AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Suez Canal: ಸುಯೆಜ್ ಕಾಲುವೆ ಎಸ್​​​ಇಝಡ್​ನಲ್ಲಿ ಭಾರತದ ಉದ್ಯಮಗಳಿಗೆ ಜಾಗ ನೀಡಲು ಮುಂದಾದ ಈಜಿಪ್ಟ್; ಭಾರತಕ್ಕಿದೆ ಭಾರೀ ಪ್ರಯೋಜನ

ಈ ಕಾಲುವೆಯ ವ್ಯಾಪ್ತಿಯಲ್ಲಿ ಬರುವ ವಿಶೇಷ ಆರ್ಥಿಕ ವಲಯ ಅಥವಾ ಎಸ್​​ಇಝಡ್​​​ನಲ್ಲಿ ಹೂಡಿಕೆಗೆ ಅವಕಾಶ ದೊರೆಯುವುದರಿಂದ ಜಾಗತಿಕ ವಹಿವಾಟಿನ ದೃಷ್ಟಿಯಿಂದ ಭಾರತಕ್ಕೆ ಒಳಿತಾಗಲಿದೆ. ಜಾಗತಿಕ ಸರಕು ಸಾಗಾಟ ದೃಷ್ಟಿಯಿಂದಲೂ ಪ್ರಯೋಜನವಾಗಲಿದೆ.

Suez Canal: ಸುಯೆಜ್ ಕಾಲುವೆ ಎಸ್​​​ಇಝಡ್​ನಲ್ಲಿ ಭಾರತದ ಉದ್ಯಮಗಳಿಗೆ ಜಾಗ ನೀಡಲು ಮುಂದಾದ ಈಜಿಪ್ಟ್; ಭಾರತಕ್ಕಿದೆ ಭಾರೀ ಪ್ರಯೋಜನ
ಈಜಿಪ್ಟ್ ಅಧ್ಯಕ್ಷ ಅಬ್ದೆಲ್ ಫತ್ತಾಹ್ ಎಲ್-ಸಿಸಿ ಜತೆ ಪ್ರಧಾನಿ ನರೇಂದ್ರ ಮೋದಿ
Follow us
Ganapathi Sharma
|

Updated on:Jan 27, 2023 | 11:58 AM

ನವದೆಹಲಿ: ಸುಯೆಜ್ ಮಹಾ ಕಾಲುವೆಯ (Suez Canal) ವಿಶೇಷ ಆರ್ಥಿಕ ವಲಯ (SEZ) ಪ್ರದೇಶದಲ್ಲಿ ಭಾರತದ ಉದ್ಯಮಗಳಿಗೆ ಜಾಗ ನೀಡಲು ಚಿಂತನೆ ನಡೆಸಿರುವುದಾಗಿ ಈಜಿಪ್ಟ್ (Egypt) ತಿಳಿಸಿದೆ. ಈ ವಿಚಾರವಾಗಿ ಈಜಿಪ್ಟ್, ಭಾರತ ಬಿಡುಗಡೆ ಮಾಡಿರುವ ಜಂಟಿ ಹೇಳಿಕೆಯಲ್ಲಿ ಉಲ್ಲೇಖಿಸಲಾಗಿದ್ದು, ಭಾರತವು ಯೋಜನೆ ರೂಪಿಸಿ ಪ್ರಸ್ತಾವ ಸಲ್ಲಿಸಬಹುದು ಎಂದು ಉಲ್ಲೇಖಿಸಲಾಗಿದೆ. ಇದರಿಂದ, ಈಜಿಪ್ಟ್​ನಲ್ಲಿ ಲಭ್ಯವಿರುವ ಹೂಡಿಕೆ ಅವಕಾಶಗಳನ್ನು ಬಳಸಿಕೊಂಡು ಹೂಡಿಕೆ ಮಾಡುವ ಸಾಮರ್ಥ್ಯ ಇರುವ ಕಂಪನಿಗಳನ್ನು ಉತ್ತೇಜಿಸಲು ಭಾರತಕ್ಕೆ ನೆರವಾಗಲಿದೆ. ಭಾರತದಿಂದ ಹೆಚ್ಚಿನ ಹೂಡಿಕೆಯನ್ನು ಈಜಿಪ್ಟ್ ಸ್ವಾಗತಿಸುತ್ತದೆ. ಜತೆಗೆ ನಿಯಮಗಳು ಮತ್ತು ಚೌಕಟ್ಟಿನಡಿ ಸೌಲಭ್ಯಗಳು ಮತ್ತು ಭತ್ಯೆಗಳನ್ನು ಒದಗಿಸಲಾಗುವುದು ಎಂದೂ ಈಜಿಪ್ಟ್ ಹೇಳಿದೆ. ಈಜಿಪ್ಟ್​​ನಲ್ಲಿ ಭಾರತದ ಹೂಡಿಕೆ ವಿಸ್ತರಣೆಯನ್ನು ಪ್ರಧಾನಿ ನರೇಂದ್ರ ಮೋದಿ ಹಾಗೂ ಈಜಿಪ್ಟ್ ಅಧ್ಯಕ್ಷ ಅಬ್ದೆಲ್ ಫತ್ತಾಹ್ ಎಲ್-ಸಿಸಿ ಸ್ವಾಗತಿಸಿದ್ದಾರೆ. ಪ್ರಸ್ತುತ ಈಜಿಪ್ಟ್​ನಲ್ಲಿ ಭಾರತದ ಹೂಡಿಕೆ 3.15 ಶತಕೋಟಿ ಡಾಲರ್​ನಷ್ಟಿದೆ.

ಎರಡೂ ದೇಶಗಳಲ್ಲಿ ಆರ್ಥಿಕ ಮತ್ತು ಹೂಡಿಕೆ ಅವಕಾಶಗಳನ್ನು ಅನ್ವೇಷಿಸಲು ಮತ್ತು ಉದ್ಯಮಗಳಿಗೆ ಪ್ರೋತ್ಸಾಹ ನೀಡಲು ಉಭಯ ದೇಶಗಳು ಸಮ್ಮತಿಸಿವೆ. 2021-22ರಲ್ಲಿ ಭಾರತ-ಈಜಿಪ್ಟ್ ನಡುವಣ ದ್ವಿಪಕ್ಷೀಯ ಆರ್ಥಿಕ ವಹಿವಾಟು 7.26 ಶತಕೋಟಿ ಡಾಲರ್​​ನಷ್ಟಿತ್ತು. ಕೋವಿಡ್ ಸಾಂಕ್ರಾಮಿಕದ ಸವಾಲಿನ ಹೊರತಾಗಿಯೂ ಉಭಯ ದೇಶಗಳು ಈ ಮಟ್ಟಿನ ಆರ್ಥಿಕ ವ್ಯವಹಾರ ನಡೆಸಿರುವುದಕ್ಕೆ ಇಬ್ಬರೂ ನಾಯಕರು ಸಂತಸ ವ್ಯಕ್ತಪಡಿಸಿದ್ದಾರೆ. ಮುಂದಿನ ಐದು ವರ್ಷಗಳ ಒಳಗೆ 12 ಶತಕೋಟಿ ಡಾಲರ್ ದ್ವಿಪಕ್ಷೀಯ ವಹಿವಾಟಿನ ಗುರಿ ಸಾಧಿಸುವ ಬಗ್ಗೆ ಭರವಸೆ ವ್ಯಕ್ತಪಡಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ: Bank strike: ಬ್ಯಾಂಕ್​ ಕೆಲಸ ಇಂದೇ ಮುಗಿಸಿಕೊಳ್ಳಿ; ಮುಂದಿನ ವಾರ 2 ದಿನ ಮುಷ್ಕರ

ಈಜಿಪ್ಟ್ ಅಧ್ಯಕ್ಷ ಅಬ್ದೆಲ್ ಫತ್ತಾಹ್ ಎಲ್-ಸಿಸಿ ಗಣರಾಜ್ಯೋತ್ಸವ ಸಮಾರಂಭಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿರುವ ಸಂದರ್ಭದಲ್ಲಿ ಜಂಟಿ ಹೇಳಿಕೆ ಬಿಡುಗಡೆ ಮಾಡಲಾಗಿದೆ.

ಭಾರತಕ್ಕೇನು ಪ್ರಯೋಜನ?

ಕೆಂಪು ಸಮುದ್ರದ ಸುಯೆಜ್ ಮತ್ತು ಮೆಡಿಟರೇನಿಯನ್ ಸಮುದ್ರದ ಸಯೀದ್ ಬಂದರಿನ ನಡುವೆ ಸಂಪರ್ಕ ಕಲ್ಪಿಸುವ ಮಹಾಕಾಲುವೆಯೇ ಸುಯೆಜ್. ಇದು ಈಜಿಪ್ಟ್ ದೇಶದ ವ್ಯಾಪ್ತಿಯಲ್ಲಿ ಬರುತ್ತದೆ. ಸುಯೆಜ್ ಕಾಲುವೆ ವಿಶ್ವದ ಅಂತ್ಯಂತ ವ್ಯಸ್ತ (Busiest) ವಾಣಿಜ್ಯ ಮಾರ್ಗಗಳಲ್ಲೊಂದಾಗಿದೆ. ಪ್ರತಿ ದಿನ ವಿಶ್ವದ ಒಟ್ಟಾರೆ ವಹಿವಾಟಿನ ಶೇ 12ರಷ್ಟು ಈ ಕಾಲುವೆ ಮೂಲಕ ನಡೆಯುತ್ತದೆ. ಈ ಕಾಲುವೆಯ ವ್ಯಾಪ್ತಿಯಲ್ಲಿ ಬರುವ ವಿಶೇಷ ಆರ್ಥಿಕ ವಲಯ ಅಥವಾ ಎಸ್​​ಇಝಡ್​​​ನಲ್ಲಿ ಹೂಡಿಕೆಗೆ ಅವಕಾಶ ದೊರೆಯುವುದರಿಂದ ಜಾಗತಿಕ ವಹಿವಾಟಿನ ದೃಷ್ಟಿಯಿಂದ ಭಾರತಕ್ಕೆ ಒಳಿತಾಗಲಿದೆ. ಜಾಗತಿಕ ಸರಕು ಸಾಗಾಟ ದೃಷ್ಟಿಯಿಂದಲೂ ಪ್ರಯೋಜನವಾಗಲಿದೆ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:58 am, Fri, 27 January 23

ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ