AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Edible Oil: ಖಾದ್ಯ ತೈಲ ಬೆಲೆಗಳು ಶೀಘ್ರದಲ್ಲೇ ಶೇ 10ರಿಂದ 15ರಷ್ಟು ಇಳಿಕೆ ಸಾಧ್ಯತೆ

ಖಾದ್ಯ ತೈಲದ ಬೆಲೆ ಇನ್ನೊಂದು ವಾರದಲ್ಲಿ ಶೇ 10ರಿಂದ 15ರಷ್ಟು ಇಳಿಕೆ ಆಗುವ ಸಾಧ್ಯತೆ ಇದೆ. ಇದಕ್ಕೆ ಕಾರಣ ಏನು ಎಂಬುದರ ವಿವರ ಇಲ್ಲಿದೆ.

Edible Oil: ಖಾದ್ಯ ತೈಲ ಬೆಲೆಗಳು ಶೀಘ್ರದಲ್ಲೇ ಶೇ 10ರಿಂದ 15ರಷ್ಟು ಇಳಿಕೆ ಸಾಧ್ಯತೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jul 06, 2022 | 3:28 PM

Share

ಒಂದು ವಾರದೊಳಗೆ ಬೆಲೆಗಳನ್ನು ಕಡಿಮೆ ಮಾಡಲು ತಯಾರಕರನ್ನು ಸರ್ಕಾರದಿಂದ ಕೇಳಿರುವುದರಿಂದ ಖಾದ್ಯ ತೈಲ (Edible Oil) ಬೆಲೆಗಳು ಶೀಘ್ರದಲ್ಲೇ ಶೇ 10ರಿಂದ 15ರಷ್ಟು ಕಡಿಮೆ ಆಗುವ ಸಾಧ್ಯತೆಯಿದೆ. ಎಡೆಲ್‌ವೀಸ್ ಫೈನಾನ್ಷಿಯಲ್ ಸರ್ವೀಸಸ್‌ನ ಅಭಿನೀಶ್ ರಾಯ್ ಇಟಿ ನೌಗೆ ಮಾತನಾಡಿದ್ದು, ಈ ಬೆಳವಣಿಗೆಯು ಎಫ್​ಎಂಸಿಜಿ ಕಂಪೆನಿಗಳು ಮತ್ತು ಗ್ರಾಹಕರು ಇಬ್ಬರಿಗೂ ಉತ್ತಮವಾಗಿದೆ ಎಂದು ಹೇಳಿದರು. ಎಫ್‌ಎಂಸಿಜಿ ಕಂಪೆನಿಗಳಾದ ಎಚ್‌ಯುಎಲ್, ಬ್ರಿಟಾನಿಯಾ ಮತ್ತು ನೆಸ್ಟ್ಲೆ ವರ್ಷದ ದ್ವಿತೀಯಾರ್ಧದಲ್ಲಿ ಈ ಕ್ರಮದ ಪ್ರಯೋಜನಗಳನ್ನು ಕಾಣುವ ಸಾಧ್ಯತೆಯಿದೆ.

ಏಕೆಂದರೆ ತಾಳೆ ಎಣ್ಣೆಯನ್ನು ಸಾಬೂನು, ಬಿಸ್ಕತ್ತು, ನೂಡಲ್ಸ್ ಇತ್ಯಾದಿಗಳ ತಯಾರಿಕೆಯಲ್ಲಿ ಬಳಸಲಾಗುತ್ತದೆ. ಎಫ್‌ಎಂಸಿಜಿ ಕಂಪೆನಿಗಳು ವಿರಳವಾಗಿ ಬೆಲೆಗಳನ್ನು ಕಡಿತಗೊಳಿಸುತ್ತವೆ ಎಂದು ಅವರು ಹೇಳಿದ್ದಾರೆ. ಆದ್ದರಿಂದ ಅವರು ಮಾರ್ಜಿನ್ ವಿಸ್ತರಣೆಗಳಿಂದ ಪ್ರಯೋಜನ ಪಡೆಯುತ್ತಾರೆ. ಅಲ್ಲದೆ, ದೃಢವಾದ ಮುಂಗಾರು ಕಾರಣಕ್ಕೆ ಗ್ರಾಮೀಣ ಬೇಡಿಕೆಯನ್ನು ಹೆಚ್ಚಿಸುವ ಸಾಧ್ಯತೆಯಿದ್ದು, ಇದು ಎಫ್‌ಎಂಸಿಜಿ ಕಂಪೆನಿಗಳಿಗೆ ಉತ್ತಮ ಸಂಕೇತವಾಗಿದೆ. ಆದರೆ ಖಾದ್ಯ ತೈಲ ಕಂಪೆನಿಗಳ ಮೇಲೆ ಪರಿಣಾಮವು ನೆಗೆಟಿವ್ ಆಗಿರುತ್ತದೆ ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ.

ವನಸ್ಪತಿ, ಸೋಯಾಬೀನ್ ಎಣ್ಣೆ, ಸೂರ್ಯಕಾಂತಿ ಎಣ್ಣೆ ಮತ್ತು ಆರ್‌ಬಿಡಿ ಪಾಮೋಲಿನ್‌ನಂತಹ ಖಾದ್ಯ ತೈಲಗಳ ಸಗಟು ಬೆಲೆಗಳು ಮತ್ತು ಚಿಲ್ಲರೆ ಬೆಲೆಗಳನ್ನು ಕಡಿಮೆ ಮಾಡಲಾಗಿದೆ ಎಂದು ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವಾಲಯವು ತಿಳಿಸಿದ ಒಂದು ತಿಂಗಳ ನಂತರ ಈ ಬೆಳವಣಿಗೆಯಾಗಿದೆ.

ಆಹಾರ ಸಾರ್ವಜನಿಕ ವಿತರಣಾ ಇಲಾಖೆ (ಡಿಎಫ್‌ಪಿಡಿ) ಕಾರ್ಯದರ್ಶಿ ಸುಧಾಂಶು ಪಾಂಡೆ ಮಾತನಾಡಿ, ಎಲ್ಲ ಪ್ರಮುಖ ಖಾದ್ಯ ತೈಲ ಬ್ರಾಂಡ್‌ಗಳು ಬೆಲೆಯನ್ನು 10-15 ರೂಪಾಯಿಗಳಷ್ಟು ಕಡಿತಗೊಳಿಸಿವೆ ಮತ್ತು ಬೆಲೆ ಇಳಿಕೆಯು ಹಣದುಬ್ಬರ ಮಟ್ಟವನ್ನು ತಣ್ಣಗಾಗಲು ಸಹಾಯ ಮಾಡುತ್ತದೆ. ಇಲಾಖೆಯ ನಿರಂತರ ಮೇಲ್ವಿಚಾರಣೆ, ಎಲ್ಲ ಪಾಲುದಾರರೊಂದಿಗೆ ನಿರಂತರ ತೊಡಗಿಸಿಕೊಳ್ಳುವಿಕೆ ಮತ್ತು ಬಹು ಮಧ್ಯಸ್ಥಿಕೆಗಳ ಮೂಲಕ ಬೆಲೆ ಇಳಿಕೆ ಸಾಧ್ಯವಾಯಿತು ಎಂದಿದ್ದಾರೆ.

ಖಾದ್ಯ ತೈಲಗಳ ಮೇಲಿನ ಆಮದು ಸುಂಕವನ್ನು ಸರ್ಕಾರ ಕಡಿತಗೊಳಿಸುವುದರಿಂದ ಎಫ್‌ಎಂಸಿಜಿ ಕಂಪೆನಿಗಳು ಕಡಿಮೆ ಬೆಲೆಯ ಲಾಭವನ್ನು ಗ್ರಾಹಕರಿಗೆ ವರ್ಗಾಯಿಸಲು ಅವಕಾಶ ಮಾಡಿಕೊಡಲಾಗಿದೆ.

ಇದನ್ನೂ ಓದಿ: LPG Gas Cylinder Price: ಗೃಹಬಳಕೆ ಸಿಲಿಂಡರ್ ಬೆಲೆ 50 ರೂಪಾಯಿ ಏರಿಕೆ

Follow Us
Web contact
Web contact

TV9 Kannada

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​