AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಪಿಎಫ್ ಅಕೌಂಟ್​ನಲ್ಲಿ ಎಷ್ಟೇ ಹಣ ಇದ್ದರೂ ಖಾತೆದಾರ ಸತ್ತರೆ ಕುಟುಂಬಕ್ಕೆ ಪರಿಹಾರ: ಹೊಸ ನಿಯಮ ಜಾರಿಗೆ

EPFO New Rules on PF holder's death and compensation: ಇಪಿಎಫ್​ಒದ ನಿಯಮೊಂದರಲ್ಲಿ ಪರಿಷ್ಕರಣೆ ಆಗಿದೆ. ಇಪಿಎಫ್ ಖಾತೆದಾರ ಮೃತಪಟ್ಟರೆ ಆತನ ಕುಟುಂಬಕ್ಕೆ ಕನಿಷ್ಠ 50,000 ರೂ ಪರಿಹಾರ ಸಿಗುತ್ತದೆ. ಈ ಹಿಂದೆ ಇದ್ದ ನಿಯಮದ ಪ್ರಕಾರ ಖಾತೆದಾರನ ಇಪಿಎಫ್ ಅಕೌಂಟ್​ನಲ್ಲಿ ಕನಿಷ್ಠ 50,000 ಇರಬೇಕಿತ್ತು. 12 ತಿಂಗಳು ಸತತವಾಗಿ ಸೇವೆ ಸಲ್ಲಿಸಿರಬೇಕಿತ್ತು. ಈಗ ಅದನ್ನು ಸಡಿಲಿಸಲಾಗಿದೆ.

ಇಪಿಎಫ್ ಅಕೌಂಟ್​ನಲ್ಲಿ ಎಷ್ಟೇ ಹಣ ಇದ್ದರೂ ಖಾತೆದಾರ ಸತ್ತರೆ ಕುಟುಂಬಕ್ಕೆ ಪರಿಹಾರ: ಹೊಸ ನಿಯಮ ಜಾರಿಗೆ
ಇಪಿಎಫ್​ಒ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jul 22, 2025 | 6:07 PM

Share

ನವದೆಹಲಿ, ಜುಲೈ 22: ಇಪಿಎಫ್ ಖಾತೆ ಹೊಂದಿರುವ ಮತ್ತು ಉದ್ಯೋಗದಲ್ಲಿರುವ ವ್ಯಕ್ತಿ ಅಕಸ್ಮಾತ್ ಸತ್ತರೆ ಆತನ ಕುಟುಂಬಕ್ಕೆ ಕನಿಷ್ಠ 50,000 ರೂ ಪರಿಹಾರ ಸಿಗುವುದು ಖಾತ್ರಿಯಾಗಿದೆ. ಈ ಸಂಬಂಧ ಇಪಿಎಫ್​ಒ (epfo) ನಿಯಮವೊಂದನ್ನು ಪರಿಷ್ಕರಿಸಲಾಗಿದೆ. ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಅಧಿಸೂಚನೆ ಹೊರಡಿಸಿದೆ. ಅದರ ಪ್ರಕಾರ, ಪಿಎಫ್ ಸದಸ್ಯ ಸಾವನ್ನಪ್ಪಿದಾಗ ಅವರ ಪಿಎಫ್ ಅಕೌಂಟ್​ನಲ್ಲಿ 50,000 ರೂಗಿಂತಲೂ ಕಡಿಮೆ ಇದ್ದರೂ ಅವರ ಕುಟುಂಬಕ್ಕೆ ಕನಿಷ್ಠ 50,000 ರೂ ಖಾತ್ರಿ ಪರಿಹಾರ ಇರುತ್ತದೆ.

ಸರಳವಾಗಿ ಹೇಳುವುದಾದರೆ, ಒಬ್ಬ ವ್ಯಕ್ತಿ ಕಳೆದ ಆರು ತಿಂಗಳಿಂದ ಉದ್ಯೋಗದಲ್ಲಿದ್ದು, ಪ್ರತೀ ತಿಂಗಳು ಇಪಿಎಫ್ ಅಕೌಂಟ್​​ಗೆ ಕೊಡುಗೆ ಹೋಗುತ್ತಿದ್ದರೆ, ಆತ ಸತ್ತಾಗ ಕುಟುಂಬಕ್ಕೆ ಕನಿಷ್ಠ 50,000 ರೂ ಪರಿಹಾರ ಸಿಗುತ್ತದೆ. ಆತನ ಪಿಎಫ್ ಅಕೌಂಟ್​​ನಲ್ಲಿ 50,000 ರೂಗಿಂತ ಕಡಿಮೆ ಹಣ ಇದ್ದರೂ ಕನಿಷ್ಠ ಖಾತ್ರಿ ಇರುತ್ತದೆ.

ಇದನ್ನೂ ಓದಿ: ಭಾರತದಲ್ಲಿ ಐಟಿ ರಿಟರ್ನ್ಸ್ ಸಲ್ಲಿಸುವ ಅವಶ್ಯಕತೆ ಇಲ್ಲದವರು ಯಾರ‍್ಯಾರು? ಇಲ್ಲಿದೆ ಪಟ್ಟಿ

ಈ ಹಿಂದೆ ಇದ್ದ ನಿಯಮದ ಪ್ರಕಾರ ಒಬ್ಬ ವ್ಯಕ್ತಿ ಕನಿಷ್ಠ 12 ತಿಂಗಳು ನಿರಂತರ ಉದ್ಯೋಗದಲ್ಲಿರಬೇಕು. ಅಂದರೆ, 12 ತಿಂಗಳು ಸತತವಾಗಿ ಇಪಿಎಫ್ ಅಕೌಂಟ್​ಗೆ ಕೊಡುಗೆ ಹೋಗುತ್ತಿರಬೇಕು. ಹಾಗೆಯೇ, ಇಪಿಎಫ್ ಅಕೌಂಟ್​ನಲ್ಲಿ ಕನಿಷ್ಠ 50,000 ರೂ ಬ್ಯಾಲನ್ಸ್ ಇರಬೇಕು. ಆಗ ಮಾತ್ರ 50,000 ರೂ ಪರಿಹಾರವನ್ನು ನೀಡಲಾಗುತ್ತದೆ ಎನ್ನುವ ನಿಯಮ ಇತ್ತು.

ಇನ್ನು, ಉದ್ಯೋಗಿಯು ಕೆಲಸ ಬದಲಿಸಿ ಹೊಸ ಕೆಲಸಕ್ಕೆ ಸೇರಿದಾಗ ಮತ್ತೆ ಹೊಸದಾಗಿ ಈ 12 ತಿಂಗಳ ನಿಯಮ ಜಾರಿಗೆ ಬರುತ್ತದೆ.

ಈಗ ಬದಲಾದ ನಿಯಮದ ಪ್​ರಕಾರ, ಉದ್ಯೋಗಿ ಕೆಲಸ ಬಿಟ್ಟು 2 ತಿಂಗಳೊಳಗೆ ಮತ್ತೊಂದು ಕೆಲಸ ಸೇರಿದಾಗ ಉದ್ಯೋಗ ನಿರಂತರತೆ ಎಂದು ಪರಿಗಣಿಸಲಾಗುತ್ತದೆ.

ಇದನ್ನೂ ಓದಿ: ಕೆಲಸ ಬಿಡೋವರೆಗೂ ಕಾಯಬೇಕಿಲ್ಲ… 10 ವರ್ಷಕ್ಕೊಮ್ಮೆ ಪೂರ್ಣ ಇಪಿಎಫ್ ಹಣ ಹಿಂಪಡೆಯಲು ಅವಕಾಶ

ಉದ್ಯೋಗಿ ಕೆಲಸಕ್ಕೆ ಸೇರಿದ ಬಳಿಕ ಯಾವಾಗೇ ಸತ್ತರೂ ಕನಿಷ್ಠ 50,000 ರೂ ಪರಿಹಾರವನ್ನು ಅವರ ಕುಟುಂಬಕ್ಕೆ ನೀಡಲಾಗುತ್ತದೆ.

ಮತ್ತೊಂದು ಅಂಶವೆಂದರೆ, ಉದ್ಯೋಗಿಯ ಇಪಿಎಫ್ ಅಕೌಂಟ್​​ಗೆ ಆರು ತಿಂಗಳು ಯಾವುದೇ ಕೊಡುಗೆ ಬಂದಿಲ್ಲ, ಆದರೆ ಉದ್ಯೋಗಿ ಸಾಯುವಾಗ ಇನ್ನೂ ಕೂಡ ಕೆಲಸ ಬಿಟ್ಟಿಲ್ಲ ಎಂದಾದಲ್ಲಿ ಆಗಲೂ ಕೂಡ ಕುಟುಂಬಕ್ಕೆ ಪರಿಹಾರ ಸಿಗುತ್ತದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ