Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ ಸರ್ಕಾರ ವಿರುದ್ಧ ತಿರುಗಿನಿಂತ ಇಲಾನ್ ಮಸ್ಕ್ ಕಂಪನಿ; ಕರ್ನಾಟಕ ಹೈಕೋರ್ಟ್​​ನಲ್ಲಿ ಎಕ್ಸ್​​ನಿಂದ ಮೊಕದ್ದಮೆ

Elon Musk's X files law suit against Govt of India: ಇಲಾನ್ ಮಸ್ಕ್ ಅವರ ಸೋಷಿಯಲ್ ಮೀಡಿಯಾ ಸಂಸ್ಥೆಯಾದ ಎಕ್ಸ್ ಕರ್ನಾಟಕ ಹೈಕೋರ್ಟ್​​ನಲ್ಲಿ ಭಾರತ ಸರ್ಕಾರ ವಿರುದ್ಧ ಮೊಕದ್ದಮೆ ಸಲ್ಲಿಕೆ ಮಾಡಿದೆ. ಸರ್ಕಾರ ಸರಿಯಾದ ಕಾನೂನು ಪಾಲನೆ ಮಾಡದೆ ಕಂಟೆಂಟ್ ರೆಗ್ಯುಲೇಟ್ ಮಾಡುತ್ತಿದೆ ಎಂದು ಎಕ್ಸ್ ತನ್ನ ಕಾನೂನು ಮೊಕದ್ದಮೆಯಲ್ಲಿ ಆರೋಪಿಸಿದೆ. ಹಿಂದಿನ ಸುಪ್ರೀಮ್ ಕೋರ್ಟ್ ತೀರ್ಪೊಂದನ್ನು ಅದು ತನ್ನ ವಾದಕ್ಕೆ ಉಲ್ಲೇಖಿಸಿದೆ.

ಭಾರತ ಸರ್ಕಾರ ವಿರುದ್ಧ ತಿರುಗಿನಿಂತ ಇಲಾನ್ ಮಸ್ಕ್ ಕಂಪನಿ; ಕರ್ನಾಟಕ ಹೈಕೋರ್ಟ್​​ನಲ್ಲಿ ಎಕ್ಸ್​​ನಿಂದ ಮೊಕದ್ದಮೆ
ಇಲಾನ್ ಮಸ್ಕ್
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Mar 20, 2025 | 7:10 PM

ಬೆಂಗಳೂರು, ಮಾರ್ಚ್ 20: ಇಲಾನ್ ಮಸ್ಕ್ ಮಾಲಕತ್ವದ ಎಕ್ಸ್ ಸಂಸ್ಥೆ ಭಾರತ ಸರ್ಕಾರ ವಿರುದ್ಧ ಕಾನೂನು ಮೊಕದ್ದಮೆ (Lawsuit) ಹೂಡಿದೆ. ಸರಿಯಾದ ಕಾನೂನು ಪರಾಮರ್ಶೆ ಇಲ್ಲದೇ ಕಂಟೆಂಟ್ ವಿಚಾರದಲ್ಲಿ ಮಧ್ಯಪ್ರವೇಶಿಸುತ್ತಿದೆ ಎಂದು ಸರ್ಕಾರದ ವಿರುದ್ಧ ಎಕ್ಸ್ (X social media platform) ಸಂಸ್ಥೆ ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದೆ. ಸರ್ಕಾರವು ಮಾಹಿತಿ ತಂತ್ರಜ್ಞಾನ (ಐಟಿ) ಕಾಯ್ದೆಯನ್ನು, ಅದರಲ್ಲೂ ಹೆಚ್ಚಾಗಿ ಸೆಕ್ಷನ್ 79(3)(ಬಿ) ಅನ್ನು ತಪ್ಪಾಗಿ ಅರ್ಥೈಸುತ್ತಿದೆ ಎಂಬುದು ಎಕ್ಸ್​ನ ಪ್ರಮುಖ ಆರೋಪ. ತನ್ನ ಮೊಕದ್ದಮೆಗೆ ಪೂರಕವಾಗಿ ಅದು ಹಿಂದಿನ ಕೆಲ ಪ್ರಕರಣಗಳಲ್ಲಿ ಸುಪ್ರೀಂಕೋರ್ಟ್ ತೀರ್ಪುಗಳನ್ನು ಉಲ್ಲೇಖಿಸಿದೆ.

ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 69ಎನಲ್ಲಿ ಕಂಟೆಂಟ್ ಬ್ಲಾಕ್ ಮಾಡಲು ಕಾನೂನು ಪ್ರಕ್ರಿಯೆ ನಿರ್ದಿಷ್ಟಪಡಿಸಲಾಗಿದೆ. ಆದರೆ, ಸರ್ಕಾರವು 79(3)(ಬಿ) ಅನ್ನು ಬಳಸಿ ಎಕ್ಸ್ ಪ್ಲಾಟ್​​ಫಾರ್ಮ್​​ನಲ್ಲಿ ಕಂಟೆಂಟ್ ಅಥವಾ ಪೋಸ್ಟ್​​ಗಳನ್ನು ತೆಗೆದುಹಾಕುವ ಕೆಲಸ ಮಾಡುತ್ತಿದೆ ಎಂದು ಎಕ್ಸ್ ದೂರಿದೆ.

2015ರಲ್ಲಿ ಶ್ರೇಯಾ ಸಿಂಘಲ್ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ನೀಡಿದ ತೀರ್ಪನ್ನು ಎಕ್ಸ್ ಉಲ್ಲೇಖಿಸಿದೆ. ಸೆಕ್ಷನ್ 69ಎ ಅಡಿಯಲ್ಲಿ ನಿರ್ದಿಷ್ಟಪಡಿಸಲಾದ ಕಾನೂನು ಮಾರ್ಗಗಳ ಮೂಲಕ ಕಂಟೆಂಟ್ ಅನ್ನು ನಿರ್ಬಂಧಿಸಬಹುದು ಎಂದು ಸುಪ್ರೀಂಕೋರ್ಟ್ ಆ ಪ್ರಕರಣದಲ್ಲಿ ನೀಡಿದ ತೀರ್ಪಿನಲ್ಲಿ ತಿಳಿಸಿತ್ತು. ಆದರೆ, ಸರ್ಕಾರ ಈ ನಿಯಮವನ್ನು ಗಾಳಿಗೆ ತೂರಿದೆ ಎಂಬುದು ಎಕ್ಸ್ ಮಾಡುತ್ತಿರುವ ಆರೋಪ.

ಇದನ್ನೂ ಓದಿ
Image
ಕರ್ನಾಟಕದಲ್ಲಿ ಪೆಟ್ರೋಲ್​​ಗೆ ಕೇಂದ್ರ, ರಾಜ್ಯದ ತೆರಿಗೆಗಳೆಷ್ಟು?
Image
ಪತಂಜಲಿ ಹೆಲ್ತ್​​ಕೇರ್​​ನಿಂದ ಹೀಲಿಂಗ್, ಪ್ರಕೃತಿ ಚಿಕಿತ್ಸೆ
Image
ಸ್ಟಾರ್​​ಲಿಂಕ್ ಜೊತೆ ಏರ್ಟೆಲ್, ಜಿಯೋ ಒಪ್ಪಂದ
Image
ಅಪ್ಪನ ಗಿಫ್ಟ್; ರೋಷನಿ ಭಾರತದ ನಂ.1 ಶ್ರೀಮಂತ ಮಹಿಳೆ

ಇದನ್ನೂ ಓದಿ: ಕರ್ನಾಟಕದಲ್ಲಿ ಒಂದು ಲೀಟರ್ ಪೆಟ್ರೋಲ್​​ಗೆ ಕೇಂದ್ರ ಮತ್ತು ರಾಜ್ಯದ ತೆರಿಗೆ ಎಷ್ಟು? ತೆರಿಗೆ ಬಿಟ್ಟರೆ ಮೂಲ ಪೆಟ್ರೋಲ್ ಬೆಲೆ ಎಷ್ಟು? ಇಲ್ಲಿದೆ ಡೀಟೇಲ್ಸ್

ಸೆಕ್ಷನ್ 79(3)(ಬಿ) ಏನು ಹೇಳುತ್ತದೆ?

ಮಾಹಿತಿ ತಂತ್ರಜ್ಞಾನ ಕಾಯ್ದೆ ಸೆಕ್ಷನ್ 79 (3ಬಿ) ಪ್ರಕಾರ, ಆನ್​​ಲೈನ್ ಪ್ಲಾಟ್​​ಫಾರ್ಮ್​​ಗಳು ಕೋರ್ಟ್ ಅಥವಾ ಸರ್ಕಾರದಿಂದ ಆದೇಶ ಬಂದರೆ ಅಕ್ರಮ ಕಂಟೆಂಟ್ ಅನ್ನು ತೆಗೆದುಹಾಕುವುದು ಕಡ್ಡಾಯವಾಗುತ್ತದೆ. ಈ ಆದೇಶವನ್ನು 36 ಗಂಟೆಯೊಳಗೆ ಪಾಲಿಸದೇ ಹೋದರೆ ಸೆಕ್ಷನ್ 79(1)ರ ರಕ್​ಷಣೆ ಸಿಗುವುದಿಲ್ಲ. ನಂತರ ಹಲವಾರು ಕಾನೂನು ಪ್ರಕರಣಗಳನ್ನು ಎದುರಿಸಬೇಕಾಗಬಹುದು. ಸೆಕ್ಷನ್ 79(1) ಪ್ರಕಾರ, ಆನ್​​ಲೈನ್ ಪ್ಲಾಟ್​​​ಫಾರ್ಮ್​​ಗಳಲ್ಲಿ ಪ್ರಕಟವಾಗುವ ಥರ್ಡ್ ಪಾರ್ಟಿ ಕಂಟೆಂಟ್​ಗಳಿಂದ ಏನಾದರೂ ಸಮಸ್ಯೆ ಆದಲ್ಲಿ ಆ ಆನ್​​​ಲೈನ್ ಪ್ಲಾಟ್​​ಫಾರ್ಮ್​​ಗೆ ಬಾಧ್ಯತೆ ಇರುವುದಿಲ್ಲ. ಆ ಮಟ್ಟಿಗೆ ಕಾನೂನಿನ ಸುರಕ್ಷತೆ ಇರುತ್ತದೆ. ಅದಿಲ್ಲದೇ ಹೋಗಿದ್ದರೆ ಎಕ್ಸ್, ಫೇಸ್​ಬುಕ್ ಇತ್ಯಾದಿಯಲ್ಲಿ ಪ್ರಕಟವಾಗುವ ಹೇರಳ ವಿವಾದಾತ್ಮಕ ಪೋಸ್ಟ್​​​ಗಳಿಗೆಲ್ಲಾ ಆ ಪ್ಲಾಟ್​​ಫಾರ್ಮ್​​ಗಳು ಹೊಣೆಯಾಗಬೇಕಾಗುತ್ತಿತ್ತು.

ಈ ಕಾನೂನನ್ನು ಸರ್ಕಾರ ದುರ್ಬಳಕೆ ಮಾಡಿಕೊಳ್ಳುತ್ತಿದೆ. ಈ ಕಾನೂನು ಸರ್ಕಾರಕ್ಕೆ ಕಂಟೆಂಟ್ ನಿರ್ಬಂಧಿಸಲು ಸ್ವತಂತ್ರ ಅಧಿಕಾರ ನೀಡುವುದಿಲ್ಲ. ಒಂದು ಕಂಟೆಂಟ್ ನಿರ್ಬಂಧಿಸಲು ಅಥವಾ ಬ್ಲಾಕ್ ಮಾಡಲು ಸರಿಯಾದ ಸಾಕ್ಷ್ಯಾಧಾರ ಒದಗಿಸುವುದು ಇತ್ಯಾದಿ ಕಾನೂನು ಮಾರ್ಗಗಳನ್ನು ಸರ್ಕಾರ ಅನುಸರಿಸಬೇಕು. ಅದು ಬಿಟ್ಟು ಏಕಪಕ್ಷೀಯವಾಗಿ ಕಂಟೆಂಟ್ ತೆಗೆಯಲು ಮುಂದಾಗುವುದು ತಪ್ಪು. ಇದು ಸುಪ್ರೀಂಕೋರ್ಟ್ ನೀಡಿದ ತೀರ್ಪಿನ ಉಲ್ಲಂಘನೆ ಆಗುತ್ತದೆ ಎಂದು ಎಕ್ಸ್ ವಾದಿಸಿದೆ.

ಇದನ್ನೂ ಓದಿ: Patanjali Healthcare: ಪತಂಜಲಿ ಹೆಲ್ತ್​​ಕೇರ್​​ನಿಂದ ಸಮಗ್ರ ಆರೋಗ್ಯ; ಪ್ರಕೃತಿ ಚಿಕಿತ್ಸೆ, ವೆಲ್ನೆಸ್ ಸೆಂಟರ್, ಹೀಲಿಂಗ್ ಪ್ರೋಗ್ರಾಮ್, ಇನ್ನೂ ಅನೇಕ

ಕರ್ನಾಟಕ ಹೈಕೋರ್ಟ್​​​ನಲ್ಲಿ ಎಕ್ಸ್ ಮೊಕದ್ದಮೆ ಹಾಕಿದ್ದೇಕೆ?

ಎಕ್ಸ್ ಸಂಸ್ಥೆಯ ಭಾರತದ ಮುಖ್ಯ ಕಚೇರಿ ಇರುವುದು ಬೆಂಗಳೂರಿನಲ್ಲಿ. ಹೀಗಾಗಿ, ಅದು ಕರ್ನಾಟಕ ಹೈಕೋರ್ಟ್​ನಲ್ಲಿ ಲಾಸೂಟ್ ಸಲ್ಲಿಕೆ ಮಾಡಿದೆ. ಇದರ ವಿಚಾರಣೆಯನ್ನು ಕೋರ್ಟ್ ಯಾವಾಗ ತೆಗೆದುಕೊಳ್ಳುತ್ತದೆ ಇನ್ನೂ ಗೊತ್ತಾಗಿಲ್ಲ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಪ್ರತಿಭಟನೆಗೆ ಬಂದ್ ಬಿಟ್ಟು ಪರ್ಯಾಯ ದಾರಿ ಹುಡುಕಬೇಕು: ಆಟೋರಿಕ್ಷಾ ಚಾಲಕರು
ಪ್ರತಿಭಟನೆಗೆ ಬಂದ್ ಬಿಟ್ಟು ಪರ್ಯಾಯ ದಾರಿ ಹುಡುಕಬೇಕು: ಆಟೋರಿಕ್ಷಾ ಚಾಲಕರು
ಕಮೆಂಟೇಟರ್ ಜಾನಿ ನಿಜವಾದ ಹೆಸರೇನು? ಈ ಹೆಸರು ಬಂದಿದ್ದು ಹೇಗೆ?
ಕಮೆಂಟೇಟರ್ ಜಾನಿ ನಿಜವಾದ ಹೆಸರೇನು? ಈ ಹೆಸರು ಬಂದಿದ್ದು ಹೇಗೆ?
ಆಣೆ ಪ್ರಮಾಣ ಮಾಡುವುದು ಯಾಕೆ? ಆಣೆ ತಪ್ಪಿದರೆ ಏನಾಗುತ್ತದೆ ನೋಡಿ
ಆಣೆ ಪ್ರಮಾಣ ಮಾಡುವುದು ಯಾಕೆ? ಆಣೆ ತಪ್ಪಿದರೆ ಏನಾಗುತ್ತದೆ ನೋಡಿ
ರವಿ ಮೀನ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
ರವಿ ಮೀನ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
‘ಕಾವೇರಿ ಆರತಿ’: ಜಲ ರಕ್ಷಣೆ ಬಗ್ಗೆ ಡಿಕೆ ಶಿವಕುಮಾರ್​​ ಪ್ರತಿಜ್ಞಾವಿಧಿ
‘ಕಾವೇರಿ ಆರತಿ’: ಜಲ ರಕ್ಷಣೆ ಬಗ್ಗೆ ಡಿಕೆ ಶಿವಕುಮಾರ್​​ ಪ್ರತಿಜ್ಞಾವಿಧಿ
ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ