ್ ಇದ್ದರೆ ಅದು ನೋಡುಗರಿಗೆ ಸ್ಪಷ್ಟವಾಗಿ ಗೋಚರಿಸುವಂತೆ ಲೇಬಲ್ ಮಾಡಿರಬೇಕು, ವಾಟರ್​ಮಾರ್ಕ್​ಗಳನ್ನು ಹಾಕಿರಬೇಕು. ದೃಶ್ಯ ಕಂಟೆಂಟ್ ಆಗಿದ್ದರೆ ಪರದೆಯ ಶೇ. 10ರಷ್ಟು ಜಾಗದಲ್ಲಿ ಆ ಲೇಬಲ್ ಕಾಣುವಂತಿರಬೇಕು. ಆಡಿಯೋ ಕಂಟೆಂಟ್ ಆಗಿದ್ದರೆ ಒಟ್ಟೂ ಅವಧಿಯ ಮೊದಲ ಶೇ. 10ರಷ್ಟು ಅವಧಿಯಲ್ಲಿ ಈ ಲೇಬಲ್ ಪ್ರದರ್ಶಿತವಾಗಬೇಕು ಎಂದು ಈ ಕರಡು ನಿಯಮಗಳು ಹೇಳುತ್ತವೆ.

ಇದನ್ನೂ ಓದಿ: ಟ್ರೈನ್​ನಲ್ಲಿ ಮಕ್ಕಳಿಗೆ ಟಿಕೆಟ್; ವಿನಾಯಿತಿ, ವಯಸ್ಸು, ಸೀಟು, ನಿರ್ಬಂಧ ಇತ್ಯಾದಿ ವಿವರ

ಈ ಕರಡು ನಿಯಮಗಳು ಜಾರಿಗೆ ಬಂದಲ್ಲಿ, ಸೋಷಿಯಲ್ ಮೀಡಿಯಾದಲ್ಲಿ ಅಪ್​ಲೋಡ್ ಆಗುವ ಪ್ರತಿಯೊಂದು ಎಐ ಸೃಷ್ಟಿತ ಇಮೇಜ್ ಮತ್ತು ವಿಡಿಯೋಗಳಲ್ಲಿ, ಅದು ಎಐ ಜನರೇಟೆಡ್ ಕಂಟೆಂಟ್ ಎಂಬ ವಿಚಾರವನ್ನು ನೋಡುಗರಿಗೆ ಸ್ಪಷ್ಟವಾಗಿ ಗೊತ್ತಾಗುವ ರೀತಿಯಲ್ಲಿ ಲೇಬಲ್ ಮಾಡಿರಲಾಗುತ್ತದೆ. ಇದರಿಂದ ಜನರು ಮೋಸವಾಗುವುದು ತಪ್ಪುತ್ತದೆ.

ಹಾಗೆಯೇ, ಸೋಷಿಯಲ್ ಮೀಡಿಯಾ ಪ್ಲಾಟ್​ಫಾರ್ಮ್​ಗಳಿಗೂ ಹೆಚ್ಚಿನ ಜವಾಬ್ದಾರಿ ಕೊಡಲಾಗುತ್ತಿದೆ. ಜನರು ಎಐ ಸೃಷ್ಟಿತ ಕಂಟೆಂಟ್ ಎಂಬುದನ್ನು ಮುಚ್ಚಿಟ್ಟು, ಅದನ್ನು ಅಪ್​ಲೋಡ್ ಮಾಡಬಹುದು. ಈ ಪ್ಲಾಟ್​ಫಾರ್ಮ್​ಗಳು ತಮ್ಮಲ್ಲಿರುವ ತಂತ್ರಜ್ಞಾನ ಬಳಸಿ, ಅಪ್​ಲೋಡ್ ಆಗುವ ಕಂಟೆಂಟ್ ಎಐ ಜನರೇಟ್ ಆಗಿರುವಂಥವಾ ಎಂಬುದನ್ನು ಪತ್ತೆ ಹಚ್ಚುವ ಕೆಲಸ ಮಾಡಬೇಕು ಎಂದು ಕರಡು ನಿಯಮದಲ್ಲಿ ತಿಳಿಸಲಾಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!