AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉದ್ಯೋಗಸೃಷ್ಟಿಯಲ್ಲಿ ಹಿನ್ನಡೆ ಇಲ್ಲ; ಜುಲೈನಲ್ಲಿ 21 ಲಕ್ಷ ಹೊಸ ಇಪಿಎಫ್ ಸದಸ್ಯರ ಸೇರ್ಪಡೆ

2025 July Payroll data: 2025ರ ಜುಲೈ ತಿಂಗಳಲ್ಲಿ 21 ಲಕ್ಷ ಹೊಸ ಇಪಿಎಫ್ ಸದಸ್ಯರ ಸೇರ್ಪಡೆಯಾಗಿದೆ. ಏಪ್ರಿಲ್​ನಿಂದ ಆರಂಭವಾಗಿ ಜಲೈವರೆಗೂ ಇಪಿಎಫ್ ಹೊಸ ಸದಸ್ಯರ ಸೇರ್ಪಡೆ ಸಂಖ್ಯೆ ನಿರಂತರವಾಗಿ ಏರುತ್ತಿದೆ. ಕರ್ನಾಟಕ ಹಾಗೂ ದಕ್ಷಿಣದ ಇತರ ರಾಜ್ಯಗಳಲ್ಲಿ ಅತಿಹೆಚ್ಚು ಇಪಿಎಫ್ ಸದಸ್ಯರಿದ್ದಾರೆ. ಇಲ್ಲಿಯೇ ಅತಿಹೆಚ್ಚು ಉದ್ಯೋಗಗಳಿರುವುದು ಸ್ಪಷ್ಟವಾಗಿದೆ.

ಉದ್ಯೋಗಸೃಷ್ಟಿಯಲ್ಲಿ ಹಿನ್ನಡೆ ಇಲ್ಲ; ಜುಲೈನಲ್ಲಿ 21 ಲಕ್ಷ ಹೊಸ ಇಪಿಎಫ್ ಸದಸ್ಯರ ಸೇರ್ಪಡೆ
ಉದ್ಯೋಗ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Sep 25, 2025 | 12:09 PM

Share

ನವದೆಹಲಿ, ಸೆಪ್ಟೆಂಬರ್ 25: ಭಾರತದ ಉದ್ಯೋಗಸೃಷ್ಟಿ ಪ್ರಕ್ರಿಯೆ ಉತ್ತಮವಾಗಿ ಸಾಗುತ್ತಿದೆ. ಇಪಿಎಫ್ ಸದಸ್ಯರ ಸಂಖ್ಯೆ ಸ್ಥಿರವಾಗಿ ಏರುತ್ತಿರುವುದು ಇದಕ್ಕೆ ಸಾಕ್ಷಿಯಾಗಿದೆ. ಇಪಿಎಫ್​ಒ (EPFO) ಬಿಡುಗಡೆ ಮಾಡಿದ ದತ್ತಾಂಶದ ಪ್ರಕಾರ, ಜುಲೈ ತಿಂಗಳಲ್ಲಿ ಸೇರ್ಪಡೆಯಾದ ಸದಸ್ಯರ ಸಂಖ್ಯೆ ನಿವ್ವಳ 21.04 ಲಕ್ಷದಷ್ಟು ಇದೆ. ಹಿಂದಿನ ವರ್ಷದ ಇದೇ ತಿಂಗಳಿಗೆ ಹೋಲಿಸಿದರೆ ಈ ಬಾರಿ ನಿವ್ವಳ ಇಪಿಎಫ್ ಸದಸ್ಯರ ಸೇರ್ಪಡೆ ಶೇ. 5.6ರಷ್ಟು ಹೆಚ್ಚಾಗಿದೆ.

ಈ ವರ್ಷ (2025-26) ಇಪಿಎಫ್ ಸದಸ್ಯರ ಸೇರ್ಪಡೆ ಪ್ರಮಾಣ ತಿಂಗಳಿಂದ ತಿಂಗಳಿಗೆ ಏರುತ್ತಲೇ ಇರುವುದು ಗಮನಾರ್ಹ ಸಂಗತಿ. ಏಪ್ರಿಲ್​ನಲ್ಲಿ 14.3 ಲಕ್ಷ, ಮೇ ತಿಂಗಳಲ್ಲಿ 14.6 ಲಕ್ಷ, ಜೂನ್ ತಿಂಗಳಲ್ಲಿ 19 ಲಕ್ಷ ಹಾಗೂ ಜುಲೈನಲ್ಲಿ 21 ಲಕ್ಷ ಸಂಖ್ಯೆಯಲ್ಲಿ ಇಪಿಎಫ್ ಸದಸ್ಯರ ಸೇರ್ಪಡೆಯಾಗಿದೆ. ಹೊಸ ಉದ್ಯೋಗಗಳ ಸೃಷ್ಟಿ ನಿರಂತರವಾಗಿ ಹೆಚ್ಚುತ್ತಿದೆ.

ಇದನ್ನೂ ಓದಿ: ಇಪಿಎಫ್​ಒದ ಬಹುನಿರೀಕ್ಷಿತ ಎಟಿಎಂ ಫೀಚರ್: ಜನವರಿಯಿಂದ ಸಿಗುತ್ತಾ ಈ ಸೌಲಭ್ಯ?

ಜೂನ್ ಮತ್ತು ಜುಲೈ ತಿಂಗಳಲ್ಲಿ ಹೊಸ ಉದ್ಯೋಗ ಸೃಷ್ಟಿ ಹೆಚ್ಚಲು ಬೇರೆಯೇ ಕಾರಣವಿರಬಹುದು. ಏಪ್ರಿಲ್, ಮೇ ತಿಂಗಳಲ್ಲಿ ಶೈಕ್ಷಣಿಕ ವರ್ಷ ಮುಗಿಯುತ್ತದೆ. ಪದವೀಧರರಾಗಿ ಹೊರಬರುವ ವಿದ್ಯಾರ್ಥಿಗಳು ಕೆಲಸಕ್ಕೆ ಸೇರಿಕೊಳ್ಳುವ ಸಂದರ್ಭ. ಹೀಗಾಗಿ, ಜೂನ್ ಮತ್ತು ಜುಲೈ ತಿಂಗಳಲ್ಲಿ ಹೆಚ್ಚಿನ ನೇಮಕಾತಿ ಆಗುವುದು ಸಹಜ.

ಹೊಸ ಇಪಿಎಫ್ ಸದಸ್ಯರಲ್ಲಿ 18-25 ವರ್ಷ ವಯೋಮಾನದವರೇ ಹೆಚ್ಚಿದ್ದಾರೆ. ಮಹಾರಾಷ್ಟ್ರ, ಕರ್ನಾಟಕ, ತಮಿಳುನಾಡು, ಗುಜರಾತ್, ಹರ್ಯಾಣ ಮತ್ತು ದೆಹಲಿ ರಾಜ್ಯಗಳಿಂದ ಹೆಚ್ಚು ಹೊಸ ಇಪಿಎಫ್ ಸದಸ್ಯರ ಸೇರ್ಪಡೆಯಾಗಿದೆ. ಅದರಲ್ಲೂ ದಕ್ಷಿಣ ರಾಜ್ಯಗಳು ಹೊಸ ಉದ್ಯೋಗಸೃಷ್ಟಿಯ ಕೇಂದ್ರ ಬಿಂದುಗಳೆನಿಸಿವೆ ಎಂದು ದತ್ತಾಂಶದಿಂದ ತಿಳಿದುಬರುತ್ತದೆ.

ಇದನ್ನೂ ಓದಿ: ಇಪಿಎಫ್​ಒನಲ್ಲಿ ಹೊಸ ಫೀಚರ್ಸ್; ಪಾಸ್​ಬುಕ್ ಲೈಟ್, ಟ್ರಾನ್ಸ್ಫರ್ ಸರ್ಟಿಫಿಕೇಟ್, ತ್ವರಿತ ಅನುಮೋದನೆ

ಐಟಿ, ಬಿಪಿ ಇತ್ಯಾದಿ ಸರ್ವಿಸಸ್ ಕ್ಷೇತ್ರ, ಎಂಜಿನಿಯರಿಂಗ್, ಕಟ್ಟಡ ನಿರ್ಮಾಣ, ಟ್ರೇಡಿಂಗ್ ಸೆಕ್ಟರ್​ಗಳಲ್ಲಿ ಹೆಚ್ಚು ಹೊಸ ಇಪಿಎಫ್ ಅಕೌಂಟ್​ಗಳು ಸೃಷ್ಟಿಯಾಗಿವೆ. ಟೆಕ್ಸ್​ಟೈಲ್, ಗಾರ್ಮೆಂಟ್ಸ್, ಸ್ವಚ್ಛತೆ ಸರ್ವಿಸ್​ನ ಕ್ಷೇತ್ರದಲ್ಲಿ ಅತಿಹೆಚ್ಚು ಉದ್ಯೋಗಗಳಿವೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?
ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು
ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು
ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?
ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?
ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​
ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​
ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ
ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ
ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ
ತುಂಗಭದ್ರಾ ಸೇತುವೆ ವೇಲೆ ಮತ್ತೊಂದು ಅಪಘಾತ: ಕಾರಿಗೆ ಗುದ್ದಿದ ಲಾರಿ
ತುಂಗಭದ್ರಾ ಸೇತುವೆ ವೇಲೆ ಮತ್ತೊಂದು ಅಪಘಾತ: ಕಾರಿಗೆ ಗುದ್ದಿದ ಲಾರಿ
ಶಾಸಕರಾದ ಬಳಿಕ ಸಮರ್ಥ್ ಮೊದಲ ಸಭೆಯಲ್ಲಿ ಏನೇನು ಆಯ್ತು?
ಶಾಸಕರಾದ ಬಳಿಕ ಸಮರ್ಥ್ ಮೊದಲ ಸಭೆಯಲ್ಲಿ ಏನೇನು ಆಯ್ತು?