AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Edible Oil: ಖಾದ್ಯ ತೈಲ ಬೆಲೆಗಳು ಶೀಘ್ರದಲ್ಲೇ ಶೇ 10ರಿಂದ 15ರಷ್ಟು ಇಳಿಕೆ ಸಾಧ್ಯತೆ

ಖಾದ್ಯ ತೈಲದ ಬೆಲೆ ಇನ್ನೊಂದು ವಾರದಲ್ಲಿ ಶೇ 10ರಿಂದ 15ರಷ್ಟು ಇಳಿಕೆ ಆಗುವ ಸಾಧ್ಯತೆ ಇದೆ. ಇದಕ್ಕೆ ಕಾರಣ ಏನು ಎಂಬುದರ ವಿವರ ಇಲ್ಲಿದೆ.

Edible Oil: ಖಾದ್ಯ ತೈಲ ಬೆಲೆಗಳು ಶೀಘ್ರದಲ್ಲೇ ಶೇ 10ರಿಂದ 15ರಷ್ಟು ಇಳಿಕೆ ಸಾಧ್ಯತೆ
ಸಾಂದರ್ಭಿಕ ಚಿತ್ರ
Follow us
TV9 Web
| Updated By: Srinivas Mata

Updated on: Jul 06, 2022 | 3:28 PM

ಒಂದು ವಾರದೊಳಗೆ ಬೆಲೆಗಳನ್ನು ಕಡಿಮೆ ಮಾಡಲು ತಯಾರಕರನ್ನು ಸರ್ಕಾರದಿಂದ ಕೇಳಿರುವುದರಿಂದ ಖಾದ್ಯ ತೈಲ (Edible Oil) ಬೆಲೆಗಳು ಶೀಘ್ರದಲ್ಲೇ ಶೇ 10ರಿಂದ 15ರಷ್ಟು ಕಡಿಮೆ ಆಗುವ ಸಾಧ್ಯತೆಯಿದೆ. ಎಡೆಲ್‌ವೀಸ್ ಫೈನಾನ್ಷಿಯಲ್ ಸರ್ವೀಸಸ್‌ನ ಅಭಿನೀಶ್ ರಾಯ್ ಇಟಿ ನೌಗೆ ಮಾತನಾಡಿದ್ದು, ಈ ಬೆಳವಣಿಗೆಯು ಎಫ್​ಎಂಸಿಜಿ ಕಂಪೆನಿಗಳು ಮತ್ತು ಗ್ರಾಹಕರು ಇಬ್ಬರಿಗೂ ಉತ್ತಮವಾಗಿದೆ ಎಂದು ಹೇಳಿದರು. ಎಫ್‌ಎಂಸಿಜಿ ಕಂಪೆನಿಗಳಾದ ಎಚ್‌ಯುಎಲ್, ಬ್ರಿಟಾನಿಯಾ ಮತ್ತು ನೆಸ್ಟ್ಲೆ ವರ್ಷದ ದ್ವಿತೀಯಾರ್ಧದಲ್ಲಿ ಈ ಕ್ರಮದ ಪ್ರಯೋಜನಗಳನ್ನು ಕಾಣುವ ಸಾಧ್ಯತೆಯಿದೆ.

ಏಕೆಂದರೆ ತಾಳೆ ಎಣ್ಣೆಯನ್ನು ಸಾಬೂನು, ಬಿಸ್ಕತ್ತು, ನೂಡಲ್ಸ್ ಇತ್ಯಾದಿಗಳ ತಯಾರಿಕೆಯಲ್ಲಿ ಬಳಸಲಾಗುತ್ತದೆ. ಎಫ್‌ಎಂಸಿಜಿ ಕಂಪೆನಿಗಳು ವಿರಳವಾಗಿ ಬೆಲೆಗಳನ್ನು ಕಡಿತಗೊಳಿಸುತ್ತವೆ ಎಂದು ಅವರು ಹೇಳಿದ್ದಾರೆ. ಆದ್ದರಿಂದ ಅವರು ಮಾರ್ಜಿನ್ ವಿಸ್ತರಣೆಗಳಿಂದ ಪ್ರಯೋಜನ ಪಡೆಯುತ್ತಾರೆ. ಅಲ್ಲದೆ, ದೃಢವಾದ ಮುಂಗಾರು ಕಾರಣಕ್ಕೆ ಗ್ರಾಮೀಣ ಬೇಡಿಕೆಯನ್ನು ಹೆಚ್ಚಿಸುವ ಸಾಧ್ಯತೆಯಿದ್ದು, ಇದು ಎಫ್‌ಎಂಸಿಜಿ ಕಂಪೆನಿಗಳಿಗೆ ಉತ್ತಮ ಸಂಕೇತವಾಗಿದೆ. ಆದರೆ ಖಾದ್ಯ ತೈಲ ಕಂಪೆನಿಗಳ ಮೇಲೆ ಪರಿಣಾಮವು ನೆಗೆಟಿವ್ ಆಗಿರುತ್ತದೆ ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ.

ವನಸ್ಪತಿ, ಸೋಯಾಬೀನ್ ಎಣ್ಣೆ, ಸೂರ್ಯಕಾಂತಿ ಎಣ್ಣೆ ಮತ್ತು ಆರ್‌ಬಿಡಿ ಪಾಮೋಲಿನ್‌ನಂತಹ ಖಾದ್ಯ ತೈಲಗಳ ಸಗಟು ಬೆಲೆಗಳು ಮತ್ತು ಚಿಲ್ಲರೆ ಬೆಲೆಗಳನ್ನು ಕಡಿಮೆ ಮಾಡಲಾಗಿದೆ ಎಂದು ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವಾಲಯವು ತಿಳಿಸಿದ ಒಂದು ತಿಂಗಳ ನಂತರ ಈ ಬೆಳವಣಿಗೆಯಾಗಿದೆ.

ಆಹಾರ ಸಾರ್ವಜನಿಕ ವಿತರಣಾ ಇಲಾಖೆ (ಡಿಎಫ್‌ಪಿಡಿ) ಕಾರ್ಯದರ್ಶಿ ಸುಧಾಂಶು ಪಾಂಡೆ ಮಾತನಾಡಿ, ಎಲ್ಲ ಪ್ರಮುಖ ಖಾದ್ಯ ತೈಲ ಬ್ರಾಂಡ್‌ಗಳು ಬೆಲೆಯನ್ನು 10-15 ರೂಪಾಯಿಗಳಷ್ಟು ಕಡಿತಗೊಳಿಸಿವೆ ಮತ್ತು ಬೆಲೆ ಇಳಿಕೆಯು ಹಣದುಬ್ಬರ ಮಟ್ಟವನ್ನು ತಣ್ಣಗಾಗಲು ಸಹಾಯ ಮಾಡುತ್ತದೆ. ಇಲಾಖೆಯ ನಿರಂತರ ಮೇಲ್ವಿಚಾರಣೆ, ಎಲ್ಲ ಪಾಲುದಾರರೊಂದಿಗೆ ನಿರಂತರ ತೊಡಗಿಸಿಕೊಳ್ಳುವಿಕೆ ಮತ್ತು ಬಹು ಮಧ್ಯಸ್ಥಿಕೆಗಳ ಮೂಲಕ ಬೆಲೆ ಇಳಿಕೆ ಸಾಧ್ಯವಾಯಿತು ಎಂದಿದ್ದಾರೆ.

ಖಾದ್ಯ ತೈಲಗಳ ಮೇಲಿನ ಆಮದು ಸುಂಕವನ್ನು ಸರ್ಕಾರ ಕಡಿತಗೊಳಿಸುವುದರಿಂದ ಎಫ್‌ಎಂಸಿಜಿ ಕಂಪೆನಿಗಳು ಕಡಿಮೆ ಬೆಲೆಯ ಲಾಭವನ್ನು ಗ್ರಾಹಕರಿಗೆ ವರ್ಗಾಯಿಸಲು ಅವಕಾಶ ಮಾಡಿಕೊಡಲಾಗಿದೆ.

ಇದನ್ನೂ ಓದಿ: LPG Gas Cylinder Price: ಗೃಹಬಳಕೆ ಸಿಲಿಂಡರ್ ಬೆಲೆ 50 ರೂಪಾಯಿ ಏರಿಕೆ

ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ