AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಮ್ಮ ಮೊಬೈಲ್ ಹುಷಾರು… ಮಾಜಿ ಪ್ರಧಾನಿ ಪುತ್ರನಿಗೆ ಕೋಟಿಗಟ್ಟಲೆ ಹಣ ಪಂಗನಾಮ; ಕಾಂಟ್ಯಾಕ್ಟ್ ಲಿಸ್ಟ್​ನಲ್ಲೇ ನಂಬರ್ ಬದಲಿಸಿದ್ದ ಖದೀಮರು

Naresh Gujral, sone of Ex PM IK Gujral duped of Rs 7.8 crore in cyber crime: ತೊಂಬತ್ತರ ದಶಕದಲ್ಲಿ ದೇಶದ ಪ್ರಧಾನಿಯಾಗಿದ್ದ ಇಂದರ್ ಕುಮಾರ್ ಗುಜ್ರಾಲ್ ಅವರ ಮಗ ನರೇಶ್ ಗುಜ್ರಾಲ್ ಅವರು ಸೈಬರ್ ವಂಚನೆಯಲ್ಲಿ 7.8 ಕೋಟಿ ರೂ ಕಳೆದುಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಗುಜ್ರಾಲ್ ಅವರ ಗಾರ್ಮೆಂಟ್ಸ್ ಕಂಪನಿಯ ಉದ್ಯೋಗಿಯ ಮೊಬೈಲ್ ಹ್ಯಾಕ್ ಮಾಡಿ, ನಂತರ ನಾಲ್ಕು ಬಾರಿ ಕೋಟಿಗಟ್ಟಲೆ ಹಣವನ್ನು ಟ್ರಾನ್ಸ್​ಫರ್ ಮಾಡಿಸಿಕೊಂಡಿರುವ ಘಟನೆ ಇದು.

ನಿಮ್ಮ ಮೊಬೈಲ್ ಹುಷಾರು... ಮಾಜಿ ಪ್ರಧಾನಿ ಪುತ್ರನಿಗೆ ಕೋಟಿಗಟ್ಟಲೆ ಹಣ ಪಂಗನಾಮ; ಕಾಂಟ್ಯಾಕ್ಟ್ ಲಿಸ್ಟ್​ನಲ್ಲೇ ನಂಬರ್ ಬದಲಿಸಿದ್ದ ಖದೀಮರು
ಸೈಬರ್ ಕ್ರೈಮ್Image Credit source: Philip Dulian via Getty Images
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Jun 19, 2026 | 5:50 PM

Share

ನವದೆಹಲಿ, ಜೂನ್ 19: ಮಾಜಿ ಪ್ರಧಾನಿ ಐ.ಕೆ. ಗುಜ್ರಾಲ್ ಅವರ ಪುತ್ರ ಹಾಗೂ ಮಾಜಿ ರಾಜ್ಯಸಭಾ ಸಂಸದರಾದ ನರೇಶ್ ಗುಜ್ರಾಲ್ (Naresh Gujral) ಅವರು ಸೈಬರ್ ವಂಚನೆಗೆ ತುತ್ತಾಗಿದ್ದಾರೆ. ಗಾರ್ಮೆಂಟ್ಸ್ ಫ್ಯಾಕ್ಟರಿ ನಡೆಸುತ್ತಿರುವ ನರೇಶ್ ಗುಜ್ರಾಲ್ ಅವರ ಅಕೌಂಟ್​ನಿಂದ 7.8 ಕೋಟಿ ರೂ ಹಣ ಲಪಟಾಯಿಸಿದ್ದಾರೆ. ಈ ವಂಚನೆ ಆಗಿರುವುದು ದೆಹಲಿಯಲ್ಲಿ ಜೂನ್ 12ರಿಂದ 16ರ ಅವಧಿಯಲ್ಲಿ. ಪೊಲೀಸರು ಸದ್ಯಕ್ಕೆ 4 ಕೋಟಿ ರೂ ಹಣವನ್ನು ರಿಕವರ್ ಮಾಡಲು ಯಶಸ್ವಿಯಾಗಿದ್ದಾರೆ. ಆದರೆ, ವಂಚಕರು ನರೇಶ್ ಗುಜ್ರಾಲ್ ಅವರ ಹಣ ಲಪಟಾಯಿಸಲು ಬಳಸಿದ ತಂತ್ರ ಮತ್ತು ಮಾರ್ಗ ನಿಜಕ್ಕೂ ಬೆಚ್ಚಿಬೀಳಿಸುವಂಥದ್ದು. ಇದು ಯಾರಿಗೆ ಬೇಕಾದರೂ ಆಗಬಹುದಾದ ವಂಚನೆ.

ಉದ್ಯೋಗಿಯ ಮೊಬೈಲ್ ನಂಬರ್ ಹ್ಯಾಕ್ ಮಾಡಿದ್ರು

ಮಾಜಿ ಪ್ರಧಾನಿ ಐ.ಕೆ. ಗುಜ್ರಾಲ್ ಅವರ ಮಗ ನರೇಶ್ ಗುಜ್ರಾಲ್ ಅವರು ಗಾರ್ಮೆಂಟ್ಸ್ ಫ್ಯಾಕ್ಟರಿಯೊಂದನ್ನು ಇಟ್ಟಿದ್ದಾರೆ. ವಂಚಕರು ಈ ಫ್ಯಾಕ್ಟರಿಯ ಉದ್ಯೋಗಿಯೊಬ್ಬರಿಗೆ ವಾಟ್ಸಾಪ್ ಮೆಸೇಜ್ ಕಳುಹಿಸಿದ್ದಾರೆ. ಅದನ್ನು ಒತ್ತಿದ್ದೇ ಆಯ್ತು, ಆ ಉದ್ಯೋಗಿಯ ಫೋನ್ ಅನ್ನು ವಂಚಕರು ಹ್ಯಾಕ್ ಮಾಡಿದ್ದಾರೆ.

ಕಾಂಟ್ಯಾಕ್ಟ್ ಲಿಸ್ಟ್​ನಲ್ಲಿ ನಂಬರನ್ನೇ ಬದಲಿಸಿದ್ರು…

ಹ್ಯಾಕ್ ಮಾಡಿದ ನಂತರ, ಆ ಉದ್ಯೋಗಿಯ ಮೊಬೈಲ್​ನಲ್ಲಿರುವ ಕಾಂಟ್ಯಾಕ್ಟ್ ಲಿಸ್ಟ್​ಗೆ ಹೋಗಿ ನರೇಶ್ ಗುಜ್ರಾಲ್ ಅವರ ಫೋನ್ ನಂಬರ್​ಗೆ ಹೋಗಿ ಎಡಿಟ್ ಮಾಡಿದ್ದಾರೆ. ಅಲ್ಲಿ ವಂಚಕರು ಗುಜ್ರಾಲ್ ನಂಬರ್ ಜಾಗಕ್ಕೆ ತಮ್ಮ ಮೊಬೈಲ್ ನಂಬರ್ ಸೇರಿಸಿದ್ದಾರೆ. ಆ ನಂಬರ್​ನ ಪ್ರೊಫೈಲ್ ಚಿತ್ರ, ಹೆಸರು ಎಲ್ಲವೂ ನರೇಶ್ ಗುಜ್ರಾಲ್ ಅವರದ್ದೇ ಹಾಕಲಾಗಿತ್ತು. ಹೀಗಾಗಿ, ಯಾರಿಗೂ ಅನುಮಾನ ಬಾರದಂತಾಗಿತ್ತು.

ಇದನ್ನೂ ಓದಿ: ಅಕ್ಸೆಂಚರ್ ಕೊಟ್ಟ ಒಂದು ರಿಪೋರ್ಟ್​ಗೆ ಭಾರತದ ಷೇರುಬಜಾರು ಅಲ್ಲೋಲಕಲ್ಲೋಲ; ಶುಕ್ರವಾರ 2 ಲಕ್ಷ ಕೋಟಿ ರೂ ನಷ್ಟ

ಹಣ ವರ್ಗಾಯಿಸುವ ಮೆಸೇಜ್​ಗಳು

ಈಗ ವಂಚಕರು ಉದ್ಯೋಗಿಗೆ ಮೆಸೇಜ್ ಕಳುಹಿಸತೊಡಗುತ್ತಾರೆ. ಅಕೌಂಟ್ ನಂಬರ್ ಕೊಟ್ಟು ಅದಕ್ಕೆ ತುರ್ತಾಗಿ ಆರ್​ಟಿಜಿಎಸ್ ಮಾಡುವಂತೆ ಸೂಚಿಸುತ್ತಾರೆ. ಯಾವುದೋ ಬ್ಯುಸಿನೆಸ್​ಗೆ ಸಂಬಂಧಿಸಿದ್ದಿರಬಹುದು ಎಂದು ಉದ್ಯೋಗಿಯು ಹಣವನ್ನು ಆರ್​ಟಿಜಿಎಸ್ ಮಾಡುತ್ತಾರೆ. ಹೀಗೆ ನಾಲ್ಕು ಬಾರಿ ಆರ್​ಟಿಜಿಎಸ್ ಮೂಲಕ ಹಣ ಟ್ರಾನ್ಸ್​ಫರ್ ಮಾಡಲಾಗುತ್ತದೆ. ಟ್ರಾನ್ಸ್​ಫರ್ ಆದ ಒಟ್ಟು ಹಣ 7.8 ಕೋಟಿ ರೂ ಆಗಿದೆ.

ಕುತೂಹಲ ಎಂದರೆ, ಇಷ್ಟು ದೊಡ್ಡ ಮಟ್ಟದ ಟ್ರಾನ್ಸಾಕ್ಷನ್ ನಡೆಯುತ್ತಿರುವಾಗ ಬ್ಯಾಂಕಿನವರಿಗೆ ಅನುಮಾನ ಬರುತ್ತದೆ. ಫ್ಯಾಕ್ಟರಿಯ ಸಿಎಫ್​ಒ ಅವರಿಗೆ ತಿಳಿಸುತ್ತಾರೆ. ಹಣ ವರ್ಗಾವಣೆಗೆ ಖುದ್ದು ಗುಜ್ರಾಲ್ ಅವರೇ ಮೆಸೇಜ್ ಕಳುಹಿಸಿದ್ದೆಂದು ಗ್ರಹಿಸಿ ಸಿಎಫ್​ಒ ಕೂಡ ಬ್ಯಾಂಕಿನವರಿಗೆ ದೃಢೀಕರಿಸುತ್ತಾರೆ.

ವಂಚನೆ ಬಯಲಾಗಿದ್ದು ಹೇಗೆ?

ಆದರೆ, ಕಂಪನಿಯ ಅಧಿಕಾರಿಯೊಬ್ಬರಿಗೆ ಏನೋ ಸಂದೇಹ ಬಂದು, ನರೇಶ್ ಗುಜ್ರಾಲ್ ಅವರ ಮಗಳನ್ನು ಸಂಪರ್ಕಿಸಿ, ಈ ಪೇಮೆಂಟ್​ಗಳನ್ನು ಪರಿಶೀಲಿಸಬೇಕೆಂದು ಕೇಳುತ್ತಾರೆ. ಆಗ ಈ ವಂಚನೆ ಪ್ರಕರಣ ಬಯಲಿಗೆ ಬರುತ್ತದೆ. ಆಕೆ ತನ್ನ ತಂದೆಯನ್ನು ಸಂಪರ್ಕಿಸಿ ಈ ಪೇಮೆಂಟ್​ಗಳ ಬಗ್ಗೆ ಕೇಳಿದಾಗ, ತಾನು ಅಂಥ ಯಾವುದನ್ನೂ ಕೇಳಿಲ್ಲವೆಂದು ತಿಳಿಸುತ್ತಾರೆ. ಆಗ ಗುಜ್ರಾಲ್ ಕುಟುಂಬದವರು ಪೊಲೀಸ್ ಠಾಣೆಗೆ ಹೋಗಿ ದೂರು ಕೊಡುತ್ತಾರೆ.

ಇದನ್ನೂ ಓದಿ: ಇನ್ಸ್​ಟಾ ಸ್ಕ್ರೋಲ್ ಮಾಡುವಾಗ ಬೇಡದ್ದು ಬರುತ್ತಿವೆಯಾ? ನೀವಿಚ್ಛಿಸುವವೇ ಫೀಡ್​ನಲ್ಲಿ ಬರುವಂತೆ ಮಾಡುತ್ತದೆ ಈ ಹೊಸ ಮೆಟಾ ಫೀಚರ್

ವಂಚಕರು ಕೊಟ್ಟಿದ್ದ ನಾಲ್ಕು ಅಕೌಂಟ್​ಗಳು ಬೇರೆ ಬೇರೆ ರಾಜ್ಯಗಳಲ್ಲಿ ಇರುವಂಥವು. ದೂರು ದಾಖಲಾದ ತಕ್ಷಣ ಕಾರ್ಯಪ್ರವೃತ್ತರಾದ ದೆಹಲಿ ಪೊಲೀಸರು (IFSO ಘಟಕ), ವಂಚಕರು ವರ್ಗಾಯಿಸಿಕೊಂಡಿದ್ದ ಹಣದಲ್ಲಿ ಸುಮಾರು ₹4 ಕೋಟಿಗೂ ಅಧಿಕ ಮೊತ್ತವನ್ನು ಆಯಾ ಬ್ಯಾಂಕ್‌ಗಳಲ್ಲಿ ಫ್ರೀಜ್ (Freeze) ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಸ್ತುತ ಪೊಲೀಸರು ಈ ಹಣವನ್ನು ವರ್ಗಾಯಿಸಿದ ಖಾತೆಗಳನ್ನು ಪತ್ತೆ ಹಚ್ಚುತ್ತಿದ್ದು, ತನಿಖೆ ಮುಂದುವರಿದಿದೆ. ಸಾರ್ವಜನಿಕರು ಇಂತಹ ಸಂದೇಶಗಳು ಬಂದಾಗ ನೇರವಾಗಿ ಸಂಬಂಧಪಟ್ಟ ವ್ಯಕ್ತಿಗೆ ಕರೆ ಮಾಡಿ ಖಚಿತಪಡಿಸಿಕೊಳ್ಳುವುದು ಸೂಕ್ತ ಎಂದು ಪೊಲೀಸರು ಎಚ್ಚರಿಸಿದ್ದಾರೆ.

ಪ್ರಿಯಾಂಕಾ ಉಪೇಂದ್ರಗೂ ಆಗಿತ್ತು ಸೈಬರ್ ಫ್ರಾಡ್

ಪ್ರಿಯಾಂಕಾ ಉಪೇಂದ್ರ ಅವರಿಗೂ ಕಳೆದ ವರ್ಷ ಸೈಬರ್ ವಂಚನೆಯಾಗಿ ಲಕ್ಷಕ್ಕೂ ಹೆಚ್ಚು ಹಣ ಕಳೆದುಕೊಂಡಿದ್ದರು. ಪ್ರಿಯಾಂಕಾ ಅವರ ಮೊಬೈಲ್ ಅನ್ನೇ ಹ್ಯಾಕ್ ಮಾಡಿದ್ದ ದುರುಳರು, ವಿವಿಧ ಜನರಿಗೆ ಹಣ ಕಳುಹಿಸುವಂತೆ ಮೆಸೇಜ್ ಹಾಕಿದ್ದರು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 5:40 pm, Fri, 19 June 26

Follow Us
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು
ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ. ಶಿವಕುಮಾರ್
ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ. ಶಿವಕುಮಾರ್
ದಲಿತರ ಮೇಲೆ ದಬ್ಬಾಳಿಕೆ ಆರೋಪ: ಗ್ರಾಮದ ರಸ್ತೆ ಬಂದ್​​ ಮಾಡಿ ಪ್ರತಿಭಟನೆ
ದಲಿತರ ಮೇಲೆ ದಬ್ಬಾಳಿಕೆ ಆರೋಪ: ಗ್ರಾಮದ ರಸ್ತೆ ಬಂದ್​​ ಮಾಡಿ ಪ್ರತಿಭಟನೆ
ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ‌ ಕ್ಷಣ ಮಾತ್ರದಲ್ಲಿ ಸಾವು!
ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ‌ ಕ್ಷಣ ಮಾತ್ರದಲ್ಲಿ ಸಾವು!
ನೀಟ್ ಪರೀಕ್ಷೆಗೆ ಇನ್ನೊಂದೇ ದಿನ ಬಾಕಿ; ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ
ನೀಟ್ ಪರೀಕ್ಷೆಗೆ ಇನ್ನೊಂದೇ ದಿನ ಬಾಕಿ; ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ
JDS ಶಾಸಕರ ಅಡ್ಡಮತದಾನದ ಬಗ್ಗೆ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದೇನು ನೋಡಿ
JDS ಶಾಸಕರ ಅಡ್ಡಮತದಾನದ ಬಗ್ಗೆ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದೇನು ನೋಡಿ
ಬಿಗ್ ಬಾಸ್ ಕಾಂಪಿಟೇಷನ್​ ವಿಡಿಯೋ ಕಳುಹಿಸಲು ಕೊನೆಯ ದಿನಾಂಕ ತಿಳಿಸಿದ ಕಲರ್ಸ್
ಬಿಗ್ ಬಾಸ್ ಕಾಂಪಿಟೇಷನ್​ ವಿಡಿಯೋ ಕಳುಹಿಸಲು ಕೊನೆಯ ದಿನಾಂಕ ತಿಳಿಸಿದ ಕಲರ್ಸ್