AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Edible Oil: ಏಪ್ರಿಲ್ 28ರಿಂದ ಇಂಡೋನೇಷ್ಯಾ ನಿಲ್ಲಿಸಲಿದೆ ತಾಳೆ ಎಣ್ಣೆ ರಫ್ತು; ಭಾರತದಲ್ಲಿ ಗ್ರಾಹಕರಿಗೆ ತಟ್ಟಲಿದೆ ಬೆಲೆ ಏರಿಕೆ ಬಿಸಿ

ಇಂಡೋನೇಷ್ಯಾದಿಂದ ಏಪ್ರಿಲ್ 28ನೇ ತಾರೀಕಿನಿಂದ ತಾಳೆ ಎಣ್ಣೆ ರಫ್ತು ನಿಷೇಧ ಮಾಡಿರುವುದರಿಂದ ಭಾರತದಲ್ಲಿ ಬೆಲೆ ಏರಿಕೆ ಆಗಬಹುದು.

Edible Oil: ಏಪ್ರಿಲ್ 28ರಿಂದ ಇಂಡೋನೇಷ್ಯಾ ನಿಲ್ಲಿಸಲಿದೆ ತಾಳೆ ಎಣ್ಣೆ ರಫ್ತು; ಭಾರತದಲ್ಲಿ ಗ್ರಾಹಕರಿಗೆ ತಟ್ಟಲಿದೆ ಬೆಲೆ ಏರಿಕೆ ಬಿಸಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Apr 23, 2022 | 11:04 AM

Share

ದೇಶೀಯ ಖಾದ್ಯ ತೈಲ (Edible Oil) ಬೆಲೆಗಳು ಈಗಾಗಲೇ ಹೆಚ್ಚಿದ್ದು, ತಾಳೆ ಎಣ್ಣೆಯ ವಿಶ್ವದ ಅತಿದೊಡ್ಡ ಉತ್ಪಾದಕ ದೇಶವಾದ ಇಂಡೋನೇಷ್ಯಾವು ಏಪ್ರಿಲ್ 28ರಿಂದ ರಫ್ತುಗಳನ್ನು ನಿಷೇಧಿಸುವುದರಿಂದ ಮತ್ತಷ್ಟು ಮೇಲೇರುವ ಸಾಧ್ಯತೆಗಳಿವೆ. ಅಂದಹಾಗೆ ಇಂಡೋನೇಷ್ಯಾ ಕೂಡ ದೇಶೀಯ ಕೊರತೆ ಮತ್ತು ಗಗನಕ್ಕೇರುತ್ತಿರುವ ಹೆಚ್ಚಿನ ಖಾದ್ಯ ತೈಲ ಬೆಲೆಗಳೊಂದಿಗೆ ಹೋರಾಡುತ್ತಿದೆ. ಚೀನಾ ಮತ್ತು ಭಾರತವು ಇಂಡೋನೇಷ್ಯಾದಿಂದ ತಾಳೆ ಎಣ್ಣೆಯನ್ನು ಅತಿ ದೊಡ್ಡ ಪ್ರಮಾಣದಲ್ಲಿ ಆಮದು ಮಾಡಿಕೊಳ್ಳುವ ದೇಶಗಳಲ್ಲಿ ಒಂದಾಗಿದ್ದು, ಇದು ಪ್ರಪಂಚದ ಅರ್ಧಕ್ಕಿಂತ ಹೆಚ್ಚಿನ ಪೂರೈಕೆಯನ್ನು ಹೊಂದಿದೆ. ಅಡುಗೆ ಎಣ್ಣೆಯಿಂದ ಆರಂಭಗೊಂಡು ಸಂಸ್ಕರಿಸಿದ ಆಹಾರಗಳು, ಸೌಂದರ್ಯವರ್ಧಕಗಳು ಮತ್ತು ಜೈವಿಕ ಇಂಧನಗಳವರೆಗೆ ಹಲವು ಉತ್ಪನ್ನಗಳಲ್ಲಿ ತಾಳೆ ಎಣ್ಣೆಯನ್ನು ಬಳಸಲಾಗುತ್ತದೆ. ಇದು ವಿಶ್ವದ ಅತ್ಯಂತ ವ್ಯಾಪಕವಾಗಿ ಬಳಸಲಾಗುವ ಸಸ್ಯಜನ್ಯ ಎಣ್ಣೆಯಾಗಿದೆ. ಮತ್ತು ಬಿಸ್ಕತ್ತುಗಳು, ಮಾರ್ಗರೀನ್, ಲಾಂಡ್ರಿ ಡಿಟರ್ಜೆಂಟ್​ಗಳು ಹಾಗೂ ಚಾಕೊಲೇಟ್ ಸೇರಿದಂತೆ ಹಲವು ಉತ್ಪನ್ನಗಳ ತಯಾರಿಕೆಯಲ್ಲಿ ಬಳಸಲಾಗುತ್ತದೆ.

ಉಕ್ರೇನ್‌ನ ಮೇಲೆ ರಷ್ಯಾದ ಆಕ್ರಮಣದ ನಂತರ ಜಾಗತಿಕ ಅಡುಗೆ ತೈಲದ ಬೆಲೆಗಳು ಈ ವರ್ಷ ಏರಿದ್ದು, ಇದು ಆ ಪ್ರದೇಶದಿಂದ ಸೂರ್ಯಕಾಂತಿ ಎಣ್ಣೆಯ ಸಾಗಣೆಯ ಮೇಲೆ ಪರಿಣಾಮ ಬೀರಿದೆ. ಕಪ್ಪು ಸಮುದ್ರವು ವಿಶ್ವದ ಸೂರ್ಯಕಾಂತಿ ಎಣ್ಣೆಯ ರಫ್ತಿನ ಶೇ 76ರಷ್ಟಿದೆ. ಇಂಡೋನೇಷ್ಯಾದಿಂದ ಸರಬರಾಜು ಸ್ಥಗಿತಗೊಂಡರೆ ಭಾರತಕ್ಕೆ ಪ್ರತಿ ತಿಂಗಳು ಸುಮಾರು 4 ಮಿಲಿಯನ್ ಟನ್ ತಾಳೆ ಎಣ್ಣೆಯ ನಷ್ಟವಾಗುತ್ತದೆ. ಉಕ್ರೇನ್ ಯುದ್ಧದ ನಂತರ ಭಾರತದ ಸೂರ್ಯಕಾಂತಿ ತೈಲ ಪೂರೈಕೆಯು ತಿಂಗಳಿಗೆ ಸುಮಾರು 1,00,000 ಟನ್‌ಗಳಿಗೆ ಅರ್ಧದಷ್ಟು ಕಡಿಮೆಯಾಗಿದೆ ಮತ್ತು ಇದು ಕುಟುಂಬಗಳ ಅಡುಗೆ ಮನೆ ವಿಚಾರಕ್ಕೆ ಬಂದಲ್ಲಿ ಸನ್ನಿವೇಶವನ್ನು ಇನ್ನಷ್ಟು ಹದಗೆಡಿಸಬಹುದು ಎಂದು ತಜ್ಞರು ಅಭಿಪ್ರಾಯಪಡುತ್ತಾರೆ.

ಈ ಮಧ್ಯೆ, ಭಾರತದ ಸಗಟು ಹಣದುಬ್ಬರವು ಈಗ ಒಂದು ವರ್ಷದಿಂದ ಎರಡಂಕಿಯಲ್ಲಿ ಉಳಿದಿದ್ದು, ಉಕ್ರೇನ್‌ನ ಮೇಲೆ ರಷ್ಯಾದ ಆಕ್ರಮಣದ ನಂತರ ಸರಕುಗಳ ಬೆಲೆಗಳಲ್ಲಿ ನಿರಂತರ ಏರಿಕೆಯ ಮಧ್ಯೆ ಮಾರ್ಚ್‌ನಲ್ಲಿ ಹಣದುಬ್ಬರ ದರವು ನಾಲ್ಕು ತಿಂಗಳ ಗರಿಷ್ಠ ಮಟ್ಟಕ್ಕೆ ಏರಿದೆ. ಸಗಟು ಬೆಲೆ ಸೂಚ್ಯಂಕ (WPI) ಫೆಬ್ರವರಿಯಲ್ಲಿ ಶೇ 13.11ರಷ್ಟು ಇದ್ದದ್ದು ಮಾರ್ಚ್‌ನಲ್ಲಿ ಶೇ 14.55ರಷ್ಟು ಹೆಚ್ಚಾಗಿದೆ. ಈ ವರ್ಷದ ಆರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಆಮದು ಮಾಡಿಕೊಳ್ಳಲು ಮತ್ತು ದೇಶದಲ್ಲಿ ಉತ್ಪಾದಿಸುವ ಎಣ್ಣೆಕಾಳುಗಳ ಖರೀದಿಯನ್ನು ಪ್ರಾರಂಭಿಸಲು ಭಾರತೀಯ ಕಂಪೆನಿಗಳನ್ನು ಒತ್ತಾಯಿಸಿದ್ದರು.

ಇದನ್ನೂ ಓದಿ: Edible Oil Price: ಅಡುಗೆಮನೆಗೆ ತಟ್ಟಿದ ಉಕ್ರೇನ್ ಸಂಘರ್ಷದ ಬಿಸಿ: ಖಾದ್ಯತೈಲದ ಬೆಲೆ ಶೇ 60ರಷ್ಟು ಏರಿಕೆ

Follow Us
Web contact
Web contact

TV9 Kannada

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ