Twitter: ಟ್ವಿಟರ್ ಹೊಸ ಸಿಇಒ ಲಿಂಡಾ ಯಾಕರಿನೊ; ಕೊನೆಗೂ ಹೆಸರು ಬಹಿರಂಗಪಡಿಸಿದ ಮಸ್ಕ್

ಟ್ವಿಟ್ಟರ್​ಗೆ ಹೊಸ ಸಿಇಒ ಆಯ್ಕೆಯಾಗಿದ್ದಾರೆ ಎಂದು ತಿಳಿಸಿದ್ದ ಎಲಾನ್ ಮಸ್ಕ್ ಇದೀಗ ಕೊನೆಗೂ ಅವರ ಹೆಸರನ್ನು ಬಹಿರಂಗಪಡಿಸಿದ್ದಾರೆ. ಲಿಂಡಾ ಯಾಕರಿನೊ ಅವರನ್ನು ನೂತನ ಸಿಇಒ ಆಗಿ ಸ್ವಾಗತಿಸಲು ಇಷ್ಟಪಡುತ್ತೇನೆ ಎಂದು ಅವರು ಟ್ವೀಟ್ ಮಾಡಿದ್ದಾರೆ.

Twitter: ಟ್ವಿಟರ್ ಹೊಸ ಸಿಇಒ ಲಿಂಡಾ ಯಾಕರಿನೊ; ಕೊನೆಗೂ ಹೆಸರು ಬಹಿರಂಗಪಡಿಸಿದ ಮಸ್ಕ್
ಲಿಂಡಾ ಯಾಕರಿನೊ (ಟ್ವಿಟರ್ ಚಿತ್ರ)Image Credit source: Twitter
Follow us
|

Updated on: May 12, 2023 | 9:44 PM

ಸ್ಯಾನ್ ಫ್ರಾನ್ಸಿಸ್ಕೋ: ಟ್ವಿಟ್ಟರ್​ಗೆ ಹೊಸ ಸಿಇಒ (Twitter CEO) ಆಯ್ಕೆಯಾಗಿದ್ದಾರೆ ಎಂದು ತಿಳಿಸಿದ್ದ ಎಲಾನ್ ಮಸ್ಕ್ ಇದೀಗ ಕೊನೆಗೂ ಅವರ ಹೆಸರನ್ನು ಬಹಿರಂಗಪಡಿಸಿದ್ದಾರೆ. ಲಿಂಡಾ ಯಾಕರಿನೊ ಅವರನ್ನು ನೂತನ ಸಿಇಒ ಆಗಿ ಸ್ವಾಗತಿಸಲು ಇಷ್ಟಪಡುತ್ತೇನೆ. ಅವರು ಉದ್ಯಮ ನಿರ್ವಹಣೆ ಬಗ್ಗೆ ಪ್ರಮುಖವಾಗಿ ಗಮನಹರಿಸಲಿದ್ದಾರೆ. ನಾನು ಪ್ರಾಡಕ್ಟ್, ಹೊಸ ತಂತ್ರಜ್ಞಾನಗಳ ಬಗ್ಗೆ ಗಮನಹರಿಸಲಿದ್ದೇನೆ. ಆ್ಯಪ್​ಗಾಗಿ ಅವರ ಜತೆ ಕೆಲಸ ಮಾಡುವುದನ್ನು ಎದುರು ನೋಡುತ್ತಿದ್ದೇನೆ ಎಂದು ಮಸ್ಕ್ ಟ್ವೀಟ್ ಮಾಡಿದ್ದಾರೆ.

ಹೊಸ ಸಿಇಒ ಸಿಕ್ಕಿದ್ದಾರೆ ಎಂದು ಮಸ್ಕ್ ಶುಕ್ರವಾರ ಬೆಳಗ್ಗೆಯೇ ಘೋಷಣೆ ಮಾಡಿದ್ದರು. ಈ ವಿಚಾರವಾಗಿ ಟ್ವೀಟ್ ಕೂಡ ಮಾಡಿದ್ದರು. ಹೊಸ ಸಿಇಒ ಒಬ್ಬ ಮಹಿಳೆ ಎಂಬುದನ್ನೂ ತಿಳಿಸಿದ್ದ ಅವರು, ಹೆಸರು ಬಹಿರಂಗಪಡಿಸಿರಲಿಲ್ಲ. ಲಿಂಡಾ ಯಾಕರಿನೊ ಅವರೇ ಟ್ವಿಟರ್​​ನ ನೂತನ ಸಿಇಒ ಆಗಲಿದ್ದಾರೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿದ್ದವು. ಇದೀಗ ಎಲ್ಲ ವದಂತಿಗಳಿಗೆ ತೆರೆ ಬಿದ್ದಂತಾಗಿದೆ.

ಟೆಸ್ಲಾ, ಸ್ಪೇಸ್​ಎಕ್ಸ್ ಇತ್ಯಾದಿ ಕಂಪನಿಗಳ ಒಡೆಯ ಎಲಾನ್ ಮಸ್ಕ್ ಕಳೆದ 2022ರ ಅಕ್ಟೋಬರ್ ತಿಂಗಳಲ್ಲಿ 44 ಬಿಲಿಯನ್ ಡಾಲರ್ ತೆತ್ತು ಟ್ವಿಟ್ಟರ್ ಅನ್ನು ಖರೀದಿಸಿದ್ದರು. ಇದೀಗ ಅದಕ್ಕೆ ಆದಾಯ ತರಲು ವಿವಿಧ ಪ್ರಯತ್ನ ಮಾಡುತ್ತಿರುವ ಮಸ್ಕ್, ಬ್ಲೂ ಟಿಕ್ ಮಾರ್ಕ್​ಗೆ ಸಬ್​ಸ್ಕ್ರಿಪ್ಷನ್ ಶುಲ್ಕ ನಿಗದಿ ಮಾಡುವುದು ಸೇರಿದಂತೆ ಹಲವು ಕ್ರಮ ಕೈಗೊಂಡಿದ್ದಾರೆ. ಹಾಗೆಯೇ, ಮುಂದೆ ಟ್ವಿಟ್ಟರ್​ನಲ್ಲಿ ಗಮನಾರ್ಹ ಪರಿವರ್ತನೆಗಳು ಆಗಲಿರುವ ಹಿನ್ನೆಲೆಯಲ್ಲಿ ಸಿಇಒ ಜವಾಬ್ದಾರಿ ಬಹಳ ಕಠಿಣವಾಗಿರುತ್ತದೆ. ಆದರೆ, ತಂತ್ರಜ್ಞಾನ ವಿಭಾಗದಲ್ಲಿ ಎಲಾನ್ ಮಸ್ಕ್ ಇರಲಿರುವುದರಿಂದ ಹೊಸ ಸಿಇಒಗೆ ಸಹಾಯವಾಗಬಹುದು.

ಇನ್ನಷ್ಟು ವ್ಯವಹಾರ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ಹಾಲಿನ ದರ ಹೆಚ್ಚಳ ಮಾಡಿದ್ದು ಸರ್ಕಾರವಲ್ಲ, ಕೆಎಂಎಫ್ ಎಂದಿದ್ದ ಸಿಎಂ ಉಲ್ಟಾ!
ಹಾಲಿನ ದರ ಹೆಚ್ಚಳ ಮಾಡಿದ್ದು ಸರ್ಕಾರವಲ್ಲ, ಕೆಎಂಎಫ್ ಎಂದಿದ್ದ ಸಿಎಂ ಉಲ್ಟಾ!
ಚುನಾಯಿತ ಜನಪ್ರತಿನಿಧಿ ಎಲ್ಲ ಸಮುದಾಯಳಿಗಾಗಿ ದುಡಿಯಬೇಕು: ಪ್ರಿಯಾಂಕ್ ಖರ್ಗೆ
ಚುನಾಯಿತ ಜನಪ್ರತಿನಿಧಿ ಎಲ್ಲ ಸಮುದಾಯಳಿಗಾಗಿ ದುಡಿಯಬೇಕು: ಪ್ರಿಯಾಂಕ್ ಖರ್ಗೆ
ಮೂರು ಡಿಸಿಎಂ ಬೇಡಿಕೆ ಈಗಿನ ಡಿಸಿಎಂಗೆ ಮೂಗುದಾರ ಹಾಕುವ ಹುನ್ನಾರ: ಸಿಟಿ ರವಿ
ಮೂರು ಡಿಸಿಎಂ ಬೇಡಿಕೆ ಈಗಿನ ಡಿಸಿಎಂಗೆ ಮೂಗುದಾರ ಹಾಕುವ ಹುನ್ನಾರ: ಸಿಟಿ ರವಿ
ಮೈಸೂರಲ್ಲಿಂದು ಬೆಳ್ಳಂಬೆಳಗ್ಗೆಯೇ ಮಳೆ, ಮಕ್ಕಳನ್ನು ಶಾಲೆಗೆ ಕಳಿಸಲು ತಾಪತ್ರಯ
ಮೈಸೂರಲ್ಲಿಂದು ಬೆಳ್ಳಂಬೆಳಗ್ಗೆಯೇ ಮಳೆ, ಮಕ್ಕಳನ್ನು ಶಾಲೆಗೆ ಕಳಿಸಲು ತಾಪತ್ರಯ
‘ನನ್ನನ್ನು ಯಾರೂ ಮಾತನಾಡಿಸೋಲ್ಲ’; ಜೈಲಲ್ಲಿ ಪವಿತ್ರಾ ಗೌಡ ಕಣ್ಣೀರು
‘ನನ್ನನ್ನು ಯಾರೂ ಮಾತನಾಡಿಸೋಲ್ಲ’; ಜೈಲಲ್ಲಿ ಪವಿತ್ರಾ ಗೌಡ ಕಣ್ಣೀರು
Daily Horoscope: ನಿಶ್ಚಿತವಾದ ವಿವಾಹವು ಅನ್ಯರಿಂದ ತಪ್ಪಿಹೋಗಬಹುದು
Daily Horoscope: ನಿಶ್ಚಿತವಾದ ವಿವಾಹವು ಅನ್ಯರಿಂದ ತಪ್ಪಿಹೋಗಬಹುದು
Daily Devotional: ಬ್ರಾಹ್ಮೀ ಮುಹೂರ್ತದ ಮಹತ್ವ ತಿಳಿದುಕೊಳ್ಳಿ
Daily Devotional: ಬ್ರಾಹ್ಮೀ ಮುಹೂರ್ತದ ಮಹತ್ವ ತಿಳಿದುಕೊಳ್ಳಿ
‘ಎಲ್ಲರಿಗೂ ಹೊಟ್ಟೆ ಉರಿ ಸರ್​’: ದರ್ಶನ್​ ನೋಡಲು ಬಂದ ಅಭಿಮಾನಿಯ ಮಾತು ಕೇಳಿ
‘ಎಲ್ಲರಿಗೂ ಹೊಟ್ಟೆ ಉರಿ ಸರ್​’: ದರ್ಶನ್​ ನೋಡಲು ಬಂದ ಅಭಿಮಾನಿಯ ಮಾತು ಕೇಳಿ
ಬಲವಾದ ಕಾರಣ ನೀಡಿ ದರ್ಶನ್​ ಭೇಟಿಗೆ ಬಂದ ಫ್ಯಾನ್ಸ್; ಆದರೆ ಸಿಗಲಿಲ್ಲ ಅವಕಾಶ
ಬಲವಾದ ಕಾರಣ ನೀಡಿ ದರ್ಶನ್​ ಭೇಟಿಗೆ ಬಂದ ಫ್ಯಾನ್ಸ್; ಆದರೆ ಸಿಗಲಿಲ್ಲ ಅವಕಾಶ
ಕಬಾಬ್​ಗೆ ಕಲರ್​ ಬಳಸಿದ್ರೆ 7 ವರ್ಷ ಜೈಲು, 10 ಲಕ್ಷ ರೂ.ದಂಡ
ಕಬಾಬ್​ಗೆ ಕಲರ್​ ಬಳಸಿದ್ರೆ 7 ವರ್ಷ ಜೈಲು, 10 ಲಕ್ಷ ರೂ.ದಂಡ