AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Employee Provident Fund: ಕೆಲಸ ಬದಲಿಸಿದಾಗ ಹಳೆ ಪಿಎಫ್ ಖಾತೆ ಹಣ ಹೊಸ ಖಾತೆಗೆ ರವಾನೆಯಾಗಲು ಎಷ್ಟು ದಿನ ಬೇಕು?

EPF updates: ಒಂದಕ್ಕಿಂತ ಹೆಚ್ಚು ಕಂಪನಿಗಳಲ್ಲಿ ಕೆಲಸ ಮಾಡಿದ್ದರೆ ಒಂದಕ್ಕಿಂತ ಹೆಚ್ಚು ಪಿಎಫ್ ಖಾತೆಗಳಿರುವ ಸಾಧ್ಯತೆ ಇರುತ್ತದೆ. ಒಂದೇ ಯುಎಎನ್ ನಂಬರ್ ಅಡಿಯಲ್ಲಿ ಎಲ್ಲಾ ಪಿಎಫ್ ಖಾತೆಗಳನ್ನು ನಿರ್ವಹಿಸಬಹುದು. ಆದರೆ, ಒಂದಕ್ಕಿಂತ ಹೆಚ್ಚು ಪಿಎಫ್ ಖಾತೆ ಹೊಂದಿರುವ ಬದಲು ಹಿಂದಿನ ಪಿಎಫ್ ಖಾತೆಗಳನ್ನು ಈಗಿರುವ ಹಾಲಿ ಪಿಎಫ್ ಖಾತೆಗೆ ವಿಲೀನಗೊಳಿಸುವುದು ಉತ್ತಮ. ಸರ್ಕಾರದಿಂದ ಸಂದಾಯವಾಗುವ ಬಡ್ಡಿಹಣ ನಿಮ್ಮ ಎಲ್ಲಾ ಹಣಕ್ಕೂ ಅನ್ವಯ ಆಗುತ್ತದೆ.

Employee Provident Fund: ಕೆಲಸ ಬದಲಿಸಿದಾಗ ಹಳೆ ಪಿಎಫ್ ಖಾತೆ ಹಣ ಹೊಸ ಖಾತೆಗೆ ರವಾನೆಯಾಗಲು ಎಷ್ಟು ದಿನ ಬೇಕು?
ಇಪಿಎಫ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Mar 08, 2024 | 12:26 PM

Share

ನೀವು ಯಾವುದೋ ಹೊಸ ಕೆಲಸಕ್ಕೆ ಸೇರಿದಾಗ ಹಳೆಯ ಪಿಎಫ್ ಖಾತೆ (EPF account) ಮುಂದುವರಿಯುವುದಿಲ್ಲ. ಹೊಸದಾಗಿ ಪಿಎಫ್ ಖಾತೆಯನ್ನು ಸೃಷ್ಟಿಸಲಾಗುತ್ತದೆ. ಆದರೆ, ಯುಎಎನ್ ನಂಬರ್ ಮಾತ್ರ ಒಂದೇ ಇರಬೇಕು. ಈ ಯುಎಎನ್ ನಂಬರ್ (UAN) ಅಡಿಯಲ್ಲಿ ನಿಮ್ಮ ಎಲ್ಲಾ ಪಿಎಫ್ ಖಾತೆಗಳು ಇರುತ್ತವೆ. ಆದರೆ, ವಿವಿಧ ಪಿಎಫ್ ಖಾತೆಗಳ ಬದಲು ಒಂದೇ ಖಾತೆ ಇದ್ದರೆ ಹಲವು ರೀತಿಯ ಪ್ರಯೋಜನಗಳು ಇರುತ್ತವೆ. ನಿಮ್ಮ ಸಕ್ರಿಯ ಪಿಎಫ್ ಖಾತೆಯಲ್ಲಿರುವ ಹಣಕ್ಕೆ ಮಾತ್ರವೇ ಸರ್ಕಾರದ ಬಡ್ಡಿ ಹಣ ಸಂದಾಯ ಆಗುತ್ತದೆ. ನೀವು ಕೆಲಸ ಬದಲಿಸಿದಾಗ ಹೊಸ ಪಿಎಫ್ ಖಾತೆಯಲ್ಲಿರುವ ಅಲ್ಪ ಹಣಕ್ಕೆ ಮಾತ್ರವೇ ಬಡ್ಡಿ ಸಿಗುತ್ತದೆ. ನಿಮ್ಮ ಹಳೆಯ ಪಿಎಫ್ ಖಾತೆಯಲ್ಲಿ ಹೆಚ್ಚಿನ ಮೊತ್ತ ಇದ್ದರೆ ಅದಕ್ಕೆ ಬಡ್ಡಿ ಸಿಗುವುದಿಲ್ಲ. ಹೀಗಾಗಿ, ಕೆಲಸ ಬದಲಿಸಿದಾಗ ಪಿಎಫ್ ಖಾತೆಯನ್ನೂ ಹೊಸ ಪಿಎಫ್ ಖಾತೆಗೆ ವಿಲೀನಗೊಳಿಸುವುದು ಮುಖ್ಯ.

ಇದನ್ನೂ ಓದಿ: ಎಲ್​ಪಿಜಿ ಸಿಲಿಂಡರ್ ಬೆಲೆ ಇಳಿಕೆ: ಮಹಿಳಾ ದಿನಾಚರಣೆ ದಿನ ಪ್ರಧಾನಿ ಮೋದಿ ಗಿಫ್ಟ್

ಇಪಿಎಫ್ ಎಂಬುದು ಖಾಸಗಿ ಕ್ಷೇತ್ರವನ್ನೂ ಒಳಗೊಂಡಂತೆ ಎಲ್ಲಾ ಕಂಪನಿಗಳ ಉದ್ಯೋಗಿಗಳ ಭವಿಷ್ಯದ ಭದ್ರತೆ ಅಥವಾ ನಿವೃತ್ತಿ ನಂತರದ ಜೀವನದ ಭದ್ರತೆಗೆಂದು ಸರ್ಕಾರ ರೂಪಿಸಿದ ಯೋಜನೆ ಇದು. 20ಕ್ಕೂ ಹೆಚ್ಚು ಉದ್ಯೋಗಿಗಳನ್ನು (ರೆಗ್ಯುಲರ್) ಹೊಂದಿರುವ ಯಾವುದೇ ಕಂಪನಿಯಾದರೂ ಇಪಿಎಫ್ ಯೋಜನೆಯನ್ನು ತಮ್ಮ ಉದ್ಯೋಗಿಗಳಿಗೆ ಅಳವಡಿಸುವುದು ಕಡ್ಡಾಯ. ಕಡಿಮೆ ಉದ್ಯೋಗಿಗಳನ್ನು ಹೊಂದಿರುವ ಸಂಸ್ಥೆಗಳೂ ಕೂಡ ಈ ಯೋಜನೆಯನ್ನು ಅಳವಡಿಸಬಹುದು.

ಈ ಯೋಜನೆಯ ಅಡಿಯಲ್ಲಿ ಉದ್ಯೋಗಿಯ ಬೇಸಿಕ್ ಸ್ಯಾಲರಿಯ ಶೇ. 12ರಷ್ಟು ಹಣವನ್ನು ಕಡಿತಗೊಳಿಸಿ ಅದನ್ನು ಪಿಎಫ್ ಖಾತೆಗೆ ಸಂದಾಯ ಮಾಡಲಾಗುತ್ತದೆ. ಅಷ್ಟೇ ಪ್ರಮಾಣದ ಹಣವನ್ನು ಸಂಸ್ಥೆಯೂ ಕೂಡ ಆ ಖಾತೆಗೆ ಹಾಕುತ್ತದೆ. ಸರ್ಕಾರ ವರ್ಷಕ್ಕೆ ಒಮ್ಮೆ ಪಿಎಫ್ ಖಾತೆಯಲ್ಲಿರುವ ಹಣಕ್ಕೆ ಬಡ್ಡಿ ಸೇರಿಸುತ್ತದೆ. ಬೇರೆ ಉಳಿತಾಯ ಸ್ಕೀಮ್​ಗಳಿಗಿಂತ ಇದಕ್ಕೆ ಹೆಚ್ಚು ಬಡ್ಡಿ ಸಿಗುತ್ತದೆ. ಹೀಗಾಗಿ, ಉದ್ಯೋಗಿಯ ಪಿಎಫ್ ಖಾತೆ ಒಂದು ರೀತಿಯಲ್ಲಿ ಉಳಿತಾಯದ ಜೊತೆಗೆ ಉತ್ತಮ ಹೂಡಿಕೆಯೂ ಆಗಿರುತ್ತದೆ. ನಿವೃತ್ತಿಯ ವೇಳೆಗೆ ಸಾಕಷ್ಟು ದೊಡ್ಡ ಮೊತ್ತವೇ ಸಂಗ್ರಹವಾಗಿರುತ್ತದೆ.

ಇದನ್ನೂ ಓದಿ: ಪಿಎಂ ಉಜ್ವಲ ಫಲಾನುಭವಿಗಳಿಗೆ 300 ರೂ ಎಲ್​ಪಿಜಿ ಸಬ್ಸಿಡಿ, ಒಂದು ವರ್ಷ ಮುಂದುವರಿಕೆ

ಪಿಎಫ್ ಖಾತೆ ವರ್ಗಾವಣೆ ಹೇಗೆ?

ನೀವು ಇಪಿಎಫ್​ಒ ಪೋರ್ಟಲ್​ಗೆ ಹೋಗಿ ನಿಮ್ಮ ಯುಎಎನ್ ನಂಬರ್ ಮೂಲಕ ನೊಂದಾಯಿಸಿಕೊಂಡು ಲಾಗಿ ಆಗಿ. ಹಳೆಯ ಪಿಎಫ್ ಖಾತೆಯನ್ನು ಹೊಸ ಖಾತೆಗೆ ವರ್ಗಾಯಿಸಿಕೊಳ್ಳಲು ಆನ್ಲೈನ್​ನಲ್ಲೇ ಮನವಿ ಸಲ್ಲಿಸುವ ಅವಕಾಶ ಇದೆ. ಇದಕ್ಕೆ ಹಿಂದೆ ಕೆಲಸ ಮಾಡಿದ ಸಂಸ್ಥೆ ಅಥವಾ ಈಗ ಕೆಲಸ ಮಾಡುತ್ತಿರುವ ಸಂಸ್ಥೆ ಅನುಮೋದನೆ ಕೊಡಬೇಕು. ಒಟ್ಟಾರೆ ಈ ಪ್ರಕ್ರಿಯೆ ಮೂರರಿಂದ ಆರು ವಾರದೊಳಗೆ ಪೂರ್ಣಗೊಳ್ಳಬಹುದು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?