AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Meta India Head: ಭಾರತದಲ್ಲಿ ಸಂಧ್ಯಾ ದೇವನಾಥನ್​ಗೆ ಮೆಟಾ ಚುಕ್ಕಾಣಿ; ಆದಾಯ ವೃದ್ಧಿಯತ್ತ ಚಿತ್ತ

ಅಜಿತ್ ಮೋಹನ್ ಅವರು ಮೆಟಾದ ಭಾರತ ವಿಭಾಗದ ಮುಖ್ಯಸ್ಥ ಸ್ಥಾನಕ್ಕೆ ಈ ತಿಂಗಳ ಆರಂಭದಲ್ಲಿ ರಾಜೀನಾಮೆ ನೀಡಿದ್ದರು. ಮೆಟಾ ಇಂಡಿಯಾ ಸಾರ್ವಜನಿಕ ನೀತಿ ಮುಖ್ಯಸ್ಥ ರಾಜೀವ್ ಅಗರ್ವಾಲ್, ವಾಟ್ಸ್​ಆ್ಯಪ್ ಇಂಡಿಯಾ ಮುಖ್ಯಸ್ಥ ಅಜಿತ್ ಬೋಸ್ ಕೂಡ ಈ ವಾರ ಆರಂಭದಲ್ಲಿ ರಾಜೀನಾಮೆ ನೀಡಿದ್ದಾರೆ.

Meta India Head: ಭಾರತದಲ್ಲಿ ಸಂಧ್ಯಾ ದೇವನಾಥನ್​ಗೆ ಮೆಟಾ ಚುಕ್ಕಾಣಿ; ಆದಾಯ ವೃದ್ಧಿಯತ್ತ ಚಿತ್ತ
ಸಂಧ್ಯಾ ದೇವನಾಥನ್Image Credit source: PTI
Follow us
TV9 Web
| Updated By: Ganapathi Sharma

Updated on: Nov 17, 2022 | 4:28 PM

ನವದೆಹಲಿ: ಸಂಧ್ಯಾ ದೇವನಾಥನ್ (Sandhya Devanathan) ಅವರನ್ನು ಭಾರತ ವಿಭಾಗದ ಮುಖ್ಯಸ್ಥರನ್ನಾಗಿ ನೇಮಕ ಮಾಡಲಾಗಿದೆ ಎಂದು ಮಾರ್ಕ್ ಝುಕರ್​ಬರ್ಗ್ (Mark Zuckerberg) ಒಡೆತನದ ಮೆಟಾ (Meta Platforms) ತಿಳಿಸಿದೆ. ಅಜಿತ್ ಮೋಹನ್ ಅವರು ಮೆಟಾದ ಭಾರತ ವಿಭಾಗದ ಮುಖ್ಯಸ್ಥ ಸ್ಥಾನಕ್ಕೆ ಈ ತಿಂಗಳ ಆರಂಭದಲ್ಲಿ ರಾಜೀನಾಮೆ ನೀಡಿದ್ದರು. ಅವರು ಮೆಟಾದ ಪ್ರತಿಸ್ಪರ್ಧಿ ಕಂಪನಿ ಸ್ನ್ಯಾಪ್ ಇಂಕ್​ ಸೇರಿದ್ದರು. ಇದಾದ ಕೆಲವೇ ದಿನಗಳಲ್ಲಿ ನೂತನ ಮುಖ್ಯಸ್ಥರ ಘೋಷಣೆ ಮಾಡಲಾಗಿದೆ. ಮೆಟಾ ಇಂಡಿಯಾ ಸಾರ್ವಜನಿಕ ನೀತಿ ಮುಖ್ಯಸ್ಥ ರಾಜೀವ್ ಅಗರ್ವಾಲ್, ವಾಟ್ಸ್​ಆ್ಯಪ್ ಇಂಡಿಯಾ ಮುಖ್ಯಸ್ಥ ಅಜಿತ್ ಬೋಸ್ ಕೂಡ ಈ ವಾರ ಆರಂಭದಲ್ಲಿ ರಾಜೀನಾಮೆ ನೀಡಿದ್ದಾರೆ.

‘ಸಂಧ್ಯಾ ಅವರು ಉದ್ಯಮ ಕ್ಷೇತ್ರದಲ್ಲಿ ಉತ್ತಮ ಹಿನ್ನೆಲೆ ಹೊಂದಿದ್ದಾರೆ. ಅಸಾಧಾರಣ ಮತ್ತು ಅತ್ಯುತ್ತಮ ತಂಡಗಳನ್ನು ಕಟ್ಟಿದ ಛಾತಿ ಅವರದ್ದು. ಉತ್ಪನ್ನಗಳಲ್ಲಿ ಹೊಸತನ ತರುವುದು ಮತ್ತು ಉತ್ತಮ ಸಹಭಾಗಿತ್ವ ಹೊಂದುವುದು ಅವರಿಗೆ ಕರಗತವಾಗಿದೆ. ಅವರನ್ನು ಭಾರತದ ವಿಭಾಗದ ಮುಖ್ಯಸ್ಥರನ್ನಾಗಿ ಹೊಂದಲು ನಮಗೆ ಬಹಳ ಸಂತಸವಿದೆ’ ಎಂದು ಮೆಟಾ ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ: Breaking News: ವಾಟ್ಸಾಪ್ ಇಂಡಿಯಾ ಮುಖ್ಯಸ್ಥ ಮತ್ತು ಮೆಟಾ ಇಂಡಿಯಾ ಸಾರ್ವಜನಿಕ ನೀತಿ ಮುಖ್ಯಸ್ಥ ರಾಜೀನಾಮೆ

ಕೇಂದ್ರ ಸರ್ಕಾರವು ದೊಡ್ಡ ತಂತ್ರಜ್ಞಾನ ಕಂಪನಿಗಳನ್ನು ನಿಯಂತ್ರಿಸುವ ಸಲುವಾಗಿ ಕಾನೂನನ್ನು ಬಿಗಿಗೊಳಿಸುತ್ತಿರುವ ಮತ್ತು ಫೇಸ್​ಬುಕ್ ಕೆಲವು ನಿಯಂತ್ರಣ ಕ್ರಮಗಳನ್ನು ಎದುರಿಸಬೇಕಾಗಿರುವ ಸಂದರ್ಭದಲ್ಲೇ ಸಂಧ್ಯಾ ದೇವನಾಥನ್ ಅವರನ್ನು ಭಾರತ ವಿಭಾಗದ ಮುಖ್ಯಸ್ಥರನ್ನಾಗಿ ನೇಮಕ ಮಾಡಿದೆ ಮೆಟಾ. ಸುಳ್ಳು ಸುದ್ದಿಗಳ ಹರಡುವಿಕೆ ಮತ್ತು ದ್ವೇಷ ಭಾಷಣಗಳ ಪ್ರಸಾರವನ್ನು ತಡೆಯದಿರುವುದಕ್ಕೆ ಫೇಸ್​ಬುಕ್ ಸರ್ಕಾರದ ಕೆಂಗಣ್ಣಿಗೆ ಗುರಿಯಾಗಿದೆ.

2016ರಲ್ಲಿ ಮೆಟಾ ಸೇರಿದ್ದ ಸಂಧ್ಯಾ ದೇವನಾಥನ್

ಸಂಧ್ಯಾ ದೇವನಾಥನ್ 2016ರಲ್ಲಿ ಮೆಟಾ ಸೇರಿದ್ದರು. ಸಿಂಗಾಪುರ ಮತ್ತು ವಿಯೆಟ್ನಾಂನಲ್ಲಿ ಕಂಪನಿಯ ತಂಡಗಳನ್ನು ಬೆಳೆಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದರು. ಮೆಟಾದ ಇ-ಕಾಮರ್ಸ್ ತಾಣಗಳ ಕಾರ್ಯಾಚರಣೆಯನ್ನು ಜನಪ್ರಿಯಗೊಳಿಸುವಲ್ಲಿಯೂ ಪ್ರಮುಖ ಪಾತ್ರ ವಹಿಸಿದ್ದರು. 2020ರಲ್ಲಿ ಇಂಡೋನೇಷ್ಯಾಗೆ ತೆರಳಿ ಅಲ್ಲಿ ಗೇಮಿಂಗ್​ಗೆ ಸಂಬಂಧಿಸಿದ ಜವಾಬ್ದಾರಿ ವಹಿಸಿಕೊಂಡಿದ್ದರು.

ಭಾರತದಲ್ಲಿ ಏನು ಜವಾಬ್ದಾರಿ?

‘ಸಂಧ್ಯಾ ದೇವನಾಥನ್ ಭಾರತದಲ್ಲಿ ಮೆಟಾ ನೇತೃತ್ವ ವಹಿಸಿಕೊಳ್ಳುತ್ತಿದ್ದು, ಕಂಪನಿಯ ಕಾರ್ಯತಂತ್ರಗಳನ್ನು ರೂಪಿಸಲಿದ್ದಾರೆ. ದೇಶದ ಪ್ರಮುಖ ಬ್ರ್ಯಾಂಡ್​ಗಳ, ಕ್ರಿಯೇಟರ್​ಗಳ, ಜಾಹೀರಾತುದಾರರ ಜತೆ ಸಹಭಾಗಿತ್ವ ವೃದ್ಧಿಸುವ ಮೂಲಕ ಮೆಟಾದ ಆದಾಯ ಹೆಚ್ಚಿಸುವತ್ತ ಗಮನಹರಿಸಲಿದ್ದಾರೆ’ ಎಂದು ಕಂಪನಿಯ ಪ್ರಕಟಣೆ ತಿಳಿಸಿದೆ. ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಮೆಟಾ ಮುಂದೆ ಆದಾಯ ವೃದ್ಧಿಸಬೇಕಾದ ಸವಾಲು ಇದೆ. ಇತ್ತೀಚೆಗಷ್ಟೇ ಮೆಟಾ ವಿಶ್ವದಾದ್ಯಂತ 11,000 ಉದ್ಯೋಗಿಗಳನ್ನು ವಜಾಗೊಳಿಸುವುದಾಗಿ ಘೋಷಿಸಿತ್ತು.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

VIDEO: ಅತ್ಯಂತ ಕೆಟ್ಟ ದಾಖಲೆ: ಒಂದೇ ಓವರ್​ನಲ್ಲಿ 30 ರನ್ ಚಚ್ಚಿದ ವೈಭವ್
VIDEO: ಅತ್ಯಂತ ಕೆಟ್ಟ ದಾಖಲೆ: ಒಂದೇ ಓವರ್​ನಲ್ಲಿ 30 ರನ್ ಚಚ್ಚಿದ ವೈಭವ್
ಬೆಂಗಳೂರು ವಿಮಾನ ನಿಲ್ದಾಣ ರಸ್ತೆಯಲ್ಲಿ ಸರಣಿ ಅಪಘಾತ, 4 ಕಾರುಗಳು ಜಖಂ
ಬೆಂಗಳೂರು ವಿಮಾನ ನಿಲ್ದಾಣ ರಸ್ತೆಯಲ್ಲಿ ಸರಣಿ ಅಪಘಾತ, 4 ಕಾರುಗಳು ಜಖಂ
ಸ್ತ್ರೀಯರು ಗರ್ಭಾವಸ್ಥೆಯಲ್ಲಿ ನೀತಿಕತೆಗಳನ್ನು ಯಾಕೆ ಕೇಳಬೇಕು?
ಸ್ತ್ರೀಯರು ಗರ್ಭಾವಸ್ಥೆಯಲ್ಲಿ ನೀತಿಕತೆಗಳನ್ನು ಯಾಕೆ ಕೇಳಬೇಕು?
ಮೇಷ ರಾಶಿಯವರಿಗಿಂದು ಐದು ರಾಶಿಗಳ ಶುಭ ಫಲ: ಉಳಿದ ರಾಶಿಗಳ ಫಲಾಫಲವೂ ಇಲ್ಲಿದೆ
ಮೇಷ ರಾಶಿಯವರಿಗಿಂದು ಐದು ರಾಶಿಗಳ ಶುಭ ಫಲ: ಉಳಿದ ರಾಶಿಗಳ ಫಲಾಫಲವೂ ಇಲ್ಲಿದೆ
ಕಾಲು ನೋವಿದ್ದರೂ ವೈಭವ್ ಶತಕಕ್ಕೆ ದ್ರಾವಿಡ್ ಸಂಭ್ರಮ ನೋಡಿ
ಕಾಲು ನೋವಿದ್ದರೂ ವೈಭವ್ ಶತಕಕ್ಕೆ ದ್ರಾವಿಡ್ ಸಂಭ್ರಮ ನೋಡಿ
ಪದ್ಮ ಭೂಷಣ ಪ್ರಶಸ್ತಿ ಪಡೆಯಲು ಬಂದ ಬಾಲಯ್ಯ ಗತ್ತು ಹೇಗಿತ್ತು ನೋಡಿ..
ಪದ್ಮ ಭೂಷಣ ಪ್ರಶಸ್ತಿ ಪಡೆಯಲು ಬಂದ ಬಾಲಯ್ಯ ಗತ್ತು ಹೇಗಿತ್ತು ನೋಡಿ..
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!