AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dream 11: ಎಚ್ಚರ, ರಜೆಯಲ್ಲಿರುವ ಸಹೋದ್ಯೋಗಿಗೆ ತೊಂದರೆ ಕೊಟ್ಟರೆ 1 ಲಕ್ಷ ರೂ. ದಂಡ; ಭಾರತದ ಟೆಕ್ ಕಂಪನಿಯಲ್ಲಿ ಹೀಗೊಂದು ನಿಯಮ!

ಉದ್ಯೋಗಿಗಳ ರಜೆಯನ್ನು, ಖಾಸಗಿತನವನ್ನು ಗೌರವಿಸುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳುತ್ತಿರುವುದಾಗಿ ಕಂಪನಿ ಹೇಳಿದೆ. ಹಿಗಾಗಿ, ಈ ಕಂಪನಿಯ ಉದ್ಯೋಗಿಗಳಿನ್ನು ರಜೆಯಲ್ಲಿರುವ ಸಹೋದ್ಯೋಗಿಗಳಿಗೆ ಕರೆ ಮಾಡಿ ಉದ್ಯೋಗದ ಬಗ್ಗೆ ಚರ್ಚಿಸುವುದನ್ನು ಮಾಡುವಂತಿಲ್ಲ.

Dream 11: ಎಚ್ಚರ, ರಜೆಯಲ್ಲಿರುವ ಸಹೋದ್ಯೋಗಿಗೆ ತೊಂದರೆ ಕೊಟ್ಟರೆ 1 ಲಕ್ಷ ರೂ. ದಂಡ; ಭಾರತದ ಟೆಕ್ ಕಂಪನಿಯಲ್ಲಿ ಹೀಗೊಂದು ನಿಯಮ!
ಸಾಂದರ್ಭಿಕ ಚಿತ್ರ
Follow us
TV9 Web
| Updated By: Ganapathi Sharma

Updated on:Dec 31, 2022 | 3:12 PM

ಜನರು ಉದ್ಯೋಗವನ್ನು ಎಷ್ಟೇ ಇಷ್ಟಪಟ್ಟರೂ ರಜಾ ದಿನಗಳಲ್ಲಿ ಕೆಲಸದ ಒತ್ತಡ ಇಲ್ಲದೆ ಪ್ರೀತಿಪಾತ್ರರೊಂದಿಗೆ ಸಮಯ ಕಳೆಯುವುದನ್ನು ಇಚ್ಛಿಸುವುದು ಸಹಜ. ಆದರೂ ರಜೆಯಲ್ಲಿದ್ದಾಗ (Holiday) ಕಚೇರಿಯ ಸಂದೇಶಗಳಿಗೆ ಪ್ರತಿಕ್ರಿಯಿಸಬೇಕಾದ, ಕರೆಗಳಿಗೆ ಉತ್ತರಿಸಬೇಕಾದ ಅನಿವಾರ್ಯತೆಗೆ ಹಲವು ಬಾರಿ ಸಿಲುಕಿಕೊಳ್ಳಬೇಕಾಗುತ್ತದೆ. ದೇಶದ ಪ್ರಮುಖ ಟೆಕ್, ಫಾಂಟಸಿ ಸ್ಪೋರ್ಟ್ಸ್ ಕಂಪನಿ ‘ಡ್ರೀಮ್ ಇಲೆವೆನ್ (Dream 11)’ ಉದ್ಯೋಗಿಗಳು ಇನ್ನು ಹೀಗೆ ಮಾಡುವಂತಿಲ್ಲ. ಮಾಡಿದರೆ 1 ಲಕ್ಷ ರೂ. ದಂಡ ತೆರಬೇಕಾಗುತ್ತದೆ! ಹೌದು, ಹೀಗೊಂದು ನಿಯಮವನ್ನು ಕಂಪನಿ ಅನುಷ್ಠಾನಕ್ಕೆ ತರುತ್ತಿದೆ. ಉದ್ಯೋಗಿಗಳ ರಜೆಯನ್ನು, ಖಾಸಗಿತನವನ್ನು ಗೌರವಿಸುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳುತ್ತಿರುವುದಾಗಿ ಕಂಪನಿ ಹೇಳಿದೆ. ಹಿಗಾಗಿ, ಈ ಕಂಪನಿಯ ಉದ್ಯೋಗಿಗಳಿನ್ನು ರಜೆಯಲ್ಲಿರುವ ಸಹೋದ್ಯೋಗಿಗಳಿಗೆ ಕರೆ ಮಾಡಿ ಉದ್ಯೋಗದ ಬಗ್ಗೆ ಚರ್ಚಿಸುವುದನ್ನು ಮಾಡುವಂತಿಲ್ಲ. ಉದ್ಯೊಗ ಸಂಬಂಧಿ ಇ-ಮೇಲ್ ಸಂದೇಶ, ಇತರ ಸಂದೇಶಗಳಿಗೆ ಉತ್ತರಿಸಿ ಎಂದು ಹೇಳುವಂತೆಯೂ ಇಲ್ಲ.

ಕಂಪನಿಯ ಸಂಪರ್ಕವೇ ಇಲ್ಲದೆ ವಾರ ಕಳೆಯಬಹುದು

ಉದ್ಯೋಗಿಗಳು ರಜೆಯ ಸಂದರ್ಭದಲ್ಲಿ ಕಚೇರಿಯ ಇ-ಮೇಲ್, ಇತರ ಸಂದೇಶಗಳು, ಕರೆ ಸೇರಿದಂತೆ ಎಲ್ಲ ಕೆಲಸಗಳಿಂದ ಮುಕ್ತರಾಗಿರಲಿ ಎಂಬ ಉದ್ದೇಶದೊಂದಿಗೆ ಈ ನಿಯಮ ರೂಪಿಸಲಾಗಿದೆ ಎಂದು ‘ಡ್ರೀಮ್ ಇಲೆವೆನ್’ ತಿಳಿಸಿರುವುದಾಗಿ ‘ಇಂಡಿಯಾ ಟುಡೇ’ ವರದಿ ಮಾಡಿದೆ. ಉದ್ಯೋಗಿಗಳು ಕೆಲಸಕ್ಕೆ ಸಂಬಂಧಿಸಿದ ಇಮೇಲ್‌ಗಳು, ಸಂದೇಶಗಳು, ಕರೆಗಳು ಮತ್ತು ಅವರ ಸಹೋದ್ಯೋಗಿಗಳಿಂದ ಒಂದು ವಾರದವರೆಗೆ ಸಂಪರ್ಕರಹಿತರಾಗಿ ಇರಲು ಹೊಸ ‘ಅನ್​ಪ್ಲಗ್ ನೀತಿ’ಯ ಅಡಿಯಲ್ಲಿ ಕಂಪನಿ ಅವಕಾಶ ಕಲ್ಪಿಸಿದೆ.

‘ಅನ್​ಪ್ಲಗ್ ನೀತಿ’ಯ ಅಡಿಯಲ್ಲಿ ರಜೆ ಇರುವ ಉದ್ಯೋಗಿಯು ‘ಡ್ರೀಮ್​ಸ್ಟರ್​’ನಿಂದ ಲಾಗ್ ಆಫ್ ಆದ ನಂತರ ಯಾವುದೇ ರೀತಿಯಲ್ಲಿ ಉದ್ಯೋಗಕ್ಕೆ ಸಂಬಂಧಿಸಿದ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳುವ ಅಗತ್ಯವಿಲ್ಲ. ವಾಟ್ಸ್​ಆ್ಯಪ್ ಗ್ರೂಪ್​​ಗಳಲ್ಲಿ ಕೂಡ ಉದ್ಯೋಗ ಸಂಬಂಧಿತ ಸಂದೇಶಗಳಿಗೆ ಉತ್ತರಿಸುವ ಅಗತ್ಯವಿಲ್ಲ. ರಜೆ ಮುಗಿಸಿ ವಾಪಸ್ ಬರುವ ವರೆಗೆ ಯಾರನ್ನೂ ‘ಡ್ರೀಮ್​ಸ್ಟರ್’ ವ್ಯವಸ್ಥೆಯ ಒಳಗೆ ಅನುಮತಿಸುವುದಿಲ್ಲ ಎಂದು ಕಂಪನಿ ತಿಳಿಸಿರುವುದಾಗಿ ವರದಿ ಉಲ್ಲೇಖಿಸಿದೆ.

ಇದನ್ನೂ ಓದಿ: Bank Holidays in January 2023: ಜನವರಿ ತಿಂಗಳಲ್ಲಿ ಬ್ಯಾಂಕ್​ಗಳಿಗೆ 11 ದಿನ ರಜೆ; ಇಲ್ಲಿದೆ ಪಟ್ಟಿ

ಪ್ರೀತಿ ಪಾತ್ರರೊಂದಿಗೆ ಸಮಯ ಕಳೆಯುವುದು, ರಜೆಯಲ್ಲಿ ವಿಶ್ರಾಂತಿ ಪಡೆಯುವ ಗುಣಮಟ್ಟದ ಸಮಯದ ಮೌಲ್ಯವನ್ನು ನಾವು ಅರ್ಥ ಮಾಡಿಕೊಂಡಿದ್ದೇವೆ. ಇದರಿಂದ ಒಟ್ಟಾರೆ ಉತ್ಸಾಹ, ಜೀವನ ಗುಣಮಟ್ಟ ಸುಧಾರಿಸಲಿದೆ. ಉದ್ಯೋಗಕ್ಕೂ ಅನುಕೂಲವಾಗಲಿದೆ ಎಂದು ಕಂಪನಿ ಹೇಳಿದೆ.

‘ಅನ್​ಪ್ಲಗ್’ ಸಮಯದಲ್ಲಿ (ರಜಾ ಸಮಯದಲ್ಲಿ) ಅಂಥ ಉದ್ಯೋಗಿಗೆ ಯಾರೇ ಕರೆ ಮಾಡಿ ಅಥವಾ ಇನ್ಯಾವುದೇ ರೂಪದಲ್ಲಿ ತೊಂದರೆ ಕೊಟ್ಟರೆ ಅಂಥವರಿಗೆ 1 ಲಕ್ಷ ರೂ. ದಂಡ ವಿಧಿಸಲಾಗುವುದು ಎಂದು ಕಂಪನಿಯ ಸ್ಥಾಪಕರಾದ ಹರ್ಷ ಜೈನ್ ಮತ್ತು ಭವಿತ್ ಸೇಠ್ ಹೇಳಿರುವುದಾಗಿ ‘ಸಿಎನ್​ಬಿಸಿ’ ವರದಿ ಮಾಡಿದೆ. ಉದ್ಯೋಗಿಗಳು ಕಂಪನಿಯ ಹೊಸ ನೀತಿಯಿಂದ ಬಹಳ ಸಂತಸಗೊಂಡಿದ್ದಾರೆ. ಈ ನಿಯಮದಿಂದಾಗಿ, ವಿರಾಮದ ಸಮಯದಲ್ಲಿ ಪುನಶ್ಚೇತನಗೊಳ್ಳಲು, ಹೊಸ ಉತ್ಸಾಹದಿಂದ ಮತ್ತೆ ಕೆಲಸಕ್ಕೆ ಹಾಜರಾಗಲು ಅನುಕೂಲವಾಗುತ್ತದೆ ಎಂದು ‘ಡ್ರೀಮ್ ಇಲೆವೆನ್’ ಉದ್ಯೋಗಿಯೊಬ್ಬರು ಅಭಿಪ್ರಾಯಪಟ್ಟಿದ್ದಾರೆ ಎಂದು ವರದಿ ತಿಳಿಸಿದೆ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:37 pm, Sat, 31 December 22

ದುರಂತಕ್ಕೆ ಕಾರಣ ಮತ್ತು ಪರಿಹಾರದ ಬಗ್ಗೆ ಪ್ರಧಾನಿ ಮೋದಿ ಚರ್ಚೆ
ದುರಂತಕ್ಕೆ ಕಾರಣ ಮತ್ತು ಪರಿಹಾರದ ಬಗ್ಗೆ ಪ್ರಧಾನಿ ಮೋದಿ ಚರ್ಚೆ
ಎಮರ್ಜೆನ್ಸಿ ಎಕ್ಸಿಟ್​ನಿಂದ ಕೆಳಗೆ ಹಾರಿ ಜೀವ ಉಳಿಸಿಕೊಂಡೆ: ರಮೇಶ್
ಎಮರ್ಜೆನ್ಸಿ ಎಕ್ಸಿಟ್​ನಿಂದ ಕೆಳಗೆ ಹಾರಿ ಜೀವ ಉಳಿಸಿಕೊಂಡೆ: ರಮೇಶ್
ವಿಮಾನ ದುರಂತ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದ ಪ್ರಧಾನಿ ಮೋದಿ
ವಿಮಾನ ದುರಂತ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದ ಪ್ರಧಾನಿ ಮೋದಿ
ದುರಂತ ನಡೆದ ಸ್ಥಳದಲ್ಲಿ ದಟ್ಟಹೊಗೆ, ಏನೂ ಕಾಣುತ್ತಿರಲಿಲ್ಲ: ಪ್ರತ್ಯಕ್ಷದರ್ಶಿ
ದುರಂತ ನಡೆದ ಸ್ಥಳದಲ್ಲಿ ದಟ್ಟಹೊಗೆ, ಏನೂ ಕಾಣುತ್ತಿರಲಿಲ್ಲ: ಪ್ರತ್ಯಕ್ಷದರ್ಶಿ
ಸಿದ್ದರಾಮಯ್ಯ ಮನೆ ಸಮೀಪವೇ ಕಳ್ಳತನ: ಕಳ್ಳನ ಕೈಚಳಕ ಸಿಸಿಟಿವಿಯಲ್ಲಿ ಸೆರೆ
ಸಿದ್ದರಾಮಯ್ಯ ಮನೆ ಸಮೀಪವೇ ಕಳ್ಳತನ: ಕಳ್ಳನ ಕೈಚಳಕ ಸಿಸಿಟಿವಿಯಲ್ಲಿ ಸೆರೆ
ವಿಮಾನ ದುರಂತದ ಬಗ್ಗೆ ಪ್ರತ್ಯಕ್ಷದರ್ಶಿ ಬಿಚ್ಚಿಟ್ಟ ಭಯಾನಕ ಅನುಭವ ಇಲ್ಲಿದೆ
ವಿಮಾನ ದುರಂತದ ಬಗ್ಗೆ ಪ್ರತ್ಯಕ್ಷದರ್ಶಿ ಬಿಚ್ಚಿಟ್ಟ ಭಯಾನಕ ಅನುಭವ ಇಲ್ಲಿದೆ
Video: ಅಹಮದಾಬಾದ್ ಆಸ್ಪತ್ರೆಗೆ ಪ್ರಧಾನಿ ಮೋದಿ ಭೇಟಿ
Video: ಅಹಮದಾಬಾದ್ ಆಸ್ಪತ್ರೆಗೆ ಪ್ರಧಾನಿ ಮೋದಿ ಭೇಟಿ
Daily Devotional: ಅಕ್ಷತೆ ಇಲ್ಲದ ಮನೆಯಲ್ಲಿ ಐಶ್ವರ್ಯ ಇರೋದಿಲ್ಲ ಯಾಕೆ?
Daily Devotional: ಅಕ್ಷತೆ ಇಲ್ಲದ ಮನೆಯಲ್ಲಿ ಐಶ್ವರ್ಯ ಇರೋದಿಲ್ಲ ಯಾಕೆ?
Daily Horoscope: ಈ ರಾಶಿಯವರ ವೈವಾಹಿಕ ಜೀವನದಲ್ಲಿ ಏರಿಳಿತ ಸಾಧ್ಯತೆ
Daily Horoscope: ಈ ರಾಶಿಯವರ ವೈವಾಹಿಕ ಜೀವನದಲ್ಲಿ ಏರಿಳಿತ ಸಾಧ್ಯತೆ
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಡಿಫರೆಂಟ್ ಹೇಗೆ? ವಿವರಿಸಿದ ದಿಗಂತ್
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಡಿಫರೆಂಟ್ ಹೇಗೆ? ವಿವರಿಸಿದ ದಿಗಂತ್