AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಪಿಎಫ್​ಒ ಅಪ್​ಡೇಟ್ಸ್; ಜುಲೈ ತಿಂಗಳಲ್ಲಿ ಹೊಸ ದಾಖಲೆ; ಕರ್ನಾಟಕ ಸೇರಿ 5 ರಾಜ್ಯಗಳಲ್ಲೇ ಅತಿಹೆಚ್ಚು ಹೊಸ ಸದಸ್ಯರು

EPFO July data: ಎಂಪ್ಲಾಯೀ ಪ್ರಾವಿಡೆಂಟ್ ಫಂಡ್ ವ್ಯಾಪ್ತಿಗೆ ಜುಲೈ ತಿಂಗಳಲ್ಲಿ 19.94 ಲಕ್ಷ ಸದಸ್ಯರ ಸೇರ್ಪಡೆಯಾಗಿದೆ. ಒಂದು ತಿಂಗಳಲ್ಲಿ ಇಷ್ಟೊಂದು ಸದಸ್ಯತ್ವ ಹೆಚ್ಚಳ ಆಗಿರುವುದು ಇದೇ ಮೊದಲು ಎನ್ನಲಾಗಿದೆ. ಈ ಸೇರ್ಪಡೆಯಲ್ಲಿ ಕರ್ನಾಟಕ ಸೇರಿ ಐದು ರಾಜ್ಯಗಳ ಪಾಲು ಹತ್ತಿರಹತ್ತಿರ ಶೇ. 60ರಷ್ಟಿದೆ. ಮಹಾರಾಷ್ಟ್ರದಲ್ಲಿ ಗರಿಷ್ಠ ಇದೆ.

ಇಪಿಎಫ್​ಒ ಅಪ್​ಡೇಟ್ಸ್; ಜುಲೈ ತಿಂಗಳಲ್ಲಿ ಹೊಸ ದಾಖಲೆ; ಕರ್ನಾಟಕ ಸೇರಿ 5 ರಾಜ್ಯಗಳಲ್ಲೇ ಅತಿಹೆಚ್ಚು ಹೊಸ ಸದಸ್ಯರು
ಇಪಿಎಫ್​ಒ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Sep 24, 2024 | 10:49 AM

Share

ನವದೆಹಲಿ, ಸೆಪ್ಟೆಂಬರ್ 24: ಜುಲೈ ತಿಂಗಳಲ್ಲಿ ಇಪಿಎಫ್ ವ್ಯಾಪ್ತಿಗೆ 20 ಲಕ್ಷ ಸದಸ್ಯರು ಸೇರ್ಪಡೆಯಾಗಿದ್ದಾರೆ. ಒಂದು ತಿಂಗಳಲ್ಲಿ ಇಷ್ಟೊಂದು ಸಂಖ್ಯೆ ಹೆಚ್ಚಳ ಇದೇ ಮೊದಲು. ಅಂತೆಯೇ ಇದು ಸಾರ್ವಕಾಲಿಕ ದಾಖಲೆ ಆಗಿದೆ. ಇಪಿಎಫ್​ಒ ಸಂಸ್ಥೆ ಬಿಡುಗಡೆ ಮಾಡಿದ ದತ್ತಾಂಶದ ಪ್ರಕಾರ ಜುಲೈ ತಿಂಗಳಲ್ಲಿ 19.94 ಲಕ್ಷ ಸದಸ್ಯರ ಸೇರ್ಪಡೆಯಾಗಿದೆ. ಈ ಪೈಕಿ 10.52 ಲಕ್ಷದಷ್ಟು ಹೊಸ ಸದಸ್ಯರೇ ಇದ್ದಾರೆ. ಅಂದರೆ ಮೊದಲ ಬಾರಿಗೆ ಇಪಿಎಫ್ ಖಾತೆ ಪಡೆದವರ ಸಂಖ್ಯೆ ಜುಲೈನಲ್ಲಿ 10 ಲಕ್ಷಕ್ಕೂ ಹೆಚ್ಚು. ಹಿಂದಿನ ತಿಂಗಳಿಗೆ ಹೋಲಿಸಿದರೆ ಶೇ. 2.66ರಷ್ಟು ಹೆಚ್ಚಳವಾಗಿದೆ. ಹಿಂದಿನ ವರ್ಷದ ಜುಲೈ ತಿಂಗಳಿಗೆ ಹೋಲಿಸಿದರೆ ಹೊಸ ಸದಸ್ಯರ ಸಂಖ್ಯೆಯಲ್ಲಿ ಶೇ. 2.43ರಷ್ಟು ಏರಿಕೆ ಆಗಿದೆ.

ಹೊಸ ಸದಸ್ಯತ್ವವು ಉದ್ಯೋಗ ಸೃಷ್ಟಿಯ ಪ್ರತಿಬಿಂಬವಾಗಿದೆ. ಹೀಗಾಗಿ, ಇಪಿಎಫ್​ಒನಲ್ಲಿನ ಹೊಸ ಸದಸ್ಯರ ಸಂಖ್ಯೆಯಲ್ಲಿ ಹೆಚ್ಚಳ ಆಗಿರುವುದು ಉದ್ಯೋಗಸೃಷ್ಟಿ ಹೆಚ್ಚಾಗಿರುವುದನ್ನು ತೋರಿಸುತ್ತಿದೆ. ಈ ವಿಚಾರವನ್ನು ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ನಿನ್ನೆ (ಸೆ. 23) ತಿಳಿಸಿದೆ.

ಕರ್ನಾಟಕ ಸೇರಿ ಐದು ರಾಜ್ಯಗಳಲ್ಲಿ ಅತಿಹೆಚ್ಚು ಹೊಸ ಸದಸ್ಯರು

ಇಪಿಎಫ್​ಗೆ ಸೇರ್ಪಡೆಯಾದ 20 ಲಕ್ಷ ಸದಸ್ಯರಲ್ಲಿ ಹೆಚ್ಚಿನ ಮಂದಿ ಐದು ರಾಜ್ಯಗಳಿಗೆ ಸೇರಿದವರಾಗಿದ್ದಾರೆ. ಕರ್ನಾಟಕ, ಮಹಾರಾಷ್ಟ್ರ, ತಮಿಳುನಾಡು, ಹರ್ಯಾಣ ಮತ್ತು ಗುಜರಾತ್ ರಾಜ್ಯಗಳಿಂದಲೇ ಒಟ್ಟು ಶೇ. 59.27ರಷ್ಟು ನಿವ್ವಳ ಸದಸ್ಯತ್ವ ಸೇರ್ಪಡೆಯಾಗಿದೆ. ಅಂದರೆ ಈ ಐದು ರಾಜ್ಯಗಳಿಂದ 11.82 ಲಕ್ಷ ಜನರು ಇಪಿಎಫ್ ಅಕೌಂಟ್ ತೆರೆದಿದ್ದಾರೆ. ಮಹಾರಾಷ್ಟ್ರ ರಾಜ್ಯವೊಂದರಲ್ಲೇ ಶೇ. 20ರಷ್ಟು ಹೊಸ ಸದಸ್ಯರಿರುವುದು ಗಮನಾರ್ಹ.

ಇದನ್ನೂ ಓದಿ: ಎಫ್​ ಅಂಡ್ ಒ ಟ್ರೇಡಿಂಗ್ ಮಾಡುವವರಲ್ಲಿ ಹಣ ಕಳೆದುಕೊಂಡವರೆಷ್ಟು, ಗೆದ್ದವರೆಷ್ಟು? ಕಣ್ತೆರೆಸುತ್ತೆ ಸೆಬಿ ದತ್ತಾಂಶ

ಮತ್ತೊಂದು ಕುತೂಹಲದ ಸಂಗತಿ ಎಂದರೆ ಇಪಿಎಫ್ ಅಕೌಂಟ್ ಮುಚ್ಚಲ್ಪಟ್ಟಿದ್ದ 14.65 ಲಕ್ಷ ಸದಸ್ಯರು ಜುಲೈನಲ್ಲಿ ಮತ್ತೆ ಇಪಿಎಫ್​ಒಗೆ ಸೇರ್ಪಡೆಯಾಗಿದ್ದಾರೆ. ಅಂದರೆ, ಉದ್ಯೋಗ ಬಿಟ್ಟಿದ್ದವರು ಮತ್ತೆ ಹೊಸ ಕೆಲಸಕ್ಕೆ ಸೇರ್ಪಡೆಯಾಗಿರುವುದನ್ನು ಇದು ಸೂಚಿಸುತ್ತದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ