AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

EPFO Website Down: ಇಪಿಎಫ್​ ಸರ್ವರ್ ಡೌನ್; ಇ-ಪಾಸ್​​ಬುಕ್ ಸೌಲಭ್ಯಕ್ಕೆ ಅಡಚಣೆ

ಉದ್ಯೋಗಿಗಳ ಭವಿಷ್ಯ ನಿಧಿ ಸಂಘಟನೆ ಇಪಿಎಫ್​ಒ ವೆಬ್​ಸೈಟ್​​​ ಸರ್ವರ್ ಡೌನ್ ಆಗಿದ್ದು, ಚಂದಾದಾರರು ಇ-ಪಾಸ್​​ಬುಕ್ ಸೇವೆ ಪಡೆಯುವುದಕ್ಕೆ ಗುರುವಾರ ಅಡಚಣೆಯಾಗಿದೆ.

EPFO Website Down: ಇಪಿಎಫ್​ ಸರ್ವರ್ ಡೌನ್; ಇ-ಪಾಸ್​​ಬುಕ್ ಸೌಲಭ್ಯಕ್ಕೆ ಅಡಚಣೆ
ಸಾಂದರ್ಭಿಕ ಚಿತ್ರ
Follow us
TV9 Web
| Updated By: Ganapathi Sharma

Updated on:Jan 12, 2023 | 2:41 PM

ನವದೆಹಲಿ: ಉದ್ಯೋಗಿಗಳ ಭವಿಷ್ಯ ನಿಧಿ ಸಂಘಟನೆ ಇಪಿಎಫ್​ಒ (EPFO) ವೆಬ್​ಸೈಟ್​​​ ಸರ್ವರ್ ಡೌನ್ ಆಗಿದ್ದು, ಚಂದಾದಾರರು ಇ-ಪಾಸ್​​ಬುಕ್ ಸೇವೆ ಪಡೆಯುವುದಕ್ಕೆ ಗುರುವಾರ ಅಡಚಣೆಯಾಗಿದೆ. ಇ-ಪಾಸ್​ಬುಕ್​ಗೆ ಲಾಗಿನ್ ಆಗಲು ಪ್ರಯತ್ನಿಸಿದರೆ, ‘ತಾಂತ್ರಿಕ ನಿರ್ವಹಣೆಯ ಸಮಸ್ಯೆಗಳಿಂದಾಗಿ ಈ ಅಡಚಣೆ ಉಂಟಾಗಿದೆ. ಇದಕ್ಕಾಗಿ ವಿಷಾದಿಸುತ್ತೇವೆ’ ಎಂಬ ಸಂದೇಶ ಕಾಣಿಸುತ್ತಿವೆ. ಇಪಿಎಫ್​ಒ ವೆಬ್​ಸೈಟ್​ನಲ್ಲೇ ಇರುವ ಮಾಹಿತಿ ಪ್ರಕಾರ, ಸಂಜೆ 5 ಗಂಟೆ ವೇಳೆ ಸಮಸ್ಯೆ ಬಗೆಹರಿಯಲಿದೆ ಎನ್ನಲಾಗಿದೆ. ಕೇಂದ್ರ ಸರ್ಕಾರದ ಡಿಜಿಟಲ್ ಉಪಕ್ರಮದ ಅಡಿ ಆರಂಭಿಸಲಾಗಿರುವ ‘ಉಮಂಗ್’ ಆ್ಯಪ್​​ನಲ್ಲಿಯೂ ಇ-ಪಾಸ್​​ಬುಕ್ ದೊರೆಯುತ್ತಿಲ್ಲ ಎನ್ನಲಾಗಿದೆ. ನಿನ್ನೆಯಿಂದ ಎಪಿಎಫ್​ ಪೋರ್ಟಲ್​ ಲಾಗಿನ್ ಆಗಲು ಯತ್ನಿಸುತ್ತಿದ್ದು, ಸಾಧ್ಯವಾಗುತ್ತಿಲ್ಲ. ಪಾಸ್​ಬುಕ್ ಪೋರ್ಟಲ್ ಕೂಡ ಸಂಪೂರ್ಣವಾಗಿ ಡೌನ್ ಆಗಿದೆ ಎಂದು ಇಪಿಎಫ್​ಒ ಚಂದಾದಾರರೊಬ್ಬರು ಟ್ವೀಟ್ ಮಾಡಿದ್ದಾರೆ.

ಇಪಿಎಫ್​ಒ ಪಾಸ್​ಬುಕ್ ಸೇವೆ ಕಳೆದ ಕೆಲವು ದಿನಗಳಿಂದ ಡೌನ್ ಆಗಿದೆ. ಯಾವಾಗ ಇದು ಸರಿಯಾಗಲಿದೆ?’ ಎಂದು ಚಂದಾದಾರರೊಬ್ಬರು ಟ್ವೀಟ್ ಮೂಲಕ ಪ್ರಶ್ನಿಸಿದ್ದಾರೆ

ಪ್ರತಿ ತಿಂಗಳು ಎಷ್ಟು ಪಿಎಫ್ ಮೊತ್ತ ಜಮೆಯಾಗಿದೆ ಎಂಬುದನ್ನು ಪರಿಶೀಲಿಸಲು ಇಪಿಎಫ್​ಒ ಇ-ಪಾಸ್​​ಬುಕ್ ನೆರವಾಗುತ್ತದೆ. ಚಂದಾದಾರರೇ, ಅನನುಕೂಲತೆಗಾಗಿ ವಿಷಾದಿಸುತ್ತೇವೆ. ದಯವಿಟ್ಟು ಸ್ವಲ್ಪ ಸಮಯ ಕಾಯಿರಿ. ಸದ್ಯದಲ್ಲೇ ಸಮಸ್ಯೆ ಬಗೆಹರಿಯಲಿದೆ ಎಂದು ಇಪಿಎಫ್​ಒ ಟ್ವೀಟ್ ಮಾಡಿದೆ.

ಇದನ್ನೂ ಓದಿ: EPFO New Subscribers: ಅಕ್ಟೋಬರ್​ನಲ್ಲಿ 12.94 ಲಕ್ಷ ಮಂದಿ ಇಪಿಎಫ್​ಒಗೆ ಸೇರ್ಪಡೆ; ಉದ್ಯೋಗ ಹೆಚ್ಚಳವೂ ಕಾರಣ

ಉದ್ಯೋಗಿಗಳ ಭವಿಷ್ಯ ನಿಧಿಗೆ ಸಂಬಂಧಿಸಿದ ಎಲ್ಲ ಆನ್​ಲೈನ್ ವ್ಯವಹಾರಗಳು ಇಪಿಎಫ್​ಒ ವೆಬ್​ಸೈಟ್ ಮೂಲಕ ನಡೆಯುತ್ತವೆ. ಬ್ಯಾಲೆನ್ಸ್ ಪರಿಶೀಲನೆ, ಪಿಎಫ್​ ಮೊತ್ತದ ವರ್ಗಾವಣೆ, ಕ್ಲೇಮ್ ಮತ್ತು ಕ್ಲೇಮ್ ಸಂಬಂಧಿತ ವಿವರಗಳು, ಇತ್ಯಾದಿ ಎಲ್ಲ ಚಟುವಟಿಕೆಗಳಿಗೂ ಇಪಿಎಫ್​ಒ ವೆಬ್​ಸೈಟೇ ಆಧಾರ. ಹೀಗಾಗಿ ವೆಬ್​ಸೈಟ್ ಸರ್ವರ್ ಡೌನ್ ಆಗಿರುವುದರಿಂದ ಲಕ್ಷಾಂತರ ಮಂದಿ ಬಳಕೆದಾರರಿಗೆ ತೊಂದರೆಯಾಗುವಂತಾಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:34 pm, Thu, 12 January 23

ಕೃಷ್ಣಾ ನದಿ ಪ್ರವಾಹಕ್ಕೆ ಚಿಕ್ಕೋಡಿ ಸುತ್ತಮುತ್ತ 7 ಸೇತುವೆಗಳು ಜಲಾವೃತ
ಕೃಷ್ಣಾ ನದಿ ಪ್ರವಾಹಕ್ಕೆ ಚಿಕ್ಕೋಡಿ ಸುತ್ತಮುತ್ತ 7 ಸೇತುವೆಗಳು ಜಲಾವೃತ
ಮಂಗಳೂರಿನಲ್ಲಿ ನಿಗೂಢವಾಗಿ ಸಾವನ್ನಪ್ಪುತ್ತಿವೆ ಜಾನುವಾರುಗಳು
ಮಂಗಳೂರಿನಲ್ಲಿ ನಿಗೂಢವಾಗಿ ಸಾವನ್ನಪ್ಪುತ್ತಿವೆ ಜಾನುವಾರುಗಳು
ಮಂಡ್ಯ: ಮಾನಸಿಕ ಅಸ್ವಸ್ಥ ತಾಯಿಯನ್ನು ಬೀದಿಯಲ್ಲಿ ಬಿಟ್ಟು ಹೋದ ಮಗ
ಮಂಡ್ಯ: ಮಾನಸಿಕ ಅಸ್ವಸ್ಥ ತಾಯಿಯನ್ನು ಬೀದಿಯಲ್ಲಿ ಬಿಟ್ಟು ಹೋದ ಮಗ
ಮನೆಯಲ್ಲಿ ದೇವರ ವಿಗ್ರಹಗಳನ್ನು ಪಶ್ಚಿಮಾಭಿಮುಖವಾಗಿ ಇಡಬಹುದಾ?
ಮನೆಯಲ್ಲಿ ದೇವರ ವಿಗ್ರಹಗಳನ್ನು ಪಶ್ಚಿಮಾಭಿಮುಖವಾಗಿ ಇಡಬಹುದಾ?
Daily horoscope: ರವಿ ಮಿಥುನ ರಾಶಿಯಲ್ಲಿ, ಚಂದ್ರ ವೃಷಭ ರಾಶಿಯಲ್ಲಿ ಸಂಚಾರ
Daily horoscope: ರವಿ ಮಿಥುನ ರಾಶಿಯಲ್ಲಿ, ಚಂದ್ರ ವೃಷಭ ರಾಶಿಯಲ್ಲಿ ಸಂಚಾರ
ಬೆಂಗಳೂರಿನಲ್ಲಿ ಮತ್ತೆ ಮಳೆ: ವೀಕೆಂಡ್​ನಲ್ಲಿ ಸಿಲಿಕಾನ್​ ಸಿಟಿ ಕೂಲ್​ ಕೂಲ್
ಬೆಂಗಳೂರಿನಲ್ಲಿ ಮತ್ತೆ ಮಳೆ: ವೀಕೆಂಡ್​ನಲ್ಲಿ ಸಿಲಿಕಾನ್​ ಸಿಟಿ ಕೂಲ್​ ಕೂಲ್
ತುಮಕೂರು: ಹಾಡಹಗಲೇ ಕಾರಿನ ಗಾಜು ಒಡೆದು 1 ಲಕ್ಷ ರೂ. ಕಳವು
ತುಮಕೂರು: ಹಾಡಹಗಲೇ ಕಾರಿನ ಗಾಜು ಒಡೆದು 1 ಲಕ್ಷ ರೂ. ಕಳವು
ದರ್ಶನ್ ಮನೆ ಪಕ್ಕವೇ ನಾಗಶೇಖರ್ ಮನೆ; ಹೇಗಿದೆ ಇಬ್ಬರ ನಡುವಿನ ನಂಟು?
ದರ್ಶನ್ ಮನೆ ಪಕ್ಕವೇ ನಾಗಶೇಖರ್ ಮನೆ; ಹೇಗಿದೆ ಇಬ್ಬರ ನಡುವಿನ ನಂಟು?
ಅವರೇ ದೊಡ್ಡವರು, ನಾನು ಕೆಟ್ಟವನು, ಕಾಲವೇ ನಿರ್ಧರಿಸಲಿ: ನಿರ್ದೇಶಕ ನಾಗಶೇಖರ್
ಅವರೇ ದೊಡ್ಡವರು, ನಾನು ಕೆಟ್ಟವನು, ಕಾಲವೇ ನಿರ್ಧರಿಸಲಿ: ನಿರ್ದೇಶಕ ನಾಗಶೇಖರ್
17 ಕೋಟಿ ರೂ. ಮಾಹಿತಿ ಇಲ್ಲ: ಮತ್ತೊಂದು ಬಾಂಬ್ ಸಿಡಿಸಿದ ಬಿಆರ್ ಪಾಟೀಲ್
17 ಕೋಟಿ ರೂ. ಮಾಹಿತಿ ಇಲ್ಲ: ಮತ್ತೊಂದು ಬಾಂಬ್ ಸಿಡಿಸಿದ ಬಿಆರ್ ಪಾಟೀಲ್