AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Fact Check: ಆಧಾರ್ ಕಾರ್ಡ್ ಮೂಲಕ ಹಣಕಾಸಿನ ವಹಿವಾಟು ಟ್ರ್ಯಾಕ್​ ಮಾಡಬಹುದಾ? ಏನಿದರ ಸತ್ಯಾಸತ್ಯತೆ!

ಆಧಾರ್‌ನ ಉಪಯುಕ್ತತೆ ಹೆಚ್ಚುತ್ತಿದ್ದು, UIDAI ವ್ಯಕ್ತಿಗಳಿಗೆ ಆಧಾರ್‌ನಲ್ಲಿ ಹೆಸರು, ಲಿಂಗ, ಜನ್ಮ ದಿನಾಂಕ, ಬಯೋಮೆಟ್ರಿಕ್ ಇತ್ಯಾದಿಗಳಂತಹ ಮಾಹಿತಿಯನ್ನು ನವೀಕರಿಸಲು ಅನುಮತಿಸುತ್ತದೆ.

Fact Check: ಆಧಾರ್ ಕಾರ್ಡ್ ಮೂಲಕ ಹಣಕಾಸಿನ ವಹಿವಾಟು ಟ್ರ್ಯಾಕ್​ ಮಾಡಬಹುದಾ? ಏನಿದರ ಸತ್ಯಾಸತ್ಯತೆ!
Aadhaar Card (ಸಂಗ್ರಹ ಚಿತ್ರ)
TV9 Web
| Edited By: |

Updated on: Sep 16, 2022 | 7:48 PM

Share

ಇಂದಿನ ದಿನಗಳಲ್ಲಿ ಆಧಾರ್ ಕಾರ್ಡ್ ಅತ್ಯಂತ ಮಹತ್ವದ ದಾಖಲೆಗಳಲ್ಲಿ ಒಂದು. ಆಧಾರ್ ಕಾರ್ಡ್ ವಿಲ್ಲದೆ ಯಾವುದೇ ಪ್ರಮುಖ ಕೆಲಸವಾಗುವುದಿಲ್ಲ. ಇದನ್ನು ಹಣಕಾಸಿನ ಕೆಲಸಕ್ಕೆ ಐಡಿಯಾಗಿ ಬಳಸಲಾಗುತ್ತದೆ. ಬ್ಯಾಂಕ್ ಖಾತೆ ತೆರೆಯುವುದರಿಂದ ಹಿಡಿದು ಪ್ಯಾನ್ ಕಾರ್ಡ್ ಮತ್ತು ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸುವವರೆಗೆ ಪ್ರತಿಯೊಂದು ಕಾರ್ಯಕ್ಕೂ ಆಧಾರ್ ಕಾರ್ಡ್ ಅಗತ್ಯ ಬಳಕೆಯಾಗಿದೆ. ಇದಲ್ಲದೆ ರೈಲು ಮತ್ತು ವಿಮಾನದಲ್ಲಿ ಪ್ರಯಾಣಿಸಲು ಸಾಧ್ಯವಿಲ್ಲ. ಸರ್ಕಾರಿ ಸಂಸ್ಥೆ UIDAI ದೇಶದ ಪ್ರತಿಯೊಬ್ಬ ವ್ಯಕ್ತಿಗೂ ಆಧಾರ್ ಕಾರ್ಡ್ ನೀಡುವ ಕೆಲಸ ಮಾಡುತ್ತದೆ.

ಆಧಾರ್‌ನ ಉಪಯುಕ್ತತೆ ಹೆಚ್ಚುತ್ತಿದ್ದು, UIDAI ವ್ಯಕ್ತಿಗಳಿಗೆ ಆಧಾರ್‌ನಲ್ಲಿ ಹೆಸರು, ಲಿಂಗ, ಜನ್ಮ ದಿನಾಂಕ, ಬಯೋಮೆಟ್ರಿಕ್ ಇತ್ಯಾದಿಗಳಂತಹ ಮಾಹಿತಿಯನ್ನು ನವೀಕರಿಸಲು ಅನುಮತಿಸುತ್ತದೆ. ಪ್ರತಿ ಕಾರ್ಯಕ್ಕೂ ಆಧಾರ್‌ನ ಅಗತ್ಯ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅದಕ್ಕೆ ಸಂಬಂಧಿಸಿದ ಸುಳ್ಳು ಸುದ್ದಿಗಳೂ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗುತ್ತಿವೆ. ಇಂತಹ ಪರಿಸ್ಥಿತಿಯಲ್ಲಿ, UIDAI ತನ್ನ ಅಧಿಕೃತ ಟ್ವಿಟರ್​ನಲ್ಲಿ ಆಧಾರ್‌ಗೆ ಸಂಬಂಧಿಸಿದ ಯಾವುದೇ ತಪ್ಪು ಮಾಹಿತಿಯ ಕುರಿತಾಗಿ ಮಾಹಿತಿಯನ್ನು ಹಂಚಿಕೊಂಡಿದೆ. ಇತ್ತೀಚಿನ ದಿನಗಳಲ್ಲಿ ಆಧಾರ್ ಸಂಖ್ಯೆಯ ಮೂಲಕ ಯಾರಾದರೂ ನಮ್ಮ ಹಣಕಾಸಿನ ಚಟುವಟಿಕೆಗಳನ್ನು ಟ್ರ್ಯಾಕ್ ಮಾಡಬಹುದು ಎಂದು ಸಾಮಾಜಿಕ ಮಾಧ್ಯಮದಲ್ಲಿ ಹೆಚ್ಚು ವೈರಲ್ ಆಗುತ್ತಿತ್ತು.

ಇದನ್ನೂ ಓದಿ: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 12ನೇ ಕಂತು ಯಾವಾಗ ಸಿಗಲಿದೆ ಅಂತ ಗೊತ್ತಾ? ಇಲ್ಲಿದೆ ಮಾಹಿತಿ

ಸಾಮಾಜಿಕ ಮಾಧ್ಯಮದಲ್ಲಿ ಆಧಾರ್ ಸಂಖ್ಯೆಯ ಮೂಲಕ ಹಣಕಾಸು ಚಟುವಟಿಕೆಗಳನ್ನು ಟ್ರ್ಯಾಕ್ ಮಾಡಲಾಗುತ್ತಿದೆ ಎಂಬ ಹೇಳಿಕೆಯನ್ನು ಯುಐಡಿಎಐ ಟ್ವೀಟ್‌ನಲ್ಲಿ ಸ್ಪಷ್ಟಪಡಿಸಿದೆ. ಯಾವುದೇ ಸಂದರ್ಭದಲ್ಲೂ ಇಂತಹ ಸುದ್ದಿಗಳನ್ನು ನಂಬಬೇಡಿ ಎಂದು ಯುಐಡಿಎಐ ತನ್ನ ಅಧಿಕೃತ ಟ್ವಿಟರ್ ಹ್ಯಾಂಡಲ್​ನಲ್ಲಿ ಮಾಹಿತಿ ನೀಡಿದೆ. UIDAI ಯಾವುದೇ ನಿವಾಸಿ ಹಣಕಾಸು ಮಾಹಿತಿ ಅಥವಾ ಡೇಟಾವನ್ನು ಹೊಂದಿಲ್ಲ. ಆಧಾರ್ ಸಂಖ್ಯೆಯ ಮೂಲಕ ಯಾವುದೇ ಹಣಕಾಸಿನ ಮಾಹಿತಿಯನ್ನು ಪ್ರವೇಶಿಸಲಾಗುವುದಿಲ್ಲ. ಇಂತಹ ನಕಲಿ ಮಾಹಿತಿಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಲಾಗುತ್ತಿದ್ದು, ಅದಕ್ಕೆ ಮರುಳಾಗಬೇಡಿ ಎಂದು ಸತ್ಯಾಸತ್ಯತೆಯನ್ನು ಪರಿಶೀಲಿಸಿ ಜನರಿಗೆ ತಲುಪಿಸಿದೆ.

ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ