AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

GST: ಜಿಎಸ್​ಟಿ ಪರಿಹಾರದ ಎಲ್ಲಾ 16,982 ಕೋಟಿ ರೂ ಬಾಕಿ ಹಣ ಕೇಂದ್ರದಿಂದಲೇ ಪಾವತಿ

GST Compensation Due Amount: ಜಿಎಸ್​ಟಿ ಪರಿಹಾರದ ಬಾಕಿ ಹಣವಾದ 16,982 ಕೋಟಿ ರೂ ಅನ್ನು ಕೇಂದ್ರವೇ ತನ್ನ ಸ್ವಂತ ಜೇಬಿನಿಂದ ತುಂಬಿಸಿಕೊಡುತ್ತದೆ ಎಂದು ಜಿಎಸ್​ಟಿ ಕೌನ್ಸಿಲ್ ಸಭೆ ಬಳಿಕ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

Follow us
ಸುಗ್ಗನಹಳ್ಳಿ ವಿಜಯಸಾರಥಿ
| Updated By: ಅಕ್ಷಯ್​ ಪಲ್ಲಮಜಲು​​

Updated on:Feb 18, 2023 | 6:23 PM

ನವದೆಹಲಿ: ಬಾಕಿ ಉಳಿಸಿಕೊಳ್ಳಲಾಗಿರುವ ಜಿಎಸ್​ಟಿ (GST) ಪರಿಹಾರದ ಹಣವಾದ 16,982 ಕೋಟಿ ರೂ ಅನ್ನು ಕೇಂದ್ರ ಸರ್ಕಾರವೇ ಭರಿಸುತ್ತದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ. ಶನಿವಾರ ನಡೆದ ಜಿಎಸ್​ಟಿ ಕೌನ್ಸಿಲ್ ಸಭೆಯ ಬಳಿಕ ಕೇಂದ್ರ ಹಣಕಾಸು ಸಚಿವೆ ಈ ಸಂಗತಿಯನ್ನು ಮಾಧ್ಯಮಗಳ ಮುಂದೆ ಹೇಳಿದ್ದಾರೆ.

ಇವತ್ತಿನವರೆಗೆ ಜಿಎಸ್​ಟಿ ಪರಿಹಾರದ ಬಾಕಿ ಉಳಿದಿರುವ ಹಣವನ್ನು ತೀರಿಸಲಾಗುವುದು. ಅಂದರೆ, ಜಿಎಸ್​ಟಿ ಪರಿಹಾರದ ಇಡೀ ಬಾಕಿ ಮೊತ್ತವಾದ 16,982 ಕೋಟಿ ರೂ ಅನ್ನು ತುಂಬಿಸಿಕೊಡಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಸ್ಪಷ್ಟಪಡಿಸಿದ್ದಾರೆ.

ಪರಿಹಾರ ನಿಧಿಯಲ್ಲಿ ಈ ಹಣ ಇಲ್ಲದಿದ್ದರೂ ನಮ್ಮ ಸ್ವಂತ ಸಂಪನ್ಮೂಲಗಳ ಮೂಲಕ ಈ ಹಣವನ್ನು ಬಿಡುಗಡೆ ಮಾಡುತ್ತೇವೆ. ಭವಿಷ್ಯದ ಸೆಸ್ ಸಂಗ್ರಹದ ಮೂಲಕ ಈ ಹಣವನ್ನು ಮರಳಿ ತುಂಬಿಸಿಕೊಳ್ಳಲಾಗುವುದು ಎಂದೂ ಕೇಂದ್ರ ಹಣಕಾಸು ಸಚಿವೆ ತಿಳಿಸಿದ್ದಾರೆ.

ಜಿಎಸ್​ಟಿ ಜಾರಿಗೆ ಬಂದದ್ದು 2017ರಲ್ಲಿ. ಜಿಎಸ್​ಟಿ ಪರಿಹಾರ ಕಾಯ್ದೆಯು ಕೇಂದ್ರ ಸರ್ಕಾರಕ್ಕೆ ಸೆಸ್ ವಿಧಿಸುವ ಅವಕಾಶ ನೀಡುತ್ತದೆ. ಇದನ್ನು ರಾಜ್ಯಗಳಿಗೆ ವರ್ಗಾಯಿಸುತ್ತದೆ. 2017, ಜುಲೈ 1ರಿಂದ ಜಿಎಸ್​ಟಿ ಜಾರಿಯಾದಾಗಿನಿಂದ ರಾಜ್ಯ ಸರ್ಕಾರಗಳಿಗೆ ಆಗಿರುವ ಆದಾಯನಷ್ಟಕ್ಕೆ ಸರ್ಕಾರ ಈಗ ಪರಿಹಾರ ಕೊಡುತ್ತದೆ. ಇದು ಐದು ವರ್ಷಗಳಿಗೊಮ್ಮೆ ನೀಡಲಾಗುತ್ತದೆ. ನಿರ್ಮಲಾ ಸೀತಾರಾಮನ್ ಅವರು ಒಟ್ಟು 16,982 ಕೋಟಿ ರೂಪಾಯಿಯ ಜಿಎಸ್​ಟಿ ಪರಿಹಾರ ಮೊತ್ತ ಬಿಡುಗಡೆ ಮಾಡುವುದಾಗಿ ತಿಳಿಸಿದ್ದಾರೆ.

ಇದನ್ನೂ ಓದಿ: Adani Effect: ಅದಾನಿ ಷೇರು ಏನಾದರಾಗಲೀ, ಭಾರತದ ಬುಲ್​ಸ್ಟ್ರೀಟ್ ಜಗ್ಗೋದು ಕಷ್ಟ

ನವದೆಹಲಿಯಲ್ಲಿ ಇಂದು ನಡೆದ 49ನೇ ಜಿಎಸ್​ಟಿ ಕೌನ್ಸಿಲ್ ಸಭೆಯಲ್ಲಿ ವಿವಿಧ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಹಣಕಾಸು ಸಚಿವರು ಪಾಲ್ಗೊಂಡಿದ್ದರು.

ದ್ರವ್ಯ ಬೆಲ್ಲ, ಪೆನ್ಸಿಲ್ ಶಾರ್ಪ್ನರ್, ಹಾಗೂ ಕೆಲ ಟ್ರ್ಯಾಕಿಂಗ್ ಡಿವೈಸ್​ಗಳ ಮೇಲಿನ ಜಿಎಸ್​ಟಿಯನ್ನು ಕಡಿಮೆಗೊಳಿಸಲು ನಿರ್ಧರಿಸಲಾಗಿದೆ. ಸದ್ಯ ಇವುಗಳಿಗೆ ಶೇ. 18ರಷ್ಟು ಜಿಎಸ್​ಟಿ ಇದೆ. ಟ್ರ್ಯಾಕಿಂಗ್ ಸಾಧನಗಳು, ಟ್ಯಾಗ್​ಗಳಿಗೆ ತೆರಿಗೆ ಇರುವುದಿಲ್ಲ. ಹಾಗೆಯೇ, ಜಿಎಸ್​ಟಿ ರಿಟರ್ನ್ಸ್ ಅನ್ನು ವಿಳಂಬವಾಗಿ ಸಲ್ಲಿಕೆ ಮಾಡಿದಾಗ ಹೇರಲಾಗುವ ದಂಡ ಮೊತ್ತವನ್ನು ತಗ್ಗಿಸಲೂ ನಿರ್ಧರಿಸಲಾಗಿದೆ.

Published On - 5:38 pm, Sat, 18 February 23

ಆಪರೇಷನ್ ಆಗಿದೆ, ಆರೋಗ್ಯ ಸರಿಯಿಲ್ಲ: ವಿನೋದ್ ರಾಜ್​
ಆಪರೇಷನ್ ಆಗಿದೆ, ಆರೋಗ್ಯ ಸರಿಯಿಲ್ಲ: ವಿನೋದ್ ರಾಜ್​
ಭಾರತ-ಪಾಕ್​ ಗಡಿಯಿಂದ Tv9 ಗ್ರೌಂಡ್​ ರಿಪೋರ್ಟ್​: ಸನ್ನದ್ಧವಾಗಿರುವ BSF ಯೋಧ
ಭಾರತ-ಪಾಕ್​ ಗಡಿಯಿಂದ Tv9 ಗ್ರೌಂಡ್​ ರಿಪೋರ್ಟ್​: ಸನ್ನದ್ಧವಾಗಿರುವ BSF ಯೋಧ
ಐಪಿಎಲ್​ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ
ಐಪಿಎಲ್​ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ
ಡಾ.ರಾಜ್ ಕುಟುಂಬದ ಜೊತೆ ನಾವು ಸದಾ ಇರುತ್ತೇವೆ: ಡಿಕೆ ಶಿವಕುಮಾರ್
ಡಾ.ರಾಜ್ ಕುಟುಂಬದ ಜೊತೆ ನಾವು ಸದಾ ಇರುತ್ತೇವೆ: ಡಿಕೆ ಶಿವಕುಮಾರ್
ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್​ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ
ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್​ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ
ಕರ್ನಾಟಕದಲ್ಲಿ ನೆಲೆಸಿರುವ ಪಾಕ್​ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ
ಕರ್ನಾಟಕದಲ್ಲಿ ನೆಲೆಸಿರುವ ಪಾಕ್​ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ
ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ
ಕೆಲವರು ಚಿಲ್ಲರೆ ಹೇಳಿಕೆ ಕೊಡುತ್ತಿದ್ದಾರೆ: ಮತ್ತೆ ಗುಡುಗಿದ ಡಿಕೆಶಿ
ಕೆಲವರು ಚಿಲ್ಲರೆ ಹೇಳಿಕೆ ಕೊಡುತ್ತಿದ್ದಾರೆ: ಮತ್ತೆ ಗುಡುಗಿದ ಡಿಕೆಶಿ