AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Electoral Bonds: ಜನವರಿ 2ರಿಂದ 11ರವರೆಗೆ ಎಸ್​ಬಿಐನ ಈ 29 ಕಚೇರಿಗಳಲ್ಲಿ ಸಿಗಲಿದೆ ಎಲೆಕ್ಟೋರಲ್ ಬಾಂಡ್; ಏನಿದು ಬಾಂಡ್?

SBI branches to distribute electoral bonds: ದೇಶಾದ್ಯಂತ ಎಸ್​ಬಿಐನ 29 ಪ್ರಧಾನ ಕಚೇರಿಗಳಲ್ಲಿ 2024ರ ಜನವರಿ 2ರಿಂದ 11ರವರೆಗೆ ಚುನಾವಣಾ ಬಾಂಡ್​ಗಳು ಮಾರಾಟಕ್ಕಿರಲಿವೆ. ಬೆಂಗಳೂರಿನ ಸೇಂಟ್ ಮಾರ್ಕ್ಸ್ ರಸ್ತೆಯಲ್ಲಿರುವ ಎಸ್​ಬಿಐ ಬ್ರ್ಯಾಂಚ್​ನಲ್ಲೂ ಎಲೆಕ್ಟೋರಲ್ ಬಾಂಡ್​ಗಳು ಲಭ್ಯ ಇರುತ್ತವೆ. ಯಾವುದೇ ವ್ಯಕ್ತಿ ಅಥವಾ ಸಂಸ್ಥೆ ಎಲೆಕ್ಟೋರಲ್ ಬಾಂಡ್ ಖರೀದಿಸಬಹುದು. ಇದು ರಾಜಕೀಯ ಪಕ್ಷಕ್ಕೆ ನೀಡುವ ದೇಣಿಗೆಯಾಗಿದೆ.

Electoral Bonds: ಜನವರಿ 2ರಿಂದ 11ರವರೆಗೆ ಎಸ್​ಬಿಐನ ಈ 29 ಕಚೇರಿಗಳಲ್ಲಿ ಸಿಗಲಿದೆ ಎಲೆಕ್ಟೋರಲ್ ಬಾಂಡ್; ಏನಿದು ಬಾಂಡ್?
ಎಲೆಕ್ಟೋರಲ್ ಬಾಂಡ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jan 01, 2024 | 7:08 PM

Share

ನವದೆಹಲಿ, ಜನವರಿ 1: ಚುನಾವಣಾ ಬಾಂಡ್​ಗಳನ್ನು ವಿತರಿಸಲು ಸರ್ಕಾರದಿಂದ ಮಾನ್ಯತೆ ಹೊಂದಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಇದೇ ಜನವರಿ 2ರಿಂದ 11ರವರೆಗೆ ಬಾಂಡ್​ಗಳನ್ನು (electoral bond) ಮಾರಲಿದೆ. ಇದಕ್ಕಾಗಿ ದೇಶಾದ್ಯಂತ ಒಟ್ಟು 29 ಎಸ್​ಬಿಐ ಶಾಖಾ ಕಚೇರಿಗಳನ್ನು ನಿಯೋಜಿಸಲಾಗಿದೆ. ಕರ್ನಾಟಕದಲ್ಲಿ ಬೆಂಗಳೂರಿನ ಸೇಂಟ್ ಮಾರ್ಕ್ಸ್ ರಸ್ತೆಯ ಎಸ್​ಬಿಐ ಕಚೇರಿಯಲ್ಲಿ ಈ ಬಾಂಡ್​ಗಳನ್ನು ಖರೀದಿಸಬಹುದು. ಈ ಎಲ್ಲಾ 29 ಕಚೇರಿಗಳೂ ಕೂಡ ಆಯಾ ರಾಜ್ಯಗಳ ಪ್ರಧಾನ ಎಸ್​ಬಿಐ ಕಚೇರಿಗಳೇ ಆಗಿವೆ.

ಎಲೆಕ್ಟೋರಲ್ ಬಾಂಡ್ ಸಿಗುವ ಎಸ್​ಬಿಐ ಕಚೇರಿಗಳು

ಬೆಂಗಳೂರು, ನವದೆಹಲಿ, ಚಂಡೀಗಡ, ಶಿಮ್ಲಾ, ಬದಗಾಮ್, ಡೆಹ್ರಾಡೂನ್, ಭೋಪಾಲ್, ರಾಯಪುರ್, ಜೈಪುರ್, ಮುಂಬೈ, ಪಣಜಿ, ಲಕ್ನೋ, ಖುರ್ದಾ (ಒಡಿಶಾ), ಕೋಲ್ಕತಾ, ಪಾಟ್ನಾ, ಗ್ಯಾಂಗ್​ಟಾಕ್, ಇಟಾನಗರ್ ಕೊಹಿಮಾ, ಗುವಾಹಟಿ, ಇಂಫಾಲ್ ವೆಸ್ಟ್, ಐಜ್ವಾಲ್, ಅಗಾರ್ತಲಾ, ವಿಶಾಖಪಟ್ಟಣಂ, ಹೈದರಾಬಾದ್, ಚೆನ್ನೈ, ತಿರುವನಂತಪುರಂ, ಈ ನಗರಗಳ ಎಸ್​ಬಿಐ ಮುಖ್ಯ ಕಚೇರಿಗಳಲ್ಲಿ ಚುನಾವಣಾ ಬಾಂಡ್​ಗಳನ್ನು ಖರೀದಿ ಮಾಡಬಹುದು.

ಇದನ್ನೂ ಓದಿ: ಕಳೆದ 9 ತಿಂಗಳಲ್ಲಿ 15 ಲಕ್ಷ ಕೋಟಿ ರೂ ಜಿಎಸ್​ಟಿ ಸಂಗ್ರಹ; ಡಿಸೆಂಬರ್​ನಲ್ಲಿ ಕಲೆಕ್ಷನ್ 1.6 ಲಕ್ಷಕೋಟಿ ರೂ

ಏನಿದು ಎಲೆಕ್ಟೋರಲ್ ಬಾಂಡ್?

ಇದು ಜನಸಾಮಾನ್ಯರು, ಕಾರ್ಪೊರೇಟ್ ಸಂಸ್ಥೆಗಳು ರಾಜಕೀಯ ಪಕ್ಷಗಳಿಗೆ ನೀಡುವ ಒಂದು ವಿಧದ ದೇಣಿಗೆ ಕ್ರಮ. 1,000 ರೂ, 10,000 ರೂ, 1 ಲಕ್ಷ ರೂ, 10 ಲಕ್ಷ ರೂ, 1 ಕೋಟಿ ರೂ ಇತ್ಯಾದಿ ಮುಖಬೆಲೆಗಳಲ್ಲಿ ಬಾಂಡ್​ಗಳನ್ನು ಖರೀದಿಸಬಹುದು. ಈ ಬಾಂಡ್​ಗಳು ಅನಾಮಧೇಯವಾಗಿರುತ್ತವೆ. ಅಂದರೆ, ಇದನ್ನು ಖರೀದಿಸಿದ ವ್ಯಕ್ತಿ ಅಥವಾ ಸಂಸ್ಥೆಯ ಹೆಸರು ಬಹಿರಂಗ ಇರುವುದಿಲ್ಲ. ಯಾವ ರಾಜಕೀಯ ಪಕ್ಷಕ್ಕೆ ದೇಣಿಗೆ ಕೊಡಲಾಗಿದೆ ಆ ಪಕ್ಷ ಹೆಸರೂ ಬಹಿರಂಗ ಇರುವುದಿಲ್ಲ.

ಇತ್ತೀಚಿನ ಚುನಾವಣೆಯಲ್ಲಿ ಶೇ. 1ಕ್ಕೂ ಹೆಚ್ಚು ಮತಗಳನ್ನು ಪಡೆದ ಯಾವುದೇ ರಾಜಕೀಯ ಪಕ್ಷವೂ ಎಲೆಕ್ಟ್ರೋರಲ್ ಬಾಂಡ್ ಅಕೌಂಟ್ ತೆರೆಯಲು ಅವಕಾಶ ಹೊಂದಿರುತ್ತದೆ. ಎಲೆಕ್ಟೋರಲ್ ಬಾಂಡ್ ಖರೀದಿಸಿದ ಬಳಿಕ ರಾಜಕೀಯ ಪಕ್ಷವು 15 ದಿನದೊಳಗೆ ಆ ಹಣವನ್ನು ಎನ್​ಕ್ಯಾಷ್ ಮಾಡಿಕೊಳ್ಳಬೇಕು. ಅದು ತಪ್ಪಿದಲ್ಲಿ ಬಾಂಡ್ ಹಣವು ಪಿಎಂ ರಾಷ್ಟ್ರೀಯ ಪರಿಹಾರ ನಿಧಿಗೆ (ಪಿಎಂಎನ್​ಆರ್​ಎಫ್) ವರ್ಗಾವಣೆ ಆಗುತ್ತದೆ.

ಇದನ್ನೂ ಓದಿ: Gold: ಒಂದು ವರ್ಷದಲ್ಲಿ ಚಿನ್ನದ ಬೆಲೆ ಹೆಚ್ಚಾಗಿದ್ದು ಎಷ್ಟು? ಹೂಡಿಕೆ ಮಾಡಿದವರಿಗೆ ಎಷ್ಟು ಲಾಭ?

ಎಲೆಕ್ಟೋರಲ್ ಬಾಂಡ್ ಖರೀದಿಸಿದರೆ ಆ ಹಣಕ್ಕೆ ತೆರಿಗೆ ವಿನಾಯಿತಿ ಸಿಕ್ಕುತ್ತದೆ. ರಾಜಕೀಯ ಪಕ್ಷಗಳು ಆದಾಯ ತೆರಿಗೆ ಕಟ್ಟುವ ಅವಶ್ಯಕತೆ ಇರುವುದಿಲ್ಲ. ಆದರೆ, ಎಲೆಕ್ಟೋರಲ್ ಬಾಂಡ್ ವಿತರಣೆ ಮಾಡುವ ಎಸ್​ಬಿಐ, ಇದಕ್ಕೆ ಸರ್ಕಾರದಿಂದ ನಿರ್ದಿಷ್ಟ ಶುಲ್ಕ ಪಡೆಯುತ್ತದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಶಿವಣ್ಣನ ಸಿನಿಮಾ ಡೈಲಾಗ್ ಹೇಳಿದ ರಾಮ್ ಚರಣ್: ವಿಡಿಯೋ ನೋಡಿ
ಶಿವಣ್ಣನ ಸಿನಿಮಾ ಡೈಲಾಗ್ ಹೇಳಿದ ರಾಮ್ ಚರಣ್: ವಿಡಿಯೋ ನೋಡಿ
ಪ್ರಮಾಣವಚನಕ್ಕೂ ಮುನ್ನವೇ ಡಿಕೆಶಿ​​​ ನಿವಾಸಕ್ಕೆ ಭದ್ರತೆ ಹೇಗಿದೆ ನೋಡಿ
ಪ್ರಮಾಣವಚನಕ್ಕೂ ಮುನ್ನವೇ ಡಿಕೆಶಿ​​​ ನಿವಾಸಕ್ಕೆ ಭದ್ರತೆ ಹೇಗಿದೆ ನೋಡಿ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ