ಇಎಲ್​ಐ ಸ್ಕೀಮ್: ಯುಎಎನ್ ಸಕ್ರಿಯಗೊಳಿಸಲು, ಬ್ಯಾಂಕ್ ಖಾತೆ ಆಧಾರ್​ಗೆ ಲಿಂಕ್ ಮಾಡಲು ಡೆಡ್​ಲೈನ್ ವಿಸ್ತರಣೆ

Employment linked incentive scheme: ಎಂಪ್ಲಾಯ್ಮೆಂಟ್ ಲಿಂಕ್ಡ್ ಇನ್ಸೆಂಟಿವ್ ಅಡಿ ವಿವಿಧ ಯೋಜನೆಗಳ ಲಾಭ ಪಡೆಯಬೇಕಾದರೆ ಉದ್ಯೋಗಿಗಳ ಯುಎಎನ್ ಆ್ಯಕ್ಟಿವೇಟ್ ಆಗಿರಬೇಕು. ಉದ್ಯೋಗಿಗಳ ಬ್ಯಾಂಕ್ ಖಾತೆಗೆ ಆಧಾರ್ ನಂಬರ್ ಸೀಡ್ ಆಗಿರಬೇಕು. ಇದಕ್ಕೆ ಇದ್ದ ಡೆಡ್​ಲೈನ್ ಅನ್ನು ವಿಸ್ತರಿಸಲಾಗಿದೆ. ಜನವರಿ 15ರವರೆಗೂ ಕಾಲಾವಕಾಶ ಕೊಡಲಾಗಿದೆ. 2024ರ ಜುಲೈ ಬಜೆಟ್​ನಲ್ಲಿ ಸರ್ಕಾರವು ಇಎಲ್​ಐ ಸ್ಕೀಮ್ ಅನ್ನು ಘೋಷಣೆ ಮಾಡಿತ್ತು.

ಇಎಲ್​ಐ ಸ್ಕೀಮ್: ಯುಎಎನ್ ಸಕ್ರಿಯಗೊಳಿಸಲು, ಬ್ಯಾಂಕ್ ಖಾತೆ ಆಧಾರ್​ಗೆ ಲಿಂಕ್ ಮಾಡಲು ಡೆಡ್​ಲೈನ್ ವಿಸ್ತರಣೆ
ಇಪಿಎಫ್​ಒ

Updated on: Dec 24, 2024 | 12:52 PM

ನವದೆಹಲಿ, ಡಿಸೆಂಬರ್ 24: ಉದ್ಯೋಗ ಆಧಾರಿತ ಭತ್ಯೆ (ಇಎಲ್​ಐ) ಯೋಜನೆ ಅಡಿ ಸರ್ಕಾರದಿಂದ ನೀಡಲಾಗುವ ಲಾಭಗಳನ್ನು ಪಡೆಯಲು ಉದ್ಯೋಗಿಗಳ ಇಪಿಎಫ್ ಖಾತೆಗೆ ಯುಎಎನ್ ಸಕ್ರಿಯಗೊಳಿಸಬೇಕು. ಅವರ ಬ್ಯಾಂಕ್ ಖಾತೆಗಳು ಆಧಾರ್​ಗೆ ಲಿಂಕ್ ಆಗಿರಬೇಕು. ಈ ಕಾರ್ಯಕ್ಕೆ ನಿಗದಿ ಮಾಡಲಾಗಿದ್ದ ಕಾಲಾವಕಾಶವನ್ನು ಇಪಿಎಫ್​ಒ ವಿಸ್ತರಿಸಿದೆ. ಈ ಮೊದಲು ನವೆಂಬರ್ 30ಕ್ಕೆ ಡೆಡ್​ಲೈನ್ ಇತ್ತು. ಅದನ್ನು ಡಿಸೆಂಬರ್ 15ಕ್ಕೆ ವಿಸ್ತರಿಸಲಾಗಿತ್ತು. ಈಗ ಜನವರಿ 15ರವರೆಗೂ ಕಾಲಾವಕಾಶ ಹೆಚ್ಚಿಸಲಾಗಿದೆ.

ಏನಿದು ಯುಎಎನ್?

ಯೂನಿವರ್ಸಲ್ ಅಕೌಂಟ್ ನಂಬರ್ ಅಥವಾ ಯುಎಎನ್ ಎಂಬುದು ಇಪಿಎಫ್​ಒ ಸರ್ವಿಸ್​ಗಳನ್ನು ಆನ್​ಲೈನ್​ನಲ್ಲಿ ಪಡೆಯಲು ಉದ್ಯೋಗಿಗೆ ನೀಡಲಾಗುವ 12 ಅಂಕಿಗಳ ಒಂದು ಅನನ್ಯ ಸಂಖ್ಯೆ. ಆಧಾರ್ ನಂಬರ್​ನಂತೆ ಇದು ಒಬ್ಬ ಉದ್ಯೋಗಿಗೆ ಇರುವ ವಿಶೇಷ ಸಂಖ್ಯೆಯಾಗಿರುತ್ತದೆ. ಕೆಲಸ ಬದಲಿಸಿದಾಗ ಹೊಸ ಇಪಿಎಫ್ ಖಾತೆ ಸೃಷ್ಟಿಯಾಗುತ್ತದೆಯಾದರೂ ಅದೇ ಯುಎಎನ್ ನಂಬರ್ ಅನ್ನು ಮುಂದುವರಿಸಬಹುದು. ಒಂದೇ ಯುಎಎನ್ ನಂಬರ್ ಅಡಿ ಉದ್ಯೋಗಿಯ ಎಲ್ಲಾ ಇಪಿಎಫ್ ಅಕೌಂಟ್​ಗಳು ಲಿಸ್ಟ್ ಆಗಿರುತ್ತವೆ.

ಇದನ್ನೂ ಓದಿ: ಕೃಷಿ ಕ್ಷೇತ್ರದಲ್ಲಿ ಸರ್ಕಾರದಿಂದ ಮತ್ತೊಂದು ಮಹತ್ವದ ಹೆಜ್ಜೆ; ರಾಷ್ಟ್ರೀಯ ರೈತ ಸಹಾಯವಾಣಿ ಸ್ಥಾಪನೆ ಸಾಧ್ಯತೆ

ಬ್ಯಾಂಕ್ ಖಾತೆಗೆ ಆಧಾರ್ ಜೋಡಿಸಬೇಕು…

ಇಪಿಎಫ್ ಅಕೌಂಟ್​ನಿಂದ ಹಣವನ್ನು ಹಿಂಪಡೆದಾಗ ಅದು ನೇರವಾಗಿ ಬ್ಯಾಂಕ್ ಖಾತೆಗೆ ರವಾನೆಯಾಗಬೇಕೆಂದರೆ ಆ ಖಾತೆಗೆ ಉದ್ಯೋಗಿಯ ಆಧಾರ್ ಜೋಡಣೆ ಆಗಿರಬೇಕು. ಎಲ್ಲಾ ಡಿಬಿಟಿ ಸ್ಕೀಮ್​ಗಳಲ್ಲೂ ಇದು ಅವಶ್ಯಕ.

ಏನಿದು ಇಎಲ್​ಐ ಸ್ಕೀಮ್?

ಕಳೆದ ಬಜೆಟ್​ನಲ್ಲಿ (2024ರ ಜುಲೈ) ಎಂಪ್ಲಾಯ್ಮೆಂಟ್ ಲಿಂಕ್ಡ್ ಇನ್ಸೆಂಟಿವ್ ಯೋಜನೆಯನ್ನು ಪ್ರಕಟಿಸಲಾಗಿದೆ. ಇದರಡಿ ಮೂರು ಸ್ಕೀಮ್​ಗಳನ್ನು ಘೋಷಿಸಲಾಗಿದೆ. ಹೊಸದಾಗಿ ಉದ್ಯೋಗಿಗಳಾಗಿರುವವರಿಗೆ ಒಂದು ತಿಂಗಳ ವೇತನವನ್ನು ಸರ್ಕಾರವೇ ನೀಡುತ್ತದೆ. ಇನ್ನೆರಡು ಸ್ಕೀಮ್​ಗಳಲ್ಲಿ ಹೆಚ್ಚುವರಿ ಉದ್ಯೋಗಾವಕಾಶ ನೀಡುವ ಕಂಪನಿಗಳಿಗೆ ಸರ್ಕಾರ ಪ್ರೋತ್ಸಾಹಕ ಧನ ಒದಗಿಸುತ್ತದೆ.

ಇದನ್ನೂ ಓದಿ: ಕುಗ್ಗದ ಅದಾನಿ; ವಾಯುಯಾನ ಕ್ಷೇತ್ರಕ್ಕೆ ಇನ್ನೊಂದು ಹೆಜ್ಜೆ; ಬೃಹತ್ ಸೂಪರ್ ವಿದ್ಯುತ್ ಸ್ಥಾವರ ಸ್ಥಾಪನೆಗೂ ಯೋಜನೆ

ಈ ಸ್ಕೀಮ್​ಗಳ ಲಾಭ ಸಿಗಬೇಕಾದರೆ ಉದ್ಯೋಗಿಗಳಿಗೆ ಯುಎಎನ್ ಸಕ್ರಿಯಗೊಳ್ಳಬೇಕು. ಬ್ಯಾಂಕ್ ಖಾತೆಗೆ ಆಧಾರ್ ಸೀಡ್ ಆಗಿರಬೇಕು. ಅದಕ್ಕೆ ಡೆಡ್​ಲೈನ್ ಜನವರಿ 15ಕ್ಕೆ ನಿಗದಿಯಾಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Follow Us