Sign In

By signing in or creating an account, you agree with Associated Broadcasting Company's Terms & Conditions and Privacy Policy.

September Bank Holidays: 30 ದಿನಗಳಲ್ಲಿ 14 ದಿನ ಬ್ಯಾಂಕ್​ಗಳಿಗೆ ರಜೆ, ಕೆಲಸ ಕಾರ್ಯಗಳನ್ನು ಮೊದಲೇ ಪೂರೈಸಿಕೊಳ್ಳಿ

ಸೆಪ್ಟೆಂಬರ್ ತಿಂಗಳಲ್ಲಿ ಹತ್ತಕ್ಕೂ ಹೆಚ್ಚು ರಜಾ ದಿನಗಳಿದ್ದು, ಏನೇ ಕೆಲಸ ಕಾರ್ಯಗಳಿದ್ದರೂ ಬ್ಯಾಂಕ್​ಗೆ ಸಂಬಂಧಿಸಿದ ಕೆಲಸಗಳನ್ನು ಮೊದಲೇ ಯೋಜಿಸಿಕೊಳ್ಳಿ.

September Bank Holidays: 30 ದಿನಗಳಲ್ಲಿ 14 ದಿನ ಬ್ಯಾಂಕ್​ಗಳಿಗೆ ರಜೆ, ಕೆಲಸ ಕಾರ್ಯಗಳನ್ನು ಮೊದಲೇ ಪೂರೈಸಿಕೊಳ್ಳಿ
ಸಾಂಕೇತಿಕ ಚಿತ್ರImage Credit source: FILE PHOTO
Follow us
TV9 Web
| Updated By: Rakesh Nayak Manchi

Updated on:Aug 25, 2022 | 9:57 AM

ಸೆಪ್ಟೆಂಬರ್ ತಿಂಗಳಲ್ಲಿ ಹತ್ತಕ್ಕೂ ಹೆಚ್ಚು ರಜಾ ದಿನಗಳಿದ್ದು, ಯಾವ ದಿನ ರಜೆಗಳಿವೆ ಎಂದು ಬ್ಯಾಂಕ್‌ಗಳಿಗೆ ಮೊದಲೇ ತಿಳಿದಿದರೆ ಗ್ರಾಹಕರು ಬ್ಯಾಂಕ್ ಕೆಲಸಕಾರ್ಯಗಳನ್ನು ಮೊದಲೇ ಯೋಜಿಸಬಹುದು. ಇಲ್ಲದಿದ್ದರೆ ತೊಂದರೆಗಳು ಎದುರಾಗುತ್ತವೆ. ಇದೇ ಕಾರಣಕ್ಕೆ ಭಾರತೀಯ ರಿಸರ್ವ್ ಬ್ಯಾಂಕ್ (RBI) ಪ್ರತಿ ತಿಂಗಳು ಬ್ಯಾಂಕ್ ರಜಾದಿನಗಳನ್ನು ಬಿಡುಗಡೆ ಮಾಡುತ್ತದೆ. ಸದ್ಯ ಐದು ದಿನಗಳು ಉರುಳಿದರೆ ಸೆಪ್ಟೆಂಬರ್ ತಿಂಗಳು ಆರಂಭವಾಗುತ್ತದೆ. ಸೆಪ್ಟೆಂಬರ್‌ನಲ್ಲಿ ಒಟ್ಟು 14 ದಿನಗಳ ಕಾಲ ಎಲ್ಲಾ ಬ್ಯಾಂಕ್‌ಗಳು ಮುಚ್ಚಲ್ಪಡುತ್ತವೆ. ಯಾವ ದಿನಗಳಲ್ಲಿ ರಜಾದಿನಗಳಿವೆ ಎಂದು ತಿಳಿದುಕೊಳ್ಳೋಣ.

ಆರ್‌ಬಿಐ ಕ್ಯಾಲೆಂಡರ್ ಪ್ರಕಾರ ಸೆಪ್ಟೆಂಬರ್‌ನಲ್ಲಿ 8 ದಿನಗಳ ರಜೆ ಇರುತ್ತದೆ. ಇವುಗಳಲ್ಲದೆ ಶನಿವಾರ, ಭಾನುವಾರ ಸೇರಿ 6 ದಿನಗಳಿವೆ. ಒಟ್ಟಾರೆಯಾಗಿ ಸೆಪ್ಟೆಂಬರ್ ತಿಂಗಳಲ್ಲಿ 14 ದಿನಗಳ ಕಾಲ ಬ್ಯಾಂಕ್‌ಗಳು ಬಂದ್ ಆಗಲಿವೆ. ಆದರೆ ವಾರಾಂತ್ಯದ ರಜಾ ದಿನಗಳನ್ನು ಹೊರತುಪಡಿಸಿ ಉಳಿದ ರಜಾದಿನಗಳು ರಾಜ್ಯದಿಂದ ರಾಜ್ಯಕ್ಕೆ ಬದಲಾಗುತ್ತವೆ. ಅಂದರೆ ಆಯಾ ರಾಜ್ಯಕ್ಕೆ ಸಂಬಂಧಿಸಿದ ಆಚರಣೆಗಳು, ಇತ್ಯಾದಿಗಳ ಮೇಲೆ ಅವಲಂಬಿತವಾಗಿರುತ್ತದೆ.

ಸೆಪ್ಟೆಂಬರ್ ತಿಂಗಳ ರಜಾದಿನಗಳ ಪಟ್ಟಿ

ಸೆಪ್ಟೆಂಬರ್ 1- ವಿನಾಯಕ ಚತುರ್ಥಿ (ಗೋವಾ), ಸೆಪ್ಟೆಂಬರ್ 4 – ಭಾನುವಾರ, ಸೆಪ್ಟೆಂಬರ್ 6 – ಕರ್ಮಪೂಜೆ, ಸೆಪ್ಟೆಂಬರ್ 7, 8 – ಓಣಂ (ಕೇರಳ) ಸೆಪ್ಟೆಂಬರ್ 9 – ಇಂದ್ರಜಾತ, ಸೆಪ್ಟೆಂಬರ್ 10 – ಶ್ರೀ ನರವಣ ಗುರು ಜಯಂತಿ ಮತ್ತು ಎರಡನೇ ಶನಿವಾರ, ಸೆಪ್ಟೆಂಬರ್ 11 – ಭಾನುವಾರ, ಸೆಪ್ಟೆಂಬರ್ 18 – ಭಾನುವಾರ, ಸೆಪ್ಟೆಂಬರ್ 21 – ಶ್ರೀ ನಾರಾಯಣ ಗುರು ಸಮಾಧಿ, ಸೆಪ್ಟೆಂಬರ್ 24 – ನಾಲ್ಕನೇ ಶನಿವಾರ, ಸೆಪ್ಟೆಂಬರ್ 25 – ಭಾನುವಾರ.

ಕರ್ಮ ಪೂಜೆಯ ಹಿನ್ನೆಲೆ ಜಾರ್ಖಂಡ್‌ನಲ್ಲಿ ಸೆಪ್ಟೆಂಬರ್ 6 ರಂದು ಬ್ಯಾಂಕ್​ಗಳಿಗೆ ರಜೆ ಇದ್ದು, ಓಣಂ ಪ್ರಯುಕ್ತ ಸೆಪ್ಟೆಂಬರ್ 7 ಮತ್ತು 8 ರಂದು ತಿರುವನಂತಪುರಂ ಮತ್ತು ಕೊಚ್ಚಿಯಲ್ಲಿ ಬ್ಯಾಂಕ್‌ಗಳು ಮುಚ್ಚಲ್ಪಡುತ್ತವೆ. ಸೆಪ್ಟೆಂಬರ್ 9 ರಂದು ಇಂದ್ರಜಾತದಿಂದಾಗಿ ಸಿಕ್ಕಿಂನ ಗ್ಯಾಂಗ್ಟಾಕ್​ನಲ್ಲಿ ಬ್ಯಾಂಕ್ ರಜೆ ಇರಲಿದೆ. ನಾರಾಯಣ ಗುರು ಸಮಾಧಿ ದಿನ ಹಿನ್ನೆಲೆ ಸೆ.21ರಂದು ಕೇರಳದ ತಿರುವನಂತಪುರಂ ಮತ್ತು ಕೊಚ್ಚಿಯ ಬ್ಯಾಂಕುಗಳಿಗೆ ರಜೆ ಇರಲಿದೆ. ನವರಾತ್ರಿ ಸ್ಥಾಪನೆ ಹಿನ್ನೆಲೆ ಸೆಪ್ಟೆಂಬರ್ 26 ರಂದು ಮಣಿಪುರದ ಜೈಪುರ ಮತ್ತು ಇಂಫಾಲ್​ನಲ್ಲಿ ಬ್ಯಾಂಕ್ ರಜೆ ಇರುತ್ತದೆ. ಸೆಪ್ಟೆಂಬರ್ 24 ರಂದು ನಾಲ್ಕನೇ ಶನಿವಾರ ಆಗಿರುವುದರಿಂದ ಬ್ಯಾಂಗ್​ಗಳಿಗೆ ರಜೆ ಇರುತ್ತದೆ.

ಮತ್ತಷ್ಟು ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:50 am, Thu, 25 August 22

ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ
ದುಬಾರಿ ಬೈಕ್​ಗಳು ಕಳ್ಳನ ಪ್ರಥಮ ಆದ್ಯತೆ, ಅವು ಸಿಗದಿದ್ದರೆ ಬೇರೆಯವೂ ಓಕೆ
ದುಬಾರಿ ಬೈಕ್​ಗಳು ಕಳ್ಳನ ಪ್ರಥಮ ಆದ್ಯತೆ, ಅವು ಸಿಗದಿದ್ದರೆ ಬೇರೆಯವೂ ಓಕೆ
ಚೀನಾ: ಕಾರ್ಯಕ್ರಮವೊಂದರಲ್ಲಿ ಜನರ ಮೇಲೆ ಎಐ ರೊಬೊಟ್​ನಿಂದ ಹಲ್ಲೆ
ಚೀನಾ: ಕಾರ್ಯಕ್ರಮವೊಂದರಲ್ಲಿ ಜನರ ಮೇಲೆ ಎಐ ರೊಬೊಟ್​ನಿಂದ ಹಲ್ಲೆ
ಶಾಲು ಹೊದಿಸಿದ ವಿಜಯೇಂದ್ರರ ಬೆನ್ನುತಟ್ಟಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಶಾಲು ಹೊದಿಸಿದ ವಿಜಯೇಂದ್ರರ ಬೆನ್ನುತಟ್ಟಿದ ಮುಖ್ಯಮಂತ್ರಿ ಸಿದ್ದರಾಮಯ್ಯ
Shilpa Shetty: ಕಟೀಲು ದೇವಾಲಯಕ್ಕೆ ಬಂದ ನಟಿ ಶಿಲ್ಪಾ ಶೆಟ್ಟಿ
Shilpa Shetty: ಕಟೀಲು ದೇವಾಲಯಕ್ಕೆ ಬಂದ ನಟಿ ಶಿಲ್ಪಾ ಶೆಟ್ಟಿ
ತಮ್ಮ ಹೇಳಿಕೆಯಲ್ಲಿ ಶ್ರೀರಾಮುಲು ಶಿಂಧೆಯನ್ನು ಹತ್ತಾರು ಬಾರಿ ನೆನೆಯುತ್ತಾರೆ
ತಮ್ಮ ಹೇಳಿಕೆಯಲ್ಲಿ ಶ್ರೀರಾಮುಲು ಶಿಂಧೆಯನ್ನು ಹತ್ತಾರು ಬಾರಿ ನೆನೆಯುತ್ತಾರೆ
ಕ್ರಿಕೆಟ್ ತಂಡದ ಜೊತೆ ಚಾಮುಂಡೇಶ್ವರಿ ಬೆಟ್ಟಕ್ಕೆ ಭೇಟಿ ನೀಡಿದ ಸುದೀಪ್
ಕ್ರಿಕೆಟ್ ತಂಡದ ಜೊತೆ ಚಾಮುಂಡೇಶ್ವರಿ ಬೆಟ್ಟಕ್ಕೆ ಭೇಟಿ ನೀಡಿದ ಸುದೀಪ್