Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶದ ವಿವಿಧೆಡೆ ಅಡುಗೆ ಎಣ್ಣೆ ದರ 20 ರೂಪಾಯಿಯಷ್ಟು ಇಳಿಕೆ: ಕೇಂದ್ರ ಆಹಾರ ಇಲಾಖೆ ಮಾಹಿತಿ

ತಾಳೆ ಎಣ್ಣೆ, ಶೇಂಗಾ ಎಣ್ಣೆ, ಸೋಯಾಬೀನ್ ಎಣ್ಣೆ ಮತ್ತು ಸೂರ್ಯಕಾಂತಿ ಎಣ್ಣೆಗಳ ಧಾರಣೆಗಳು ಕಡಿಮೆಯಾಗಿರುವುದು ಗಮನಕ್ಕೆ ಬಂದಿದೆ ಎಂದು ಆಹಾರ ಇಲಾಖೆ ಕಾರ್ಯದರ್ಶಿ ತಿಳಿಸಿದ್ದಾರೆ.

ದೇಶದ ವಿವಿಧೆಡೆ ಅಡುಗೆ ಎಣ್ಣೆ ದರ 20 ರೂಪಾಯಿಯಷ್ಟು ಇಳಿಕೆ: ಕೇಂದ್ರ ಆಹಾರ ಇಲಾಖೆ ಮಾಹಿತಿ
ಅಡುಗೆ ಎಣ್ಣೆ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Nov 05, 2021 | 6:27 PM

ದೆಹಲಿ: ಭಾರತದಲ್ಲಿ ಅಡುಗೆ ಎಣ್ಣೆಯ ಧಾರಣೆ ಗಮನಾರ್ಹ ಪ್ರಮಾಣದಲ್ಲಿ ಕಡಿಮೆಯಾಗಿದೆ. ದೇಶದ ವಿವಿಧೆಡೆ ₹ 7ರಿಂದ ₹ 20 ರೂಪಾಯಿಯವರೆಗೆ ದರ ಕಡಿಮೆಯಾಗಿದೆ ಎಂದು ಕೇಂದ್ರ ಆಹಾರ ಇಲಾಖೆಯ ಕಾರ್ಯದರ್ಶಿ ಸುಧಾಂಶು ಪಾಂಡೆ ಹೇಳಿದರು. ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ತಾಳೆ ಎಣ್ಣೆ, ಶೇಂಗಾ ಎಣ್ಣೆ, ಸೋಯಾಬೀನ್ ಎಣ್ಣೆ ಮತ್ತು ಸೂರ್ಯಕಾಂತಿ ಎಣ್ಣೆಗಳ ಧಾರಣೆಗಳು ಕಡಿಮೆಯಾಗಿರುವುದು ಗಮನಕ್ಕೆ ಬಂದಿದೆ. ಈ ಎಣ್ಣೆಗಳು ಖಾದ್ಯತೈಲ ಮಾರುಕಟ್ಟೆಯಲ್ಲಿ ಶೇ 89ರಷ್ಟು ಪಾಲು ಹೊಂದಿವೆ ಎಂದು ತಿಳಿಸಿದರು.

ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಯೋಜನೆಯನ್ನು ಮತ್ತೊಂದು ಅವಧಿಗೆ ವಿಸ್ತರಿಸುವ ಪ್ರಸ್ತಾವವಿದೆಯೇ ಎಂದು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ಪ್ರಸ್ತುತ ದೇಶದ ಆರ್ಥಿಕತೆಯು ಚೇತರಿಕೆಯ ಹಾದಿಯಲ್ಲಿದೆ. ಈ ಹಂತದಲ್ಲಿ ಗರೀಬ್ ಕಲ್ಯಾಣ್ ಯೋಜನೆಯನ್ನು ವಿಸ್ತರಿಸುವ ಯಾವುದೇ ಪ್ರಸ್ತಾವ ಸರ್ಕಾರದ ಮುಂದಿಲ್ಲ ಎಂದರು.

ಕೊವಿಡ್-19 ಪಿಡುಗಿನಿಂದ ಸಂಕಷ್ಟ ಅನುಭವಿಸುತ್ತಿರುವ ದೇಶದ ಬಡ ಜನರಿಗೆ ಆಹಾರ ಒದಗಿಸುವ ₹ 1.70 ಲಕ್ಷ ಕೋಟಿ ಮೊತ್ತದ ಯೋಜನೆ ಇದು. ದೇಶದಲ್ಲಿ ಜೀವನಾಶ್ಯಕ ವಸ್ತುಗಳ ಬೆಲೆ ನಿಯಂತ್ರಿಸಲು ಕೇಂದ್ರ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಆಹಾರ ಧಾನ್ಯಗಳು ಮತ್ತು ಖಾದ್ಯ ತೈಲಗಳ ಬೆಲೆಯನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಲಾಗುವುದು. ಮುಂದಿನ ವಾರದಿಂದ ರಾಜ್ಯ ಸರ್ಕಾರಗಳು ವ್ಯಾಪಾರಿಗಳೊಂದಿಗೆ ಮಾತುಕತೆ ನಡೆಸಿ ದಾಸ್ತಾನು ಮಿತಿ ಪ್ರಕಟಿಸಲಿವೆ ಎಂದು ಘೋಷಿಸಿದ್ದರು.

ಕೇವಲ ಎರಡು ದಿನಗಳ ಹಿಂದಷ್ಟೇ ಕೇಂದ್ರ ಸರ್ಕಾರವು ಇಂಧನ ಬೆಲೆ ಕಡಿತವನ್ನು ಘೋಷಿಸಿತ್ತು. ದೀಪಾವಳಿಗೆ ಮೊದಲು, ಅಂದರೆ ನ.3ರಿಂದ ಪ್ರತಿ ಲೀಟರ್‌ ಪೆಟ್ರೋಲ್‌ ₹ 5 ಹಾಗೂ ಪ್ರತಿ ಲೀಟರ್ ಡೀಸೆಲ್‌ ಮೇಲೆ ₹ 10 ರೂಪಾಯಿ ಅಬಕಾರಿ ತೆರಿಗೆ ಕಡಿಮೆ ಮಾಡುವ ನಿರ್ಧಾರವನ್ನು ಕೇಂದ್ರ ಸರ್ಕಾರ ಪ್ರಕಟಿಸಿದ್ದನ್ನು ಈ ಸಂದರ್ಭದಲ್ಲಿ ನೆನಪಿಸಿಕೊಳ್ಳಬಹುದು.

ಇದನ್ನೂ ಓದಿ: ಬೆಲೆ ಏರಿಕೆಯಾದ ತಕ್ಷಣ ವೈಭವೀಕರಣ ಮಾಡುವುದು ಬಿಡಿ; ಸಂಸದ ಜಿಎಂ ಸಿದ್ದೇಶ್ವರ್ ಇದನ್ನೂ ಓದಿ: ಗ್ಯಾಸ್, ಅಡುಗೆ ಎಣ್ಣೆ ದರ ಇಳಿಸದಿದ್ದರೆ 2023ರ ಚುನಾವಣೆಯಲ್ಲೂ ಬಿಜೆಪಿಗೆ ಸೋಲಾಗಲಿದೆ: ಡಿಕೆ ಶಿವಕುಮಾರ್

Published On - 5:18 pm, Fri, 5 November 21

ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ