AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PF Interest Rate: ಇಪಿಎಫ್​ ಬಡ್ಡಿ ದರ ಶೇ 8.1ಕ್ಕೆ ಇಳಿಕೆ; 45 ವರ್ಷಗಳಲ್ಲಿ ಕನಿಷ್ಠ ಮಟ್ಟಕ್ಕೆ

ಎಂಪ್ಲಾಯೀಸ್​ ಪ್ರಾವಿಡೆಂಟ್​ ಫಂಡ್​ ಬಡ್ಡಿ ದರವನ್ನು ಶೇ 7.1ಕ್ಕೆ ನಿಗದಿ ಮಾಡಲಾಗಿದ್ದು, ಈ ಮೂಲಕವಾಗಿ 45 ವರ್ಷಗಳಲ್ಲೇ ಕನಿಷ್ಠ ಮಟ್ಟವನ್ನು ಮುಟ್ಟಿದೆ.

PF Interest Rate: ಇಪಿಎಫ್​ ಬಡ್ಡಿ ದರ ಶೇ 8.1ಕ್ಕೆ ಇಳಿಕೆ; 45 ವರ್ಷಗಳಲ್ಲಿ ಕನಿಷ್ಠ ಮಟ್ಟಕ್ಕೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Mar 12, 2022 | 2:34 PM

Share

2021-22ರ ಉದ್ಯೋಗಿಗಳ ಭವಿಷ್ಯ ನಿಧಿ (EPF) ಬಡ್ಡಿ ದರವನ್ನು ಈಗಿನ ಅಸ್ತಿತ್ವದಲ್ಲಿರುವ ಶೇಕಡಾ 8.5ರಿಂದ ಶೇ 8.1ಕ್ಕೆ ಶನಿವಾರ ಕಡಿತಗೊಳಿಸಲಾಗಿದೆ. 1977-78ರಲ್ಲಿ ಶೇ 8ರಷ್ಟಿದ್ದ ನಂತರದಲ್ಲಿ ಅತ್ಯಂತ ಕಡಿಮೆ ದರ ಇದಾಗಿದೆ ಎಂದು ಕಾರ್ಮಿಕ ಸಚಿವಾಲಯದ ಮೂಲಗಳು ತಿಳಿಸಿವೆ. ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆಗೆ (ಇಪಿಎಫ್‌ಒ) ಸುಮಾರು ಐದು ಕೋಟಿ ಚಂದಾದಾರರಿದ್ದಾರೆ. ಗುವಾಹತಿಯಲ್ಲಿ ನಡೆದ ಇಪಿಎಫ್‌ಒ ಕೇಂದ್ರೀಯ ಮಂಡಳಿ ಟ್ರಸ್ಟಿಗಳ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಮಂಡಳಿಯ ಶಿಫಾರಸನ್ನು ಶೀಘ್ರದಲ್ಲೇ ಹಣಕಾಸು ಸಚಿವಾಲಯಕ್ಕೆ ಕಳುಹಿಸಲಾಗುವುದು. 2020-21ರಲ್ಲಿ ಬಡ್ಡಿ ದರವು ಶೇಕಡಾ 8.5ರಷ್ಟಿತ್ತು. ಒಮ್ಮೆ ಹಣಕಾಸು ಸಚಿವಾಲಯವು ಮಂಡಳಿಯ ನಿರ್ಧಾರವನ್ನು ಅನುಮೋದಿಸಿದ ನಂತರ, ಇಪಿಎಫ್​ಒ ​​ತನ್ನ ಕ್ಷೇತ್ರ ಕಚೇರಿಗಳಿಗೆ 2021-22ರ ಹೊಸ ದರದಲ್ಲಿ ಶೇ 8.1ರ ಬಡ್ಡಿ ಆದಾಯವನ್ನು ಚಂದಾದಾರರ ಖಾತೆಗಳಲ್ಲಿ ಕ್ರೆಡಿಟ್ ಮಾಡಲು ನಿರ್ದೇಶಿಸುತ್ತದೆ.

2020ರ ಮಾರ್ಚ್​ನಲ್ಲಿ ಇಪಿಎಫ್‌ಒ ಭವಿಷ್ಯ ನಿಧಿ ಠೇವಣಿಗಳ ಮೇಲಿನ ಬಡ್ಡಿ ದರವನ್ನು 2018-19ಕ್ಕೆ ಒದಗಿಸಿದ ಶೇ 8.65ರಿಂದ 2019-20ಕ್ಕೆ ಏಳು ವರ್ಷಗಳ ಕನಿಷ್ಠ ಶೇ 8.5ಕ್ಕೆ ಇಳಿಸಿದೆ. 2019-20ಕ್ಕೆ ಒದಗಿಸಲಾದ ಇಪಿಎಫ್ ಬಡ್ಡಿ ದರವು 2012-13ರ ನಂತರ ಅತ್ಯಂತ ಕಡಿಮೆಯಾಗಿದ್ದು, ಅದನ್ನು ಶೇ.8.5ಕ್ಕೆ ಇಳಿಸಲಾಗಿದೆ.

ಇದನ್ನೂ ಓದಿ: LIC Premium: ಇಪಿಎಫ್​ನಿಂದ ಎಲ್​ಐಸಿ ಪ್ರೀಮಿಯಂ ಪಾವತಿಸುವುದು ಹೇಗೆ ಎಂಬ ವಿವರ ಇಲ್ಲಿದೆ

Published On - 2:00 pm, Sat, 12 March 22

Follow Us
ದೇವೇಗೌಡರ ಪತ್ನಿ ಚೆನ್ನಮ್ಮ ಅವರ ಆರೋಗ್ಯ ವಿಚಾರಿಸಿದ ಆರ್. ಅಶೋಕ್
ದೇವೇಗೌಡರ ಪತ್ನಿ ಚೆನ್ನಮ್ಮ ಅವರ ಆರೋಗ್ಯ ವಿಚಾರಿಸಿದ ಆರ್. ಅಶೋಕ್
ನೀರಾವರಿ ಪೈಪ್‌ಲೈನ್ ಒಡೆದು ಆಕಾಶದೆತ್ತರಕ್ಕೆ ಚಿಮ್ಮಿದ ನೀರು
ನೀರಾವರಿ ಪೈಪ್‌ಲೈನ್ ಒಡೆದು ಆಕಾಶದೆತ್ತರಕ್ಕೆ ಚಿಮ್ಮಿದ ನೀರು
ಅಲೆಗಳ ಮಧ್ಯೆ ಮುಳುಗುತ್ತಿದ್ದ ಮಾನಸಿಕ ಅಸ್ವಸ್ಥನ ಪ್ರಾಣ ಉಳಿಸಿದ ಖಾಕಿ ಪಡೆ
ಅಲೆಗಳ ಮಧ್ಯೆ ಮುಳುಗುತ್ತಿದ್ದ ಮಾನಸಿಕ ಅಸ್ವಸ್ಥನ ಪ್ರಾಣ ಉಳಿಸಿದ ಖಾಕಿ ಪಡೆ
ಬಿಡದಿ ಟೌನ್‌ಶಿಪ್ ಯೋಜನೆ ಪರ ರೈತರಿಂದ ಭೂ ಪರಿಹಾರಕ್ಕೆ ಅರ್ಜಿ ಸಲ್ಲಿಕೆ
ಬಿಡದಿ ಟೌನ್‌ಶಿಪ್ ಯೋಜನೆ ಪರ ರೈತರಿಂದ ಭೂ ಪರಿಹಾರಕ್ಕೆ ಅರ್ಜಿ ಸಲ್ಲಿಕೆ
ಉಳ್ಳಾಲ ಕಡಲತೀರಕ್ಕೆ ಅಪ್ಪಳಿಸಿದ ಲಕ್ಷಾಂತರ ಬೂತಾಯಿ ಮೀನಿನ ರಾಶಿ
ಉಳ್ಳಾಲ ಕಡಲತೀರಕ್ಕೆ ಅಪ್ಪಳಿಸಿದ ಲಕ್ಷಾಂತರ ಬೂತಾಯಿ ಮೀನಿನ ರಾಶಿ
ಬೀದಿಬದಿ ವ್ಯಾಪಾರಿಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವುದು ಸರ್ಕಾರದ ಕರ್ತವ್ಯ
ಬೀದಿಬದಿ ವ್ಯಾಪಾರಿಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವುದು ಸರ್ಕಾರದ ಕರ್ತವ್ಯ
ದೇವೇಗೌಡರ ಪತ್ನಿ ಚೆನ್ನಮ್ಮ ಸ್ಥಿತಿ ಗಂಭೀರ: ಆಸ್ಪತ್ರೆಗೆ ಧಾವಿಸಿದ HDK
ದೇವೇಗೌಡರ ಪತ್ನಿ ಚೆನ್ನಮ್ಮ ಸ್ಥಿತಿ ಗಂಭೀರ: ಆಸ್ಪತ್ರೆಗೆ ಧಾವಿಸಿದ HDK
SIR ಮುಗಿದ ತಕ್ಷಣ ಜಿಬಿಎ ಎಲೆಕ್ಷನ್ ಎಂದ ಕೃಷ್ಣಬೈರೇಗೌಡ
SIR ಮುಗಿದ ತಕ್ಷಣ ಜಿಬಿಎ ಎಲೆಕ್ಷನ್ ಎಂದ ಕೃಷ್ಣಬೈರೇಗೌಡ
ಡಿಕೆಶಿ ಸಚಿವ ಸಂಪುಟ ವಿಸ್ತರಣೆ: ಹೊಸ ಮುಖಗಳಿಗೆ ಹೈಕಮಾಂಡ್​​ ಮಣೆ?
ಡಿಕೆಶಿ ಸಚಿವ ಸಂಪುಟ ವಿಸ್ತರಣೆ: ಹೊಸ ಮುಖಗಳಿಗೆ ಹೈಕಮಾಂಡ್​​ ಮಣೆ?
ಮುಗಿಲು ಮುಟ್ಟಿದ ಲಾವಣ್ಯ ತಾಯಿಯ ಆಕ್ರಂದನ
ಮುಗಿಲು ಮುಟ್ಟಿದ ಲಾವಣ್ಯ ತಾಯಿಯ ಆಕ್ರಂದನ