AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಪಿಗ್ಯಾಮಿಯಾ ಸಂಸ್ಥಾಪಕ ರೋಹನ್ ಮಿರ್​ಚಂದಾನಿ ನಿಧನ; ಹೃದಯಸ್ತಂಭನದಿಂದ ಮೃತರಾದ ಸಿಇಒಗಳ ಸಾಲಿಗೆ ರೋಹನ್

Rohan Mirchandani passes away: ಎಪಿಗ್ಯಾಮಿಯಾ ಸಂಸ್ಥಾಪಕ 41 ವರ್ಷದ ರೋಹನ್ ಮಿರ್​ಚಂದಾನಿ ಡಿಸೆಂಬರ್ 21ರಂದು ಹೃದಯ ಸ್ತಂಭನದಿಂದ ಕೊನೆಯುಸಿರೆಳೆದಿದ್ದಾರೆ. 2013ರಲ್ಲಿ ಅವರು ಡ್ರಮ್ಸ್ ಫೂಡ್ ಇಂಟರ್​ನ್ಯಾಷನಲ್ ಸಂಸ್ಥೆಯನ್ನು ಸ್ಥಾಪಿಸಿದ್ದರು. ಅವರ ನೇತೃತ್ವದಲ್ಲಿ ಎಪಿಗ್ಯಾಮಿಯಾ ಎನ್ನುವ ಪ್ರಬಲ ಬ್ರ್ಯಾಂಡ್ ರೂಪುಗೊಂಡಿತ್ತು. ಈ ಹಿಂದೆ ರೋಹನ್ ಮಲ್ಹೋತ್ರಾ, ಅಂಬರೀಷ್ ಮೂರ್ತಿ, ರಂಜನ್ ದಾಸ್ ಮೊದಲಾದ ಯುವ ಸಿಇಒಗಳು ಇದೇ ಕಾರ್ಡಿಯಾಕ್ ಅರೆಸ್ಟ್​ನಿಂದ ಮೃತಪಟ್ಟಿದ್ದುಂಟು.

ಎಪಿಗ್ಯಾಮಿಯಾ ಸಂಸ್ಥಾಪಕ ರೋಹನ್ ಮಿರ್​ಚಂದಾನಿ ನಿಧನ; ಹೃದಯಸ್ತಂಭನದಿಂದ ಮೃತರಾದ ಸಿಇಒಗಳ ಸಾಲಿಗೆ ರೋಹನ್
ರೋಹನ್ ಮಿರ್​ಚಂದಾನಿ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Dec 23, 2024 | 12:10 PM

Share

ನವದೆಹಲಿ, ಡಿಸೆಂಬರ್ 23: ಯುವ ಉದ್ಯಮಿ ರೋಹನ್ ಮಿರ್​ಚಂದಾನಿ ಹೃದಯಸ್ತಂಭನಗೊಂಡು ಇಹಲೋಕ ತ್ಯಜಿಸಿದ್ದಾರೆ. ಅವರಿಗೆ ಕೇವಲ 41-42 ವರ್ಷ ವಯಸ್ಸಾಗಿತ್ತು ಎನ್ನಲಾಗಿದೆ. ಶನಿವಾರ ಅವರು ನಿಧನರಾಗಿರುವುದು ತಿಳಿದುಬಂದಿದೆ. ಎಪಿಗ್ಯಾಮಿಯಾದ ಮಾತೃ ಸಂಸ್ಥೆಯಾದ ಡ್ರಮ್ಸ್ ಫೂಡ್ ಇಂಟರ್ನ್ಯಾಷನಲ್ ಅಧಿಕೃತ ಹೇಳಿಕೆಯಲ್ಲಿ ಈ ಸುದ್ದಿಯನ್ನು ನಿವೇದಿಸಿದೆ. ಎಪಿಗ್ಯಾಮಿಯಾ ಗ್ರೀಕ್ ಯೋಗರ್ಟ್, ಪಾನೀಯ ಇತ್ಯಾದಿ ಆಹಾರ ಉತ್ಪನ್ನಗಳ ಖ್ಯಾತ ಬ್ರ್ಯಾಂಡ್ ಆಗಿದೆ. ಡ್ರಮ್ಸ್ ಫೂಡ್ ಇಂಟರ್ನ್ಯಾಷನಲ್ ಸಂಸ್ಥೆಯನ್ನು 2013ರಲ್ಲಿ ಸ್ಥಾಪಿಸಿದ್ದ ರೋಹನ್ ಮಿರ್​ಚಂದಾನಿ ಅವರ ನೇತೃತ್ವದಲ್ಲಿ ಎಪಿಗ್ಯಾಮಿಯಾ ಪ್ರಬಲ ಬ್ರ್ಯಾಂಡ್ ಆಗಿ ಬೆಳೆದಿತ್ತು.

ಉದ್ಯಮ ವಲಯದಲ್ಲಿ ಸಿಇಒಗಳು ಹೃದಯಾಘಾತ ಮತ್ತು ಹೃದಯ ಸ್ತಂಭನದಿಂದ ನಿಧನರಾಗುತ್ತಿರುವ ಪ್ರಕರಣಗಳು ಹೆಚ್ಚುತ್ತಿವೆ. ಕಳೆದ ಕೆಲ ವರ್ಷಗಳಲ್ಲಿ ಕೆಲ ಪ್ರಮುಖ ಸ್ಟಾರ್ಟಪ್​ಗಳ ಸಂಸ್ಥಾಪಕರು ಸಣ್ಣ ವಯಸ್ಸಿನಲ್ಲಿ ಇದೇ ಕಾರ್ಡಿಯಾಕ್ ಅರೆಸ್ಟ್ ಆಗಿ ಮೃತಪಟ್ಟಿದ್ದಾರೆ.

ಇದನ್ನೂ ಓದಿ: ಸಾಫ್ಟ್​ಪವರ್​ಗಿಂತಲೂ ಮಿಗಿಲಾದ ಶಕ್ತಿ ಭಾರತದ್ದು; ಭಾರತವಿಲ್ಲದೇ ಜಗತ್ತು ನಡೆಯಲ್ಲ: ಮಾಜಿ ಜರ್ಮನ್ ರಾಯಭಾರಿ ಲಿಂಡ್ನರ್

  • ಗುಡ್ ಕ್ಯಾಪಿಟಲ್ ಸಹ-ಸಂಸ್ಥಾಪಕ ರೋಹನ್ ಮಲ್ಹೋತ್ರಾ 2024ರ ಅಕ್ಟೋಬರ್ 1ರಂದು ಕಾರ್ಡಿಯಾಕ್ ಅರೆಸ್ಟ್ ಆಗಿ ನಿಧನರಾಗಿದ್ದರು.
  • ಪೆಪ್ಪರ್​ಫ್ರೈ ಸಿಇಒ ಅಂಬರೀಷ್ ಮೂರ್ತಿ ಅವರು 51 ವರ್ಷ ವಯಸ್ಸಿನಲ್ಲಿ 2023ರಲ್ಲಿ ಹೃದಯ ಸ್ತಂಭನದಿಂದ ಮೃತಪಟ್ಟಿದ್ದರು.
  • ರಾಯಲ್ ಎನ್​ಫೀಲ್ಡ್ ಸಂಸ್ಥೆಯ ಅಧ್ಯಕ್ಷ ಮತ್ತು ಸಿಇಒ ಆಗಿದ್ದ ರುದ್ರತೇಜ್ ಸಿಂಗ್ ಅವರು 2020ರಲ್ಲಿ ಹೃದಯ ಸ್ತಂಭನದಿಂದ ಇಹಲೋಕ ತ್ಯಜಿಸಿದ್ದರು. ಅವರಿಗೆ 42 ವರ್ಷ ವಯಸ್ಸು ಮಾತ್ರವೇ ಆಗಿದ್ದು.
  • ಎಸ್​ಎಪಿ ಇಂಡಿಯಾ ಸಂಸ್ಥೆಯ ಸಿಇಒ ಹಾಗೂ ಎಂಡಿ ರಂಜನ್ ದಾಸ್ 2009ರಲ್ಲಿ ಕೇವಲ 39ರ ವಯಸ್ಸಿಗೆ ಹೃದಯಸ್ತಂಭನಕ್ಕೊಳಗಾಗಿ ಕೊನೆಯುಸಿರೆಳೆದಿದ್ದರು.

ಇವತ್ತು ಸ್ಟಾರ್ಟಪ್​ಗಳ ಸಂಖ್ಯೆ ಗಣನೀಯವಾಗಿ ಹೆಚ್ಚುತ್ತಿದೆ. ಅಂತೆಯೇ, ಬಿಸಿನೆಸ್ ಪೈಪೋಟಿ ಬಹಳ ಉತ್ತುಂಗದಲ್ಲಿದೆ. ಸ್ಟಾರ್ಟಪ್​ಗಳ ಸಂಸ್ಥಾಪಕರಿಗೆ ಹಿಂದೆಂದಿಗಿಂತಲೂ ಒತ್ತಡಗಳು ಹೆಚ್ಚುತ್ತಿದೆ. ಒಂದೆಡೆ, ಬಿಸಿನೆಸ್ ಬೆಳೆಸಬೇಕು, ಇನ್ನೊಂದೆಡೆ ಹಣಕಾಸು ವ್ಯವಸ್ಥೆ ಮಾಡಬೇಕು. ಇದು ಸವಾಲಿನ ಸಂಗತಿಯಾಗಿದೆ. ಈ ಮಧ್ಯೆ ವೈಯಕ್ತಿಕ ಆರೋಗ್ಯವನ್ನು ಕಡೆಗಣಿಸುವವರೇ ಹೆಚ್ಚು. ಇದು ಸಣ್ಣ ವಯಸ್ಸಿನಲ್ಲಿ ಅಕಾಲಿಕ ಮರಣಕ್ಕೆ ಒಳಗಾಗುವಂತೆ ಮಾಡುತ್ತಿದೆ.

ಇದನ್ನೂ ಓದಿ: ಜಿಎಸ್​ಟಿ ದರಗಳಲ್ಲಿ ಬದಲಾವಣೆ; ಯಾವುವು ಅಗ್ಗ, ಯಾವುವು ದುಬಾರಿ, ಇಲ್ಲಿದೆ ಪಟ್ಟಿ

ಡಿ. 21ರಂದು ಮೃತಪಟ್ಟ ರೋಹನ್ ಮಿರ್​ಚಂದಾನಿ ಬಹಳ ಮಹತ್ವಾಕಾಂಕ್ಷಿ ಗುರಿ ಹೊಂದಿದ್ದ ಯುವ ಉದ್ಯಮಿ ಎನಿಸಿದ್ದರು. ಎಪಿಗ್ಯಾಮಿಯಾ ಬ್ರ್ಯಾಂಡ್ ಅಡಿಯಲ್ಲಿ ಯೋಗರ್ಟ್ ಹಾಗೂ ಇತರ ಡೈರಿ ಉತ್ಪನ್ನಗಳಿಗೆ ಒಳ್ಳೆಯ ಮಾರುಕಟ್ಟೆ ಸೃಷ್ಟಿಸಿದ್ದರು. 30 ನಗರಗಳಲ್ಲಿ 20,000ಕ್ಕೂ ಹೆಚ್ಚು ರೀಟೇಲ್ ಟಚ್​ಪಾಯಿಂಟ್​ಗಳನ್ನು ಸಂಸ್ಥೆ ಬೆಳೆಸಿದೆ. ಮುಂದಿನ ವರ್ಷದೊಳಗೆ ಮಧ್ಯಪ್ರಾಚ್ಯ ದೇಶಗಳಿಗೂ ವಿಸ್ತರಿಸುವ ಆಲೋಚನೆಯಲ್ಲಿ ರೋಹನ್ ಇದ್ದರೆನ್ನಲಾಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್