AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking: ವರ್ಕ್ ಫ್ರಂ ಹೋಂ ಮಾಡೋರೇ ಹುಷಾರ್; ಈ ಮುಖಂಡರು ಹೇಳೋ ಮಾತು ನೋಡಿದ್ರೆ ವೃತ್ತಿಜೀವನ ಮುಗಿದಂತೆಯಾ? ಯಾರ್‍ಯಾರು ಏನು ಹೇಳಿದ್ರು?

Work From Home Vs Work From Office: ಇತ್ತೀಚೆಗೆ ಐಬಿಎಂ ಕಾರ್ಪೊರೇಷನ್ ಸಂಸ್ಥೆಯ ಸಿಇಒ ಅರವಿಂದ್ ಕೃಷ್ಣ ಮತ್ತು ಓಪನ್ ಎಐ ಕಂಪನಿಯ ಸಿಇಒ ಸ್ಯಾಮ್ ಆಲ್ಟ್​ಮನ್ ಅವರು ವರ್ಕ್ ಫ್ರಂ ಹೋಮ್ ಬಗ್ಗೆ ನೀಡಿದ ಹೇಳಿಕೆಗಳು ಚಿಂತನೆಗೆ ಗ್ರಾಸ ಒದಗಿಸುವಂತಿವೆ.

Shocking: ವರ್ಕ್ ಫ್ರಂ ಹೋಂ ಮಾಡೋರೇ ಹುಷಾರ್; ಈ ಮುಖಂಡರು ಹೇಳೋ ಮಾತು ನೋಡಿದ್ರೆ ವೃತ್ತಿಜೀವನ ಮುಗಿದಂತೆಯಾ? ಯಾರ್‍ಯಾರು ಏನು ಹೇಳಿದ್ರು?
ವರ್ಕ್ ಫ್ರಂ ಹೋಂ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: May 07, 2023 | 7:24 PM

Share

ನವದೆಹಲಿ: ಕೋವಿಡ್ ಬಂದ ಬಳಿಕ ಉದ್ಯೋಗಜಗತ್ತು ಕೆಲಸ ಮಾಡಲು ಹೊಸ ವಿಧಾನ ಕಂಡುಕೊಂಡಿತ್ತು. ವರ್ಕ್ ಫ್ರಂ ಹೋಂ (Remote Work) ಎಂಬುದು ಕೋವಿಡ್ ಸೋಂಕು ಹರಡದಿರಲೆಂದು ಕಂಡುಕೊಂಡ ವಿಧಾನ. ಈಗಲೂ ಬಹಳ ಮಂದಿ ಉದ್ಯೋಗಿಗಳು ಮನೆಯಿಂದಲೇ ಕೆಲಸ ಮಾಡಲು ಬಯಸುತ್ತಿದ್ದಾರೆ. ಇನ್ನು, ಕಾರ್ಪೊರೇಟ್ ಕಂಪನಿಗಳ ಮ್ಯಾನೇಜರುಗಳು ಕಚೇರಿಯಿಂದ ಕೆಲಸ ಮಾಡುವ (Work From Office) ಅಭಿಪ್ರಾಯ ಹೊಂದಿದ್ದಾರೆ. ಒಂದು ರೀತಿಯಲ್ಲಿ ಅನೇಕ ಕಂಪನಿಗಳಲ್ಲಿ ಎತ್ತು ಏರಿಗೆ ಎಳೆಯಿತು, ಕೋಣ ನೀರಿಗೆ ಎಳೆಯಿತು ಎನ್ನುವಂತಹ ಸ್ಥಿತಿ. ಕೆಲಸ ಮಾಡಲು ಕಚೇರಿ ಆದರೇನು, ಮನೆಯಾದರೇನು, ಕಚೇರಿಗೆ ಹೋದರೂ ಅದೇ ಕೆಲಸ, ಮನೆಯಲ್ಲಿ ಮಾಡಿದರೂ ಅದೇ ಕೆಲಸ ಅಲ್ಲವಾ ಎಂಬುದು ವರ್ಕ್ ಫ್ರಂ ಹೋಮ್ ಅಭಿಲಾಷಿಗಳ ಪ್ರಶ್ನೆ. ಆದರೆ ಬಹುತೇಕ ಕಂಪನಿಗಳ ಮುಖ್ಯಸ್ಥರು ವರ್ಕ್ ಫ್ರಂ ಹೋಂ ನಿಲ್ಲಿಸುವ ಅಭಿಪ್ರಾಯದ ಪರವಾಗಿಯೇ ಇದ್ದಾರೆ. ಮನೆಯಿಂದ ಕೆಲಸ ಮಾಡುವುಕ್ಕೆ ಒಗ್ಗಿಹೋದ ಉದ್ಯೋಗಿಗಳನ್ನು ಕಚೆರಿಗೆ ಕರೆಸುವುದೇ ದೊಡ್ಡ ತಲೆನೋವಿನ ಕೆಲಸವಾಗಿದೆ. ಇತ್ತೀಚೆಗೆ ಐಬಿಎಂ ಕಾರ್ಪೊರೇಷನ್ ಸಂಸ್ಥೆಯ ಸಿಇಒ ಅರವಿಂದ್ ಕೃಷ್ಣ ಮತ್ತು ಓಪನ್ ಎಐ (OpenAI) ಕಂಪನಿಯ ಸಿಇಒ ಸ್ಯಾಮ್ ಆಲ್ಟ್​ಮನ್ (Sam Altman) ಅವರು ವರ್ಕ್ ಫ್ರಂ ಹೋಮ್ ಬಗ್ಗೆ ನೀಡಿದ ಹೇಳಿಕೆಗಳು ಚಿಂತನೆಗೆ ಗ್ರಾಸ ಒದಗಿಸುವಂತಿವೆ.

ಮನೆಯಿಂದ ಕೆಲಸ ಮಾಡಿದರೆ ವೃತ್ತಿಯಲ್ಲಿ ಏಳಿಗೆ ಕಷ್ಟ ಎಂದು ಖಡಕ್ ವಾರ್ನಿಂಗ್ ಕೊಟ್ಟ ಐಬಿಎಂ ಸಿಇಒ ಅರವಿಂದ್ ಕೃಷ್ಣ

ಜಾಗತಿಕ ಐಟಿ ದೈತ್ಯ ಐಬಿಎಂ ಕಾರ್ಪೊರೇಷನ್​ನ ಸಿಇಒ ಅರವಿಂದ್ ಕೃಷ್ಣ ಉದ್ಯೋಗಿಗಳು ಮನೆಯಿಂದಲೇ ಕೆಲಸ ಮಾಡುವುದು ಅವರ ವೃತ್ತಿಜೀವನಕ್ಕೆ ತಡೆಯಾಗಬಹುದು ಎಂದು ಎಚ್ಚರಿಸಿದ್ದಾರೆ. ತಾವು ಯಾರನ್ನೂ ಕಚೇರಿಗೆ ಬಂದು ಕೆಲಸ ಮಾಡಬೇಕೆಂದು ಬಲವಂತ ಮಾಡುವುದಿಲ್ಲ. ಆದರೆ ವರ್ಕ್ ಫ್ರಂ ಹೋಮ್ ಮಾಡುತ್ತಿರುವವರು ವೃತ್ತಿಯಲ್ಲಿ ಬೆಳವಣಿಗೆ ಹೊಂದಲು, ಮ್ಯಾನೇಜರ್ ಹುದ್ದೆಗೆ ಏರಲು ಕಷ್ಟವಾಗುತ್ತದೆ ಎಂದಿದ್ದಾರೆ. ಈ ಮೂಲಕ ಐಬಿಎಂನಲ್ಲಿ ಕೆಲಸ ಮಾಡುತ್ತಿರುವ 2.6 ಲಕ್ಷ ಉದ್ಯೋಗಿಗಳ ಮನಸ್ಸಲ್ಲಿ ಚಳಿಯ ಗಾಳಿ ಬೀಸಿದ್ದಾರೆ.

ಇದನ್ನೂ ಓದಿGreat Comeback: 40 ವರ್ಷಕ್ಕೆ ನಿವೃತ್ತರಾಗಿ ಸ್ಪಾನಲ್ಲಿ ಕೆಲಸ ಮಾಡಿದ ಕೊನೇರು ಸುಧೀರ್ ಈಗ 12,000 ಕೋಟಿ ರೂ ಕಂಪನಿಯ ಒಡೆಯ

ವರ್ಕ್ ಫ್ರಂ ಹೋಮ್ ಮಾಡಿದವರಿಗೆ ಯಾಕೆ ಬಡ್ತಿ ಸಿಗಲ್ಲ?

ಕೆಲಸದಲ್ಲಿ ಬಡ್ತಿ ಎಂದರೆ ಸಾಮಾನ್ಯವಾಗಿ ಉನ್ನತದ ಸ್ತರದ ಮ್ಯಾನೇಜರ್ ಹುದ್ದೆಗಳಿಗೆ ಏರುವುದು; ಒಬ್ಬ ಉದ್ಯೋಗಿಯಾದವರು ಟೀಮ್ ಲೀಡರ್, ಮ್ಯಾನೇಜರ್, ವಿಪಿ ಇತ್ಯಾದಿ ಬಡ್ತಿ ಹೊಂದುತ್ತಾ ಹೋಗಬಹುದು. ಐಬಿಎಂ ಸಿಇಒ ಅರವಿಂದ್ ಕೃಷ್ಣ ಅವರ ಪ್ರಕಾರ ರಿಮೋಟ್ ವರ್ಕ್, ಅಂದರೆ ಮನೆಯಿಂದ ಕೆಲಸ ಮಾಡುತ್ತಾ ಮ್ಯಾನೇಜರ್ ಹುದ್ದೆ ನಿಭಾಯಿಸುವುದು ಕಷ್ಟವಾಗುತ್ತಂತೆ. ಆಗೊಮ್ಮೆ ಈಗೊಮ್ಮೆಯಾದರೂ ತಂಡದವರ ಮುಖ ನೋಡದಿದ್ದರೆ ಟೀಮ್ ಮ್ಯಾನೇಜ್ ಹೇಗೆ ಮಾಡಲು ಸಾಧ್ಯ ಎಂಬುದು ಅವರ ಪ್ರಶ್ನೆ.

‘ನೀವು ಸದಾ ಕಾಲ ಅವರ ಮುಖ ನೋಡುವ ಅಗತ್ಯ ಇಲ್ಲ. ಎಲ್ಲರೂ ನನ್ನ ಕಣ್ಮುಂದೆ ಕೆಲಸ ಮಾಡಬೇಕು ಎನ್ನುವ ನಿಯಮವೇ ಸದಾ ಇರಬೇಕೆಂದಿಲ್ಲ. ಕೆಲವೊಮ್ಮೆಯಾದರೂ ಅಂಥದ್ದು ಆಗಬೇಕು’ ಎಂದು ಕಚೇರಿಗೆ ಬಂದು ಕೆಲಸ ಮಾಡುವ ಪದ್ಧತಿಯನ್ನು ಅರವಿಂದ್ ಕೃಷ್ಣ ಸಮರ್ಥಿಸಿಕೊಂಡಿದ್ದಾರೆ.

ಇದನ್ನೂ ಓದಿBEML Sale: ಬೆಮೆಲ್ ಮಾರಾಟಕ್ಕೆ ಸರ್ಕಾರದಿಂದ ಇನ್ನೊಂದು ಹೆಜ್ಜೆ?; ಶೇ. 26ರಷ್ಟು ಪಾಲು ಮಾರಲು ಶೀಘ್ರದಲ್ಲೇ ಬಿಡ್​ಗಳಿಗೆ ಆಹ್ವಾನ

ಕುತೂಹಲ ಎಂದರೆ ಜಗತ್ತಿನಾದ್ಯಂತ ವರ್ಕ್ ಫ್ರಂ ಹೋಮ್ ಹೆಚ್ಚಾದ ಬಳಿಕ ಐಬಿಎಂನ ಹೈಬ್ರಿಡ್ ಕ್ಲೌಡ್ ಕಂಪ್ಯೂಟಿಂಗ್ ಬ್ಯುಸಿನೆಸ್​ನಲ್ಲಿ ಭರ್ಜರಿ ಬೆಳವಣಿಗೆಯಾಗಿದೆ.

ಕಚೇರಿಯಿಂದ ಕೆಲಸ ಮಾಡುವ ಉದ್ಯೋಗಿಗಳಿಂದ ಹೊಸ ಉತ್ಪನ್ನ ಸೃಷ್ಟಿ ಸಾಧ್ಯ ಎನ್ನುವ ಸ್ಯಾಮ್ ಆಲ್ಟ್​ಮ್ಯಾನ್

ವರ್ಕ್ ಫ್ರಂ ಹೋಂ ಬದಲು ಕಚೇರಿಯಿಂದ ಕೆಲಸ ಮಾಡಬೇಕೆನ್ನುವ ಸಮರ್ಥಕರ ವಾದಕ್ಕೆ ಓಪನ್​ಎಐ ಕಂಪನಿ ಸಿಇಒ ಸ್ಯಾಮ್ ಆಲ್ಟ್​ಮನ್ ಧ್ವನಿಗೂಡಿಸಿದ್ದಾರೆ. ಉದ್ಯಮ ವಲಯದಲ್ಲಿ ವರ್ಕ್ ಫ್ರಂ ಹೋಮ್ ಪ್ರಯೋಗ ಬಹಳ ದೊಡ್ಡ ತಪ್ಪು ನಿರ್ಧಾರವಾಗಿತ್ತು ಎಂಬುದು ಆಲ್ಟ್​ಮ್ಯಾನ್ ಅನಿಸಿಕೆ. ಕಚೇರಿಯಿಂದ ಕೆಲಸ ಮಾಡುವ ಉದ್ಯೋಗಿಗಳು ಹೊಸ ಉತ್ಪನ್ನ ಸೃಷ್ಟಿಸುತ್ತಾರೆ. ಮನೆಯಿಂದ ಕೆಲಸ ಮಾಡುವವರು ಗೊಂದಲ ಸೃಷ್ಟಿಸುತ್ತಾರೆ ಎಂದು ಸ್ಯಾಮ್ ಆಲ್ಟ್​ಮನ್ ಅಭಿಪ್ರಾಯಪಟ್ಟಿದ್ದಾರೆ.

ಇನ್ನಷ್ಟು ವ್ಯವಹಾರ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​