AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

EaseMyTrip WCL 2025: ಭಾರತೀಯ ಲೆಜೆಂಡ್ಸ್ ತಂಡಕ್ಕೆ ಯುವರಾಜ್ ಸಿಂಗ್ ನಾಯಕ; ಸತತ ಎರಡನೇ ಪ್ರಶಸ್ತಿಯತ್ತ ಭಾರತೀಯರ ಕಣ್ಣು

EaseMyTrip WCL Season 2 cricket tournament: ಜುಲೈ ದ್ವಿತೀಯಾರ್ಧದಲ್ಲಿ ನಡೆಯಲಿರುವ ಎರಡನೇ ಸೀಸನ್​​ನ ಈಸ್​​ಮೈಟ್ರಿಪ್ ವರ್ಲ್ಸ್ ಚಾಂಪಿಯನ್ಸ್ ಆಫ್ ಲೆಜೆಂಡ್ಸ್ ಟೂರ್ನಿಯಲ್ಲಿ ಭಾರತೀಯ ತಂಡಕ್ಕೆ ಯುವರಾಜ್ ಸಿಂಗ್ ನಾಯಕರಾಗಿದ್ದಾರೆ. ಕಳೆದ ಸೀಸನ್​​ನಲ್ಲಿ ಪಾಕಿಸ್ತಾನವನ್ನು ಸೋಲಿಸಿ ಚಾಂಪಿಯನ್ ಆಗಿದ್ದ ಭಾರತ ಸತತ ಎರಡನೇ ಬಾರಿ ಪಟ್ಟ ಪಡೆಯಲು ಹೊರಟಿದೆ. ಈಸ್ ಮೈ ಟ್ರಿಪ್ ಸಂಸ್ಥೆ ಈ ಟೂರ್ನಿಯನ್ನು ಆಯೋಜಿಸುತ್ತಿದೆ.

EaseMyTrip WCL 2025: ಭಾರತೀಯ ಲೆಜೆಂಡ್ಸ್ ತಂಡಕ್ಕೆ ಯುವರಾಜ್ ಸಿಂಗ್ ನಾಯಕ; ಸತತ ಎರಡನೇ ಪ್ರಶಸ್ತಿಯತ್ತ ಭಾರತೀಯರ ಕಣ್ಣು
ಈಸ್​​ಮೈಟ್ರಿಪ್ ಡಬ್ಲ್ಯುಸಿಎಲ್ 2025
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Mar 21, 2025 | 6:38 PM

Share

ನವದೆಹಲಿ, ಮಾರ್ಚ್ 21: ಬ್ರಿಟನ್​​ನಲ್ಲಿ ಜುಲೈ 18ರಿಂದ 31ರವರೆಗೆ ನಡೆಯಲಿರುವ ಈಸ್​​ಮೈಟ್ರಿಪ್ ಡಬ್ಲ್ಯುಸಿಎಲ್​​​ನ ಎರಡನೇ ಸೀಸನ್ ಕ್ರಿಕೆಟ್ ಟೂರ್ನಮೆಂಟ್​​ನಲ್ಲಿ (EaseMyTrip WCL-2) ಭಾರತೀಯ ತಂಡಕ್ಕೆ ಯುವರಾಜ್ ಸಿಂಗ್ ನಾಯಕರಾಗಿದ್ದಾರೆ. ಚೊಚ್ಚಲ ಸೀಸನ್​​ನಲ್ಲಿ ಚಾಂಪಿಯನ್ ಆಗಿದ್ದ ಇಂಡಿಯಾ ಚಾಂಪಿಯನ್ಸ್ ತಂಡ ಸತತ ಎರಡನೇ ಪ್ರಶಸ್ತಿ ಮೇಲೆ ಕಣ್ಣಿಟ್ಟಿದೆ. ಕಳೆದ ಬಾರಿ ತಂಡದಲ್ಲಿ ಇಲ್ಲದ ಸ್ಟಾರ್ ಕ್ರಿಕೆಟಿಗ ಶಿಖರ್ ಧವನ್ ಈ ಸೀಸನ್​​ನಲ್ಲಿ ತಂಡಕ್ಕೆ ಬಲ ನೀಡುತ್ತಿದ್ದಾರೆ. ಕರ್ನಾಟಕ ಕುವರ ರಾಬಿನ್ ಉತ್ತಪ್ಪ, ಸುರೇಶ್ ರೈನಾ, ಇರ್ಫಾನ್ ಪಠಾಣ್, ಯೂಸುಫ್ ಪಠಾಣ್ ಮೊದಲಾದ ಲೆಜೆಂಡ್​​ಗಳು ಇಂಡಿಯಾ ಚಾಂಪಿಯನ್ಸ್ ತಂಡದಲ್ಲಿದ್ದಾರೆ.

ಜುಲೈ 18ಕ್ಕೆ ಟೂರ್ನಿ ಆರಂಭವಾಗುತ್ತದೆ. ಭಾರತದ ಮೊದಲ ಪಂದ್ಯ ಜುಲೈ 20ರಂದು ಪಾಕಿಸ್ತಾನದ ಎದುರು ಇದೆ. ಮೊದಲ ಸೀಸನ್​​ನಲ್ಲಿ ಇದೇ ಪಾಕಿಸ್ತಾನ್ ವಿರುದ್ಧ ಗೆದ್ದು ಭಾರತ ಚಾಂಪಿಯನ್ ಆಗಿತ್ತು. ಬರ್ಮಿಂಗ್​​ಹ್ಯಾಂನ ಎಡ್ಜ್​​ಬಾಸ್ಟೋನ್​​ನ್ಲಲಿ ಆ ಫೈನಲ್ ಪಂದ್ಯ ನಡೆದಿತ್ತು. ಈಗ ಅದೇ ಗ್ರೌಂಡ್​​ನ್ಲಲಿ ಈ ಸೀಸನ್​​ನಲ್ಲಿ ಈ ಎರಡು ಬದ್ಧವೈರಿ ತಂಡಗಳು ಮುಖಾಮುಖಿಯಾಗಲಿವೆ.

ಭಾರತ, ಪಾಕಿಸ್ತಾನ, ಇಂಗ್ಲೆಂಡ್, ವೆಸ್ಟ್ ಇಂಡೀಸ್, ಆಸ್ಟ್ರೇಲಿಯಾ ಮತ್ತು ಸೌತ್ ಆಫ್ರಿಕಾದ ತಂಡಗಳು ವರ್ಲ್ಡ್ ಚಾಂಪಿಯನ್​​ಶಿಪ್ ಆಫ್ ಲೆಜೆಂಡ್ಸ್ ಟೂರ್ನಿಯಲ್ಲಿ ಪಾಲ್ಗೊಂಡಿವೆ. ಲೈಸಿಸ್ಟರ್​​ಶೈರ್, ಲೀಡ್ಸ್, ನಾರ್ಥಾಂಪ್ಟನ್ ಕೌಂಟಿಗಳಲ್ಲಿ ವಿವಿಧ ಪಂದ್ಯಗಳು ನಡೆಯಲಿವೆ. ನಾಕೌಟ್ ಪಂದ್ಯಗಳು ಬರ್ಮಿಂಗ್​​ಹ್ಯಾಂನ ಎಡ್ಜ್​​ಬಾಸ್ಟೋನ್​ನ್ಲಿ ನಡೆಯಲಿವೆ.

ಇದನ್ನೂ ಓದಿ
Image
ಬೆಂಗಳೂರಿನಲ್ಲಿ ಟೊಯೋಟಾ ಆರ್ ಅಂಡ್ ಡಿ ಘಟಕ
Image
ಭಾರತದಲ್ಲಿ ಬಿಲಿಯನ್ ಟನ್ ಕಲ್ಲಿದ್ದಲು ಉತ್ಪಾದನೆ ಮೈಲಿಗಲ್ಲು
Image
ರುಪೇ ಸಬ್ಸಿಡಿ ಖತಂ; ಪೇಮೆಂಟ್ಸ್ ಉದ್ಯಮಕ್ಕೆ 600 ಕೋಟಿ ನಷ್ಟಭೀತಿ
Image
ಭಾರತ ಸರ್ಕಾರ ವಿರುದ್ಧ ಎಕ್ಸ್​ನಿಂದ ಕಾನೂನು ಮೊಕದ್ದಮೆ

ಇದನ್ನೂ ಓದಿ: ಚೊಚ್ಚಲ ಐಪಿಎಲ್ ಆಡುತ್ತಿರುವ ಈ 8 ಆಟಗಾರರ ಸಾಮರ್ಥ್ಯ ಏನು ಎಂಬುದು ತಿಳಿದಿರಲಿ

ಈಸ್​​ಮೈಟ್ರಿಪ್ ಪ್ರಾಯೋಜಕತ್ವದ ಟೂರ್ನಿ

ಈಸ್​​ಮೈಟ್ರಿಪ್ ವರ್ಲ್ಡ್ ಚಾಂಪಿಯನ್​​ಶಿಪ್ ಆಫ್ ಲೆಜೆಂಡ್ಸ್ ಟೂರ್ನಿಯ ಪಂದ್ಯಗಳು ಟಿ20 ಕ್ರಿಕೆಟ್ ಮಾದರಿಯದ್ದಾಗಿವೆ. ಅಂತಾರಾಷ್ಟ್ರೀಯ ಕ್ರಿಕೆಟ್​​​ನಿಂದ ನಿವೃತ್ತರಾದ ಆಟಗಾರರು ಈ ಟೂರ್ನಿಗಳಲ್ಲಿ ಭಾಗವಹಿಸುತ್ತಾರೆ. ಈ ಬಾರಿ ನಡೆಯುತ್ತಿರುವುದು ಎರಡನೇ ಸೀಸನ್​​ನ ಟೂರ್ನಿ.

ಈಸ್​​ಮೈಟ್ರಿಪ್ ಸಂಸ್ಥೆಗೆ ಹೆಮ್ಮೆ

ಟ್ರಿಪ್ ಪ್ಲಾನರ್ ಮತ್ತು ಟಿಕೆಟ್ ಬುಕಿಂಗ್ ಪ್ಲಾಟ್​​ಫಾರ್ಮ್ ಆದ ಈಸ್​​ಮೈಟ್ರಿಪ್ ಸಂಸ್ಥೆ ಈ ವರ್ಲ್ಡ್ ಚಾಂಪಿಯನ್ಸ್ ಆಫ್ ಲೆಜೆಂಡ್ಸ್ ಟೂರ್ನಿಯನ್ನು ಆಯೋಜಿಸುತ್ತಿದೆ. ‘ನಮ್ಮ ಸೂಪರ್​​ಸ್ಟಾರ್​​ಗಳನ್ನು ದಂತಕಥೆಗಳನ್ನಾಗಿಸಿದ ಅವರ ಕ್ರಿಕೆಟ್ ಪ್ರತಿಭೆಯ ಮ್ಯಾಜಿಕ್ ಮತ್ತೆ ಅನಾವರಣಗೊಳ್ಳುವುದನ್ನು ನೋಡುವುದೇ ಒಂದು ದೊಡ್ಡ ಭಾಗ್ಯ. ನಮ್ಮ ಕ್ರಿಕೆಟ್ ಹೀರೋಗಳು ನಮ್ಮ ಭಾವನೆಗಳೇ ಆಗಿದ್ದಾರೆ’ ಎಂದು ಡಬ್ಲ್ಯುಸಿಎಲ್ ಸಂಸ್ಥಾಪಕ ಹರ್ಷಿತ್ ತೋಮರ್ ಹೇಳುತ್ತಾರೆ.

ಇದನ್ನೂ ಓದಿ: ಬೆಂಜ್ ಹಾದಿ ತುಳಿದ ಟೊಯೋಟಾ; ಬೆಂಗಳೂರಿನಲ್ಲಿ ಅದರ ಮೊದಲ ಆರ್ ಅಂಡ್ ಡಿ ಸೆಂಟರ್

‘ಈಸ್​​ಮೈಟ್ರಿಪ್ ವಲ್ಲ್ಡ್ ಚಾಂಪಿಯನ್​​ಶಿಪ್ ಆಫ್ ಲೆಜೆಂಡ್ಸ್ ಒಂದು ಟೂರ್ನಿ ಮಾತ್ರವಲ್ಲ, ಕ್ರೀಡೆಯ ಸರ್ವಶ್ರೇಷ್ಠ ಆಟಗಾರರ ಆಚರಣೆ ಆಗಿದೆ’ ಎಂದು ಈಸ್​​ಮೈಟ್ರಿಪ್ ಛೇರ್ಮನ್ ಮತ್ತು ಸಂಸ್ಥಾಪಕ ನಿಶಾಂತ್ ಪಿಟ್ಟಿ ತಿಳಿಸುತ್ತಾರೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ