ಇಪಿಎಫ್​ಒ ಅಪ್​ಡೇಟ್ಸ್; ಜುಲೈ ತಿಂಗಳಲ್ಲಿ ಹೊಸ ದಾಖಲೆ; ಕರ್ನಾಟಕ ಸೇರಿ 5 ರಾಜ್ಯಗಳಲ್ಲೇ ಅತಿಹೆಚ್ಚು ಹೊಸ ಸದಸ್ಯರು

EPFO July data: ಎಂಪ್ಲಾಯೀ ಪ್ರಾವಿಡೆಂಟ್ ಫಂಡ್ ವ್ಯಾಪ್ತಿಗೆ ಜುಲೈ ತಿಂಗಳಲ್ಲಿ 19.94 ಲಕ್ಷ ಸದಸ್ಯರ ಸೇರ್ಪಡೆಯಾಗಿದೆ. ಒಂದು ತಿಂಗಳಲ್ಲಿ ಇಷ್ಟೊಂದು ಸದಸ್ಯತ್ವ ಹೆಚ್ಚಳ ಆಗಿರುವುದು ಇದೇ ಮೊದಲು ಎನ್ನಲಾಗಿದೆ. ಈ ಸೇರ್ಪಡೆಯಲ್ಲಿ ಕರ್ನಾಟಕ ಸೇರಿ ಐದು ರಾಜ್ಯಗಳ ಪಾಲು ಹತ್ತಿರಹತ್ತಿರ ಶೇ. 60ರಷ್ಟಿದೆ. ಮಹಾರಾಷ್ಟ್ರದಲ್ಲಿ ಗರಿಷ್ಠ ಇದೆ.

ಇಪಿಎಫ್​ಒ ಅಪ್​ಡೇಟ್ಸ್; ಜುಲೈ ತಿಂಗಳಲ್ಲಿ ಹೊಸ ದಾಖಲೆ; ಕರ್ನಾಟಕ ಸೇರಿ 5 ರಾಜ್ಯಗಳಲ್ಲೇ ಅತಿಹೆಚ್ಚು ಹೊಸ ಸದಸ್ಯರು
ಇಪಿಎಫ್​ಒ
Follow us
|

Updated on: Sep 24, 2024 | 10:49 AM

ನವದೆಹಲಿ, ಸೆಪ್ಟೆಂಬರ್ 24: ಜುಲೈ ತಿಂಗಳಲ್ಲಿ ಇಪಿಎಫ್ ವ್ಯಾಪ್ತಿಗೆ 20 ಲಕ್ಷ ಸದಸ್ಯರು ಸೇರ್ಪಡೆಯಾಗಿದ್ದಾರೆ. ಒಂದು ತಿಂಗಳಲ್ಲಿ ಇಷ್ಟೊಂದು ಸಂಖ್ಯೆ ಹೆಚ್ಚಳ ಇದೇ ಮೊದಲು. ಅಂತೆಯೇ ಇದು ಸಾರ್ವಕಾಲಿಕ ದಾಖಲೆ ಆಗಿದೆ. ಇಪಿಎಫ್​ಒ ಸಂಸ್ಥೆ ಬಿಡುಗಡೆ ಮಾಡಿದ ದತ್ತಾಂಶದ ಪ್ರಕಾರ ಜುಲೈ ತಿಂಗಳಲ್ಲಿ 19.94 ಲಕ್ಷ ಸದಸ್ಯರ ಸೇರ್ಪಡೆಯಾಗಿದೆ. ಈ ಪೈಕಿ 10.52 ಲಕ್ಷದಷ್ಟು ಹೊಸ ಸದಸ್ಯರೇ ಇದ್ದಾರೆ. ಅಂದರೆ ಮೊದಲ ಬಾರಿಗೆ ಇಪಿಎಫ್ ಖಾತೆ ಪಡೆದವರ ಸಂಖ್ಯೆ ಜುಲೈನಲ್ಲಿ 10 ಲಕ್ಷಕ್ಕೂ ಹೆಚ್ಚು. ಹಿಂದಿನ ತಿಂಗಳಿಗೆ ಹೋಲಿಸಿದರೆ ಶೇ. 2.66ರಷ್ಟು ಹೆಚ್ಚಳವಾಗಿದೆ. ಹಿಂದಿನ ವರ್ಷದ ಜುಲೈ ತಿಂಗಳಿಗೆ ಹೋಲಿಸಿದರೆ ಹೊಸ ಸದಸ್ಯರ ಸಂಖ್ಯೆಯಲ್ಲಿ ಶೇ. 2.43ರಷ್ಟು ಏರಿಕೆ ಆಗಿದೆ.

ಹೊಸ ಸದಸ್ಯತ್ವವು ಉದ್ಯೋಗ ಸೃಷ್ಟಿಯ ಪ್ರತಿಬಿಂಬವಾಗಿದೆ. ಹೀಗಾಗಿ, ಇಪಿಎಫ್​ಒನಲ್ಲಿನ ಹೊಸ ಸದಸ್ಯರ ಸಂಖ್ಯೆಯಲ್ಲಿ ಹೆಚ್ಚಳ ಆಗಿರುವುದು ಉದ್ಯೋಗಸೃಷ್ಟಿ ಹೆಚ್ಚಾಗಿರುವುದನ್ನು ತೋರಿಸುತ್ತಿದೆ. ಈ ವಿಚಾರವನ್ನು ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ನಿನ್ನೆ (ಸೆ. 23) ತಿಳಿಸಿದೆ.

ಕರ್ನಾಟಕ ಸೇರಿ ಐದು ರಾಜ್ಯಗಳಲ್ಲಿ ಅತಿಹೆಚ್ಚು ಹೊಸ ಸದಸ್ಯರು

ಇಪಿಎಫ್​ಗೆ ಸೇರ್ಪಡೆಯಾದ 20 ಲಕ್ಷ ಸದಸ್ಯರಲ್ಲಿ ಹೆಚ್ಚಿನ ಮಂದಿ ಐದು ರಾಜ್ಯಗಳಿಗೆ ಸೇರಿದವರಾಗಿದ್ದಾರೆ. ಕರ್ನಾಟಕ, ಮಹಾರಾಷ್ಟ್ರ, ತಮಿಳುನಾಡು, ಹರ್ಯಾಣ ಮತ್ತು ಗುಜರಾತ್ ರಾಜ್ಯಗಳಿಂದಲೇ ಒಟ್ಟು ಶೇ. 59.27ರಷ್ಟು ನಿವ್ವಳ ಸದಸ್ಯತ್ವ ಸೇರ್ಪಡೆಯಾಗಿದೆ. ಅಂದರೆ ಈ ಐದು ರಾಜ್ಯಗಳಿಂದ 11.82 ಲಕ್ಷ ಜನರು ಇಪಿಎಫ್ ಅಕೌಂಟ್ ತೆರೆದಿದ್ದಾರೆ. ಮಹಾರಾಷ್ಟ್ರ ರಾಜ್ಯವೊಂದರಲ್ಲೇ ಶೇ. 20ರಷ್ಟು ಹೊಸ ಸದಸ್ಯರಿರುವುದು ಗಮನಾರ್ಹ.

ಇದನ್ನೂ ಓದಿ: ಎಫ್​ ಅಂಡ್ ಒ ಟ್ರೇಡಿಂಗ್ ಮಾಡುವವರಲ್ಲಿ ಹಣ ಕಳೆದುಕೊಂಡವರೆಷ್ಟು, ಗೆದ್ದವರೆಷ್ಟು? ಕಣ್ತೆರೆಸುತ್ತೆ ಸೆಬಿ ದತ್ತಾಂಶ

ಮತ್ತೊಂದು ಕುತೂಹಲದ ಸಂಗತಿ ಎಂದರೆ ಇಪಿಎಫ್ ಅಕೌಂಟ್ ಮುಚ್ಚಲ್ಪಟ್ಟಿದ್ದ 14.65 ಲಕ್ಷ ಸದಸ್ಯರು ಜುಲೈನಲ್ಲಿ ಮತ್ತೆ ಇಪಿಎಫ್​ಒಗೆ ಸೇರ್ಪಡೆಯಾಗಿದ್ದಾರೆ. ಅಂದರೆ, ಉದ್ಯೋಗ ಬಿಟ್ಟಿದ್ದವರು ಮತ್ತೆ ಹೊಸ ಕೆಲಸಕ್ಕೆ ಸೇರ್ಪಡೆಯಾಗಿರುವುದನ್ನು ಇದು ಸೂಚಿಸುತ್ತದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ನಮ್ಮ ಪರ ತೀರ್ಪು ಬರದಿದ್ದರೆ ಸುಪ್ರೀಂ ಮೊರೆ ಹೋಗುತ್ತೇವೆಂದ ಸ್ನೇಹಮಯಿ ಕೃಷ್ಣ
ನಮ್ಮ ಪರ ತೀರ್ಪು ಬರದಿದ್ದರೆ ಸುಪ್ರೀಂ ಮೊರೆ ಹೋಗುತ್ತೇವೆಂದ ಸ್ನೇಹಮಯಿ ಕೃಷ್ಣ
Vijayapura Rain: ವಿಜಯಪುರದಲ್ಲಿ ಭಾರೀ ಮಳೆ, ಕೆರೆಯಂತಾದ ರಸ್ತೆಗಳು
Vijayapura Rain: ವಿಜಯಪುರದಲ್ಲಿ ಭಾರೀ ಮಳೆ, ಕೆರೆಯಂತಾದ ರಸ್ತೆಗಳು
ಕೆಸರಿನ ಗುಂಡಿಯಲ್ಲಿ ಸಿಲುಕಿದ ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್​ ಕಾರು
ಕೆಸರಿನ ಗುಂಡಿಯಲ್ಲಿ ಸಿಲುಕಿದ ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್​ ಕಾರು
‘ಬಿಗ್ ಬಾಸ್ ಶೋನ ಈ ಹೀರೋ ನಡೆಸಿಕೊಡಲಿ ಎಂದು ನಾನೇಕೆ ಕೇಳಲಿ’; ಸುದೀಪ್
‘ಬಿಗ್ ಬಾಸ್ ಶೋನ ಈ ಹೀರೋ ನಡೆಸಿಕೊಡಲಿ ಎಂದು ನಾನೇಕೆ ಕೇಳಲಿ’; ಸುದೀಪ್
Daily Devotional: ಎಡಗೈಯಲ್ಲಿ ಬರೆಯುತ್ತಿದ್ದರೆ ಅರ್ಥವೇನು? ವಿಡಿಯೋ ನೋಡಿ
Daily Devotional: ಎಡಗೈಯಲ್ಲಿ ಬರೆಯುತ್ತಿದ್ದರೆ ಅರ್ಥವೇನು? ವಿಡಿಯೋ ನೋಡಿ
Nithya Bhavishya: ಭಾದ್ರಪದ ಮಾಸದ 4ನೇ ಮಂಗಳವಾರದ ದಿನ ಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸದ 4ನೇ ಮಂಗಳವಾರದ ದಿನ ಭವಿಷ್ಯ ತಿಳಿಯಿರಿ
‘ಬಿಗ್ ಬಾಸ್ 11’ ಸಂಭಾವನೆ ವಿಚಾರ ಕೇಳಿದ್ದಕ್ಕೆ ಕಿಚ್ಚ ಸುದೀಪ್ ಉತ್ತರ ಏನು?
‘ಬಿಗ್ ಬಾಸ್ 11’ ಸಂಭಾವನೆ ವಿಚಾರ ಕೇಳಿದ್ದಕ್ಕೆ ಕಿಚ್ಚ ಸುದೀಪ್ ಉತ್ತರ ಏನು?
ಆಂಧ್ರಪ್ರದೇಶದ ಗದ್ದೆಯಲ್ಲೆದ್ದ ಸುಂಟರಗಾಳಿಯ ವಿಡಿಯೋ ವೈರಲ್
ಆಂಧ್ರಪ್ರದೇಶದ ಗದ್ದೆಯಲ್ಲೆದ್ದ ಸುಂಟರಗಾಳಿಯ ವಿಡಿಯೋ ವೈರಲ್
ಮರೆಯಲಾಗದ ಕ್ಷಣ; ಮೋದಿ ನ್ಯೂಯಾರ್ಕ್​ ಭೇಟಿಯ ಹೈಲೈಟ್ಸ್ ಇಲ್ಲಿದೆ
ಮರೆಯಲಾಗದ ಕ್ಷಣ; ಮೋದಿ ನ್ಯೂಯಾರ್ಕ್​ ಭೇಟಿಯ ಹೈಲೈಟ್ಸ್ ಇಲ್ಲಿದೆ
‘ಬಿಗ್ ಬಾಸ್ ಕನ್ನಡ 11’ ಶೋ ಆರಂಭಕ್ಕೂ ಮೊದಲೇ ತಿಳಿಯುತ್ತೆ ಸ್ಪರ್ಧಿಗಳ ಹೆಸರು
‘ಬಿಗ್ ಬಾಸ್ ಕನ್ನಡ 11’ ಶೋ ಆರಂಭಕ್ಕೂ ಮೊದಲೇ ತಿಳಿಯುತ್ತೆ ಸ್ಪರ್ಧಿಗಳ ಹೆಸರು