AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Edible Oil: ಏಪ್ರಿಲ್ 28ರಿಂದ ಇಂಡೋನೇಷ್ಯಾ ನಿಲ್ಲಿಸಲಿದೆ ತಾಳೆ ಎಣ್ಣೆ ರಫ್ತು; ಭಾರತದಲ್ಲಿ ಗ್ರಾಹಕರಿಗೆ ತಟ್ಟಲಿದೆ ಬೆಲೆ ಏರಿಕೆ ಬಿಸಿ

ಇಂಡೋನೇಷ್ಯಾದಿಂದ ಏಪ್ರಿಲ್ 28ನೇ ತಾರೀಕಿನಿಂದ ತಾಳೆ ಎಣ್ಣೆ ರಫ್ತು ನಿಷೇಧ ಮಾಡಿರುವುದರಿಂದ ಭಾರತದಲ್ಲಿ ಬೆಲೆ ಏರಿಕೆ ಆಗಬಹುದು.

Edible Oil: ಏಪ್ರಿಲ್ 28ರಿಂದ ಇಂಡೋನೇಷ್ಯಾ ನಿಲ್ಲಿಸಲಿದೆ ತಾಳೆ ಎಣ್ಣೆ ರಫ್ತು; ಭಾರತದಲ್ಲಿ ಗ್ರಾಹಕರಿಗೆ ತಟ್ಟಲಿದೆ ಬೆಲೆ ಏರಿಕೆ ಬಿಸಿ
ಸಾಂದರ್ಭಿಕ ಚಿತ್ರ
TV9 Web
| Updated By: Srinivas Mata|

Updated on: Apr 23, 2022 | 11:04 AM

Share

ದೇಶೀಯ ಖಾದ್ಯ ತೈಲ (Edible Oil) ಬೆಲೆಗಳು ಈಗಾಗಲೇ ಹೆಚ್ಚಿದ್ದು, ತಾಳೆ ಎಣ್ಣೆಯ ವಿಶ್ವದ ಅತಿದೊಡ್ಡ ಉತ್ಪಾದಕ ದೇಶವಾದ ಇಂಡೋನೇಷ್ಯಾವು ಏಪ್ರಿಲ್ 28ರಿಂದ ರಫ್ತುಗಳನ್ನು ನಿಷೇಧಿಸುವುದರಿಂದ ಮತ್ತಷ್ಟು ಮೇಲೇರುವ ಸಾಧ್ಯತೆಗಳಿವೆ. ಅಂದಹಾಗೆ ಇಂಡೋನೇಷ್ಯಾ ಕೂಡ ದೇಶೀಯ ಕೊರತೆ ಮತ್ತು ಗಗನಕ್ಕೇರುತ್ತಿರುವ ಹೆಚ್ಚಿನ ಖಾದ್ಯ ತೈಲ ಬೆಲೆಗಳೊಂದಿಗೆ ಹೋರಾಡುತ್ತಿದೆ. ಚೀನಾ ಮತ್ತು ಭಾರತವು ಇಂಡೋನೇಷ್ಯಾದಿಂದ ತಾಳೆ ಎಣ್ಣೆಯನ್ನು ಅತಿ ದೊಡ್ಡ ಪ್ರಮಾಣದಲ್ಲಿ ಆಮದು ಮಾಡಿಕೊಳ್ಳುವ ದೇಶಗಳಲ್ಲಿ ಒಂದಾಗಿದ್ದು, ಇದು ಪ್ರಪಂಚದ ಅರ್ಧಕ್ಕಿಂತ ಹೆಚ್ಚಿನ ಪೂರೈಕೆಯನ್ನು ಹೊಂದಿದೆ. ಅಡುಗೆ ಎಣ್ಣೆಯಿಂದ ಆರಂಭಗೊಂಡು ಸಂಸ್ಕರಿಸಿದ ಆಹಾರಗಳು, ಸೌಂದರ್ಯವರ್ಧಕಗಳು ಮತ್ತು ಜೈವಿಕ ಇಂಧನಗಳವರೆಗೆ ಹಲವು ಉತ್ಪನ್ನಗಳಲ್ಲಿ ತಾಳೆ ಎಣ್ಣೆಯನ್ನು ಬಳಸಲಾಗುತ್ತದೆ. ಇದು ವಿಶ್ವದ ಅತ್ಯಂತ ವ್ಯಾಪಕವಾಗಿ ಬಳಸಲಾಗುವ ಸಸ್ಯಜನ್ಯ ಎಣ್ಣೆಯಾಗಿದೆ. ಮತ್ತು ಬಿಸ್ಕತ್ತುಗಳು, ಮಾರ್ಗರೀನ್, ಲಾಂಡ್ರಿ ಡಿಟರ್ಜೆಂಟ್​ಗಳು ಹಾಗೂ ಚಾಕೊಲೇಟ್ ಸೇರಿದಂತೆ ಹಲವು ಉತ್ಪನ್ನಗಳ ತಯಾರಿಕೆಯಲ್ಲಿ ಬಳಸಲಾಗುತ್ತದೆ.

ಉಕ್ರೇನ್‌ನ ಮೇಲೆ ರಷ್ಯಾದ ಆಕ್ರಮಣದ ನಂತರ ಜಾಗತಿಕ ಅಡುಗೆ ತೈಲದ ಬೆಲೆಗಳು ಈ ವರ್ಷ ಏರಿದ್ದು, ಇದು ಆ ಪ್ರದೇಶದಿಂದ ಸೂರ್ಯಕಾಂತಿ ಎಣ್ಣೆಯ ಸಾಗಣೆಯ ಮೇಲೆ ಪರಿಣಾಮ ಬೀರಿದೆ. ಕಪ್ಪು ಸಮುದ್ರವು ವಿಶ್ವದ ಸೂರ್ಯಕಾಂತಿ ಎಣ್ಣೆಯ ರಫ್ತಿನ ಶೇ 76ರಷ್ಟಿದೆ. ಇಂಡೋನೇಷ್ಯಾದಿಂದ ಸರಬರಾಜು ಸ್ಥಗಿತಗೊಂಡರೆ ಭಾರತಕ್ಕೆ ಪ್ರತಿ ತಿಂಗಳು ಸುಮಾರು 4 ಮಿಲಿಯನ್ ಟನ್ ತಾಳೆ ಎಣ್ಣೆಯ ನಷ್ಟವಾಗುತ್ತದೆ. ಉಕ್ರೇನ್ ಯುದ್ಧದ ನಂತರ ಭಾರತದ ಸೂರ್ಯಕಾಂತಿ ತೈಲ ಪೂರೈಕೆಯು ತಿಂಗಳಿಗೆ ಸುಮಾರು 1,00,000 ಟನ್‌ಗಳಿಗೆ ಅರ್ಧದಷ್ಟು ಕಡಿಮೆಯಾಗಿದೆ ಮತ್ತು ಇದು ಕುಟುಂಬಗಳ ಅಡುಗೆ ಮನೆ ವಿಚಾರಕ್ಕೆ ಬಂದಲ್ಲಿ ಸನ್ನಿವೇಶವನ್ನು ಇನ್ನಷ್ಟು ಹದಗೆಡಿಸಬಹುದು ಎಂದು ತಜ್ಞರು ಅಭಿಪ್ರಾಯಪಡುತ್ತಾರೆ.

ಈ ಮಧ್ಯೆ, ಭಾರತದ ಸಗಟು ಹಣದುಬ್ಬರವು ಈಗ ಒಂದು ವರ್ಷದಿಂದ ಎರಡಂಕಿಯಲ್ಲಿ ಉಳಿದಿದ್ದು, ಉಕ್ರೇನ್‌ನ ಮೇಲೆ ರಷ್ಯಾದ ಆಕ್ರಮಣದ ನಂತರ ಸರಕುಗಳ ಬೆಲೆಗಳಲ್ಲಿ ನಿರಂತರ ಏರಿಕೆಯ ಮಧ್ಯೆ ಮಾರ್ಚ್‌ನಲ್ಲಿ ಹಣದುಬ್ಬರ ದರವು ನಾಲ್ಕು ತಿಂಗಳ ಗರಿಷ್ಠ ಮಟ್ಟಕ್ಕೆ ಏರಿದೆ. ಸಗಟು ಬೆಲೆ ಸೂಚ್ಯಂಕ (WPI) ಫೆಬ್ರವರಿಯಲ್ಲಿ ಶೇ 13.11ರಷ್ಟು ಇದ್ದದ್ದು ಮಾರ್ಚ್‌ನಲ್ಲಿ ಶೇ 14.55ರಷ್ಟು ಹೆಚ್ಚಾಗಿದೆ. ಈ ವರ್ಷದ ಆರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಆಮದು ಮಾಡಿಕೊಳ್ಳಲು ಮತ್ತು ದೇಶದಲ್ಲಿ ಉತ್ಪಾದಿಸುವ ಎಣ್ಣೆಕಾಳುಗಳ ಖರೀದಿಯನ್ನು ಪ್ರಾರಂಭಿಸಲು ಭಾರತೀಯ ಕಂಪೆನಿಗಳನ್ನು ಒತ್ತಾಯಿಸಿದ್ದರು.

ಇದನ್ನೂ ಓದಿ: Edible Oil Price: ಅಡುಗೆಮನೆಗೆ ತಟ್ಟಿದ ಉಕ್ರೇನ್ ಸಂಘರ್ಷದ ಬಿಸಿ: ಖಾದ್ಯತೈಲದ ಬೆಲೆ ಶೇ 60ರಷ್ಟು ಏರಿಕೆ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!