AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಣಕಾಸು ಅಕ್ರಮ ತಡೆಯಲು ಭಾರತ ಕೈಗೊಂಡ ಕ್ರಮಕ್ಕೆ ಎಫ್​ಎಟಿಎಫ್ ಮೆಚ್ಚುಗೆ; ವಿಶ್ವದ ಕೆಲವೇ ರಾಷ್ಟ್ರಗಳ ಸಾಲಿನಲ್ಲಿ ಭಾರತ

FATF report on Mutual Evaluation of India: 2023-24ರ ಹಣಕಾಸು ವರ್ಷದ ಸಾಲಿನಲ್ಲಿ ಎಫ್​ಎಟಿಎಫ್ ನಡೆಸಿದ ಮ್ಯುಚುವಲ್ ಇವಾಲ್ಯುಯೇಶನ್​ನ ವರದಿಯಲ್ಲಿ ಮನಿ ಲಾಂಡರಿಂಗ್ ನಿಗ್ರಹಕ್ಕೆ ಭಾರತ ತೆಗೆದುಕೊಂಡ ಕ್ರಮಗಳನ್ನು ಪ್ರಶಂಸಿಸಲಾಗಿದೆ. ಮ್ಯುಚುವಲ್ ಇವಾಲ್ಯುಯೇಶನ್ ರಿಪೋರ್ಟ್ ಅನ್ನು ಸಿಂಗಾಪುರದಲ್ಲಿ ನಡೆದ ಎಫ್​ಎಟಿಎಫ್ ಪ್ಲೀನರಿಯಲ್ಲಿ ಸ್ವೀಕರಿಸಲಾಗಿದೆ. ಭಾರತವನ್ನು ರೆಗ್ಯುಲರ್ ಫಾಲೋ ಅಪ್ ಕೆಟಗರಿಗೆ ಹಾಕಲಾಗಿದೆ. ಜಿ20 ಗುಂಪಿನಲ್ಲಿ ಈ ಗೌರವ ಪಡೆದಿರುವುದು ನಾಲ್ಕು ದೇಶಗಳು ಮಾತ್ರವೇ.

ಹಣಕಾಸು ಅಕ್ರಮ ತಡೆಯಲು ಭಾರತ ಕೈಗೊಂಡ ಕ್ರಮಕ್ಕೆ ಎಫ್​ಎಟಿಎಫ್ ಮೆಚ್ಚುಗೆ; ವಿಶ್ವದ ಕೆಲವೇ ರಾಷ್ಟ್ರಗಳ ಸಾಲಿನಲ್ಲಿ ಭಾರತ
ಎಫ್​ಎಟಿಎಫ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Jun 28, 2024 | 6:22 PM

Share

ನವದೆಹಲಿ, ಜೂನ್ 28: ಕಳೆದ ಬಾರಿಯ ಹಣಕಾಸು ವರ್ಷದಲ್ಲಿ ಎಫ್​ಎಟಿಎಫ್ (Financial Action Task Force) ನಡೆಸಿದ ಮ್ಯುಚುವಲ್ ಇವಾಲ್ಯುಯೇಶನ್​ನಲ್ಲಿ ಭಾರತ ಗಮನಾರ್ಹ ಸಾಧನೆ ತೋರಿದೆ. ಮನಿ ಲಾಂಡರಿಂಗ್ ಅಥವಾ ಅಕ್ರಮ ಹಣ ವರ್ಗಾವಣೆ ಹಾಗೂ ಭಯೋತ್ಪಾದಕರಿಗೆ ಹಣ ವರ್ಗಾವಣೆಯ ಕಾರ್ಯಗಳನ್ನು ನಿಗ್ರಹಿಸಲು ಭಾರತ ಮಾಡುತ್ತಿರುವ ಪ್ರಯತ್ನಗಳನ್ನು ಎಫ್​ಎಟಿಎಫ್ ಗುರುತಿಸಿದೆ. ಸಿಂಗಾಪುರದಲ್ಲಿ ಇಂದು ಮುಕ್ತಾಯಗೊಂಡ ಎಫ್​ಎಟಿಎಫ್ ಸರ್ವಸದಸ್ಯರ ಸಭೆಯಲ್ಲಿ ಭಾರತದ ಮ್ಯುಚುವಲ್ ಇವ್ಯಾಲ್ಯುಯೇಶನ್ ರಿಪೋರ್ಟ್ ಅನ್ನು ಸ್ವೀಕರಿಸಲಾಗಿದೆ.

ಮ್ಯೂಚುಲ್ ಇವ್ಯಾಲ್ಯುಯೇಶನ್ ರಿಪೋರ್ಟ್​ನಲ್ಲಿ ಭಾರತ ಮಾಡಿರುವ ಕಾರ್ಯಗಳನ್ನು ಗುರುತಿಸಲಾಗಿದೆ. ಭಾರತವನ್ನು ‘ರೆಗ್ಯುಲರ್ ಫಾಲೋ ಅಪ್’ ಕೆಟಗರಿಗೆ ಸೇರಿಸಲಾಗಿದೆ. ಜಿ20 ರಾಷ್ಟ್ರಗಳ ಪೈಕಿ ನಾಲ್ಕು ದೇಶಗಳು ಮಾತ್ರವೇ ಈ ಕೆಟಗರಿಗರಿಗೆ ಸೇರ್ಪಡೆಯಾಗಿರುವುದು ಇಲ್ಲಿ ಗಮನಾರ್ಹ.

ಭ್ರಷ್ಟಾಚಾರ, ವಂಚನೆ ಮತ್ತು ವ್ಯವಸ್ಥಿತ ಅಪರಾಧಗಳಿಂದ ಬಂದ ಹಣದ ಅಕ್ರಮ ವರ್ಗಾವಣೆಯೂ ಸೇರಿದಂತೆ ಮನಿ ಲಾಂಡರಿಂಗ್ ಮತ್ತು ಟೆರರ್ ಫೈನಾನ್ಸಿಂಗ್​ನ ಅಪಾಯಗಳನ್ನು ಕಡಿಮೆ ಮಾಡಲು ಭಾರತ ಪ್ರಯತ್ನಿಸಿದೆ.

ನಗದು ಆಧಾರಿತ ಆರ್ಥಿಕತೆಯಿಂದ ಡಿಜಿಟಲ್ ಆರ್ಥಿಕತೆಗೆ ಪರಿವರ್ತನೆ ಆಗಿರುವುದು ಮನಿ ಲಾಂಡರಿಂಗ್ ಅಪಾಯವನ್ನು ಕಡಿಮೆ ಮಾಡಿದೆ. ಜನ್ ಧನ್, ಆಧಾರ್ ಮತ್ತು ಮೊಬೈಲ್ ಈ ಮೂರು ಅಂಶಗಳನ್ನೊಳಗೊಂಡಿರುವ ವ್ಯವಸ್ಥೆಯಿಂದಾಗಿ ಇವತ್ತು ಹಣಕಾಸು ವಹಿವಾಟು ಕಣ್ತಪ್ಪಿಹೋಗದಂತಾಗಿದೆ. ಈ ಮೂಲಕ ಅಕ್ರಮ ಹಣ ವರ್ಗಾವಣೆ ಸಾಧ್ಯತೆಯನ್ನು ಭಾರತ ಕಡಿಮೆ ಮಾಡಿದೆ ಎಂದು ಎಫ್​ಎಟಿಎಫ್​ನ ಮ್ಯೂಚುಲ್ ಇವಾಲ್ಯುಯೇಶನ್ ವರದಿಯಲ್ಲಿ ಪ್ರಶಂಸಿಸಲಾಗಿದೆ.

ಇದನ್ನೂ ಓದಿ: ಜಿಯೋ ದರ ಹೆಚ್ಚಳ ಬೆನ್ನಲ್ಲೇ ಷೇರುಪೇಟೆಯಲ್ಲಿ ಆರ್​ಐಎಲ್ ಮಿಂಚು; ಮಾರುಕಟ್ಟೆ ಬಂಡವಾಳ ದಾಖಲೆಯ 21 ಲಕ್ಷ ಕೋಟಿ ರೂಗೆ ಏರಿಕೆ

ಈ ವರದಿಯಿಂದ ಭಾರತಕ್ಕೆ ಏನು ಉಪಯೋಗ?

ಎಫ್​ಎಟಿಎಫ್ ಮ್ಯುಚುವಲ್ ಇವಾಲ್ಯುಯೇಶನ್​ನಲ್ಲಿ ಭಾರತದ ಸಾಧನೆಯನ್ನು ಗುರುತಿಸಲಾಗಿರುವುದು ಬಹಳ ಮುಖ್ಯ ಎನಿಸುತ್ತದೆ. ಇದು ಭಾರತದ ಹಣಕಾಸು ವ್ಯವಸ್ಥೆಯ ಒಟ್ಟಾರೆ ಸ್ಥಿರತೆ ಮತ್ತು ಸಮಗ್ರತೆಯನ್ನು ಖಚಿತಪಡಿಸುತ್ತದೆ. ಇಂಥ ಒಳ್ಳೆಯ ರೇಟಿಂಗ್​ಗಳು ಭಾರತದ ಬಗ್ಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೂಡಿಕೆದಾರರ ವಿಶ್ವಾಸ ಹೆಚ್ಚಿಸುತ್ತದೆ. ಜಾಗತಿಕ ಹಣಕಾಸು ಮಾರುಕಟ್ಟೆಯ ಅವಕಾಶ ಭಾರತಕ್ಕೆ ಹೆಚ್ಚು ಸುಲಭವಾಗಿ ಪ್ರಾಪ್ತಿಯಾಗುತ್ತದೆ. ಭಾರತದ ಯುಪಿಐ ಪೇಮೆಂಟ್ ವ್ಯವಸ್ಥೆ ಜಾಗತಿಕವಾಗಿ ವ್ಯಾಪಿಸುವ ಕೆಲಸ ಸುಲಭವಾಗುತ್ತದೆ ಎಂದು ಕೇಂದ್ರ ಸರ್ಕಾರ ಅಭಿಪ್ರಾಯಪಟ್ಟಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 6:18 pm, Fri, 28 June 24

Follow Us
ದರೋಡೆಗೆ ಬಂದ ಕಳ್ಳರನ್ನೇ ಕೂಡಿಹಾಕಿದ ಜನರು!
ದರೋಡೆಗೆ ಬಂದ ಕಳ್ಳರನ್ನೇ ಕೂಡಿಹಾಕಿದ ಜನರು!
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಸಂಪುಟ ಪುನಾರಚನೆಗೆ ಎಐಸಿಸಿ ಅಧ್ಯಕ್ಷ ಖರ್ಗೆ ಮಹತ್ವದ ಭರವಸೆ: ಶಾಸಕರು ಖುಷ್​
ಸಂಪುಟ ಪುನಾರಚನೆಗೆ ಎಐಸಿಸಿ ಅಧ್ಯಕ್ಷ ಖರ್ಗೆ ಮಹತ್ವದ ಭರವಸೆ: ಶಾಸಕರು ಖುಷ್​
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ