Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೀರಾನಂದಾನಿ ಗ್ರೂಪ್​ನ ನಾಲ್ಕು ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯದಿಂದ ದಾಳಿ; ಫೆಮಾ ನಿಯಮ ಉಲ್ಲಂಘನೆ ಆರೋಪ; ದಾಖಲೆಗಳ ಪರಿಶೀಲನೆ

ED search on Hiranandani Group Premises: ಹೀರಾನಂದಾನಿ ಗ್ರೂಪ್​ಗೆ ಸೇರಿದ ಮುಂಬೈ ಮತ್ತು ಪಾವೆಲ್​ನ ನಾಲ್ಕು ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಫಾರೆಕ್ಸ್ ನಿಯಮಗಳ ಉಲ್ಲಂಘನೆ ಆಗಿದೆ ಎನ್ನುವ ಹೊಸ ಮಾಹಿತಿ ಬಂದ ಹಿನ್ನೆಲೆಯಲ್ಲಿ ಇಡಿಯಿಂದ ಈ ಕ್ರಮ ಜರುಗಿದೆ. ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ವಿರುದ್ಧದ ಪ್ರಕರಣದಲ್ಲಿ ಹೆಸರು ಕೇಳಿಬಂದಿದ್ದ ದರ್ಶನ್ ಹೀರಾನಂದಾನಿ ಅವರ ತಂದೆ ನಿರಂಜನ್ ಹೀರಾನಂದಾನಿಗೆ ಸೇರಿದ್ದ ಸಂಸ್ಥೆ ಇದು.

ಹೀರಾನಂದಾನಿ ಗ್ರೂಪ್​ನ ನಾಲ್ಕು ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯದಿಂದ ದಾಳಿ; ಫೆಮಾ ನಿಯಮ ಉಲ್ಲಂಘನೆ ಆರೋಪ; ದಾಖಲೆಗಳ ಪರಿಶೀಲನೆ
ನಿರಂಜನ್ ಹೀರಾನಂದಾನಿ
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Feb 22, 2024 | 4:26 PM

ಮುಂಬೈ, ಫೆಬ್ರುವರಿ 22: ಮಹುವಾ ಮೊಯಿತ್ರಾ ವಿರುದ್ಧದ ಕ್ಯಾಷ್ ಫಾರ್ ಕ್ವೇರಿ (cash for query) ಪ್ರಕರಣದಲ್ಲಿ ಹೆಸರು ಕೇಳಿಬಂದಿದ್ದ ದರ್ಶನ್ ಹೀರಾನಂದಾನಿ (Darshan Hiranandani) ಅವರ ಸಂಸ್ಥೆಗೆ ಸೇರಿದ ನಾಲ್ಕು ಸ್ಥಳಗಳ ಮೇಲೆ ಇಡಿ ರೇಡ್ ನಡೆದಿದೆ. ಫೆಮಾ ನಿಯಮಗಳ ಉಲ್ಲಂಘನೆ (FEMA rules violation) ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಮುಂಬೈ ಮತ್ತು ಪಾನ್ವೆಲ್​ನಲ್ಲಿರುವ ಹೀರಾನಂದಾನಿ ಗ್ರೂಪ್​ನ ಸ್ಥಳಗಳಲ್ಲಿ ದಾಖಲೆಗಳ ಪರಿಶೀಲನೆ ನಡೆಸಲಾಗಿದೆ. ಇದು ನ್ಯೂಸ್18 ವಾಹಿನಿಯಲ್ಲಿ ವರದಿಯಾಗಿದೆ. ಹಾಗೆಯೇ, ಇದು ಮಹುವಾ ಮೊಯಿತ್ರಾ (Mahua Moitra) ವಿರುದ್ಧದ ಪ್ರಕರಣಕ್ಕೂ ಇದಕ್ಕೂ ಸಂಬಂಧ ಇಲ್ಲ ಎಂದೂ ಮೂಲಗಳು ತಿಳಿಸಿವೆ ಎಂದು ವರದಿಯಲ್ಲಿ ಹೇಳಲಾಗಿದೆ. ಅದರ ಪ್ರಕಾರ, ಫೋರೆಕ್ಸ್ ನಿಯಮಗಳ ಉಲ್ಲಂಘನೆ ಮಾಡಲಾಗಿದೆ ಎನ್ನುವ ಹೊಸ ಮಾಹಿತಿ ಇಡಿ ಇಲಾಖೆಗೆ ಸಿಕ್ಕಿತ್ತು. ಈ ಕಾರಣಕ್ಕೆ ದಾಳಿ ನಡೆದಿದೆ ಎನ್ನಲಾಗಿದೆ.

ಹೀರಾನಂದಾನಿ ಗ್ರೂಪ್ ಭಾರತದ ಅತಿದೊಡ್ಡ ರಿಯಲ್ ಎಸ್ಟೇಟ್ ಕಂಪನಿಗಳಲ್ಲಿ ಒಂದು. ನಿರಂಜನ್ ಹೀರಾನಂದಾನಿ ಮತ್ತು ಸುರೇಂದ್ರ ಹೀರಾನಂದಾನಿ ಅವರು ಈ ಸಂಸ್ಥೆಯ ಸಹ-ಸಂಸ್ಥಾಪಕರು. ಹೀರಾನಂದಾನಿ ಗ್ರೂಪ್ 1978ರಲ್ಲಿ ರಿಯಲ್ ಎಸ್ಟೇಟ್ ಬಿಸಿನೆಸ್ ಆರಂಭಿಸಿತು. ಮುಂಬೈ ಹಾಗೂ ಸುತ್ತಮುತ್ತ ಬಹಳಷ್ಟು ಕಡೆ ವಸತಿ ಮತ್ತು ವಾಣಿಜ್ಯ ಕಟ್ಟಡಗಳನ್ನು ಕಟ್ಟಿದೆ. ಚೆನ್ನೈ, ಅಹ್ಮದಾಬಾದ್, ಪುಣೆ ಮೊದಲಾದ ನಗರಗಳಲ್ಲೂ ಅದರ ರಿಯಲ್ ಎಸ್ಟೇಟ್ ಪ್ರಾಜೆಕ್ಟ್​ಗಳು ನಡೆದಿವೆ.

ಇದನ್ನೂ ಓದಿ: ಬೈಜುಸ್ ಸಿಇಒಗೆ ಲುಕ್ ಔಟ್ ಸರ್ಕುಲಾರ್ ನೋಟೀಸ್ ಹೊರಡಿಸಲು ಇಡಿ ಯತ್ನ

ಮಹುವಾ ಮೊಯಿತ್ರಾಗೆ ಹಣ ಕೊಟ್ಟು ಸಂಸತ್ತಿನಲ್ಲಿ ಪ್ರಶ್ನೆ ಕೇಳಿಸಿದರೆಂದು ಆರೋಪಿಸಲಾಗಿರುವ ದರ್ಶನ್ ಹೀರಾನಂದಾನಿ ಅವರು ಈ ನಿರಂಜನ್ ಅವರ ಮಗ. ಇವರು ಯೋಟ್ಟಾ ಡಾಟಾ ಸರ್ವಿಸಸ್, ಎಚ್ ಎನರ್ಜಿ, ಟಾರ್ಕ್ ಸೆಮಿಕಂಡಕ್ಟರ್ಸ್, ತೇಜ್ ಪ್ಲಾಟ್​ಫಾರ್ಮ್ಸ್ ಸಂಸ್ಥೆಗಳ ಛೇರ್ಮನ್ ಆಗಿದ್ದಾರೆ.

ತೃಣಮೂಲ ಕಾಂಗ್ರೆಸ್ ಪಕ್ಷದ ಸಂಸದೆಯಾಗಿದ್ದ ಮಹುವಾ ಮೊಯಿತ್ರಾ ಸಂಸತ್ತಿನಲ್ಲಿ ಹಲವಾರು ಪ್ರಶ್ನೆಗಳನ್ನು ಕೇಳಿದ್​ದರು. ಅದಾನಿ ಗ್ರೂಪ್ ಸಂಸ್ಥೆಗಳು ಭಾಗಿಯಾಗಿರುವ ಯೋಜನೆಗಳ ಬಗ್ಗೆ ಅನೇಕ ಪ್ರಶ್ನೆಗಳಿದ್ದಿದ್ದವು. ದರ್ಶನ್ ಹೀರಾನಂದಾನಿ ಅವರು ಟಿಎಂಸಿ ಸಂಸದೆಗೆ ಈ ಪ್ರಶ್ನೆಗಳನ್ನು ನೀಡಿದ್ದರೆಂದು ಹೇಳಲಾಗಿದೆ. ಬಿಜೆಪಿ ಸಂಸದ ನಿಶಿಕಾಂತ್ ದುಬೇ ಈ ಸಂಬಂಧ ಲೋಕಸಭಾ ಸ್ಪೀಕರ್ ಓಂ ಬಿರ್ಲಾಗೆ ದೂರು ಕೊಟ್ಟಿದ್ದರು. ದುಬಾರಿ ಉಡುಗೊರೆ ಮತ್ತು ಹಣ ಪಡೆದು ಮೊಯಿತ್ರಾ ಸಂಸತ್​ನಲ್ಲಿ ಪ್ರಶ್ನೆ ಕೇಳಿದ್ದಾರೆ ಎಂದು ಆರೋಪ ಮಾಡಿದ್ದರು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಇನ್ಮುಂದೆ 108 ಆಂಬ್ಯುಲೆನ್ಸ್ ಸೇವೆ ಖಾಸಗಿಯಿಂದ ಸರ್ಕಾರದ ಕಂಟ್ರೋಲ್​ಗೆ
ಇನ್ಮುಂದೆ 108 ಆಂಬ್ಯುಲೆನ್ಸ್ ಸೇವೆ ಖಾಸಗಿಯಿಂದ ಸರ್ಕಾರದ ಕಂಟ್ರೋಲ್​ಗೆ
ಬಿಹಾರದಲ್ಲಿ ಸಿಡಿಲು ಬಡಿದು 25 ಜನ ಸಾವು; ನಿತೀಶ್ ಕುಮಾರ್ ಪರಿಹಾರ ಘೋಷಣೆ
ಬಿಹಾರದಲ್ಲಿ ಸಿಡಿಲು ಬಡಿದು 25 ಜನ ಸಾವು; ನಿತೀಶ್ ಕುಮಾರ್ ಪರಿಹಾರ ಘೋಷಣೆ
ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್​ ಮೇಲೆ ಸರಣಿ ಅಪಘಾತ: ಫುಲ್ ಟ್ರಾಫಿಕ್ ಜಾಮ್
ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್​ ಮೇಲೆ ಸರಣಿ ಅಪಘಾತ: ಫುಲ್ ಟ್ರಾಫಿಕ್ ಜಾಮ್
ವಾಮನ ನೋಡಲು ದರ್ಶನ್ ಜತೆ ವಿಜಯಲಕ್ಷ್ಮಿ ಬರಲಿಲ್ಲ ಯಾಕೆ? ಉತ್ತರಿಸಿದ ಧನ್ವೀರ್
ವಾಮನ ನೋಡಲು ದರ್ಶನ್ ಜತೆ ವಿಜಯಲಕ್ಷ್ಮಿ ಬರಲಿಲ್ಲ ಯಾಕೆ? ಉತ್ತರಿಸಿದ ಧನ್ವೀರ್
ಸ್ಟಾರ್ಕ್​ ಓವರ್​ನಲ್ಲಿ ಬೌಂಡರಿ ಸಿಕ್ಸರ್‌ಗಳ ಮಳೆಗರೆದ ಸಾಲ್ಟ್
ಸ್ಟಾರ್ಕ್​ ಓವರ್​ನಲ್ಲಿ ಬೌಂಡರಿ ಸಿಕ್ಸರ್‌ಗಳ ಮಳೆಗರೆದ ಸಾಲ್ಟ್
‘ವಾಮನ’ ಸಿನಿಮಾನಲ್ಲಿ ದರ್ಶನ್​ಗೆ ಇಷ್ಟವಾದ ಅಂಶಗಳೇನು?
‘ವಾಮನ’ ಸಿನಿಮಾನಲ್ಲಿ ದರ್ಶನ್​ಗೆ ಇಷ್ಟವಾದ ಅಂಶಗಳೇನು?
ಭಯೋತ್ಪಾದನೆ ವಿರುದ್ಧ ದೊಡ್ಡ ಹೆಜ್ಜೆ; ರಾಣಾ ಹಸ್ತಾಂತರಕ್ಕೆ ಪ್ರಲ್ಹಾದ್ ಜೋಶಿ
ಭಯೋತ್ಪಾದನೆ ವಿರುದ್ಧ ದೊಡ್ಡ ಹೆಜ್ಜೆ; ರಾಣಾ ಹಸ್ತಾಂತರಕ್ಕೆ ಪ್ರಲ್ಹಾದ್ ಜೋಶಿ
ಬೇಗ ಸೆಟ್ಲ್ ಮಾಡದಿದ್ದರೆ ಎಲ್ಲರ ಬಣ್ಣ ಬಯಲು ಮಾಡ್ತೀವಿ: ಮಂಜುನಾಥ್
ಬೇಗ ಸೆಟ್ಲ್ ಮಾಡದಿದ್ದರೆ ಎಲ್ಲರ ಬಣ್ಣ ಬಯಲು ಮಾಡ್ತೀವಿ: ಮಂಜುನಾಥ್
ವಜೀರಾಬಾದ್ ಬ್ಯಾರೇಜ್‌ನಲ್ಲಿ ಯಮುನಾ ದಂಡೆ ಪರಿಶೀಲಿಸಿದ ಸಿಎಂ ರೇಖಾ ಗುಪ್ತಾ
ವಜೀರಾಬಾದ್ ಬ್ಯಾರೇಜ್‌ನಲ್ಲಿ ಯಮುನಾ ದಂಡೆ ಪರಿಶೀಲಿಸಿದ ಸಿಎಂ ರೇಖಾ ಗುಪ್ತಾ
ರಂಗಾಯಣ ರಘು ಮಾತು ಕೇಳಿ ತಬ್ಬಿಕೊಂಡ ಡಾಲಿ ಧನಂಜಯ್
ರಂಗಾಯಣ ರಘು ಮಾತು ಕೇಳಿ ತಬ್ಬಿಕೊಂಡ ಡಾಲಿ ಧನಂಜಯ್