AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IDBI Bank Privatisation: ಐಡಿಬಿಐ ಬ್ಯಾಂಕ್ ಖಾಸಗೀಕರಣಕ್ಕೆ ಜುಲೈ ಕೊನೆ ಹೊತ್ತಿಗೆ ಆಸಕ್ತಿ ವ್ಯಕ್ತಪಡಿಸುವಿಕೆ ಆಹ್ವಾನ ಸಾಧ್ಯತೆ

ಐಡಿಬಿಐ ಬ್ಯಾಂಕ್ ಖಾಸಗೀಕರಣಕ್ಕೆ ಜುಲೈ ಕೊನೆಗೆ ಆಸಕ್ತಿ ವ್ಯಕ್ತಪಡಿಸುವಿಕೆ ಆಹ್ವಾನಿಸುವ ಸಾಧ್ಯತೆ ಇದೆ ಎಂದು ವರದಿಗಳಾಗಿವೆ. ಆ ಬಗ್ಗೆ ಮಾಹಿತಿ ಇಲ್ಲಿದೆ.

IDBI Bank Privatisation: ಐಡಿಬಿಐ ಬ್ಯಾಂಕ್ ಖಾಸಗೀಕರಣಕ್ಕೆ ಜುಲೈ ಕೊನೆ ಹೊತ್ತಿಗೆ ಆಸಕ್ತಿ ವ್ಯಕ್ತಪಡಿಸುವಿಕೆ ಆಹ್ವಾನ ಸಾಧ್ಯತೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Jun 11, 2022 | 4:19 PM

Share

ಕಳೆದ ಕೆಲ ಸಮಯದಿಂದಲೂ ಐಡಿಬಿಐ ಬ್ಯಾಂಕ್​ನ ಖಾಸಗೀಕರಣಕ್ಕಾಗಿ (Privatisation) ಕೇಂದ್ರ ಸರ್ಕಾರದಿಂದ ಪ್ರಯತ್ನ ನಡೆಯುತ್ತಿದೆ. ಅದರ ಹೂಡಿಕೆ ಹಿಂತೆಗೆತಕ್ಕಾಗಿ ತನ್ನ ಪಟ್ಟಿಯಲ್ಲಿ ಸೇರಿಸಿಕೊಂಡಿದೆ. ಹೂಡಿಕೆ ಮತ್ತು ಸಾರ್ವಜನಿಕ ಆಸ್ತಿ ನಿರ್ವಹಣೆ ಇಲಾಖೆ (DIPAM) ಸದ್ಯಕ್ಕೆ ಈ ಬ್ಯಾಂಕ್​ನ ಮಾರಾಟಕ್ಕಾಗಿ ರೋಡ್​ ಶೋ ನಡೆಸಲಾಗುತ್ತದೆ. ಭಾರತದ ಬಂಡವಾಳ ಹಿಂತೆಗೆತ ಗುರಿಯ ವಿಚಾರದಲ್ಲಿ ಇದು ಮತ್ತೊಂದು ಮೈಲುಗಲ್ಲು ಆಗಲಿದೆ. ಸರ್ಕಾರವು ಯಾವ ಪ್ರಮಾಣದ ಷೇರನ್ನು ಮಾರಾಟ ಮಾಡುತ್ತದೆ ಎಂಬುದು ರೋಡ್ ಶೋ ಮುಗಿದ ಮೇಲೆ ತಿಳಿಯುತ್ತದೆ.

ಈ ಬಗ್ಗೆ ಏಪ್ರಿಲ್​ನಲ್ಲಿ ಕೇಂದ್ರ ಹೇಳಿತ್ತು. ಸದ್ಯಕ್ಕೆ ಅಮೆರಿಕದಲ್ಲಿ ರೋಡ್​ ಶೋಗೆ ಸಿದ್ಧತೆಯನ್ನು ಸರ್ಕಾರವು ನಡೆಸುತ್ತಿದೆ ಎಂದು ಪಿಟಿಐ ಜೂನ್​ 10ನೇ ತಾರೀಕು ವರದಿ ಮಾಡಿದೆ. ಈ ರೀತಿಯಾಗಿ ಇನ್ನೂ ಹೂಡಿಕೆದಾರರ ಇಂಥ ಹಲವು ಸಭೆಗಳನ್ನು ನಡೆಸಿದ ನಂತರ ಐಡಿಬಿಐ ಬ್ಯಾಂಕ್​ ಷೇರಿನ ಮಾರಾಟದ ವಗ್ಗೆ ಅಂತಿಮಗೊಳಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

“ಐಡಿಬಿಐ ಸ್ಟ್ರಾಟೆಜಿಕ್ ಮಾರಾಟದ ಬಗ್ಗೆ ಆರ್​ಬಿಐ ಜತೆ ಇನ್ನೂ ಒಂದು ಸುತ್ತಿನ ಚರ್ಚೆ ನಡೆಸಬೇಕಾಗಬಹುದು. ಆಸಕ್ತಿ ವ್ಯಕ್ತಪಡಿಸುವಿಕೆ (EoI) ಜುಲೈ ಕೊನೆಗೆ ಆಹ್ವಾನಿಸಬಹುದು,” ಎಂದು ಅಧಿಕಾರಿಗಳು ಹೇಳಿದ್ದಾರೆ. ಈ ಹಿಂದೆ ಮೂಲಗಳ ಪ್ರಕಾರ, ಮೇ ತಿಂಗಳಲ್ಲಿ ಸರ್ಕಾರದಿಂದ ಆಸಕ್ತಿ ವ್ಯಕ್ತಪಡಿಸುವಿಕೆ ಆಹ್ವಾನಿಸಿ, ಪ್ರಸಕ್ತ ಹಣಕಾಸು ವರ್ಷ 2022-23ರಲ್ಲಿ ಪೂರ್ಣಗೊಳಿಸಲು ಬಯಸಿತ್ತು.

ಅಧಿಕಾರಿಗಳು ಹೇಳುವ ಪ್ರಕಾರ, ಸರ್ಕಾರ ಮತ್ತು ಎಲ್ಐಸಿಯಿಂದ ಐಡಿಬಿಐ ಬ್ಯಾಂಕ್ ಷೇರಿನ ಮಾರಾಟ ಎಷ್ಟು ಪ್ರಮಾಣದಲ್ಲಿ ಮಾಡಬೇಕು ಎಂಬುದನ್ನು ನಿರ್ಧರಿಸಬೇಕು. ಐಡಿಬಿಐ ಬ್ಯಾಂಕ್ ಮ್ಯಾನೇಜ್​ಮೆಂಟ್​ ಹತೋಟಿಯಷ್ಟನ್ನು ಸ್ಟ್ರಾಟೆಜಿಕ್ ಪ್ರಮಾಣದಲ್ಲಿ ವರ್ಗಾಯಿಸಲಾಗುವುದು.

ಇನ್ನಷ್ಟು ವಾಣಿಜ್ಯ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ, ಪ್ರಮುಖ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: BPCL Privatisation: ಬಿಪಿಸಿಎಲ್ ಖಾಸಗೀಕರಣ ಪ್ರಕ್ರಿಯೆಯನ್ನು ಕೈಬಿಟ್ಟ ಸರ್ಕಾರ

Published On - 3:14 pm, Sat, 11 June 22

ಗಿಲ್ಲಿ ಅವತಾರವನ್ನೇ ಬದಲಿಸಿದ ಮನೆ ಮಂದಿ; ನೀವು ನಗೋದು ಗ್ಯಾರಂಟಿ
ಗಿಲ್ಲಿ ಅವತಾರವನ್ನೇ ಬದಲಿಸಿದ ಮನೆ ಮಂದಿ; ನೀವು ನಗೋದು ಗ್ಯಾರಂಟಿ
ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಬಿಸಿಮುಟ್ಟಿಸಿದ ಲೋಕಾಯುಕ್ತ: ಹಲವೆಡೆ ದಾಳಿ
ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಬಿಸಿಮುಟ್ಟಿಸಿದ ಲೋಕಾಯುಕ್ತ: ಹಲವೆಡೆ ದಾಳಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ