Sign In

By signing in or creating an account, you agree with Associated Broadcasting Company's Terms & Conditions and Privacy Policy.

Twitter: ಟ್ವಿಟರ್ ಹೊಸ ಸಿಇಒ ಲಿಂಡಾ ಯಾಕರಿನೊ; ಕೊನೆಗೂ ಹೆಸರು ಬಹಿರಂಗಪಡಿಸಿದ ಮಸ್ಕ್

ಟ್ವಿಟ್ಟರ್​ಗೆ ಹೊಸ ಸಿಇಒ ಆಯ್ಕೆಯಾಗಿದ್ದಾರೆ ಎಂದು ತಿಳಿಸಿದ್ದ ಎಲಾನ್ ಮಸ್ಕ್ ಇದೀಗ ಕೊನೆಗೂ ಅವರ ಹೆಸರನ್ನು ಬಹಿರಂಗಪಡಿಸಿದ್ದಾರೆ. ಲಿಂಡಾ ಯಾಕರಿನೊ ಅವರನ್ನು ನೂತನ ಸಿಇಒ ಆಗಿ ಸ್ವಾಗತಿಸಲು ಇಷ್ಟಪಡುತ್ತೇನೆ ಎಂದು ಅವರು ಟ್ವೀಟ್ ಮಾಡಿದ್ದಾರೆ.

Twitter: ಟ್ವಿಟರ್ ಹೊಸ ಸಿಇಒ ಲಿಂಡಾ ಯಾಕರಿನೊ; ಕೊನೆಗೂ ಹೆಸರು ಬಹಿರಂಗಪಡಿಸಿದ ಮಸ್ಕ್
ಲಿಂಡಾ ಯಾಕರಿನೊ (ಟ್ವಿಟರ್ ಚಿತ್ರ)Image Credit source: Twitter
Follow us
Ganapathi Sharma
|

Updated on: May 12, 2023 | 9:44 PM

ಸ್ಯಾನ್ ಫ್ರಾನ್ಸಿಸ್ಕೋ: ಟ್ವಿಟ್ಟರ್​ಗೆ ಹೊಸ ಸಿಇಒ (Twitter CEO) ಆಯ್ಕೆಯಾಗಿದ್ದಾರೆ ಎಂದು ತಿಳಿಸಿದ್ದ ಎಲಾನ್ ಮಸ್ಕ್ ಇದೀಗ ಕೊನೆಗೂ ಅವರ ಹೆಸರನ್ನು ಬಹಿರಂಗಪಡಿಸಿದ್ದಾರೆ. ಲಿಂಡಾ ಯಾಕರಿನೊ ಅವರನ್ನು ನೂತನ ಸಿಇಒ ಆಗಿ ಸ್ವಾಗತಿಸಲು ಇಷ್ಟಪಡುತ್ತೇನೆ. ಅವರು ಉದ್ಯಮ ನಿರ್ವಹಣೆ ಬಗ್ಗೆ ಪ್ರಮುಖವಾಗಿ ಗಮನಹರಿಸಲಿದ್ದಾರೆ. ನಾನು ಪ್ರಾಡಕ್ಟ್, ಹೊಸ ತಂತ್ರಜ್ಞಾನಗಳ ಬಗ್ಗೆ ಗಮನಹರಿಸಲಿದ್ದೇನೆ. ಆ್ಯಪ್​ಗಾಗಿ ಅವರ ಜತೆ ಕೆಲಸ ಮಾಡುವುದನ್ನು ಎದುರು ನೋಡುತ್ತಿದ್ದೇನೆ ಎಂದು ಮಸ್ಕ್ ಟ್ವೀಟ್ ಮಾಡಿದ್ದಾರೆ.

ಹೊಸ ಸಿಇಒ ಸಿಕ್ಕಿದ್ದಾರೆ ಎಂದು ಮಸ್ಕ್ ಶುಕ್ರವಾರ ಬೆಳಗ್ಗೆಯೇ ಘೋಷಣೆ ಮಾಡಿದ್ದರು. ಈ ವಿಚಾರವಾಗಿ ಟ್ವೀಟ್ ಕೂಡ ಮಾಡಿದ್ದರು. ಹೊಸ ಸಿಇಒ ಒಬ್ಬ ಮಹಿಳೆ ಎಂಬುದನ್ನೂ ತಿಳಿಸಿದ್ದ ಅವರು, ಹೆಸರು ಬಹಿರಂಗಪಡಿಸಿರಲಿಲ್ಲ. ಲಿಂಡಾ ಯಾಕರಿನೊ ಅವರೇ ಟ್ವಿಟರ್​​ನ ನೂತನ ಸಿಇಒ ಆಗಲಿದ್ದಾರೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿದ್ದವು. ಇದೀಗ ಎಲ್ಲ ವದಂತಿಗಳಿಗೆ ತೆರೆ ಬಿದ್ದಂತಾಗಿದೆ.

ಟೆಸ್ಲಾ, ಸ್ಪೇಸ್​ಎಕ್ಸ್ ಇತ್ಯಾದಿ ಕಂಪನಿಗಳ ಒಡೆಯ ಎಲಾನ್ ಮಸ್ಕ್ ಕಳೆದ 2022ರ ಅಕ್ಟೋಬರ್ ತಿಂಗಳಲ್ಲಿ 44 ಬಿಲಿಯನ್ ಡಾಲರ್ ತೆತ್ತು ಟ್ವಿಟ್ಟರ್ ಅನ್ನು ಖರೀದಿಸಿದ್ದರು. ಇದೀಗ ಅದಕ್ಕೆ ಆದಾಯ ತರಲು ವಿವಿಧ ಪ್ರಯತ್ನ ಮಾಡುತ್ತಿರುವ ಮಸ್ಕ್, ಬ್ಲೂ ಟಿಕ್ ಮಾರ್ಕ್​ಗೆ ಸಬ್​ಸ್ಕ್ರಿಪ್ಷನ್ ಶುಲ್ಕ ನಿಗದಿ ಮಾಡುವುದು ಸೇರಿದಂತೆ ಹಲವು ಕ್ರಮ ಕೈಗೊಂಡಿದ್ದಾರೆ. ಹಾಗೆಯೇ, ಮುಂದೆ ಟ್ವಿಟ್ಟರ್​ನಲ್ಲಿ ಗಮನಾರ್ಹ ಪರಿವರ್ತನೆಗಳು ಆಗಲಿರುವ ಹಿನ್ನೆಲೆಯಲ್ಲಿ ಸಿಇಒ ಜವಾಬ್ದಾರಿ ಬಹಳ ಕಠಿಣವಾಗಿರುತ್ತದೆ. ಆದರೆ, ತಂತ್ರಜ್ಞಾನ ವಿಭಾಗದಲ್ಲಿ ಎಲಾನ್ ಮಸ್ಕ್ ಇರಲಿರುವುದರಿಂದ ಹೊಸ ಸಿಇಒಗೆ ಸಹಾಯವಾಗಬಹುದು.

ಇನ್ನಷ್ಟು ವ್ಯವಹಾರ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬ್ಯಾಟರ್ ಬಿದ್ದು ಒದ್ದಾಡಿದರೂ ತಿರುಗಿ ಕೂಡ ನೋಡದ ಜಸ್​ಪ್ರೀತ್ ಬುಮ್ರಾ
ಬ್ಯಾಟರ್ ಬಿದ್ದು ಒದ್ದಾಡಿದರೂ ತಿರುಗಿ ಕೂಡ ನೋಡದ ಜಸ್​ಪ್ರೀತ್ ಬುಮ್ರಾ
ಇದೆಂತಹ ವರ್ತನೆ... ಮೌನಾಚರಣೆ ವೇಳೆಯೂ ಹಾರ್ದಿಕ್ ಪಾಂಡ್ಯ ಹುಚ್ಚಾಟ
ಇದೆಂತಹ ವರ್ತನೆ... ಮೌನಾಚರಣೆ ವೇಳೆಯೂ ಹಾರ್ದಿಕ್ ಪಾಂಡ್ಯ ಹುಚ್ಚಾಟ
ಬೆಂಗಳೂರು ತಲುಪಿದ ಕನ್ನಡಿಗರ ಪಾರ್ಥಿವ ಶರೀರ, ಅಂತಿಮ ನಮನ ಸಲ್ಲಿಕೆ
ಬೆಂಗಳೂರು ತಲುಪಿದ ಕನ್ನಡಿಗರ ಪಾರ್ಥಿವ ಶರೀರ, ಅಂತಿಮ ನಮನ ಸಲ್ಲಿಕೆ
ಮನೆ ಗೋಡೆಲಿ, ಕಿಟಕಿಗಳಲ್ಲಿ ಜೇನುಗೂಡು ಕಟ್ಟಿದ್ರೆ ಏನರ್ಥ? ಇಲ್ಲಿದೆ ಮಾಹಿತಿ
ಮನೆ ಗೋಡೆಲಿ, ಕಿಟಕಿಗಳಲ್ಲಿ ಜೇನುಗೂಡು ಕಟ್ಟಿದ್ರೆ ಏನರ್ಥ? ಇಲ್ಲಿದೆ ಮಾಹಿತಿ
ಈ ದಿನದ ವಿಶೇಷವೇನು? ನಿಮ್ಮ ರಾಶಿ ಭವಿಷ್ಯವೇನು? ಇಲ್ಲಿದೆ ನೋಡಿ
ಈ ದಿನದ ವಿಶೇಷವೇನು? ನಿಮ್ಮ ರಾಶಿ ಭವಿಷ್ಯವೇನು? ಇಲ್ಲಿದೆ ನೋಡಿ
ಕಾಶ್ಮೀರದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸೂಕ್ತ ವ್ಯವಸ್ಥೆ: ಪ್ರಲ್ಹಾದ್ ಜೋಶಿ
ಕಾಶ್ಮೀರದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸೂಕ್ತ ವ್ಯವಸ್ಥೆ: ಪ್ರಲ್ಹಾದ್ ಜೋಶಿ
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ