AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Edible Oil: ಖಾದ್ಯ ತೈಲ ಬೆಲೆಗಳು ಶೀಘ್ರದಲ್ಲೇ ಶೇ 10ರಿಂದ 15ರಷ್ಟು ಇಳಿಕೆ ಸಾಧ್ಯತೆ

ಖಾದ್ಯ ತೈಲದ ಬೆಲೆ ಇನ್ನೊಂದು ವಾರದಲ್ಲಿ ಶೇ 10ರಿಂದ 15ರಷ್ಟು ಇಳಿಕೆ ಆಗುವ ಸಾಧ್ಯತೆ ಇದೆ. ಇದಕ್ಕೆ ಕಾರಣ ಏನು ಎಂಬುದರ ವಿವರ ಇಲ್ಲಿದೆ.

Edible Oil: ಖಾದ್ಯ ತೈಲ ಬೆಲೆಗಳು ಶೀಘ್ರದಲ್ಲೇ ಶೇ 10ರಿಂದ 15ರಷ್ಟು ಇಳಿಕೆ ಸಾಧ್ಯತೆ
ಸಾಂದರ್ಭಿಕ ಚಿತ್ರ
TV9 Web
| Updated By: Srinivas Mata|

Updated on: Jul 06, 2022 | 3:28 PM

Share

ಒಂದು ವಾರದೊಳಗೆ ಬೆಲೆಗಳನ್ನು ಕಡಿಮೆ ಮಾಡಲು ತಯಾರಕರನ್ನು ಸರ್ಕಾರದಿಂದ ಕೇಳಿರುವುದರಿಂದ ಖಾದ್ಯ ತೈಲ (Edible Oil) ಬೆಲೆಗಳು ಶೀಘ್ರದಲ್ಲೇ ಶೇ 10ರಿಂದ 15ರಷ್ಟು ಕಡಿಮೆ ಆಗುವ ಸಾಧ್ಯತೆಯಿದೆ. ಎಡೆಲ್‌ವೀಸ್ ಫೈನಾನ್ಷಿಯಲ್ ಸರ್ವೀಸಸ್‌ನ ಅಭಿನೀಶ್ ರಾಯ್ ಇಟಿ ನೌಗೆ ಮಾತನಾಡಿದ್ದು, ಈ ಬೆಳವಣಿಗೆಯು ಎಫ್​ಎಂಸಿಜಿ ಕಂಪೆನಿಗಳು ಮತ್ತು ಗ್ರಾಹಕರು ಇಬ್ಬರಿಗೂ ಉತ್ತಮವಾಗಿದೆ ಎಂದು ಹೇಳಿದರು. ಎಫ್‌ಎಂಸಿಜಿ ಕಂಪೆನಿಗಳಾದ ಎಚ್‌ಯುಎಲ್, ಬ್ರಿಟಾನಿಯಾ ಮತ್ತು ನೆಸ್ಟ್ಲೆ ವರ್ಷದ ದ್ವಿತೀಯಾರ್ಧದಲ್ಲಿ ಈ ಕ್ರಮದ ಪ್ರಯೋಜನಗಳನ್ನು ಕಾಣುವ ಸಾಧ್ಯತೆಯಿದೆ.

ಏಕೆಂದರೆ ತಾಳೆ ಎಣ್ಣೆಯನ್ನು ಸಾಬೂನು, ಬಿಸ್ಕತ್ತು, ನೂಡಲ್ಸ್ ಇತ್ಯಾದಿಗಳ ತಯಾರಿಕೆಯಲ್ಲಿ ಬಳಸಲಾಗುತ್ತದೆ. ಎಫ್‌ಎಂಸಿಜಿ ಕಂಪೆನಿಗಳು ವಿರಳವಾಗಿ ಬೆಲೆಗಳನ್ನು ಕಡಿತಗೊಳಿಸುತ್ತವೆ ಎಂದು ಅವರು ಹೇಳಿದ್ದಾರೆ. ಆದ್ದರಿಂದ ಅವರು ಮಾರ್ಜಿನ್ ವಿಸ್ತರಣೆಗಳಿಂದ ಪ್ರಯೋಜನ ಪಡೆಯುತ್ತಾರೆ. ಅಲ್ಲದೆ, ದೃಢವಾದ ಮುಂಗಾರು ಕಾರಣಕ್ಕೆ ಗ್ರಾಮೀಣ ಬೇಡಿಕೆಯನ್ನು ಹೆಚ್ಚಿಸುವ ಸಾಧ್ಯತೆಯಿದ್ದು, ಇದು ಎಫ್‌ಎಂಸಿಜಿ ಕಂಪೆನಿಗಳಿಗೆ ಉತ್ತಮ ಸಂಕೇತವಾಗಿದೆ. ಆದರೆ ಖಾದ್ಯ ತೈಲ ಕಂಪೆನಿಗಳ ಮೇಲೆ ಪರಿಣಾಮವು ನೆಗೆಟಿವ್ ಆಗಿರುತ್ತದೆ ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ.

ವನಸ್ಪತಿ, ಸೋಯಾಬೀನ್ ಎಣ್ಣೆ, ಸೂರ್ಯಕಾಂತಿ ಎಣ್ಣೆ ಮತ್ತು ಆರ್‌ಬಿಡಿ ಪಾಮೋಲಿನ್‌ನಂತಹ ಖಾದ್ಯ ತೈಲಗಳ ಸಗಟು ಬೆಲೆಗಳು ಮತ್ತು ಚಿಲ್ಲರೆ ಬೆಲೆಗಳನ್ನು ಕಡಿಮೆ ಮಾಡಲಾಗಿದೆ ಎಂದು ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವಾಲಯವು ತಿಳಿಸಿದ ಒಂದು ತಿಂಗಳ ನಂತರ ಈ ಬೆಳವಣಿಗೆಯಾಗಿದೆ.

ಆಹಾರ ಸಾರ್ವಜನಿಕ ವಿತರಣಾ ಇಲಾಖೆ (ಡಿಎಫ್‌ಪಿಡಿ) ಕಾರ್ಯದರ್ಶಿ ಸುಧಾಂಶು ಪಾಂಡೆ ಮಾತನಾಡಿ, ಎಲ್ಲ ಪ್ರಮುಖ ಖಾದ್ಯ ತೈಲ ಬ್ರಾಂಡ್‌ಗಳು ಬೆಲೆಯನ್ನು 10-15 ರೂಪಾಯಿಗಳಷ್ಟು ಕಡಿತಗೊಳಿಸಿವೆ ಮತ್ತು ಬೆಲೆ ಇಳಿಕೆಯು ಹಣದುಬ್ಬರ ಮಟ್ಟವನ್ನು ತಣ್ಣಗಾಗಲು ಸಹಾಯ ಮಾಡುತ್ತದೆ. ಇಲಾಖೆಯ ನಿರಂತರ ಮೇಲ್ವಿಚಾರಣೆ, ಎಲ್ಲ ಪಾಲುದಾರರೊಂದಿಗೆ ನಿರಂತರ ತೊಡಗಿಸಿಕೊಳ್ಳುವಿಕೆ ಮತ್ತು ಬಹು ಮಧ್ಯಸ್ಥಿಕೆಗಳ ಮೂಲಕ ಬೆಲೆ ಇಳಿಕೆ ಸಾಧ್ಯವಾಯಿತು ಎಂದಿದ್ದಾರೆ.

ಖಾದ್ಯ ತೈಲಗಳ ಮೇಲಿನ ಆಮದು ಸುಂಕವನ್ನು ಸರ್ಕಾರ ಕಡಿತಗೊಳಿಸುವುದರಿಂದ ಎಫ್‌ಎಂಸಿಜಿ ಕಂಪೆನಿಗಳು ಕಡಿಮೆ ಬೆಲೆಯ ಲಾಭವನ್ನು ಗ್ರಾಹಕರಿಗೆ ವರ್ಗಾಯಿಸಲು ಅವಕಾಶ ಮಾಡಿಕೊಡಲಾಗಿದೆ.

ಇದನ್ನೂ ಓದಿ: LPG Gas Cylinder Price: ಗೃಹಬಳಕೆ ಸಿಲಿಂಡರ್ ಬೆಲೆ 50 ರೂಪಾಯಿ ಏರಿಕೆ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ