AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

GST: ಜಿಎಸ್​ಟಿ ಪರಿಹಾರದ ಎಲ್ಲಾ 16,982 ಕೋಟಿ ರೂ ಬಾಕಿ ಹಣ ಕೇಂದ್ರದಿಂದಲೇ ಪಾವತಿ

GST Compensation Due Amount: ಜಿಎಸ್​ಟಿ ಪರಿಹಾರದ ಬಾಕಿ ಹಣವಾದ 16,982 ಕೋಟಿ ರೂ ಅನ್ನು ಕೇಂದ್ರವೇ ತನ್ನ ಸ್ವಂತ ಜೇಬಿನಿಂದ ತುಂಬಿಸಿಕೊಡುತ್ತದೆ ಎಂದು ಜಿಎಸ್​ಟಿ ಕೌನ್ಸಿಲ್ ಸಭೆ ಬಳಿಕ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಸುಗ್ಗನಹಳ್ಳಿ ವಿಜಯಸಾರಥಿ
| Edited By: |

Updated on:Feb 18, 2023 | 6:23 PM

Share

ನವದೆಹಲಿ: ಬಾಕಿ ಉಳಿಸಿಕೊಳ್ಳಲಾಗಿರುವ ಜಿಎಸ್​ಟಿ (GST) ಪರಿಹಾರದ ಹಣವಾದ 16,982 ಕೋಟಿ ರೂ ಅನ್ನು ಕೇಂದ್ರ ಸರ್ಕಾರವೇ ಭರಿಸುತ್ತದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ. ಶನಿವಾರ ನಡೆದ ಜಿಎಸ್​ಟಿ ಕೌನ್ಸಿಲ್ ಸಭೆಯ ಬಳಿಕ ಕೇಂದ್ರ ಹಣಕಾಸು ಸಚಿವೆ ಈ ಸಂಗತಿಯನ್ನು ಮಾಧ್ಯಮಗಳ ಮುಂದೆ ಹೇಳಿದ್ದಾರೆ.

ಇವತ್ತಿನವರೆಗೆ ಜಿಎಸ್​ಟಿ ಪರಿಹಾರದ ಬಾಕಿ ಉಳಿದಿರುವ ಹಣವನ್ನು ತೀರಿಸಲಾಗುವುದು. ಅಂದರೆ, ಜಿಎಸ್​ಟಿ ಪರಿಹಾರದ ಇಡೀ ಬಾಕಿ ಮೊತ್ತವಾದ 16,982 ಕೋಟಿ ರೂ ಅನ್ನು ತುಂಬಿಸಿಕೊಡಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಸ್ಪಷ್ಟಪಡಿಸಿದ್ದಾರೆ.

ಪರಿಹಾರ ನಿಧಿಯಲ್ಲಿ ಈ ಹಣ ಇಲ್ಲದಿದ್ದರೂ ನಮ್ಮ ಸ್ವಂತ ಸಂಪನ್ಮೂಲಗಳ ಮೂಲಕ ಈ ಹಣವನ್ನು ಬಿಡುಗಡೆ ಮಾಡುತ್ತೇವೆ. ಭವಿಷ್ಯದ ಸೆಸ್ ಸಂಗ್ರಹದ ಮೂಲಕ ಈ ಹಣವನ್ನು ಮರಳಿ ತುಂಬಿಸಿಕೊಳ್ಳಲಾಗುವುದು ಎಂದೂ ಕೇಂದ್ರ ಹಣಕಾಸು ಸಚಿವೆ ತಿಳಿಸಿದ್ದಾರೆ.

ಜಿಎಸ್​ಟಿ ಜಾರಿಗೆ ಬಂದದ್ದು 2017ರಲ್ಲಿ. ಜಿಎಸ್​ಟಿ ಪರಿಹಾರ ಕಾಯ್ದೆಯು ಕೇಂದ್ರ ಸರ್ಕಾರಕ್ಕೆ ಸೆಸ್ ವಿಧಿಸುವ ಅವಕಾಶ ನೀಡುತ್ತದೆ. ಇದನ್ನು ರಾಜ್ಯಗಳಿಗೆ ವರ್ಗಾಯಿಸುತ್ತದೆ. 2017, ಜುಲೈ 1ರಿಂದ ಜಿಎಸ್​ಟಿ ಜಾರಿಯಾದಾಗಿನಿಂದ ರಾಜ್ಯ ಸರ್ಕಾರಗಳಿಗೆ ಆಗಿರುವ ಆದಾಯನಷ್ಟಕ್ಕೆ ಸರ್ಕಾರ ಈಗ ಪರಿಹಾರ ಕೊಡುತ್ತದೆ. ಇದು ಐದು ವರ್ಷಗಳಿಗೊಮ್ಮೆ ನೀಡಲಾಗುತ್ತದೆ. ನಿರ್ಮಲಾ ಸೀತಾರಾಮನ್ ಅವರು ಒಟ್ಟು 16,982 ಕೋಟಿ ರೂಪಾಯಿಯ ಜಿಎಸ್​ಟಿ ಪರಿಹಾರ ಮೊತ್ತ ಬಿಡುಗಡೆ ಮಾಡುವುದಾಗಿ ತಿಳಿಸಿದ್ದಾರೆ.

ಇದನ್ನೂ ಓದಿ: Adani Effect: ಅದಾನಿ ಷೇರು ಏನಾದರಾಗಲೀ, ಭಾರತದ ಬುಲ್​ಸ್ಟ್ರೀಟ್ ಜಗ್ಗೋದು ಕಷ್ಟ

ನವದೆಹಲಿಯಲ್ಲಿ ಇಂದು ನಡೆದ 49ನೇ ಜಿಎಸ್​ಟಿ ಕೌನ್ಸಿಲ್ ಸಭೆಯಲ್ಲಿ ವಿವಿಧ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಹಣಕಾಸು ಸಚಿವರು ಪಾಲ್ಗೊಂಡಿದ್ದರು.

ದ್ರವ್ಯ ಬೆಲ್ಲ, ಪೆನ್ಸಿಲ್ ಶಾರ್ಪ್ನರ್, ಹಾಗೂ ಕೆಲ ಟ್ರ್ಯಾಕಿಂಗ್ ಡಿವೈಸ್​ಗಳ ಮೇಲಿನ ಜಿಎಸ್​ಟಿಯನ್ನು ಕಡಿಮೆಗೊಳಿಸಲು ನಿರ್ಧರಿಸಲಾಗಿದೆ. ಸದ್ಯ ಇವುಗಳಿಗೆ ಶೇ. 18ರಷ್ಟು ಜಿಎಸ್​ಟಿ ಇದೆ. ಟ್ರ್ಯಾಕಿಂಗ್ ಸಾಧನಗಳು, ಟ್ಯಾಗ್​ಗಳಿಗೆ ತೆರಿಗೆ ಇರುವುದಿಲ್ಲ. ಹಾಗೆಯೇ, ಜಿಎಸ್​ಟಿ ರಿಟರ್ನ್ಸ್ ಅನ್ನು ವಿಳಂಬವಾಗಿ ಸಲ್ಲಿಕೆ ಮಾಡಿದಾಗ ಹೇರಲಾಗುವ ದಂಡ ಮೊತ್ತವನ್ನು ತಗ್ಗಿಸಲೂ ನಿರ್ಧರಿಸಲಾಗಿದೆ.

Published On - 5:38 pm, Sat, 18 February 23

Follow Us
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ