AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

GST: ಜಿಎಸ್​ಟಿ ಪರಿಹಾರದ ಎಲ್ಲಾ 16,982 ಕೋಟಿ ರೂ ಬಾಕಿ ಹಣ ಕೇಂದ್ರದಿಂದಲೇ ಪಾವತಿ

GST Compensation Due Amount: ಜಿಎಸ್​ಟಿ ಪರಿಹಾರದ ಬಾಕಿ ಹಣವಾದ 16,982 ಕೋಟಿ ರೂ ಅನ್ನು ಕೇಂದ್ರವೇ ತನ್ನ ಸ್ವಂತ ಜೇಬಿನಿಂದ ತುಂಬಿಸಿಕೊಡುತ್ತದೆ ಎಂದು ಜಿಎಸ್​ಟಿ ಕೌನ್ಸಿಲ್ ಸಭೆ ಬಳಿಕ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಸುಗ್ಗನಹಳ್ಳಿ ವಿಜಯಸಾರಥಿ
| Edited By: |

Updated on:Feb 18, 2023 | 6:23 PM

Share

ನವದೆಹಲಿ: ಬಾಕಿ ಉಳಿಸಿಕೊಳ್ಳಲಾಗಿರುವ ಜಿಎಸ್​ಟಿ (GST) ಪರಿಹಾರದ ಹಣವಾದ 16,982 ಕೋಟಿ ರೂ ಅನ್ನು ಕೇಂದ್ರ ಸರ್ಕಾರವೇ ಭರಿಸುತ್ತದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ. ಶನಿವಾರ ನಡೆದ ಜಿಎಸ್​ಟಿ ಕೌನ್ಸಿಲ್ ಸಭೆಯ ಬಳಿಕ ಕೇಂದ್ರ ಹಣಕಾಸು ಸಚಿವೆ ಈ ಸಂಗತಿಯನ್ನು ಮಾಧ್ಯಮಗಳ ಮುಂದೆ ಹೇಳಿದ್ದಾರೆ.

ಇವತ್ತಿನವರೆಗೆ ಜಿಎಸ್​ಟಿ ಪರಿಹಾರದ ಬಾಕಿ ಉಳಿದಿರುವ ಹಣವನ್ನು ತೀರಿಸಲಾಗುವುದು. ಅಂದರೆ, ಜಿಎಸ್​ಟಿ ಪರಿಹಾರದ ಇಡೀ ಬಾಕಿ ಮೊತ್ತವಾದ 16,982 ಕೋಟಿ ರೂ ಅನ್ನು ತುಂಬಿಸಿಕೊಡಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಸ್ಪಷ್ಟಪಡಿಸಿದ್ದಾರೆ.

ಪರಿಹಾರ ನಿಧಿಯಲ್ಲಿ ಈ ಹಣ ಇಲ್ಲದಿದ್ದರೂ ನಮ್ಮ ಸ್ವಂತ ಸಂಪನ್ಮೂಲಗಳ ಮೂಲಕ ಈ ಹಣವನ್ನು ಬಿಡುಗಡೆ ಮಾಡುತ್ತೇವೆ. ಭವಿಷ್ಯದ ಸೆಸ್ ಸಂಗ್ರಹದ ಮೂಲಕ ಈ ಹಣವನ್ನು ಮರಳಿ ತುಂಬಿಸಿಕೊಳ್ಳಲಾಗುವುದು ಎಂದೂ ಕೇಂದ್ರ ಹಣಕಾಸು ಸಚಿವೆ ತಿಳಿಸಿದ್ದಾರೆ.

ಜಿಎಸ್​ಟಿ ಜಾರಿಗೆ ಬಂದದ್ದು 2017ರಲ್ಲಿ. ಜಿಎಸ್​ಟಿ ಪರಿಹಾರ ಕಾಯ್ದೆಯು ಕೇಂದ್ರ ಸರ್ಕಾರಕ್ಕೆ ಸೆಸ್ ವಿಧಿಸುವ ಅವಕಾಶ ನೀಡುತ್ತದೆ. ಇದನ್ನು ರಾಜ್ಯಗಳಿಗೆ ವರ್ಗಾಯಿಸುತ್ತದೆ. 2017, ಜುಲೈ 1ರಿಂದ ಜಿಎಸ್​ಟಿ ಜಾರಿಯಾದಾಗಿನಿಂದ ರಾಜ್ಯ ಸರ್ಕಾರಗಳಿಗೆ ಆಗಿರುವ ಆದಾಯನಷ್ಟಕ್ಕೆ ಸರ್ಕಾರ ಈಗ ಪರಿಹಾರ ಕೊಡುತ್ತದೆ. ಇದು ಐದು ವರ್ಷಗಳಿಗೊಮ್ಮೆ ನೀಡಲಾಗುತ್ತದೆ. ನಿರ್ಮಲಾ ಸೀತಾರಾಮನ್ ಅವರು ಒಟ್ಟು 16,982 ಕೋಟಿ ರೂಪಾಯಿಯ ಜಿಎಸ್​ಟಿ ಪರಿಹಾರ ಮೊತ್ತ ಬಿಡುಗಡೆ ಮಾಡುವುದಾಗಿ ತಿಳಿಸಿದ್ದಾರೆ.

ಇದನ್ನೂ ಓದಿ: Adani Effect: ಅದಾನಿ ಷೇರು ಏನಾದರಾಗಲೀ, ಭಾರತದ ಬುಲ್​ಸ್ಟ್ರೀಟ್ ಜಗ್ಗೋದು ಕಷ್ಟ

ನವದೆಹಲಿಯಲ್ಲಿ ಇಂದು ನಡೆದ 49ನೇ ಜಿಎಸ್​ಟಿ ಕೌನ್ಸಿಲ್ ಸಭೆಯಲ್ಲಿ ವಿವಿಧ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಹಣಕಾಸು ಸಚಿವರು ಪಾಲ್ಗೊಂಡಿದ್ದರು.

ದ್ರವ್ಯ ಬೆಲ್ಲ, ಪೆನ್ಸಿಲ್ ಶಾರ್ಪ್ನರ್, ಹಾಗೂ ಕೆಲ ಟ್ರ್ಯಾಕಿಂಗ್ ಡಿವೈಸ್​ಗಳ ಮೇಲಿನ ಜಿಎಸ್​ಟಿಯನ್ನು ಕಡಿಮೆಗೊಳಿಸಲು ನಿರ್ಧರಿಸಲಾಗಿದೆ. ಸದ್ಯ ಇವುಗಳಿಗೆ ಶೇ. 18ರಷ್ಟು ಜಿಎಸ್​ಟಿ ಇದೆ. ಟ್ರ್ಯಾಕಿಂಗ್ ಸಾಧನಗಳು, ಟ್ಯಾಗ್​ಗಳಿಗೆ ತೆರಿಗೆ ಇರುವುದಿಲ್ಲ. ಹಾಗೆಯೇ, ಜಿಎಸ್​ಟಿ ರಿಟರ್ನ್ಸ್ ಅನ್ನು ವಿಳಂಬವಾಗಿ ಸಲ್ಲಿಕೆ ಮಾಡಿದಾಗ ಹೇರಲಾಗುವ ದಂಡ ಮೊತ್ತವನ್ನು ತಗ್ಗಿಸಲೂ ನಿರ್ಧರಿಸಲಾಗಿದೆ.

Published On - 5:38 pm, Sat, 18 February 23

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!