AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

FASTag KYC: ಜ. 31ರೊಳಗೆ ಕೆವೈಸಿ ಅಪ್​ಡೇಟ್ ಮಾಡದಿದ್ದರೆ ಡೀ ಆ್ಯಕ್ಟಿವೇಟ್ ಆಗಲಿದೆ ಫಾಸ್​ಟ್ಯಾಗ್; ಕೆವೈಸಿ ಅಪ್​ಡೇಟ್ ಮಾಡುವ ಕ್ರಮ ಹೇಗೆ?

KYC Update Method: ಎಲ್ಲಾ ನಾಲ್ಕು ಚಕ್ರ ವಾಹನಗಳು ಹೆದ್ದಾರಿ ಬಳಸುವಾಗ ಫಾಸ್​ಟ್ಯಾಗ್ ಹೊಂದಿರಬೇಕು. ಫಾಸ್​ಟ್ಯಾಗ್​ಗೆ ಕೆವೈಸಿ ಅಪ್​ಡೇಟ್ ಮಾಡಬೇಕು. ಜ. 31ಕ್ಕೆ ಗಡುವು ಕೊಡಲಾಗಿದೆ. ಹೆದ್ದಾರಿ ನಿರ್ವಹಣೆ ಸಂಸ್ಥೆಯ ಫಾಸ್​ಟ್ಯಾಗ್ ಪೋರ್ಟಲ್​ಗೆ ಹೋಗಿ ಆನ್​ಲೈನ್​ನಲ್ಲೇ ಕೆವೈಸಿ ಅಪ್​ಡೇಟ್ ಮಾಡಬಹುದು.

FASTag KYC: ಜ. 31ರೊಳಗೆ ಕೆವೈಸಿ ಅಪ್​ಡೇಟ್ ಮಾಡದಿದ್ದರೆ ಡೀ ಆ್ಯಕ್ಟಿವೇಟ್ ಆಗಲಿದೆ ಫಾಸ್​ಟ್ಯಾಗ್; ಕೆವೈಸಿ ಅಪ್​ಡೇಟ್ ಮಾಡುವ ಕ್ರಮ ಹೇಗೆ?
ಫಾಸ್​ಟ್ಯಾಗ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Jan 30, 2024 | 11:43 AM

Share

ನವದೆಹಲಿ, ಜನವರಿ 30: ಹೆದ್ದಾರಿ ಬಳಸುವ ಎಲ್ಲಾ ನಾಲ್ಕು ಚಕ್ರ ವಾಹನಗಳಿಗೆ ಫಾಸ್​ಟ್ಯಾಗ್ (FASTag) ಸೌಲಭ್ಯ ಒದಗಿಸಲಾಗಿದೆ. ಟಾಲ್ ಪ್ಲಾಜಾಗಳಲ್ಲಿ ಸಮಯ ವ್ಯಯವಾಗುವುದನ್ನು ತಪ್ಪಿಸಲು ಸರ್ಕಾರ ಕೆಲ ವರ್ಷಗಳ ಹಿಂದೆ ಈ ಹೊಸ ವ್ಯವಸ್ಥೆ ತಂದಿದೆ. ಫಾಸ್​ಟ್ಯಾಗ್ ಇದ್ದರೆ ಟೋಲ್ ಬೂತ್​ಗಳ ಸಮೀಪ ಅಳವಡಿಸಿರುವ ಸ್ಕ್ಯಾನರ್​ಗಳ ಮೂಲಕ ಸ್ವಯಂಚಾಲಿತವಾಗಿ ಟೋಲ್ ಹಣ ಕಡಿತಗೊಳ್ಳುತ್ತದೆ. ಇದರಿಂದ ಸಮಯ ಉಳಿತಾಯ ಆಗುತ್ತದೆ. ಇದೀಗ ಫಾಸ್​ಟ್ಯಾಗ್​ನ ಕೆವೈಸಿಯನ್ನು (FASTag KYC) ಅಪ್​ಡೇಟ್ ಮಾಡಲು ಈ ತಿಂಗಳು ಡೆಡ್​ಲೈನ್ ಇದೆ. ಜನವರಿ 31ರೊಳಗೆ ಫಾಸ್​ಟ್ಯಾಗ್ ಅಪ್​ಡೇಟ್ ಮಾಡಬೇಕಿದೆ. ಈ ಕಾರ್ಯ ಆಗದಿದ್ದರೆ ಫಾಸ್​ಟ್ಯಾಗ್ ಡೀ ಆ್ಯಕ್ಟಿವೇಟ್ ಆಗುತ್ತದೆ.

ಫಾಸ್​ಟ್ಯಾಗ್ ಹೇಗೆ ಕೆಲಸ ಮಾಡುತ್ತದೆ?

ವಾಹನ ಚಲಿಸುತ್ತಿರುವಾಗಲೇ ಸ್ಕ್ಯಾನರ್​ಗಳು ಫಾಸ್​ಟ್ಯಾಗ್ ಅನ್ನು ಸ್ಕ್ಯಾನ್ ಮಾಡುತ್ತವೆ. ನಿಗದಿತ ಟೋಲ್ ಹಣವನ್ನು ಅಕೌಂಟ್​ನಿಂದ ಕಡಿತಗೊಳಿಸಲಾಗುತ್ತದೆ. ಈ ಫಾಸ್​​ಟ್ಯಾಗ್ ಸಾಧನದಲ್ಲಿ ರೇಡಿಯೋ ಫ್ರೀಕ್ವೆನ್ಸಿ ಐಡೆಂಟಿಫಿಕೇಶನ್ (ಆರ್​ಎಫ್​ಐಡಿ) ತಂತ್ರಜ್ಞಾನವನ್ನು ಅಳವಡಿಸಲಾಗಿರುತ್ತದೆ. ಅದರ ಟ್ಯಾಗ್ ಅನ್ನು ವಾಹನದ ವಿಂಡ್​ಸ್ಕ್ರೀನ್​ಗೆ ಅಂಟಿಸಲಾಗಿರುತ್ತದೆ. ಟೋಲ್ ಪ್ಲಾಜಾ ಬಳಿ ಸ್ಕ್ಯಾನರ್​ ಈ ಟ್ಯಾಗ್ ಅನ್ನು ಸ್ಕ್ಯಾನ್ ಮಾಡಿ ಗುರುತಿಸುತ್ತದೆ.

ಇದನ್ನೂ ಓದಿ: 2019 Budget: 2019ರ ಮಧ್ಯಂತರ ಬಜೆಟ್​ನ ಎರಡು ಹಿಟ್ ಸ್ಕೀಮ್ಸ್; ಈ ಬಾರಿಯೂ ಬರುತ್ತಾ ಹೊಸ ಗೇಮ್ ಚೇಂಜರ್?

ಫಾಸ್​ಟ್ಯಾಗ್ ಕೆವೈಸಿ ಅಪ್​ಡೇಟ್ ಮಾಡುವ ಕ್ರಮ

  • ಹೆದ್ದಾರಿ ನಿರ್ವಹಣೆ ಸಂಸ್ಥೆಯಾದ ಐಎಚ್​ಎಂಸಿಎಲ್​ನ ಫಾಸ್​ಟ್ಯಾಗ್ ಪೋರ್ಟಲ್​ಗೆ ಹೋಗಿ: fastag.ihmcl.com/
  • ನಿಮ್ಮ ನೊಂದಾಯಿತ ಮೊಬೈಲ್ ನಂಬರ್ ಹಾಗೂ ಪಾಸ್​ವರ್ಡ್ ಅಥವಾ ಒಟಿಪಿ ಬಳಸಿ ಲಾಗಿನ್ ಆಗಿ.
  • ಡ್ಯಾಶ್​ಬೋರ್ಡ್​ನಲ್ಲಿ ಮೈ ಪ್ರೊಫೈಲ್ ಅನ್ನು ಆಯ್ಕೆ ಮಾಡಿ.
  • ಇದರಲ್ಲಿ ನೀವು ಹಿಂದೆ ನೊಂದಾಯಿಸುವಾಗ ಸಲ್ಲಿಸಿದ್ದ ನಿಮ್ಮ ಕೆವೈಸಿ ವಿವರವನ್ನು ಕಾಣಬಹುದು.
  • ಕೆವೈಸಿ ಮೇಲೆ ಕ್ಲಿಕ್ ಮಾಡಿ ‘ಕಸ್ಟಮರ್ ಟೈಪ್’ ಅನ್ನು ಆಯ್ಕೆ ಮಾಡಿ
  • ಎಲ್ಲಾ ವಿವರ ಭರ್ತಿ ಮಾಡಿ. ಆಧಾರ್ ಇತ್ಯಾದಿ ಐಡಿ ಮತ್ತು ವಿಳಾಸ ಸಾಕ್ಷ್ಯ ದಾಖಲೆಗಳನ್ನು ಸಲ್ಲಿಸಿ.

ಈ ಪ್ರಕ್ರಿಯೆ ಮುಗಿದ ಬಳಿಕ 7 ಕಾರ್ಯ ದಿನಗಳಲ್ಲಿ ಕೆವೈಸಿ ಅಪ್​ಡೇಟ್ ಆಗುತ್ತದೆ.

ಇದನ್ನೂ ಓದಿ: New IMPS Rules: ಫೆ. 1ರಿಂದ ಹೊಸ ಐಎಂಪಿಎಸ್ ನಿಯಮ; ಹಣ ಪಾವತಿ ವ್ಯವಸ್ಥೆ ಇನ್ನಷ್ಟು ಸರಳ ಹಾಗೂ ಉಪಯುಕ್ತ

ಕೆವೈಸಿಗೆ ಬೇಕಾದ ದಾಖಲೆಗಳು

ಕೆವೈಸಿ ಎಂದರೆ ನೋ ಯುವರ್ ಕಸ್ಟಮರ್ ಎಂದು. ಅಂದರೆ ಗ್ರಾಹಕರ ಬಗ್ಗೆ ಸಂಸ್ಥೆಗಳು ಆಗಾಗ್ಗೆ ಮಾಹಿತಿ ಅಪ್​ಡೇಟ್ ಮಾಡುತ್ತಿರಬೇಕು. ಈ ಕೆಳಗಿನ ದಾಖಲೆಗಳು ಫಾಸ್​ಟ್ಯಾಗ್ ಕೆವೈಸಿಗೆ ಬೇಕಾಗಬಹುದು:

  • ವಾಹನ ನೊಂದಣಿ ಪತ್ರ
  • ಐಡಿ ದಾಖಲೆ
  • ವಿಳಾಸ ದಾಖಲೆ
  • ಪಾಸ್​ಪೋರ್ಟ್ ಗಾತ್ರದ ಫೋಟೋ

ಇಲ್ಲಿ ಐಡಿ ಮತ್ತು ಅಡ್ರೆಸ್ ಪ್ರೂಫ್​ಗೆ ಪಾಸ್​ಪೋರ್ಟ್, ವೋಟರ್ ಐಡಿ, ಆಧಾರ್ ಕಾರ್ಡ್, ಡಿಎಲ್ ಅಥವಾ ಪ್ಯಾನ್ ಕಾರ್ಡ್ ಅನ್ನು ಬಳಸಬಹುದು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 11:33 am, Tue, 30 January 24

Follow Us
ಸುಗ್ಗನಹಳ್ಳಿ ವಿಜಯಸಾರಥಿ
ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ