Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದ ಆರ್ಥಿಕತೆ ಮತ್ತು ಹಣಕಾಸು ಕ್ಷೇತ್ರಕ್ಕೆ ಈ ವರ್ಷ ಹಣದುಬ್ಬರದಿಂದ ಆದ ಅನಾಹುತಗಳೇನು?

Year Ender Story: ಭಾರತದಲ್ಲಿ ರೀಟೇಲ್ ಮತ್ತು ಹೋಲ್​ಸೇಲ್ ಹಣದುಬ್ಬರಗಳು ಹೆಚ್ಚಿನ ಮಟ್ಟದಲ್ಲಿವೆ. ಸಾಕಷ್ಟು ವಸ್ತುಗಳ ಬೆಲೆ ಏರಿಕೆಯು ಹಣದುಬ್ಬರವನ್ನು ಮೇಲಕ್ಕೆ ನೂಕಿದೆ. ಸಗಟು ಮಾರಾಟದರ ಹಣದುಬ್ಬರ ಮಾರ್ಚ್ ಬಳಿಕ ನವೆಂಬರ್​ನಲ್ಲಿ ಮೊದಲ ಬಾರಿಗೆ ಸೊನ್ನೆಗಿಂತ ಮೇಲೇರಿದೆ. ಆಹಾರವಸ್ತು, ಖನಿಜ, ಯಂತ್ರೋಪಕರಣ, ಕಂಪ್ಯೂಟರ್, ಎಲೆಕ್ಟ್ರಾನಿಕ್ಸ್, ಮೋಟಾರು ವಾಹನ, ಸಾರಿಗೆ ಉಪಕರಣ ಮೊದಲಾದ ವಸ್ತುಗಳ ಬೆಲೆ ಹೆಚ್ಚಳವು ಹಣದುಬ್ಬರಕ್ಕೆ ಕಾರಣವಾಗಿದೆ.

ಭಾರತದ ಆರ್ಥಿಕತೆ ಮತ್ತು ಹಣಕಾಸು ಕ್ಷೇತ್ರಕ್ಕೆ ಈ ವರ್ಷ ಹಣದುಬ್ಬರದಿಂದ ಆದ ಅನಾಹುತಗಳೇನು?
ಹಣದುಬ್ಬರ
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Dec 21, 2023 | 12:05 PM

ಬೆಂಗಳೂರು, ಡಿಸೆಂಬರ್ 21: ಭಾರತದಲ್ಲಿ ಹಣದುಬ್ಬರ ಕಳೆದ ಕೆಲ ತಿಂಗಳಿಂದ ಮೇಲ್ಮಟ್ಟದಲ್ಲೇ ಇದೆ. ರೀಟೇಲ್ ಹಣದುಬ್ಬರ (Retail Inflation) ಮತ್ತು ಹೋಲ್​ಸೇಲ್ ಹಣದುಬ್ಬರ (WPI Inflation) ಎರಡೂ ಕೂಡ ಹೆಚ್ಚಾಗಿವೆ. ನವೆಂಬರ್​ನಲ್ಲಿ ಚಿಲ್ಲರೆ ಮಾರಾಟ ಹಣದುಬ್ಬರ ಆರ್​ಬಿಐನ ತಾಳಿಕೆ ಮಿತಿಯಾದ ಶೇ. 6ಕ್ಕೆ ಸಮೀಪ ಹೋಗಿದೆ. ಸಗಟು ಮಾರಾಟ ಹಣದುಬ್ಬರ ಹಲವು ತಿಂಗಳ ಬಳಿಕ ಸೊನ್ನೆ ಮಟ್ಟಕ್ಕಿಂತ ಮೇಲಕ್ಕೆ ಹೋಗಿದೆ. ಮಾರ್ಚ್​ನಲ್ಲಿ ಡಬ್ಲ್ಯುಪಿಐ ಶೇ. 1.41ರಲ್ಲಿತ್ತು. ಅದಾದ ಬಳಿಕ ಸತತ ಏಳು ತಿಂಗಳು ಸೊನ್ನೆಗಿಂತ ಕೆಳಗಿತ್ತು. ಈಗ ಮತ್ತೊಮ್ಮೆ ಪಾಸಿಟಿವ್ ಸಂಖ್ಯೆಗೆ ಬಂದಿದೆ.

ನವೆಂಬರ್​ನಲ್ಲಿ ಹಣದುಬ್ಬರ ಹೆಚ್ಚಿನ ಮಟ್ಟಕ್ಕೆ ಹೋಗಲು ಪ್ರಮುಖ ಸರಕುಗಳ ಬೆಲೆಯಲ್ಲಿ ಆಗಿರುವ ಹೆಚ್ಚಳ ಕಾರಣ. ಆಹಾರವಸ್ತುಗಳು, ಖನಿಜ, ಯಂತ್ರೋಪಕರಣ, ಕಂಪ್ಯೂಟರ್, ಎಲೆಕ್ಟ್ರಾನಿಕ್ಸ್, ಮೋಟಾರು ವಾಹನ, ಸಾರಿಗೆ ಉಪಕರಣ ಮೊದಲಾದ ವಸ್ತುಗಳ ಬೆಲೆ ಹೆಚ್ಚಳವಾಗಿದ್ದು ಹಣದುಬ್ಬರ ಇನ್ನಷ್ಟು ಉಬ್ಬುವಂತೆ ಮಾಡಿದೆ.

ಹಣದುಬ್ಬರದ ಮೇಲೆ ಹೆಚ್ಚಿನ ಒತ್ತಡ ಹಾಕಿದ್ದು ಆಹಾರವಸ್ತುಗಳ ಬೆಲೆ ಏರಿಕೆ. ಟೊಮೆಟೋ, ಈರುಳ್ಳಿ ಬೆಲೆ ಏರಿಕೆ ದೊಡ್ಡ ಮುಳುವಾಗಿ ಪರಿಣಮಿಸಿದೆ. ಆರ್​ಬಿಐ ಕಳೆದ ತಿಂಗಳು ನಡೆಸಿದ ದ್ವೈಮಾಸಿಕ ಎಂಪಿಸಿ ಸಭೆಯಲ್ಲಿ ಹಣದುಬ್ಬರದ ಬಗ್ಗೆ ಚರ್ಚೆ ಮಾಡಿದೆ. ಡಿಸೆಂಬರ್ ತಿಂಗಳಲ್ಲಿ ಆಹಾರ ವಸ್ತುಗಳ ಬೆಲೆ ಏರಿಕೆ ಪರಿಣಾಮವಾಗಿ ಹಣದುಬ್ಬರ ಇನ್ನಷ್ಟು ಹೆಚ್ಚಾಗಬಹುದು ಎಂದು ಕಳವಳ ವ್ಯಕ್ತಪಡಿಸಿದೆ.

ಇದನ್ನೂ ಓದಿ: RBI: ಭಾರತದ ಫಾರೆಕ್ಸ್ ದರ ವ್ಯವಸ್ಥೆ ಮರುವರ್ಗೀಕರಿಸಿದ ಐಎಂಎಫ್​ನ ಕ್ರಮಕ್ಕೆ ಭಾರತ ಅಸಮಾಧಾನ

ಹಣದುಬ್ಬರದಿಂದ ಜೀವನ ದುಬಾರಿ

ಹಣದುಬ್ಬರ ಏರಿಕೆಯಿಂದಾಗಿ ಜನರ ಜೀವನ ವೆಚ್ಚ ಸಹಜವಾಗಿ ಹೆಚ್ಚಾಗುತ್ತದೆ. ಕುಟುಂಬಕ್ಕೆ ಹೆಚ್ಚು ಹಣ ಉಳಿತಾಯ ಸಾಧ್ಯವಾಗುತ್ತಿಲ್ಲ. ಹಣದುಬ್ಬರ ಮೀರಿಸುವಂತೆ ವೇತನ ಹೆಚ್ಚಾಗುತ್ತಿಲ್ಲದಿರುವುದು ಮಧ್ಯಮ ವರ್ಗದವರ ಬಜೆಟ್​ಗೆ ಹೊಡೆತ ಬೀಳುತ್ತಿದೆ. ಜನರ ಖರೀದಿ ಶಕ್ತಿ ಕಡಿಮೆ ಆಗಿದೆ ಎನ್ನುವಂತಹ ಸಮೀಕ್ಷಾ ವರದಿಯೊಂದು ಪ್ರಕಟವಾಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 12:03 pm, Thu, 21 December 23

ಬುರ್ಖಾ ಧಾರಣೆ ಕುರಿತು ವಿದ್ಯಾರ್ಥಿನಿಯ ವಿಡಿಯೋ ಬಗ್ಗೆ ಬಿಇಒ ಸ್ಪಷ್ಟನೆ
ಬುರ್ಖಾ ಧಾರಣೆ ಕುರಿತು ವಿದ್ಯಾರ್ಥಿನಿಯ ವಿಡಿಯೋ ಬಗ್ಗೆ ಬಿಇಒ ಸ್ಪಷ್ಟನೆ
ಸಿಟಿ ರವಿ ಮತ್ತು ತಮ್ಮಯ್ಯ ನಡುವೆ ಮುಂದುವರಿದ ರಾಜಕೀಯ ಕಿತ್ತಾಟ
ಸಿಟಿ ರವಿ ಮತ್ತು ತಮ್ಮಯ್ಯ ನಡುವೆ ಮುಂದುವರಿದ ರಾಜಕೀಯ ಕಿತ್ತಾಟ
700 ಸಂಚಿಕೆ ಪೂರೈಸಿದ ಶ್ರೀರಸ್ತು ಶುಭಮಸ್ತು ಸೀರಿಯಲ್: ಸುಧಾರಾಣಿ ಸಡಗರ ನೋಡಿ
700 ಸಂಚಿಕೆ ಪೂರೈಸಿದ ಶ್ರೀರಸ್ತು ಶುಭಮಸ್ತು ಸೀರಿಯಲ್: ಸುಧಾರಾಣಿ ಸಡಗರ ನೋಡಿ
ಕಮ್ರಾ ವಿವಾದಾತ್ಮಕ ಶೋ ಬಳಿಕ ಮುಂಬೈ ಕಾಮಿಡಿ ಕ್ಲಬ್‌ ಧ್ವಂಸ ಕಾರ್ಯಾಚರಣೆ
ಕಮ್ರಾ ವಿವಾದಾತ್ಮಕ ಶೋ ಬಳಿಕ ಮುಂಬೈ ಕಾಮಿಡಿ ಕ್ಲಬ್‌ ಧ್ವಂಸ ಕಾರ್ಯಾಚರಣೆ
ಸ್ಪೀಕರ್ ಖಾದರ್ ನಿರ್ಣಯ ಪುನರ್ ಪರಿಶೀಲಿಸಿ ವಾಪಸ್ಸು ಪಡೆಯಬೇಕು: ಕಾಗೇರಿ
ಸ್ಪೀಕರ್ ಖಾದರ್ ನಿರ್ಣಯ ಪುನರ್ ಪರಿಶೀಲಿಸಿ ವಾಪಸ್ಸು ಪಡೆಯಬೇಕು: ಕಾಗೇರಿ
ಬಸನಗೌಡ ಯತ್ನಾಳ್ ಒಬ್ಬ ನಕಲಿ ಹಿಂದೂತ್ವವಾದಿ: ರೇಣುಕಾಚಾರ್ಯ
ಬಸನಗೌಡ ಯತ್ನಾಳ್ ಒಬ್ಬ ನಕಲಿ ಹಿಂದೂತ್ವವಾದಿ: ರೇಣುಕಾಚಾರ್ಯ
ಜವಾಬ್ದಾರಿಯುತ ಸ್ಥಾನದಲ್ಲಿರುವ ಶಿವಕುಮಾರ್ ವಿರುದ್ಧ ಆರೋಪ ಸರಿಯಲ್ಲ: ಶಾಸಕ
ಜವಾಬ್ದಾರಿಯುತ ಸ್ಥಾನದಲ್ಲಿರುವ ಶಿವಕುಮಾರ್ ವಿರುದ್ಧ ಆರೋಪ ಸರಿಯಲ್ಲ: ಶಾಸಕ
ವ್ಯಾಪಾರಿಗಳು ಹೆಸರು ನೋಂದಾಯಿಸಿಕೊಳ್ಳಲು ಏಪ್ರಿಲ್ 30 ಕಡೇದಿನ: ಶಿವಕುಮಾರ್
ವ್ಯಾಪಾರಿಗಳು ಹೆಸರು ನೋಂದಾಯಿಸಿಕೊಳ್ಳಲು ಏಪ್ರಿಲ್ 30 ಕಡೇದಿನ: ಶಿವಕುಮಾರ್
ಚೀಟಿಯಲ್ಲಿ ಏನು ಬರೆದಿತ್ತು ಅಂತ ಮುಂದಿನ ದಿನಗಳಲ್ಲಿ ಹೇಳ್ತೇನೆ: ಯತ್ನಾಳ್
ಚೀಟಿಯಲ್ಲಿ ಏನು ಬರೆದಿತ್ತು ಅಂತ ಮುಂದಿನ ದಿನಗಳಲ್ಲಿ ಹೇಳ್ತೇನೆ: ಯತ್ನಾಳ್
VIDEO: CSK ಮತ್ತೆ ಮೋಸದಾಟ? ಅನುಮಾನ ಹುಟ್ಟಿಸಿದ ವಿಡಿಯೋ
VIDEO: CSK ಮತ್ತೆ ಮೋಸದಾಟ? ಅನುಮಾನ ಹುಟ್ಟಿಸಿದ ವಿಡಿಯೋ