AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IRCTC: ನೀರಿನ ಬಾಟಲ್​ಗೆ 5 ರೂ. ಹೆಚ್ಚು ಪಡೆದದ್ದಕ್ಕೆ ಐಆರ್​ಸಿಟಿಸಿ ಗುತ್ತಿಗೆದಾರನಿಗೆ 1 ಲಕ್ಷ ರೂ. ದಂಡ

ಕುಡಿಯುವ ನೀರಿನ ಬಾಟಲ್​ಗೆ 15 ರೂ. ಎಂಆರ್​ಪಿ ಇದ್ದು, ತಮ್ಮಿಂದ 20 ರೂ. ಪಡೆಯಲಾಗಿದೆ ಎಂದು ಪ್ರಯಾಣಿಕ ಶಿವಂ ಭಟ್ ಎಂಬವರು ಗುರುವಾರ ಟ್ವಿಟರ್​ನಲ್ಲಿ ವಿಡಿಯೊ ಪೋಸ್ಟ್ ಮಾಡಿದ್ದರು. ಇದನ್ನು ಗಣನೆಗೆ ತೆಗೆದುಕೊಂಡು ಭಾರತೀಯ ರೈಲ್ವೆ ಕ್ರಮ ಕೈಗೊಂಡಿದೆ.

IRCTC: ನೀರಿನ ಬಾಟಲ್​ಗೆ 5 ರೂ. ಹೆಚ್ಚು ಪಡೆದದ್ದಕ್ಕೆ ಐಆರ್​ಸಿಟಿಸಿ ಗುತ್ತಿಗೆದಾರನಿಗೆ 1 ಲಕ್ಷ ರೂ. ದಂಡ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Dec 17, 2022 | 1:04 PM

Share

ನವದೆಹಲಿ: ಪ್ರಯಾಣಿಕರಿಗೆ ಮಾರಾಟ ಮಾಡುವ ಕುಡಿಯುವ ನೀರಿನ ಬಾಟಲ್​ಗೆ (Packaged Drinking Water) ನಿಗದಿತ ಗರಿಷ್ಠ ದರಕ್ಕಿಂತ 5 ರೂ. ಹೆಚ್ಚು ಪಡೆದದಕ್ಕೆ ಐಆರ್​ಸಿಟಿಸಿ (IRCTC) ಗುತ್ತಿಗೆದಾರನಿಗೆ ಭಾರತೀಯ ರೈಲ್ವೆ (Indian Railways) 1 ಲಕ್ಷ ರೂ. ದಂಡ ವಿಧಿಸಿದೆ. ಹರಿಯಾಣದ ಅಂಬಾಲ ವಲಯದಲ್ಲಿ (Ambala division) ಪ್ರಕರಣ ನಡೆದಿದೆ. ಪ್ರಯಾಣಿಕರೊಬ್ಬರ ದೂರಿನ ಆಧಾರದಲ್ಲಿ ದಂಡ ವಿಧಿಸಲಾಗಿದೆ. ಉತ್ತರ ಪ್ರದೇಶದ ಗೋಂಡಾ ಪ್ರದೇಶದ ಗುತ್ತಿಗೆದಾರ ಚಂದ್ರಮೌಳಿ ಮಿಶ್ರಾಗೆ ದಂಡ ವಿಧಿಸಲಾಗಿದೆ. ಇವರು ರೈಲು ಸಂಖ್ಯೆ 12231/32 (ಲಖನೌ-ಚಂಡೀಗಢ-ಲಖನೌ) ಇದರಲ್ಲಿ ಆಹಾರ ಪೂರೈಕೆಗೆ ಪರವಾನಗಿ ಹೊಂದಿದ್ದರು ಎಂದು ಅಂಬಾಲ ವಲಯದ ಅಧಿಕಾರಿಗಳು ತಿಳಿಸಿದ್ದಾರೆ.

ಕುಡಿಯುವ ನೀರಿನ ಬಾಟಲ್​ಗೆ 15 ರೂ. ಎಂಆರ್​ಪಿ ಇದ್ದು, ತಮ್ಮಿಂದ 20 ರೂ. ಪಡೆಯಲಾಗಿದೆ ಎಂದು ಪ್ರಯಾಣಿಕ ಶಿವಂ ಭಟ್ ಎಂಬವರು ಗುರುವಾರ ಟ್ವಿಟರ್​ನಲ್ಲಿ ವಿಡಿಯೊ ಪೋಸ್ಟ್ ಮಾಡಿದ್ದರು. ದಿನೇಶ್ ಎಂಬವರು ಹೆಚ್ಚುವರಿ ಹಣ ಪಡೆದಿರುವುದಾಗಿ ಅವರು ದೂರಿದ್ದರು. ರೈಲು ಸಂಖ್ಯೆ 12232ರಲ್ಲಿ ಅವರು ಪ್ರಯಾಣಿಸಿದ್ದರು. ಈ ದೂರಿನ ಮೇರೆಗೆ ದಿನೇಶ್ ಎಂಬವರ ಮ್ಯಾನೇಜರ್ ರವಿ ಕುಮಾರ್ ಎಂಬವರನ್ನು ಲಖನೌನಲ್ಲಿ ಬಂದಿಸಲಾಗಿತ್ತು. ಭಾರತೀಯ ರೈಲ್ವೆ ಕಾಯ್ದೆಯ ಸೆಕ್ಷನ್ 144(1)ರ ಅಡಿಯಲ್ಲಿ ಬಂಧನವಾಗಿತ್ತು. ಬಳಿಕ ಅವರ ಗುತ್ತಿಗೆದಾರನಿಗೆ ದಂಡ ವಿಧಿಸುವಂತೆ ವಿಭಾಗೀಯ ರೈಲ್ವೆ ಮ್ಯಾನೇಜರ್ ಮನ್​ದೀಪ್ ಸಿಂಗ್ ಭಾಟಿಯಾಗೆ ಶಿಫಾರಸು ಮಾಡಲಾಗಿತ್ತು ಎಂದು ‘ಹಿಂದೂಸ್ತಾನ್ ಟೈಮ್ಸ್’ ವರದಿ ಮಾಡಿದೆ.

ಇದನ್ನೂ ಓದಿ: IRCTC Stake Sell: ಐಆರ್​ಸಿಟಿಸಿ ಬಂಡವಾಳ ಮಾರಾಟ ಘೋಷಿಸಿದ ಸರ್ಕಾರ; ಷೇರು ಮೌಲ್ಯ ಕುಸಿತ

ದೂರಿನ ಮೇರೆಗೆ ಐಆರ್​ಸಿಟಿಸಿಯ ಪ್ರಾದೇಶಿಕ ಆಯುಕ್ತರಿಗೆ ಅಂಬಾಲಕ್ಕೆ ವಿಚಾರಣೆಗೆ ಬರುವಂತೆ ಸಮನ್ಸ್ ನೀಡಲಾಯಿತು. ರೈಲುಗಳಲ್ಲಿ ನೀಡುವ ಸೇವೆಗಳಿಗೆ ಪ್ರಯಾಣಿಕರಿಂದ ಹೆಚ್ಚಿನ ಹಣ ಪಡೆಯುವುದನ್ನು ತಡೆಯುವ ಬಗ್ಗೆ ಸಮಾಲೋಚನೆ ನಡೆಸಲಾಯಿತು ಎಂದು ವಿಭಾಗೀಯ ವಾಣಿಜ್ಯ ಮ್ಯಾನೇಜರ್ ಹರಿಮೋಹನ್ ತಿಳಿಸಿದ್ದಾರೆ ಎಂದು ವರದಿ ಉಲ್ಲೇಖಿಸಿದೆ. ಪರವಾನಗಿ ಮತ್ತು ಇತರ ವಿವರಗಳನ್ನು ಪರಿಶೀಲಿಸಿದ ಬಳಿಕ ಗುತ್ತಿಗೆದಾರನಿಗೆ 1 ಲಕ್ಷ ರೂ. ದಂಡ ವಿಧಿಸಲಾಯಿತು ಎಂದು ಮನ್​ದೀಪ್ ಸಿಂಗ್ ಭಾಟಿಯಾ ತಿಳಿಸಿದ್ದಾರೆ.

ಭಾರತೀಯ ರೈಲ್ವೆಯ ಆಹಾರ ವಿತರಣೆ ಮತ್ತು ಪ್ರವಾಸ ನಿಗಮ ‘ಐಆರ್​ಸಿಟಿಸಿ’ ರೈಲುಗಳಲ್ಲಿ ಆಹಾರ ಪೂರೈಕೆ ಮಾಡುತ್ತದೆ. ಇದಕ್ಕಾಗಿ ಐಆರ್​ಸಿಟಿಸಿ ಹೊರಗುತ್ತಿಗೆ ನೀಡುತ್ತದೆ. ಪರವಾನಗಿ ಪಡೆದ ಗುತ್ತಿಗೆದಾರರು ರೈಲುಗಳಲ್ಲಿ ನೀರು, ಆಹಾರ ಪೂರೈಕೆ ವ್ಯವಸ್ಥೆ ಮಾಡುತ್ತಾರೆ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
TV9 Web
TV9 Web

TV9 Kannada

Read More
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ