AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Twitter: ಟ್ವಿಟರ್ ಹೊಸ ಸಿಇಒ ಲಿಂಡಾ ಯಾಕರಿನೊ; ಕೊನೆಗೂ ಹೆಸರು ಬಹಿರಂಗಪಡಿಸಿದ ಮಸ್ಕ್

ಟ್ವಿಟ್ಟರ್​ಗೆ ಹೊಸ ಸಿಇಒ ಆಯ್ಕೆಯಾಗಿದ್ದಾರೆ ಎಂದು ತಿಳಿಸಿದ್ದ ಎಲಾನ್ ಮಸ್ಕ್ ಇದೀಗ ಕೊನೆಗೂ ಅವರ ಹೆಸರನ್ನು ಬಹಿರಂಗಪಡಿಸಿದ್ದಾರೆ. ಲಿಂಡಾ ಯಾಕರಿನೊ ಅವರನ್ನು ನೂತನ ಸಿಇಒ ಆಗಿ ಸ್ವಾಗತಿಸಲು ಇಷ್ಟಪಡುತ್ತೇನೆ ಎಂದು ಅವರು ಟ್ವೀಟ್ ಮಾಡಿದ್ದಾರೆ.

Twitter: ಟ್ವಿಟರ್ ಹೊಸ ಸಿಇಒ ಲಿಂಡಾ ಯಾಕರಿನೊ; ಕೊನೆಗೂ ಹೆಸರು ಬಹಿರಂಗಪಡಿಸಿದ ಮಸ್ಕ್
ಲಿಂಡಾ ಯಾಕರಿನೊ (ಟ್ವಿಟರ್ ಚಿತ್ರ)Image Credit source: Twitter
Ganapathi Sharma
|

Updated on: May 12, 2023 | 9:44 PM

Share

ಸ್ಯಾನ್ ಫ್ರಾನ್ಸಿಸ್ಕೋ: ಟ್ವಿಟ್ಟರ್​ಗೆ ಹೊಸ ಸಿಇಒ (Twitter CEO) ಆಯ್ಕೆಯಾಗಿದ್ದಾರೆ ಎಂದು ತಿಳಿಸಿದ್ದ ಎಲಾನ್ ಮಸ್ಕ್ ಇದೀಗ ಕೊನೆಗೂ ಅವರ ಹೆಸರನ್ನು ಬಹಿರಂಗಪಡಿಸಿದ್ದಾರೆ. ಲಿಂಡಾ ಯಾಕರಿನೊ ಅವರನ್ನು ನೂತನ ಸಿಇಒ ಆಗಿ ಸ್ವಾಗತಿಸಲು ಇಷ್ಟಪಡುತ್ತೇನೆ. ಅವರು ಉದ್ಯಮ ನಿರ್ವಹಣೆ ಬಗ್ಗೆ ಪ್ರಮುಖವಾಗಿ ಗಮನಹರಿಸಲಿದ್ದಾರೆ. ನಾನು ಪ್ರಾಡಕ್ಟ್, ಹೊಸ ತಂತ್ರಜ್ಞಾನಗಳ ಬಗ್ಗೆ ಗಮನಹರಿಸಲಿದ್ದೇನೆ. ಆ್ಯಪ್​ಗಾಗಿ ಅವರ ಜತೆ ಕೆಲಸ ಮಾಡುವುದನ್ನು ಎದುರು ನೋಡುತ್ತಿದ್ದೇನೆ ಎಂದು ಮಸ್ಕ್ ಟ್ವೀಟ್ ಮಾಡಿದ್ದಾರೆ.

ಹೊಸ ಸಿಇಒ ಸಿಕ್ಕಿದ್ದಾರೆ ಎಂದು ಮಸ್ಕ್ ಶುಕ್ರವಾರ ಬೆಳಗ್ಗೆಯೇ ಘೋಷಣೆ ಮಾಡಿದ್ದರು. ಈ ವಿಚಾರವಾಗಿ ಟ್ವೀಟ್ ಕೂಡ ಮಾಡಿದ್ದರು. ಹೊಸ ಸಿಇಒ ಒಬ್ಬ ಮಹಿಳೆ ಎಂಬುದನ್ನೂ ತಿಳಿಸಿದ್ದ ಅವರು, ಹೆಸರು ಬಹಿರಂಗಪಡಿಸಿರಲಿಲ್ಲ. ಲಿಂಡಾ ಯಾಕರಿನೊ ಅವರೇ ಟ್ವಿಟರ್​​ನ ನೂತನ ಸಿಇಒ ಆಗಲಿದ್ದಾರೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿದ್ದವು. ಇದೀಗ ಎಲ್ಲ ವದಂತಿಗಳಿಗೆ ತೆರೆ ಬಿದ್ದಂತಾಗಿದೆ.

ಟೆಸ್ಲಾ, ಸ್ಪೇಸ್​ಎಕ್ಸ್ ಇತ್ಯಾದಿ ಕಂಪನಿಗಳ ಒಡೆಯ ಎಲಾನ್ ಮಸ್ಕ್ ಕಳೆದ 2022ರ ಅಕ್ಟೋಬರ್ ತಿಂಗಳಲ್ಲಿ 44 ಬಿಲಿಯನ್ ಡಾಲರ್ ತೆತ್ತು ಟ್ವಿಟ್ಟರ್ ಅನ್ನು ಖರೀದಿಸಿದ್ದರು. ಇದೀಗ ಅದಕ್ಕೆ ಆದಾಯ ತರಲು ವಿವಿಧ ಪ್ರಯತ್ನ ಮಾಡುತ್ತಿರುವ ಮಸ್ಕ್, ಬ್ಲೂ ಟಿಕ್ ಮಾರ್ಕ್​ಗೆ ಸಬ್​ಸ್ಕ್ರಿಪ್ಷನ್ ಶುಲ್ಕ ನಿಗದಿ ಮಾಡುವುದು ಸೇರಿದಂತೆ ಹಲವು ಕ್ರಮ ಕೈಗೊಂಡಿದ್ದಾರೆ. ಹಾಗೆಯೇ, ಮುಂದೆ ಟ್ವಿಟ್ಟರ್​ನಲ್ಲಿ ಗಮನಾರ್ಹ ಪರಿವರ್ತನೆಗಳು ಆಗಲಿರುವ ಹಿನ್ನೆಲೆಯಲ್ಲಿ ಸಿಇಒ ಜವಾಬ್ದಾರಿ ಬಹಳ ಕಠಿಣವಾಗಿರುತ್ತದೆ. ಆದರೆ, ತಂತ್ರಜ್ಞಾನ ವಿಭಾಗದಲ್ಲಿ ಎಲಾನ್ ಮಸ್ಕ್ ಇರಲಿರುವುದರಿಂದ ಹೊಸ ಸಿಇಒಗೆ ಸಹಾಯವಾಗಬಹುದು.

ಇನ್ನಷ್ಟು ವ್ಯವಹಾರ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!