ಇಪಿಎಫ್​ಒ ಅಪ್​ಡೇಟ್; ಸದಸ್ಯ ಸತ್ತಾಗ ಕ್ಲೇಮ್ ಮಾಡುವ ಪ್ರಕ್ರಿಯೆ ಈಗ ಸರಳ

EPF death claim simplified: ಆಧಾರ್​ನಲ್ಲಿರುವ ಮಾಹಿತಿ ಈಗ ಬಹಳಷ್ಟು ದಾಖಲೆಗೆ ಆಧಾರವಾಗಿರುತ್ತದೆ. ಆಧಾರ್​ನಲ್ಲಿರುವ ಹೆಸರು ನಿಖರವಾಗಿರಬೇಕು. ಅದರಂತೆಯೇ ಯುಎಎನ್​ನಲ್ಲೂ ಇರಬೇಕು. ವ್ಯತ್ಯಾಸ ಇದ್ದರೆ ಕ್ಲೇಮ್ ಮಾಡುವುದು ಕಷ್ಟ. ಸದಸ್ಯ ಸತ್ತ ಬಳಿಕ ಅವರ ಪಿಎಫ್ ಹಣಕ್ಕೆ ಕ್ಲೇಮ್ ಮಾಡುವಾಗ, ಆಧಾರ್ ಮತ್ತು ಯುಎಎನ್ ಮಾಹಿತಿ ತಾಳೆಯಾಗದಿದ್ದರೆ ಕಷ್ಟವಾಗುತ್ತದೆ. ಇಂಥ ಸಂದರ್ಭದಲ್ಲಿ ಇಪಿಎಫ್​ಒ ಸಂಸ್ಥೆ ಒಂದಷ್ಟು ವಿನಾಯಿತಿ ಕೊಟ್ಟಿದೆ.

ಇಪಿಎಫ್​ಒ ಅಪ್​ಡೇಟ್; ಸದಸ್ಯ ಸತ್ತಾಗ ಕ್ಲೇಮ್ ಮಾಡುವ ಪ್ರಕ್ರಿಯೆ ಈಗ ಸರಳ
ಇಪಿಎಫ್​
Follow us
|

Updated on: May 20, 2024 | 12:37 PM

ಇಪಿಎಫ್ ಖಾತೆ ರಚಿಸುವಾಗ ಆಧಾರ್ ಮತ್ತು ಯುಎಎನ್ ಮಾಹಿತಿ ಒಂದಕ್ಕೊಂದು ತಾಳೆಯಾಗಬೇಕು. ಇಲ್ಲದಿದ್ದರೆ ಹಣ ಹಿಂಪಡೆಯುವಾಗ (epf claim) ಕಷ್ಟವಾಗುತ್ತದೆ. ಬಹಳಷ್ಟು ಇಪಿಎಫ್ ಸದಸ್ಯರ ಯುಎಎನ್ ಮತ್ತು ಆಧಾರ್ ವಿವರದಲ್ಲಿ ಹೊಂದಿಕೆ ಆಗಿರುವುದಿಲ್ಲ. ಒಂದೋ ಆಧಾರ್​ನಲ್ಲಿರುವ ಮಾಹಿತಿಯನ್ನು ಬದಲಿಸಬೇಕು. ಅಥವಾ ಯುಎಎನ್ ಮಾಹಿತಿ ಬದಲಿಸಬೇಕು. ಆದರೆ, ಆಧಾರ್ ಮತ್ತು ಯುಎಎನ್ ಹೊಂದಿಕೆಯಾಗದೇ ಇರುವ ಇಪಿಎಫ್ ಖಾತೆದಾರ ಆಕಸ್ಮಿಕವಾಗಿ ಮೃತಪಟ್ಟಾಗ ನಾಮಿನಿ ಹಣ ಕ್ಲೇಮ್ ಮಾಡುವಾಗ ತೊಂದರೆ ಆಗುತ್ತದೆ. ಸಾವನ್ನಪ್ಪಿದ ವ್ಯಕ್ತಿಯ ಆಧಾರ್ ದಾಖಲೆಯನ್ನು ತಿದ್ದಲು ಅಸಾಧ್ಯವಾಗುತ್ತದೆ. ಈ ಹಿನ್ನೆಲೆಯಲ್ಲಿ ಇಪಿಎಫ್​ಒ ಸಂಸ್ಥೆ ಹೊಸ ನಿಯಮವೊಂದನ್ನು ತಂದಿದ್ದು, ಇಂಥ ಪ್ರಸಂಗಗಳಲ್ಲಿ ಇಪಿಎಫ್ ಡೆತ್ ಕ್ಲೇಮ್ ಪ್ರಕ್ರಿಯೆಯನ್ನು ಸರಳಗೊಳಿಸಿದೆ.

ಇಪಿಎಫ್ ಸದಸ್ಯ ಸತ್ತ ಬಳಿಕ, ಅವರ ಆಧಾರ್ ವಿವರ ತಾಳೆಯಾಗದೇ ಇದ್ದರೂ ನಾಮಿನಿಯು ಪಿಎಫ್ ಹಣ ಕ್ಲೇಮ್ ಮಾಡಲು ಈಗ ಅವಕಾಶ ಇದೆ. ಇಲ್ಲಿ ಯುಎಎನ್​ನಲ್ಲಿರುವ ವಿವರ ಸರಿ ಇದ್ದು, ಆಧಾರ್​ನಲ್ಲಿ ಮಾತ್ರವೇ ವ್ಯತ್ಯಾಸ ಇದ್ದಂತಹ ಪ್ರಕರಣಗಳಿಗೆ ಮಾತ್ರ ಈ ಹೊಸ ನಿಯಮವು ಸಹಾಯಕ್ಕೆ ಬರುತ್ತದೆ.

ಇದನ್ನೂ ಓದಿ: ಹೊಸ ಇಪಿಎಫ್​ಒ ಆಟೊ ಸೆಟಲ್ಮೆಂಟ್ ನಿಯಮ; ಸುಲಭವಾಗಿ ಹಣ ಹಿಂಪಡೆಯಿರಿ

ಯುಎಎನ್ ಮಾಹಿತಿ ತಪ್ಪಾಗಿದ್ದರೆ?

‘ಒಂದು ವೇಳೆ ಆಧಾರ್ ಡಾಟಾ ಸರಿಯಾಗಿದ್ದು ಯುಎಎನ್​ನಲ್ಲಿ ತಪ್ಪಾಗಿದ್ದರೆ, 2024ರ ಮಾರ್ಚ್ 26ರಂದು ಹೊರಡಿಸಲಾದ ಮಾರ್ಗಸೂಚಿಯ ಪ್ಯಾರಾ 6.9 ಮತ್ತು 6.10ರಲ್ಲಿನ ನಿಯಮಗಳನ್ನು ಅನುಸರಿಸಬೆಕು. ಆಧಾರ್ ಮೂಲಕ ಯುಎಎನ್​ನಲ್ಲಿರುವ ದತ್ತಾಂಶವನ್ನು ಬದಲಾಯಿಸಬೇಕಾಗುತ್ತದೆ,’ ಎಂದು ಇಪಿಎಫ್​ಒ ಸಂಸ್ಥೆ ಇತ್ತೀಚೆಗೆ ಹೊರಡಿಸಿದ ಸುತ್ತೋಲೆಯಲ್ಲಿ ತಿಳಿಸಿದೆ.

ಸತ್ತ ಪಿಎಫ್ ಸದಸ್ಯರ ಆಧಾರ್ ಖಾತೆಗಳು ಡೀ ಆ್ಯಕ್ಟಿವೇಟ್ ಆಗಿರುವುದು, ತಾಂತ್ರಿಕ ಸಮಸ್ಯೆಗಳು ಎದುರಾಗುವುದು ಇತ್ಯಾದಿ ಕಾರಣಗಳಿಂದ ಆಧಾರ್ ಅಥೆಂಟಿಕೇಶನ್ ಪಡೆಯಲು ಸಾಧ್ಯವಾಗದೇ ಹೋಗಬಹುದು. ಇಂಥ ಸನ್ನಿವೇಶದಲ್ಲಿ ಇಪಿಎಫ್​ಒ ಈ ಕೆಳಗಿನ ಕ್ರಮಗಳನ್ನು ಅನುಸರಿಸಲು ತಿಳಿಸಿದೆ.

ಇದನ್ನೂ ಓದಿ: ಇಪಿಎಫ್​ಒ ಹೊಸ ಆದೇಶ: ವೈದ್ಯಕೀಯ ಚಿಕಿತ್ಸೆಗೆ 1 ಲಕ್ಷ ರೂವರೆಗೆ ಪಿಎಫ್ ಹಣ ಪಡೆಯುವ ಅವಕಾಶ

  • ಸಾವಿನ ಪ್ರಕರಣಗಳಲ್ಲಿ ಆಧಾರ್ ಸೀಡಿಂಗ್ ಇಲ್ಲದೇ ಕ್ಲೈಮ್ ಪಡೆಯಲು ತಾತ್ಕಾಲಿಕವಾಗಿ ಅನುಮತಿಸಬಹುದು.
  • ಇ-ಆಫೀಸ್ ಫೈಲ್ ಮೂಲಕ ಆಫೀಸರ್ ಇನ್​ಚಾರ್ಜ್ ಅವರಿಂದ ಅನುಮೋದನೆ ಪಡೆಯಬೇಕು.
  • ಸಾವನ್ನಪ್ಪಿದ ಇಪಿಎಫ್ ಸದಸ್ಯನ ಪಿಎಫ್ ಹಣಕ್ಕೆ ಕ್ಲೇಮ್ ಮಾಡುವ ವ್ಯಕ್ತಿಯ ವಿವರಗಳನ್ನು ಸೂಕ್ತವಾಗಿ ಪರಿಶೀಲಿಸಬೇಕು

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ರಸ್ತೆಯಲ್ಲಿ ತಳ್ಳುಗಾಡಿ ಇಟ್ಟಿದ್ದಕ್ಕೆ ಗಲಾಟೆ: ವ್ಯಾಪಾರಿ ಮೇಲೆ ಪಿಸಿ ಹಲ್ಲೆ
ರಸ್ತೆಯಲ್ಲಿ ತಳ್ಳುಗಾಡಿ ಇಟ್ಟಿದ್ದಕ್ಕೆ ಗಲಾಟೆ: ವ್ಯಾಪಾರಿ ಮೇಲೆ ಪಿಸಿ ಹಲ್ಲೆ
ಮೆಟ್ರೋದಲ್ಲಿ ಪರ್ಸ್ ಕದಿಯುವಾಗ ಸಿಕ್ಕಿಬಿದ್ದ ಕಳ್ಳನಿಗೆ ಥಳಿಸಿದ ಪ್ರಯಾಣಿಕರು
ಮೆಟ್ರೋದಲ್ಲಿ ಪರ್ಸ್ ಕದಿಯುವಾಗ ಸಿಕ್ಕಿಬಿದ್ದ ಕಳ್ಳನಿಗೆ ಥಳಿಸಿದ ಪ್ರಯಾಣಿಕರು
ನೀರಲ್ಲಿ ಕಾರು ಕೊಚ್ಚಿಹೋದರೂ ಅದರಲ್ಲಿದ್ದ ನಾಲ್ವರು ಬದುಕುಳಿದಿದ್ದು ಪವಾಡ
ನೀರಲ್ಲಿ ಕಾರು ಕೊಚ್ಚಿಹೋದರೂ ಅದರಲ್ಲಿದ್ದ ನಾಲ್ವರು ಬದುಕುಳಿದಿದ್ದು ಪವಾಡ
ನಡುರಸ್ತೆಯಲ್ಲೇ ಚೂಪಾದ ಆಯುಧದಿಂದ ಥಳಿಸಿ ಕೊಂದ ಜನರು; ವಿಡಿಯೋ ವೈರಲ್
ನಡುರಸ್ತೆಯಲ್ಲೇ ಚೂಪಾದ ಆಯುಧದಿಂದ ಥಳಿಸಿ ಕೊಂದ ಜನರು; ವಿಡಿಯೋ ವೈರಲ್
ಪ್ರತಾಪ್ ಕುಡಿತದ ದಾಸನಾಗಿದ್ದ, ಮಕ್ಕಳಿಲ್ಲದ ಕೊರಗು ಕಾಡುತಿತ್ತು: ಪಾಟೀಲ್
ಪ್ರತಾಪ್ ಕುಡಿತದ ದಾಸನಾಗಿದ್ದ, ಮಕ್ಕಳಿಲ್ಲದ ಕೊರಗು ಕಾಡುತಿತ್ತು: ಪಾಟೀಲ್
ಜು.12ಕ್ಕೆ ದರ್ಶನ್ ನಟನೆಯ ‘ಶಾಸ್ತ್ರಿ’ ಮರು ಬಿಡುಗಡೆ; ಏನಿದು ಪ್ಲ್ಯಾನ್?
ಜು.12ಕ್ಕೆ ದರ್ಶನ್ ನಟನೆಯ ‘ಶಾಸ್ತ್ರಿ’ ಮರು ಬಿಡುಗಡೆ; ಏನಿದು ಪ್ಲ್ಯಾನ್?
ಉಡುಪಿಯಲ್ಲಿ ಪ್ರವಾಹದ ನೀರಿನಲ್ಲಿ ಸಿಲುಕಿದ್ದ ನಾಯಿಯ ರಕ್ಷಣೆಯ ವಿಡಿಯೋ ವೈರಲ್
ಉಡುಪಿಯಲ್ಲಿ ಪ್ರವಾಹದ ನೀರಿನಲ್ಲಿ ಸಿಲುಕಿದ್ದ ನಾಯಿಯ ರಕ್ಷಣೆಯ ವಿಡಿಯೋ ವೈರಲ್
ರಷ್ಯಾಗೆ ಆಗಮಿಸಿದ ಮೋದಿಗೆ ಭಾರತೀಯರಿಂದ ನೃತ್ಯದ ಮೂಲಕ ಅದ್ದೂರಿ ಸ್ವಾಗತ
ರಷ್ಯಾಗೆ ಆಗಮಿಸಿದ ಮೋದಿಗೆ ಭಾರತೀಯರಿಂದ ನೃತ್ಯದ ಮೂಲಕ ಅದ್ದೂರಿ ಸ್ವಾಗತ
ಮಹಾರಾಷ್ಟ್ರ: ಉಕ್ಕಿದ ಹಿರಣ್ಯಕೇಶಿ ನದಿ, ಬೆಳಗಾವಿ ಗಡಿಭಾಗಕ್ಕೆ ಹರಿದ ನೀರು
ಮಹಾರಾಷ್ಟ್ರ: ಉಕ್ಕಿದ ಹಿರಣ್ಯಕೇಶಿ ನದಿ, ಬೆಳಗಾವಿ ಗಡಿಭಾಗಕ್ಕೆ ಹರಿದ ನೀರು
ದರ್ಶನ್​ರನ್ನು ನೋಡಲು ವಕೀಲನ ಜತೆ ಸೆಂಟ್ರಲ್ ಜೈಲಿಗೆ ಬಂದ ನಿರ್ಮಾಪಕ ಕೆ ಮಂಜು
ದರ್ಶನ್​ರನ್ನು ನೋಡಲು ವಕೀಲನ ಜತೆ ಸೆಂಟ್ರಲ್ ಜೈಲಿಗೆ ಬಂದ ನಿರ್ಮಾಪಕ ಕೆ ಮಂಜು