AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IDBI Bank Privatisation: ಐಡಿಬಿಐ ಬ್ಯಾಂಕ್ ಖಾಸಗೀಕರಣಕ್ಕೆ ಜುಲೈ ಕೊನೆ ಹೊತ್ತಿಗೆ ಆಸಕ್ತಿ ವ್ಯಕ್ತಪಡಿಸುವಿಕೆ ಆಹ್ವಾನ ಸಾಧ್ಯತೆ

ಐಡಿಬಿಐ ಬ್ಯಾಂಕ್ ಖಾಸಗೀಕರಣಕ್ಕೆ ಜುಲೈ ಕೊನೆಗೆ ಆಸಕ್ತಿ ವ್ಯಕ್ತಪಡಿಸುವಿಕೆ ಆಹ್ವಾನಿಸುವ ಸಾಧ್ಯತೆ ಇದೆ ಎಂದು ವರದಿಗಳಾಗಿವೆ. ಆ ಬಗ್ಗೆ ಮಾಹಿತಿ ಇಲ್ಲಿದೆ.

IDBI Bank Privatisation: ಐಡಿಬಿಐ ಬ್ಯಾಂಕ್ ಖಾಸಗೀಕರಣಕ್ಕೆ ಜುಲೈ ಕೊನೆ ಹೊತ್ತಿಗೆ ಆಸಕ್ತಿ ವ್ಯಕ್ತಪಡಿಸುವಿಕೆ ಆಹ್ವಾನ ಸಾಧ್ಯತೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Jun 11, 2022 | 4:19 PM

Share

ಕಳೆದ ಕೆಲ ಸಮಯದಿಂದಲೂ ಐಡಿಬಿಐ ಬ್ಯಾಂಕ್​ನ ಖಾಸಗೀಕರಣಕ್ಕಾಗಿ (Privatisation) ಕೇಂದ್ರ ಸರ್ಕಾರದಿಂದ ಪ್ರಯತ್ನ ನಡೆಯುತ್ತಿದೆ. ಅದರ ಹೂಡಿಕೆ ಹಿಂತೆಗೆತಕ್ಕಾಗಿ ತನ್ನ ಪಟ್ಟಿಯಲ್ಲಿ ಸೇರಿಸಿಕೊಂಡಿದೆ. ಹೂಡಿಕೆ ಮತ್ತು ಸಾರ್ವಜನಿಕ ಆಸ್ತಿ ನಿರ್ವಹಣೆ ಇಲಾಖೆ (DIPAM) ಸದ್ಯಕ್ಕೆ ಈ ಬ್ಯಾಂಕ್​ನ ಮಾರಾಟಕ್ಕಾಗಿ ರೋಡ್​ ಶೋ ನಡೆಸಲಾಗುತ್ತದೆ. ಭಾರತದ ಬಂಡವಾಳ ಹಿಂತೆಗೆತ ಗುರಿಯ ವಿಚಾರದಲ್ಲಿ ಇದು ಮತ್ತೊಂದು ಮೈಲುಗಲ್ಲು ಆಗಲಿದೆ. ಸರ್ಕಾರವು ಯಾವ ಪ್ರಮಾಣದ ಷೇರನ್ನು ಮಾರಾಟ ಮಾಡುತ್ತದೆ ಎಂಬುದು ರೋಡ್ ಶೋ ಮುಗಿದ ಮೇಲೆ ತಿಳಿಯುತ್ತದೆ.

ಈ ಬಗ್ಗೆ ಏಪ್ರಿಲ್​ನಲ್ಲಿ ಕೇಂದ್ರ ಹೇಳಿತ್ತು. ಸದ್ಯಕ್ಕೆ ಅಮೆರಿಕದಲ್ಲಿ ರೋಡ್​ ಶೋಗೆ ಸಿದ್ಧತೆಯನ್ನು ಸರ್ಕಾರವು ನಡೆಸುತ್ತಿದೆ ಎಂದು ಪಿಟಿಐ ಜೂನ್​ 10ನೇ ತಾರೀಕು ವರದಿ ಮಾಡಿದೆ. ಈ ರೀತಿಯಾಗಿ ಇನ್ನೂ ಹೂಡಿಕೆದಾರರ ಇಂಥ ಹಲವು ಸಭೆಗಳನ್ನು ನಡೆಸಿದ ನಂತರ ಐಡಿಬಿಐ ಬ್ಯಾಂಕ್​ ಷೇರಿನ ಮಾರಾಟದ ವಗ್ಗೆ ಅಂತಿಮಗೊಳಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

“ಐಡಿಬಿಐ ಸ್ಟ್ರಾಟೆಜಿಕ್ ಮಾರಾಟದ ಬಗ್ಗೆ ಆರ್​ಬಿಐ ಜತೆ ಇನ್ನೂ ಒಂದು ಸುತ್ತಿನ ಚರ್ಚೆ ನಡೆಸಬೇಕಾಗಬಹುದು. ಆಸಕ್ತಿ ವ್ಯಕ್ತಪಡಿಸುವಿಕೆ (EoI) ಜುಲೈ ಕೊನೆಗೆ ಆಹ್ವಾನಿಸಬಹುದು,” ಎಂದು ಅಧಿಕಾರಿಗಳು ಹೇಳಿದ್ದಾರೆ. ಈ ಹಿಂದೆ ಮೂಲಗಳ ಪ್ರಕಾರ, ಮೇ ತಿಂಗಳಲ್ಲಿ ಸರ್ಕಾರದಿಂದ ಆಸಕ್ತಿ ವ್ಯಕ್ತಪಡಿಸುವಿಕೆ ಆಹ್ವಾನಿಸಿ, ಪ್ರಸಕ್ತ ಹಣಕಾಸು ವರ್ಷ 2022-23ರಲ್ಲಿ ಪೂರ್ಣಗೊಳಿಸಲು ಬಯಸಿತ್ತು.

ಅಧಿಕಾರಿಗಳು ಹೇಳುವ ಪ್ರಕಾರ, ಸರ್ಕಾರ ಮತ್ತು ಎಲ್ಐಸಿಯಿಂದ ಐಡಿಬಿಐ ಬ್ಯಾಂಕ್ ಷೇರಿನ ಮಾರಾಟ ಎಷ್ಟು ಪ್ರಮಾಣದಲ್ಲಿ ಮಾಡಬೇಕು ಎಂಬುದನ್ನು ನಿರ್ಧರಿಸಬೇಕು. ಐಡಿಬಿಐ ಬ್ಯಾಂಕ್ ಮ್ಯಾನೇಜ್​ಮೆಂಟ್​ ಹತೋಟಿಯಷ್ಟನ್ನು ಸ್ಟ್ರಾಟೆಜಿಕ್ ಪ್ರಮಾಣದಲ್ಲಿ ವರ್ಗಾಯಿಸಲಾಗುವುದು.

ಇನ್ನಷ್ಟು ವಾಣಿಜ್ಯ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ, ಪ್ರಮುಖ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: BPCL Privatisation: ಬಿಪಿಸಿಎಲ್ ಖಾಸಗೀಕರಣ ಪ್ರಕ್ರಿಯೆಯನ್ನು ಕೈಬಿಟ್ಟ ಸರ್ಕಾರ

Published On - 3:14 pm, Sat, 11 June 22

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ