AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

EPFO Higher Pension: ಅಧಿಕ ಪಿಂಚಣಿ ಸೌಲಭ್ಯ ಬಯಸುವ ಉದ್ಯೋಗಿಗಳ ವೇತನ ವಿವರ ಸಲ್ಲಿಸಲು ಗಡುವು ಮೇ 31ರವರೆಗೆ ವಿಸ್ತರಣೆ

ಅಧಿಕ ಪಿಂಚಣಿ ಬಯಸುವ ಉದ್ಯೋಗಿಗಳ ವೇತನ ವಿವರ ಸಲ್ಲಿಸಲು ಸಂಸ್ಥೆಗಳಿಗೆ 2024ರ ಮೇ 31ರವರೆಗೂ ಕಾಲಾವಕಾಶ ಹೆಚ್ಚಿಸಲಾಗಿದೆ. 2014ರ ಸೆಪ್ಟೆಂಬರ್ 1ಕ್ಕೆ ಮುಂಚೆ ಇಪಿಎಸ್ ಸದಸ್ಯರಾಗಿರುವ ಉದ್ಯೋಗಿಗಳು ಹೆಚ್ಚುವರಿ ಪಿಂಚಣಿ ಸೌಲಭ್ಯಕ್ಕೆ ಅರ್ಹರಿರುತ್ತಾರೆ. ಅರ್ಹ ಉದ್ಯೋಗಿಗಳು ತಮಗೆ ಹೆಚ್ಚುವರಿ ಪಿಂಚಣಿ ಬೇಕೆಂದರೆ ತಾವು ಕೆಲಸ ಮಾಡುವ ಸಂಸ್ಥೆಗಳಲ್ಲಿ ಅರ್ಜಿ ಸಲ್ಲಿಸಬೇಕು. ಇಂಥ ಉದ್ಯೋಗಿಗಳ ವೇತನ ವಿವರವನ್ನು ಸಂಸ್ಥೆಗಳು ಇಪಿಎಫ್​ಒ ಪೋರ್ಟಲ್​ನಲ್ಲಿ ಅಪ್​ಲೋಡ್ ಮಾಡಬೇಕು.

EPFO Higher Pension: ಅಧಿಕ ಪಿಂಚಣಿ ಸೌಲಭ್ಯ ಬಯಸುವ ಉದ್ಯೋಗಿಗಳ ವೇತನ ವಿವರ ಸಲ್ಲಿಸಲು ಗಡುವು ಮೇ 31ರವರೆಗೆ ವಿಸ್ತರಣೆ
ಇಪಿಎಫ್​ಒ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jan 04, 2024 | 3:12 PM

Share

ನವದೆಹಲಿ, ಜನವರಿ 4: ಅಧಿಕ ಪಿಂಚಣಿ ಬಯಸುವ ಇಪಿಎಫ್ ಖಾತೆದಾರರ (epf members) ವೇತನ ವಿವರವನ್ನು ಅವರು ಕೆಲಸ ಮಾಡುವ ಸಂಸ್ಥೆಗಳು ಇಪಿಎಫ್​ಒದ ಡಾಟಾಬೇಸ್​ಗೆ ಅಪ್​ಲೋಡ್ ಮಾಡಬೇಕು. ಅದಕ್ಕೆ ಡಿಸೆಂಬರ್ 31ಕ್ಕೆ ಡೆಡ್​ಲೈನ್ ಇತ್ತು. ಈಗ ಈ ಗಡುವನ್ನು 2024ರ ಮೇ 31ರವರೆಗೂ ವಿಸ್ತರಿಸಲಾಗಿದೆ. ಅಂದರೆ, ಉದ್ಯೋಗಿಗಳ ವೇತನ ವಿವರವನ್ನು ಇಪಿಎಫ್​ಒಗೆ ಸಲ್ಲಿಸಲು ಇನ್ನೂ ಐದು ತಿಂಗಳು ಕಾಲಾವಕಾಶ ಇದೆ.

ಅಧಿಕ ಪಿಂಚಣಿಗೆ ಯಾವ ಉದ್ಯೋಗಿಗಳು ಅರ್ಹರು?

ಅಧಿಕ ಪಿಂಚಣಿಗೆ ಅರ್ಜಿ ಸಲ್ಲಿಸಲು ಉದ್ಯೋಗಿಗಳಿಗೂ ಅವಕಾಶ ಇಲ್ಲ. 2014ರ ಸೆಪ್ಟೆಂಬರ್ 1ಕ್ಕೆ ಮುಂಚಿನಿಂದ ಎಂಪ್ಲಾಯೀ ಪೆನ್ಷನ್ ಸ್ಕೀಮ್​ನ (ಇಪಿಎಸ್) ಸದಸ್ಯರಾಗಿರುವ ಉದ್ಯೋಗಿಗಳು ಹೆಚ್ಚುವರಿ ಪಿಂಚಣಿಗೆ ಅರ್ಹರಿದ್ದಾರೆ. ವೇತನದಲ್ಲಿ ಇಪಿಎಸ್ ಖಾತೆಗೆ ಜಮೆ ಆಗುವ ಮೊತ್ತಕ್ಕೆ ಮಿತಿ ಇದೆ. ಹೆಚ್ಚುವರಿ ಪಿಂಚಣಿ ಸೌಲಭ್ಯ ಆಯ್ಕೆ ಮಾಡಿಕೊಂಡರೆ ಸಂಬಳದ ಹೆಚ್ಚು ಭಾಗವನ್ನು ಇಪಿಎಸ್​ಗೆ ವರ್ಗಾವಣೆ ಮಾಡಲು ಸಾಧ್ಯವಾಗುತ್ತದೆ.

ಇದನ್ನೂ ಓದಿ: Flight Tickets: ಫುಯಲ್ ಚಾರ್ಜ್ ಹಿಂಪಡೆದ ಇಂಡಿಗೋ ಏರ್ಲೈನ್; ಇಳಿಕೆಯಾಗಲಿದೆ ವಿಮಾನ ಟಿಕೆಟ್ ಬೆಲೆ

ಸುಪ್ರೀಂ ಕೋರ್ಟ್ ನವೆಂಬರ್ 4ರಂದು ಈ ಸಂಬಂಧ ಆದೇಶ ಹೊರಡಿಸಿತ್ತು. ಹೆಚ್ಚುವರಿ ಪಿಂಚಣಿ ಬಯಸುವ ಅರ್ಹ ಉದ್ಯೋಗಿಗಳು ತಮ್ಮ ಸಂಸ್ಥೆಗಳ ಬಳಿ ಅರ್ಜಿ ಸಲ್ಲಿಸಬೇಕಿತ್ತು. 2023ರ ಜುಲೈ 11ರವರೆಗೆ 17 ಲಕ್ಷಕ್ಕೂ ಹೆಚ್ಚು ಉದ್ಯೋಗಿಗಳಿಂದ ಅರ್ಜಿ ಸಲ್ಲಿಕೆ ಆಗಿತ್ತು. ಆದರೆ, ಸಂಸ್ಥೆಗಳಿಂದ ಈ ಅರ್ಜಿಗಳ ವಿಲೇವಾರಿ ಇನ್ನೂ ಸಾಕಷ್ಟು ಬಾಕಿ ಇದ್ದರಿಂದ ಮೇ 3ರಂದು ಇದ್ದ ಡೆಡ್​ಲೈನ್ ಅನ್ನು ಹಲವು ಬಾರಿ ವಿಸ್ತರಣೆ ಮಾಡುತ್ತಾ ಬರಲಾಗಿದೆ. ಇದೀಗ 2024ರ ಮೇ 31ರವರೆಗೆ ಗಡುವು ಕೊಡಲಾಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ