AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Twitter: ಟ್ವಿಟರ್ ಹೊಸ ಸಿಇಒ ಲಿಂಡಾ ಯಾಕರಿನೊ; ಕೊನೆಗೂ ಹೆಸರು ಬಹಿರಂಗಪಡಿಸಿದ ಮಸ್ಕ್

ಟ್ವಿಟ್ಟರ್​ಗೆ ಹೊಸ ಸಿಇಒ ಆಯ್ಕೆಯಾಗಿದ್ದಾರೆ ಎಂದು ತಿಳಿಸಿದ್ದ ಎಲಾನ್ ಮಸ್ಕ್ ಇದೀಗ ಕೊನೆಗೂ ಅವರ ಹೆಸರನ್ನು ಬಹಿರಂಗಪಡಿಸಿದ್ದಾರೆ. ಲಿಂಡಾ ಯಾಕರಿನೊ ಅವರನ್ನು ನೂತನ ಸಿಇಒ ಆಗಿ ಸ್ವಾಗತಿಸಲು ಇಷ್ಟಪಡುತ್ತೇನೆ ಎಂದು ಅವರು ಟ್ವೀಟ್ ಮಾಡಿದ್ದಾರೆ.

Twitter: ಟ್ವಿಟರ್ ಹೊಸ ಸಿಇಒ ಲಿಂಡಾ ಯಾಕರಿನೊ; ಕೊನೆಗೂ ಹೆಸರು ಬಹಿರಂಗಪಡಿಸಿದ ಮಸ್ಕ್
ಲಿಂಡಾ ಯಾಕರಿನೊ (ಟ್ವಿಟರ್ ಚಿತ್ರ)Image Credit source: Twitter
ಗಣಪತಿ ಶರ್ಮಾ
|

Updated on: May 12, 2023 | 9:44 PM

Share

ಸ್ಯಾನ್ ಫ್ರಾನ್ಸಿಸ್ಕೋ: ಟ್ವಿಟ್ಟರ್​ಗೆ ಹೊಸ ಸಿಇಒ (Twitter CEO) ಆಯ್ಕೆಯಾಗಿದ್ದಾರೆ ಎಂದು ತಿಳಿಸಿದ್ದ ಎಲಾನ್ ಮಸ್ಕ್ ಇದೀಗ ಕೊನೆಗೂ ಅವರ ಹೆಸರನ್ನು ಬಹಿರಂಗಪಡಿಸಿದ್ದಾರೆ. ಲಿಂಡಾ ಯಾಕರಿನೊ ಅವರನ್ನು ನೂತನ ಸಿಇಒ ಆಗಿ ಸ್ವಾಗತಿಸಲು ಇಷ್ಟಪಡುತ್ತೇನೆ. ಅವರು ಉದ್ಯಮ ನಿರ್ವಹಣೆ ಬಗ್ಗೆ ಪ್ರಮುಖವಾಗಿ ಗಮನಹರಿಸಲಿದ್ದಾರೆ. ನಾನು ಪ್ರಾಡಕ್ಟ್, ಹೊಸ ತಂತ್ರಜ್ಞಾನಗಳ ಬಗ್ಗೆ ಗಮನಹರಿಸಲಿದ್ದೇನೆ. ಆ್ಯಪ್​ಗಾಗಿ ಅವರ ಜತೆ ಕೆಲಸ ಮಾಡುವುದನ್ನು ಎದುರು ನೋಡುತ್ತಿದ್ದೇನೆ ಎಂದು ಮಸ್ಕ್ ಟ್ವೀಟ್ ಮಾಡಿದ್ದಾರೆ.

ಹೊಸ ಸಿಇಒ ಸಿಕ್ಕಿದ್ದಾರೆ ಎಂದು ಮಸ್ಕ್ ಶುಕ್ರವಾರ ಬೆಳಗ್ಗೆಯೇ ಘೋಷಣೆ ಮಾಡಿದ್ದರು. ಈ ವಿಚಾರವಾಗಿ ಟ್ವೀಟ್ ಕೂಡ ಮಾಡಿದ್ದರು. ಹೊಸ ಸಿಇಒ ಒಬ್ಬ ಮಹಿಳೆ ಎಂಬುದನ್ನೂ ತಿಳಿಸಿದ್ದ ಅವರು, ಹೆಸರು ಬಹಿರಂಗಪಡಿಸಿರಲಿಲ್ಲ. ಲಿಂಡಾ ಯಾಕರಿನೊ ಅವರೇ ಟ್ವಿಟರ್​​ನ ನೂತನ ಸಿಇಒ ಆಗಲಿದ್ದಾರೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿದ್ದವು. ಇದೀಗ ಎಲ್ಲ ವದಂತಿಗಳಿಗೆ ತೆರೆ ಬಿದ್ದಂತಾಗಿದೆ.

ಟೆಸ್ಲಾ, ಸ್ಪೇಸ್​ಎಕ್ಸ್ ಇತ್ಯಾದಿ ಕಂಪನಿಗಳ ಒಡೆಯ ಎಲಾನ್ ಮಸ್ಕ್ ಕಳೆದ 2022ರ ಅಕ್ಟೋಬರ್ ತಿಂಗಳಲ್ಲಿ 44 ಬಿಲಿಯನ್ ಡಾಲರ್ ತೆತ್ತು ಟ್ವಿಟ್ಟರ್ ಅನ್ನು ಖರೀದಿಸಿದ್ದರು. ಇದೀಗ ಅದಕ್ಕೆ ಆದಾಯ ತರಲು ವಿವಿಧ ಪ್ರಯತ್ನ ಮಾಡುತ್ತಿರುವ ಮಸ್ಕ್, ಬ್ಲೂ ಟಿಕ್ ಮಾರ್ಕ್​ಗೆ ಸಬ್​ಸ್ಕ್ರಿಪ್ಷನ್ ಶುಲ್ಕ ನಿಗದಿ ಮಾಡುವುದು ಸೇರಿದಂತೆ ಹಲವು ಕ್ರಮ ಕೈಗೊಂಡಿದ್ದಾರೆ. ಹಾಗೆಯೇ, ಮುಂದೆ ಟ್ವಿಟ್ಟರ್​ನಲ್ಲಿ ಗಮನಾರ್ಹ ಪರಿವರ್ತನೆಗಳು ಆಗಲಿರುವ ಹಿನ್ನೆಲೆಯಲ್ಲಿ ಸಿಇಒ ಜವಾಬ್ದಾರಿ ಬಹಳ ಕಠಿಣವಾಗಿರುತ್ತದೆ. ಆದರೆ, ತಂತ್ರಜ್ಞಾನ ವಿಭಾಗದಲ್ಲಿ ಎಲಾನ್ ಮಸ್ಕ್ ಇರಲಿರುವುದರಿಂದ ಹೊಸ ಸಿಇಒಗೆ ಸಹಾಯವಾಗಬಹುದು.

ಇನ್ನಷ್ಟು ವ್ಯವಹಾರ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Ganapathi Sharma
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್