AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನಿಲ್ ಅಂಬಾನಿಗೆ ಮುಂದುವರಿದ ಇಡಿ ಕಂಟಕ; ನ. 14ಕ್ಕೆ ವಿಚಾರಣೆಗೆ ಹಾಜರಾಗುವಂತೆ ಹೊಸ ಸಮನ್ಸ್

ED summons Anil Ambani: ರಿಲಾಯನ್ಸ್ ಗ್ರೂಪ್ ಮುಖ್ಯಸ್ಥ ಅನಿಲ್ ಅಂಬಾನಿ ಅವರಿಗೆ ಇಡಿ ಕಂಟಕ ಮುಂದುವರಿದಿದೆ. ಫೆಮಾ ಕಾಯ್ದೆ ಅಡಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿ ಈ ಸಮನ್ಸ್ ಕೊಟ್ಟಿರುವುದು ತಿಳಿದುಬಂದಿದೆ. ರಿಲಾಯನ್ಸ್ ಇನ್​ಫ್ರಾಸ್ಟ್ರಕ್ಚರ್​ಗೆ ಕೊಡಲಾಗಿದ್ದ ರಸ್ತೆ ನಿರ್ಮಾಣ ಗುತ್ತಿಗೆಯನ್ನು ಅಕ್ರಮವಾಗಿ ಬೇರೆ ಸಂಸ್ಥೆಗೆ ಉಪಗುತ್ತಿಗೆ ಕೊಡಲಾಗಿದೆ ಎಂಬುದು ತನಿಖಾ ಸಂಸ್ಥೆಗಳ ಆರೋಪ.

ಅನಿಲ್ ಅಂಬಾನಿಗೆ ಮುಂದುವರಿದ ಇಡಿ ಕಂಟಕ; ನ. 14ಕ್ಕೆ ವಿಚಾರಣೆಗೆ ಹಾಜರಾಗುವಂತೆ ಹೊಸ ಸಮನ್ಸ್
ಅನಿಲ್ ಅಂಬಾನಿ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Nov 06, 2025 | 3:19 PM

Share

ನವದೆಹಲಿ, ನವೆಂಬರ್ 6: ಉದ್ಯಮಿ ಅನಿಲ್ ಅಂಬಾನಿ (Anil Ambani) ಅವರಿಗೆ ಜಾರಿ ನಿರ್ದೇಶನಾಲಯದಿಂದ ಮತ್ತೊಮ್ಮೆ ಸಮನ್ಸ್ ಕೊಡಲಾಗಿದೆ. ಫೆಮಾ ಅಡಿಗೆ ಬರುವ ಪ್ರಕರಣವೊಂದರ ತನಿಖೆ ನಡೆಯುತ್ತಿದ್ದು, ಈ ಸಂಬಂಧ, ನವೆಂಬರ್ 14ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿ ಅಂಬಾನಿಗೆ ಸಮನ್ಸ್ ಕೊಡಲಾಗಿದೆ. ಮುಕೇಶ್ ಅಂಬಾನಿ ಅವರ ಕಿರಿಯ ಸಹೋದರ ಅನಿಲ್ ಅಂಬಾನಿ ಹಾಗೂ ಅವರ ರಿಲಾಯನ್ಸ್ ಗ್ರೂಪ್​ನ ವಿರುದ್ಧ ವಿದೇಶ ವಿನಿಮಯ ನಿರ್ವಹಣಾ ಕಾಯ್ದೆ (FEMA- Foreign Exchange Management Act) ಹಾಗೂ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್​ಎ) ಅಡಿ ಪ್ರಕರಣಗಳನ್ನು ದಾಖಲಿಸಿಕೊಂಡು ಇಡಿ ತನಿಖೆ ನಡೆಸುತ್ತಿದೆ.

ಬ್ಯಾಂಕ್ ಸಾಲಗಳನ್ನು ಅಕ್ರಮವಾಗಿ ವರ್ಗಾಯಿಸಿರುವ ಗಂಭೀರ ಆರೋಪ ಅನಿಲ್ ಅಂಬಾನಿ ಹಾಗೂ ಅವರ ಸಂಸ್ಥೆಗಳ ಮೇಲೆ ಇದೆ. ಎಸ್​ಬಿಐ, ಯೆಸ್ ಬ್ಯಾಂಕ್, ಐಡಿಬಿಐ ಮೊದಲಾದ ಬ್ಯಾಂಕುಗಳಿಂದ ಪಡೆದ ಸಾಲವನ್ನು ಉದ್ದೇಶಿತ ಕೆಲಸಗಳಿಗೆ ಬಳಸದೇ ನಕಲಿ ಕಂಪನಿಗಳಿಗೆ ಹಣ ವರ್ಗಾವಣೆ ಮಾಡಿ ವಂಚಿಸಿದ ಆರೋಪಗಳಿವೆ. ಒಟ್ಟು 17,000 ಕೋಟಿ ರೂ ಸಾಲ ವಂಚನೆ ನಡೆದಿದೆ ಎಂದು ತನಿಖಾ ಸಂಸ್ಥೆಗಳು ಆರೋಪಿಸಿವೆ.

ಇದನ್ನೂ ಓದಿ: ಕೇವಲ 30 ರೂಗೆ ರಾಕೆಟ್ ಸರ್ವಿಸ್; ಚೆನ್ನೈ ಕಂಪನಿಯಿಂದ ಮರುಬಳಕೆಯ ಎಲೆಕ್ಟ್ರಿಕ್ ರಾಕೆಟ್ ಆವಿಷ್ಕಾರ

ಬ್ಯಾಂಕ್ ಸಾಲಗಳ ಪ್ರಕರಣ ಸಂಬಂಧ ಜಾರಿ ನಿರ್ದೇಶನಾಲಯವು ಅನಿಲ್ ಅಂಬಾನಿಗೆ ಸೇರಿದ ಒಟ್ಟು 7,500 ಕೋಟಿ ರೂ ಮೊತ್ತದ ಅಸ್ತಿಪಾಸ್ತಿಗಳನ್ನು ಜಫ್ತಿ ಮಾಡಿದೆ. ಪಿಎಂಎಲ್​ಎ ಕಾಯ್ದೆ ಅಡಿ ಪ್ರಕರಣಗಳು ದಾಖಲಾಗಿವೆ.

ಈಗ ನವೆಂಬರ್ 14ಕ್ಕೆ ವಿಚಾರಣೆಗೆ ಹಾಜರಾಗುವಂತೆ ಅನಿಲ್ ಅಂಬಾನಿಗೆ ಸಮನ್ಸ್ ನೀಡಲಾಗಿರುವುದು ಫೆಮಾ ಅಡಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದ್ದು ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ಜನವರಿಯಲ್ಲಿ ಭಾರತದ ಗಗನಯಾನ ಮಿಷನ್; ಮಾನವ ಬದಲು ವ್ಯೋಮಿತ್ರ ಪ್ರಯಾಣ

ರಿಲಾಯನ್ಸ್ ಇನ್​ಫ್ರಾಸ್ಟ್ರಕ್ಚರ್ ಸಂಸ್ಥೆಯು ತನಗೆ ನೀಡಲಾಗಿದ್ದ ರಸ್ತೆ ನಿರ್ಮಾಣ ಗುತ್ತಿಗೆಯನ್ನು ಬೇರೆ ಸಂಸ್ಥೆಗೆ ಉಪಗುತ್ತಿಗೆ ಕೊಟ್ಟಿತ್ತು. ಇದರಲ್ಲಿ ವಿದೇಶೀ ವಿನಿಮಯ ನಿರ್ವಹಣಾ ಕಾಯ್ದೆಯ ನಿಯಮಗಳನ್ನು ಪಾಲಿಸದೆ ಅಕ್ರಮ ಎಸಗಲಾಗಿದೆ. 38 ಕೋಟಿ ರೂ ಅಕ್ರಮ ನಡೆದಿದೆ ಎಂಬುದು ತನಿಖೆ ವೇಳೆ ಕಂಡು ಬಂದಿದೆ. ಈ ಬಗ್ಗೆ ವಿಚಾರಣೆ ನಡೆಸಲು ಅಂಬಾನಿಗೆ ಸಮನ್ಸ್ ಕೊಡಲಾಗಿರಬಹುದು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ