AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೆಮಾ ನಿಯಮ ಉಲ್ಲಂಘನೆ ಆರೋಪ: ಬೈಜುಸ್​ಗೆ ಜಾರಿ ನಿರ್ದೇಶನಾಲಯ ಶೋಕಾಸ್ ನೋಟೀಸ್ ಜಾರಿ

ED Show Cause Notice to BYJU's: ಫೆಮಾ ಉಲ್ಲಂಘನೆ ಆರೋಪದ ಮೇಲೆ ಬೈಜೂಸ್ ಸಂಸ್ಥೆಗೆ ಜಾರಿ ನಿರ್ದೇಶನಾಲಯ ಶೋಕಾಸ್ ನೋಟೀಸ್ ಜಾರಿ ಮಾಡಿದೆ ಎಂದು ಸಿಎನ್​ಬಿಸಿ ಟಿವಿ18 ವಾಹಿನಿಯಲ್ಲಿ ವರದಿಯಾಗಿದೆ. ಇದು 9,000 ಕೋಟಿ ರೂ ಮೊತ್ತದ ಅಕ್ರಮ ಎಂದು ಹೇಳಲಾಗುತ್ತಿದೆ. ಇಡಿ ನಡೆಸಿದ ತನಿಖೆ ವೇಳೆ, ಬೈಜೂಸ್ ಸಂಸ್ಥೆ ಫೆಮಾ ನಿಯಮಗಳನ್ನು ಉಲ್ಲಂಘಿಸಿರುವುದು ಗೊತ್ತಾಗಿದೆ. ಹೀಗಾಗಿ, ಸಂಸ್ಥೆಗೆ ಶೋಕಾಸ್ ನೋಟೀಸ್ ಜಾರಿ ಮಾಡಿರುವುದು ತಿಳಿದುಬಂದಿದೆ. ಆದರೆ, ಇಡಿಯಿಂದ ನೋಟೀಸ್ ಬಂದಿರುವ ಸುದ್ದಿಯನ್ನು ಬೈಜುಸ್ ಸಂಸ್ಥೆ ತಳ್ಳಿಹಾಕಿದೆ.

ಫೆಮಾ ನಿಯಮ ಉಲ್ಲಂಘನೆ ಆರೋಪ: ಬೈಜುಸ್​ಗೆ ಜಾರಿ ನಿರ್ದೇಶನಾಲಯ ಶೋಕಾಸ್ ನೋಟೀಸ್ ಜಾರಿ
ಜಾರಿ ನಿರ್ದೇಶನಾಲಯ
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Nov 22, 2023 | 1:59 PM

Share

ನವದೆಹಲಿ, ನವೆಂಬರ್ 22: ವಿದೇಶ ವಿನಿಮಯ ನಿರ್ವಹಣೆ ಕಾಯ್ದೆ (FEMA- Foreign Exchange Management Act) ಉಲ್ಲಂಘನೆ ಆರೋಪದ ಮೇಲೆ ಬೈಜೂಸ್ ಸಂಸ್ಥೆಗೆ ಜಾರಿ ನಿರ್ದೇಶನಾಲಯ ಶೋಕಾಸ್ ನೋಟೀಸ್ (Show Cause notice) ಜಾರಿ ಮಾಡಿದೆ ಎಂದು ಸಿಎನ್​ಬಿಸಿ ಟಿವಿ18 ವಾಹಿನಿಯಲ್ಲಿ ವರದಿಯಾಗಿದೆ. ಇದು 9,000 ಕೋಟಿ ರೂ ಮೊತ್ತದ ಅಕ್ರಮ ಎಂದು ಹೇಳಲಾಗುತ್ತಿದೆ. ಇಡಿ ನಡೆಸಿದ ತನಿಖೆ ವೇಳೆ, ಬೈಜೂಸ್ ಸಂಸ್ಥೆ ಫೆಮಾ ನಿಯಮಗಳನ್ನು ಉಲ್ಲಂಘಿಸಿರುವುದು ಗೊತ್ತಾಗಿದೆ. ಹೀಗಾಗಿ, ಸಂಸ್ಥೆಗೆ ಶೋಕಾಸ್ ನೋಟೀಸ್ ಜಾರಿ ಮಾಡಿರುವುದು ತಿಳಿದುಬಂದಿದೆ.

ಫೆಮಾ ನಿಯಮ ಉಲ್ಲಂಘನೆ ಆಗಿರುವ ಆರೋಪ ಮತ್ತು ಇಡಿಯಿಂದ ನೋಟೀಸ್ ಬಂದಿರುವ ಸುದ್ದಿಯನ್ನು ಬೈಜುಸ್ ಸಂಸ್ಥೆ ತಳ್ಳಿಹಾಕಿದೆ. ನಿನ್ನೆ ಮಂಗಳವಾರ (ನ. 21) ಬಿಡುಗಡೆ ಮಾಡಿದ ಹೇಳಿಕೆಯಲ್ಲಿ, ಮಾಧ್ಯಮಗಳಲ್ಲಿ ಬರುತ್ತಿರುವ ಈ ಸುದ್ದಿ ಸತ್ಯಕ್ಕೆ ದೂರವಾದುದು ಎಂದು ಹೇಳಿದೆ.

‘ಜಾರಿ ನಿರ್ದೇಶನಾಲಯ ಇಲಾಖೆಯಿಂದ ತನಗೆ ನೋಟೀಸ್ ಬಂದಿದೆ ಎಂದು ಮಾಧ್ಯಮಗಳಲ್ಲಿ ಬಂದಿರುವ ವರದಿಗಳನ್ನು ಬೈಜುಸ್ ಖಡಾಖಂಡಿತವಾಗಿ ನಿರಾಕರಿಸುತ್ತದೆ. ಇಡಿಯಿಂದ ಯಾವುದೇ ಅಂತಹ ನೋಟೀಸ್ ಬಂದಿಲ್ಲ,’ ಎಂದು ಬೈಜುಸ್ ತನ್ನ ಹೇಳಿಕೆಯಲ್ಲಿ ಸ್ಪಷ್ಟಪಡಿಸಿದೆ.

ಇದನ್ನೂ ಓದಿ: ರೇಮಂಡ್​​​​ ಮುಖ್ಯಸ್ಥ ಗೌತಮ್ ಸಿಂಘಾನಿಯಾ ವಿಚ್ಛೇದನ, ಪತ್ನಿ ನವಾಜ್ ವಿಧಿಸಿದ ಷರತ್ತೇನು?

ಮಾಧ್ಯಮಗಳಲ್ಲಿ ಬಂದ ವರದಿ ಪ್ರಕಾರ ಹಲವರಿಗೆ ಈ ನೋಟಿಸ್ ಜಾರಿಯಾಗಿದೆ. ಬೈಜುಸ್​ನ ಸಂಸ್ಥಾಪಕರು ಮತ್ತು ಥಿಂಕ್ ಅಂಡ್ ಲರ್ನ್ ಪ್ರೈ ಲಿ ಸಂಸ್ಥೆಯ ಸಂಸ್ಥಾಪಕರೂ ಆದ ಬೈಜು ರವೀಂದ್ರನ್ ಅವರಿಗೂ ಇಡಿ ನೋಟೀಸ್ ಕೊಟ್ಟಿರುವುದು ಗೊತ್ತಾಗಿದೆ.

ಏನಿದು ಬೈಜುಸ್ ವಿರುದ್ಧದ ಆರೋಪ?

ಬೈಜುಸ್​ನ ಮಾತೃ ಸಂಸ್ಥೆ ಥಿಂಕ್ ಅಂಡ್ ಲರ್ನ್ ಪ್ರೈ ಲಿ ಅಕ್ರಮವಾಗಿ ವಿದೇಶಗಳಿಗೆ ಹಣ ರವಾನೆ ಮಾಡಿ ಹೂಡಿಕೆ ಮಾಡಿದೆ. ವಿದೇಶಕ್ಕೆ ಹಣ ಕಳುಹಿಸುವುದಕ್ಕೆ ಬದಲಾಗಿ ಆಮದು ಮಾಡಿಕೊಂಡಿದ್ದಕ್ಕೆ ಬೈಜುಸ್ ಬಳಿ ಯಾವುದೇ ದಾಖಲೆ ಇಲ್ಲ. ಇದರಲ್ಲಿ ಫೆಮಾ ನಿಯಮಗಳ ಉಲ್ಲಂಘನೆಯಾಗಿದೆ. ಇದರಿಂದ ಸರ್ಕಾರಕ್ಕೆ ಆದಾಯ ಕೈತಪ್ಪಿದೆ ಎಂಬುದು ಇಡಿ ಆರೋಪ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 10:32 am, Wed, 22 November 23

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!