AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಚಿತ ಸ್ಕೀಮ್​ಗಳ ಮೇಲೆ ಶ್ವೇತಪತ್ರ; ಸರ್ಕಾರ ಜವಾಬ್ದಾರಿ ತೆಗೆದುಕೊಂಡು ಸಹಮತ ಮೂಡಿಸಲಿ: ಮಾಜಿ ಆರ್​ಬಿಐ ಗವರ್ನರ್ ಸುಬ್ಬಾರಾವ್

Ex RBI Governor D Subbarao on freebies: ಸರ್ಕಾರಗಳಿಂದ ನೀಡಲಾಗುವ ಫ್ರೀಬೀಸ್ ಅಥವಾ ಉಚಿತ ಯೋಜನೆಗಳ ಬಗ್ಗೆ ಮಾಜಿ ಆರ್​ಬಿಐ ಗವರ್ನರ್ ಡಿ ಸುಬ್ಬಾರಾವ್ ಪರೋಕ್ಷವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಉಚಿತ ಸ್ಕೀಮ್​ಗಳಿಂದ ಎಷ್ಟು ಲಾಭ ಸಿಗುತ್ತದೆ, ಅದರಿಂದ ಆರ್ಥಿಕವಾಗಿ ಎಷ್ಟು ಹೊರೆಯಾಗುತ್ತದೆ ಎಂಬಿತ್ಯಾದಿ ವಿಚಾರಗಳ ಬಗ್ಗೆ ಸಾರ್ವಜನಿಕರಿಗೆ ಸರ್ಕಾರವೇ ಅರಿವು ಮೂಡಿಸಬೇಕು. ರಾಜಕೀಯ ಪಕ್ಷಗಳ ಮಧ್ಯೆ ಒಂದು ಸಹಮತ ಏರ್ಪಡಿಸಲು ಸರ್ಕಾರ ಶ್ವೇತಪತ್ರ ಹೊರಡಿಸಬೇಕು ಎಂದು ಸುಬ್ಬಾರಾವ್ ಒತ್ತಾಯಿಸಿದ್ದಾರೆ.

ಉಚಿತ ಸ್ಕೀಮ್​ಗಳ ಮೇಲೆ ಶ್ವೇತಪತ್ರ; ಸರ್ಕಾರ ಜವಾಬ್ದಾರಿ ತೆಗೆದುಕೊಂಡು ಸಹಮತ ಮೂಡಿಸಲಿ: ಮಾಜಿ ಆರ್​ಬಿಐ ಗವರ್ನರ್ ಸುಬ್ಬಾರಾವ್
ಸುಬ್ಬಾರಾವ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Apr 21, 2024 | 12:46 PM

Share

ನವದೆಹಲಿ, ಏಪ್ರಿಲ್ 21: ಸರ್ಕಾರಗಳಿಂದ ನೀಡಲಾಗುವ ಉಚಿತ ಸ್ಕೀಮ್​ಗಳ ಬಗ್ಗೆ ವಿವಿಧ ರಾಜಕೀಯ ಪಕ್ಷಗಳಲ್ಲಿ ಸಹಮತ (consensus) ಮೂಡಿಸಲು ಸರ್ಕಾರ ಶ್ವೇತ ಪತ್ರ (white paper) ಹೊರಡಿಸಬೇಕು ಎಂದು ಮಾಜಿ ಆರ್​ಬಿಐ ಗವರ್ನರ್ ಡಿ ಸುಬ್ಬಾರಾವ್ (D Subbarao) ಸಲಹೆ ನೀಡಿದ್ದಾರೆ. ಉಚಿತ ಯೋಜನೆಗಳನ್ನು ಜಾರಿಗೊಳಿಸದಂತೆ ರಾಜಕೀಯ ಪಕ್ಷಗಳಿಗೆ ಹೇಗೆ ಕಡಿವಾಣ ಹಾಕಬೇಕು ಎಂಬ ವಿಚಾರದಲ್ಲಿ ಅಮೂಲಾಗ್ರ ಚರ್ಚೆ ಆಗಬೇಕು. ಈ ಉಚಿತ ಯೋಜನೆಗಳಿಂದ ಸಿಗುವ ಪ್ರಯೋಜನವೆಷ್ಟು, ಅದಕ್ಕೆ ತಗಲುವ ವೆಚ್ಚ ಎಷ್ಟು ಈ ವಿಚಾರಗಳು ಸಾರ್ವಜನಿಕರಿಗೆ ಗೊತ್ತಿರಬೇಕು. ಜನರಿಗೆ ಅರಿವು ಮೂಡಿಸುವ ಜವಾಬ್ದಾರಿಯನ್ನು ಸರ್ಕಾರವೇ ವಹಿಸಿಕೊಳ್ಳಬೇಕು ಎಂದು 2008ರಿಂದ 2013ರವರೆಗೆ ಆರ್​ಬಿಐ ಗವರ್ನರ್ ಆಗಿದ್ದ ಸುಬ್ಬಾರಾವ್ ಅಭಿಪ್ರಾಯಪಟ್ಟಿದ್ದಾರೆ.

‘ಇದು ಅಂತಿಮವಾಗಿ ರಾಜಕೀಯ ವಿಚಾರವಾಗಿರುವುದರಿಂದ ರಾಜಕೀಯವಾಗಿ ಸಹಮತ ಏರ್ಪಡಿಸಬೇಕು ಎಂಬುದು ನನ್ನ ಭಾವನೆ. ಕೇಂದ್ರ ಸರ್ಕಾರ ಮತ್ತು ಪ್ರಧಾನಿಗಳೇ ಈ ನಿಟ್ಟಿನಲ್ಲಿ ಮುಂದಾಳತ್ವ ವಹಿಸಬೇಕು. ಉಚಿತ ಯೋಜನೆಗಳ ಸಾಧಕ ಬಾಧಕಗಳ ಬಗ್ಗೆ ಜನರಿಗೆ ಅರಿವು ಮೂಡಿಸಬೇಕು. ಈ ಉಚಿತ ಯೋಜನೆಗಳಿಗೆ ಹೇಗೆ ಕಡಿವಾಣ ಹಾಕಬೇಕು ಎಂಬುದು ಚರ್ಚೆಯಾಗಬೇಕು,’ ಎಂದು ಪಿಟಿಐ ಸಂದರ್ಶನದಲ್ಲಿ ಸುಬ್ಬಾರಾವ್ ಹೇಳಿದ್ದಾರೆ.

ಇದನ್ನೂ ಓದಿ: ಭಾರತ ಮುಂದುವರಿದ ದೇಶವಾಗಬೇಕಾದರೆ ಈ ನಾಲ್ಕು ಅಂಶಗಳು ಮುಖ್ಯ: ಮಾಜಿ ಆರ್​ಬಿಐ ಗವರ್ನರ್ ಸುಬ್ಬಾರಾವ್ ಸಲಹೆ

ದುರ್ಬಲ ವರ್ಗಗಳ ಭದ್ರತೆಯೂ ಗಮನದಲ್ಲಿರಬೇಕು

ಭಾರತದಂತಹ ಬಡದೇಶದಲ್ಲಿ ಅತಿ ದುರ್ಬಲ ವರ್ಗದವರಿಗೆ ಸುರಕ್ಷಾ ಕವಚ ಏರ್ಪಡಿಸುವುದು ಸರ್ಕಾರದ ಜನವಾಬ್ದಾರಿ. ಹಾಗೆಯೇ, ಸೀಮಿತ ಹಣಕಾಸು ಬಲದ ದೃಷ್ಟಿಯಿಂದ ಈ ಕೊಡುಗೆಯನ್ನು ಎಷ್ಟು ದೂರ ಹಿಗ್ಗಿಸಬಹುದು ಎಂಬುದನ್ನು ಚರ್ಚಿಸಬೇಕಾಗುತ್ತದೆ ಎಂದಿದ್ದಾರೆ ಮಾಜಿ ಆರ್​ಬಿಐ ಗವರ್ನರ್.

ಭಾರತ ಮುಂದುವರಿದ ದೇಶವಾಗಲು ನಿರಂತರವಾಗಿ ಶೇ. 7.6ರಷ್ಟು ಬೆಳವಣಿಗೆ

2047ರ ವೇಳೆ ಭಾರತವನ್ನು ಮುಂದುವರಿದ ದೇಶವನ್ನಾಗಿಸುವ ಸರ್ಕಾರದ ಸಂಕಲ್ಪದ ಬಗ್ಗೆ ಮಾತನಾಡಿದ ಆಂಧ್ರ ಮೂಲದ ಡಿ ಸುಬ್ಬಾರಾವ್, ಐಎಂಎಫ್​ನ ಅಭಿಪ್ರಾಯವನ್ನು ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: ಚುನಾವಣೆಯ ವರ್ಷವೂ ಭಾರತದ ಹಣಕಾಸು ಶಿಸ್ತು ಮೆಚ್ಚಿಕೊಂಡ ಐಎಂಎಫ್

ಭಾರತ 2047ರಷ್ಟರಲ್ಲಿ ಮುಂದುವರಿದ ದೇಶವಾಗಬೇಕಾದರೆ ಸತತವಾಗಿ ಶೇ. 7.6ರಷ್ಟು ಬೆಳವಣಿಗೆ ಸಾಧಿಸಬೇಕಾಗುತ್ತದೆ. ಮುಂದಿನ 25 ವರ್ಷ ಕಾಲ ಪ್ರತೀ ವರ್ಷ ಈ ಮಟ್ಟದ ಬೆಳವಣಿಗೆಯನ್ನು ಸಾಧಿಸಿದ ದೇಶಗಳು ಬಹಳ ಕಡಿಮೆ. ಚೀನಾ ಸಾಧಿಸಿದೆ. ಹವಾಮಾನ ಬದಲಾವಣೆ, ಜಿಯೋಪಾಲಿಟಿಕ್ಸ್, ಜಾಗತೀಕರಣದ ಸಂಕೀರ್ಣತೆ ಇತ್ಯಾದಿ ಸವಾಲುಗಳಿರುವ ಹಿನ್ನೆಲೆಯಲ್ಲಿ ಭಾರತ ಈ ಪರಿ ಬೆಳವಣಿಗೆ ಸಾಧಿಸಬಲ್ಲುದು ಎಂದು ಹೇಳಲು ಕಷ್ಟ,’ ಎಂದು ತಿಳಿಸಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು