AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold: ಚಿನ್ನದ ಬೆಲೆ ಶೇ. 30 ಇಳಿಯುತ್ತೆ: ತಜ್ಞರ ಭವಿಷ್ಯ; ಈ ದರ ಕುಸಿತಕ್ಕೆ ಏನಿರಬಹುದು ಕಾರಣ?

Experts predict gold rate to come down in coming months: ಚಿನ್ನದ ಬೆಲೆ ಈ ವರ್ಷ ಭಾರೀ ವೇಗದಲ್ಲಿ ಏರಿದೆ. ಜಾಗತಿಕ ರಾಜಕೀಯ ಹಿನ್ನಡೆ, ಡಾಲರ್ ಕುಸಿತ, ಆರ್ಥಿಕ ತುಮುಲ ಇತ್ಯಾದಿ ಕಾರಣವು ಬೆಲೆ ಏರಿಕೆಗೆ ಕಾರಣ. ಆದರೆ, ಮುಂದಿನ ದಿನಗಳಲ್ಲಿ ಚಿನ್ನದ ಬೆಲೆ ಗಣನೀಯವಾಗಿ ಇಳಿಯಬಹುದು ಎಂದು ತಜ್ಞರು ಭವಿಷ್ಯ ನುಡಿದಿದ್ದಾರೆ. ಮುಂದಿನ 2-3 ತಿಂಗಳಲ್ಲಿ ಶೇ. 10, ಮುಂದಿನ 12 ತಿಂಗಳಲ್ಲಿ ಶೇ. 30ರಷ್ಟು ಬೆಲೆ ಇಳಿಕೆ ಆಗಬಹುದು ಎಂದಿದ್ದಾರೆ. ಹಾಗಾದರೆ ಏನು ಕಾರಣ?

Gold: ಚಿನ್ನದ ಬೆಲೆ ಶೇ. 30 ಇಳಿಯುತ್ತೆ: ತಜ್ಞರ ಭವಿಷ್ಯ; ಈ ದರ ಕುಸಿತಕ್ಕೆ ಏನಿರಬಹುದು ಕಾರಣ?
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jun 19, 2025 | 4:33 PM

Share

ಇತಿಹಾಸದಲ್ಲಿ ಹಿಂದೆಂದೂ ಕೇಳರಿಯದ ರೀತಿಯಲ್ಲಿ ಚಿನ್ನದ ಬೆಲೆ (Gold rate) ಓಲಾಡಿದೆ. ಈ ವರ್ಷ ಹಳದಿ ಲೋಹದ ಬೆಲೆ ಶೇ. 30ರಷ್ಟು ಏರಿದೆ. ಏನೇ ಬರಲಿ ಭಾರತೀಯರು ಚಿನ್ನವನ್ನು ಕೈಬಿಡುವ ಪ್ರಶ್ನೆಯೇ ಇಲ್ಲ. ಆದರೆ, ಇಷ್ಟು ಭಯಂಕರ ಬೆಲೆಯು ಮಧ್ಯಮ ವರ್ಗದ ಜನರ ಉಳಿತಾಯಕ್ಕೆ ದೊಡ್ಡ ಸಂಚಕಾರ ತಂದೇ ತರುತ್ತದೆ. ಚಿನ್ನದ ಬೆಲೆ ಯಾವಾಗ ಇಳಿಯುತ್ತೆ ಎಂದು ಹತಾಶೆಯಲ್ಲಿರುವ ಭಾರತೀಯರಿಗೆ ಖುಷಿ ಸುದ್ದಿಯೊಂದು ಇದೆ. ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ ಆಗಬಹುದು ಎಂದು ತಜ್ಞರು ಹೇಳಿದ್ದಾರೆ.

ಮುಂದಿನ ಒಂದು ವರ್ಷದಲ್ಲಿ ಚಿನ್ನದ ಬೆಲೆ ಶೇ. 30 ಕುಸಿತ?

ಸಿಟಿ ಬ್ಯಾಂಕ್ (Citi bank) ಪ್ರಕಾರ ಚಿನ್ನದ ಬೆಲೆ ಮುಂದಿನ ಒಂದು ವರ್ಷದಲ್ಲಿ ಶೇ. 30ರಷ್ಟು ಇಳಿಯಬಹುದು. ಮುಂದಿನ ಎರಡು ಮೂರು ತಿಂಗಳಲ್ಲೇ ಶೇ. 20ರಷ್ಟು ಬೆಲೆ ಇಳಿಕೆ ಆಗಬಹುದು ಎನ್ನಲಾಗಿದೆ. ವರದಿ ಪ್ರಕಾರ ಒಂದು ಔನ್ಸ್​​ಗೆ 3,500 ರೂ ಇರುವ ಚಿನ್ನದ ಬೆಲೆ ಮುಂದಿನ ಮೂರು ತಿಂಗಳಲ್ಲಿ 3,300 ಡಾಲರ್ ತಲುಪಬಹುದು. ಮುಂದಿನ 6-12 ತಿಂಗಳಲ್ಲಿ ಅದು 2,800 ಡಾಲರ್​​ಗೂ ಇಳಿಯಬಹುದು ಎಂದು ಸಿಟಿ ಬ್ಯಾಂಕ್ ನಿರೀಕ್ಷಿಸಿದೆ.

ಇದನ್ನೂ ಓದಿ: ಗ್ಲೋಬಲ್ ಸಮಿಟ್​​ನಲ್ಲಿ IMEC ಬಗ್ಗೆ ಚರ್ಚೆ; ಭಾರತಕ್ಕೆ ಈ ಕಾರಿಡಾರ್ ವರದಾನ ಹೇಗೆ?

ಇದನ್ನೂ ಓದಿ
Image
ಬರಲಿವೆ ಹೊಸ ಗೋಲ್ಡ್ ಲೋನ್ ನಿಯಮಗಳು? ಹೈಲೈಟ್ಸ್
Image
ಬ್ಯಾಂಕ್ ಲಾಕರ್ ದರೋಡೆಯಾದರೆ ಯಾರು ಜವಾಬ್ದಾರರು?
Image
ಭಾರತೀಯರ ಚಿನ್ನದ ಮೌಲ್ಯ ಪಾಕ್ ಜಿಡಿಪಿಗಿಂತ ಏಳೆಂಟು ಪಟ್ಟು ಹೆಚ್ಚು
Image
ಚಿನ್ನದ ಶುದ್ಧತೆ, ತೆರಿಗೆ, ಮೇಕಿಂಗ್ ಚಾರ್ಜಸ್ ಇತ್ಯಾದಿ ವಿವರ

ಚಿನ್ನದ ಬೆಲೆ ಇಳಿಕೆ ಆಗಲು ಏನು ಕಾರಣ?

ಈ ವರ್ಷ ಚಿನ್ನದ ಬೆಲೆ ಶೇ. 30ರಷ್ಟು ಏರಿದೆ. ಅದಾದ ಬಳಿಕ ಬೆಲೆ ಶಾಂತಗೊಂಡಿದೆ. ಏರಿಕೆಯೇ ಆಗುತ್ತಿಲ್ಲ. ಈಗ ಇರುವ ಸಂಘರ್ಷಮಯ ವಾತಾವರಣ ಕಳೆದ 10-20 ವರ್ಷದಲ್ಲಿ ಇದ್ದದ್ದಿಲ್ಲ. ಇಸ್ರೇಲ್ ಇರಾನ್ ಯುದ್ಧ ಆರಂಭವಾದಾಗ ಮೊದಲ ದಿನ ಚಿನ್ನದ ಬೆಲೆ ಏರಿತ್ತು. ಅದಾದ ಬಳಿಕ ಚಿನಿವಾರ ಪೇಟೆ ಸ್ಪಂದಿಸುವುದನ್ನೇ ನಿಲ್ಲಿಸಿದೆ. ಇದು ಚಿನ್ನದ ಬೆಲೆ ಗರಿಷ್ಠ ಮಟ್ಟ ಮುಟ್ಟಿರುವುದರ ಸಂಕೇತ ಎಂದು ಕೇದಿಯಾ ಅಡ್ವೈಸರಿ ಸಂಸ್ಥೆಯ ಮುಖ್ಯಸ್ಥ ಅಜಯ್ ಕೆದಿಯಾ ಹೇಳುತ್ತಾರೆ.

ಚಿನ್ನದ ಬೆಲೆ ಏರಿಕೆಗೆ ಏನೇನು ಸಂಭಾವ್ಯ ಕಾರಣ ಇವೆಯೋ ಅದೆಲ್ಲವೂ ಚಿನಿವಾರಪೇಟೆಯ ಮೇಲೆ ಪ್ರಭಾವ ಬೀರಿ ಆಗಿದೆ. ಮುಂದಿನ ಎರಡು ತಿಂಗಳಲ್ಲಿ ಚಿನ್ನದ ಬೆಲೆ ಶೇ. 8-10ರಷ್ಟು ಇಳಿಯಬಹುದು. ಮುಂದಿನ ಒಂದು ವರ್ಷದಲ್ಲಿ ಶೇ. 30ರಷ್ಟು ಕುಸಿದು 2,400 ಡಾಲರ್ ಬೆಲೆ ತಲುಪಬಹುದು ಎನ್ನುತ್ತಾರೆ ಅಜಯ್ ಕೆದಿಯಾ.

ಇದನ್ನೂ ಓದಿ: ಚಿನ್ನ ಸಾಕಪ್ಪ ಎನ್ನುತ್ತಿದೆ ಭಾರತ; ಚಿನ್ನ ಇನ್ನೂ ಬೇಕಪ್ಪ ಎನ್ನುತ್ತಿದೆ ಚೀನಾ; ಚೀನೀಯರು ಚಿನ್ನದ ಹಿಂದೆ ಬಿದ್ದಿರೋದ್ಯಾಕೆ?

ಹಳೆಯ ಆಭರಣ ಮಾರುತ್ತಿರುವ ಜನರು..?

ಭಾರತೀಯರಿಗೆ ಚಿನ್ನ ಬಹಳ ಆಪ್ತವಾದ ಲೋಹ. ಅದರಲ್ಲೂ ಮಹಿಳೆಯರಿಗೆ ಆಗಾಗ್ಗೆ ಹೊಸ ಆಭರಣ ಪಡೆದರೆ ಸಮಾಧಾನ. ಈಗ ಚಿನ್ನದ ಬೆಲೆ ಬಹಳ ದುಬಾರಿಯಾಗಿರುವುದರಿಂದ ಹೊಸ ಚಿನ್ನ ಖರೀದಿಸಲು ಅಶಕ್ಯರಿದ್ದವರು ಹಳೆಯ ಆಭರಣಗಳನ್ನು ನೀಡಿ ಹೊಸ ಆಭರಣ ಮಾಡಿಸಿಕೊಳ್ಳುವುದು ಹೆಚ್ಚುತ್ತಿದೆಯಂತೆ.

ಹಾಗೆಯೇ, ಹಳೆಯ ಆಭರಣಗಳನ್ನು ಮಾರಿ ಅದರಿಂದ ಲಾಭ ಮಾಡುತ್ತಿರುವವರ ಸಂಖ್ಯೆಯೂ ಹೆಚ್ಚುತ್ತಿದೆ ಎನ್ನುತ್ತಾರೆ ಕಾಶಿ ಜ್ಯುವೆಲರ್ಸ್​​ನ ಶ್ರೇಯಾಂಶ್ ಕಪೂರ್.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!