AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

FDI: ಈ ವರ್ಷದ ಏಪ್ರಿಲ್​ನಿಂದ ಜುಲೈ ಅವಧಿಯಲ್ಲಿ 20.42 ಬಿಲಿಯನ್ ಯುಎಸ್​ಡಿ ಎಫ್​ಡಿಐ ಹರಿವು

ಪ್ರಸಕ್ತ ಹಣಕಾಸು ವರ್ಷದ ನಾಲ್ಕು ತಿಂಗಳ ಅವಧಿಯಲ್ಲಿ 20.42 ಬಿಲಿಯನ್ ಯುಎಸ್​ಡಿ ಎಫ್​ಡಿಐ ಭಾರತಕ್ಕೆ ಹರಿದುಬಂದಿದೆ. ಆ ಬಗ್ಗೆ ವಿವರ ಇಲ್ಲಿದೆ.

FDI: ಈ ವರ್ಷದ ಏಪ್ರಿಲ್​ನಿಂದ ಜುಲೈ ಅವಧಿಯಲ್ಲಿ 20.42 ಬಿಲಿಯನ್ ಯುಎಸ್​ಡಿ ಎಫ್​ಡಿಐ ಹರಿವು
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Sep 22, 2021 | 10:18 PM

Share

ಪ್ರಸಕ್ತ ಹಣಕಾಸು ವರ್ಷದ ಏಪ್ರಿಲ್-ಜುಲೈ ಅವಧಿಯಲ್ಲಿ ವಿದೇಶಿ ನೇರ ಹೂಡಿಕೆಗಳು (Foreign Direct Investment) ದುಪ್ಪಟ್ಟಾಗಿದ್ದು, 20.42 ಬಿಲಿಯನ್ ಅಮೆರಿಕನ್ ಡಾಲರ್‌ಗಿಂತ ಹೆಚ್ಚಾಗಿದೆ ಎಂದು ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯ ಬುಧವಾರ ತಿಳಿಸಿದೆ. 2021-22ರ ಮೊದಲ ನಾಲ್ಕು ತಿಂಗಳಲ್ಲಿ ಒಟ್ಟು ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ಒಳಹರಿವು 27.37 ಶತಕೋಟಿ ಡಾಲರ್​ಗೆ ಏರಿತು. ವರ್ಷದ ಹಿಂದಿನ ಅವಧಿಯಲ್ಲಿ ಇದು 16.92 ಬಿಲಿಯನ್ ಡಾಲರ್ ಆಗಿತ್ತು ಎನ್ನಲಾಗಿದೆ.

ಒಟ್ಟು ಎಫ್​ಡಿಐ ಈಕ್ವಿಟಿ ಒಳಹರಿವು, ಮರುಹೂಡಿಕೆ ಗಳಿಕೆ ಮತ್ತು ಇತರ ಬಂಡವಾಳವನ್ನು ಒಳಗೊಂಡಿದೆ. “2021-22ರ ಮೊದಲ ನಾಲ್ಕು ತಿಂಗಳಲ್ಲಿ (20.42 ಬಿಲಿಯನ್ ಯುಎಸ್​ಡಿ) ಎಫ್‌ಡಿಐ ಈಕ್ವಿಟಿ ಒಳಹರಿವು ಶೇಕಡಾ 112 ರಷ್ಟು ಬೆಳವಣಿಗೆಯಾಗಿದೆ (9.61 ಬಿಲಿಯನ್ ಡಾಲರ್)” ಎಂದು ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.

ಪರಿಶೀಲನೆಯ ಅವಧಿಯಲ್ಲಿ ಆಟೋಮೊಬೈಲ್ ಉದ್ಯಮವು ಅಗ್ರ ವಲಯವಾಗಿ ಹೊರಹೊಮ್ಮಿದೆ. ಒಟ್ಟು ಎಫ್‌ಡಿಐ ಈಕ್ವಿಟಿ ಒಳಹರಿವಿನಲ್ಲಿ ಶೇಕಡಾ 23ರಷ್ಟು ಪಾಲನ್ನು ಹೊಂದಿದೆ. ಆ ನಂತರ ಕಂಪ್ಯೂಟರ್ ಸಾಫ್ಟ್‌ವೇರ್ ಮತ್ತು ಹಾರ್ಡ್‌ವೇರ್ (ಶೇ 18) ಮತ್ತು ಸೇವಾ ವಲಯ (ಕ್ರಮವಾಗಿ ಶೇ 10). ಮಹಾರಾಷ್ಟ್ರ (ಶೇ 23) ಮತ್ತು ದೆಹಲಿ (ಶೇ 12) ನಂತರದ FDI ಈಕ್ವಿಟಿ ಒಳಹರಿವಿನಲ್ಲಿ ಶೇಕಡಾ 45ರಷ್ಟು ಪಾಲು ಹೊಂದಿರುವ ಕರ್ನಾಟಕ ಅಗ್ರ ಸ್ಥಾನದಲ್ಲಿ ಇರುವ ರಾಜ್ಯವಾಗಿದೆ.

“ಎಫ್‌ಡಿಐ ನೀತಿ ಸುಧಾರಣೆಗಳು, ಹೂಡಿಕೆ ಸುಲಭಗೊಳಿಸುವಿಕೆ ಮತ್ತು ವ್ಯಾಪಾರ ಮಾಡುವುದಕ್ಕೆ ಸುಲಭ ಆಗುವಂತೆ ನೀತಿ ಘೋಷಿಸುವಂತೆ ಸರ್ಕಾರ ತೆಗೆದುಕೊಂಡ ಕ್ರಮಗಳು ದೇಶಕ್ಕೆ ಎಫ್‌ಡಿಐ ಒಳಹರಿವು ಹೆಚ್ಚಿಸಲು ಕಾರಣವಾಗಿವೆ,” ಎಂದು ಸಚಿವಾಲಯ ಹೇಳಿದೆ.

ಇದನ್ನೂ ಓದಿ: ಚೀನಾದಿಂದ ವಿದೇಶಿ ಹೂಡಿಕೆಯಲ್ಲಿ ಭಾರಿ ಇಳಿಕೆ

(FDI Inflow Into India For First 4 Months Of FY22 To 20.42 Billion USD Here IS The Details)

Follow Us
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ