AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

September Bank Holidays: 30 ದಿನಗಳಲ್ಲಿ 14 ದಿನ ಬ್ಯಾಂಕ್​ಗಳಿಗೆ ರಜೆ, ಕೆಲಸ ಕಾರ್ಯಗಳನ್ನು ಮೊದಲೇ ಪೂರೈಸಿಕೊಳ್ಳಿ

ಸೆಪ್ಟೆಂಬರ್ ತಿಂಗಳಲ್ಲಿ ಹತ್ತಕ್ಕೂ ಹೆಚ್ಚು ರಜಾ ದಿನಗಳಿದ್ದು, ಏನೇ ಕೆಲಸ ಕಾರ್ಯಗಳಿದ್ದರೂ ಬ್ಯಾಂಕ್​ಗೆ ಸಂಬಂಧಿಸಿದ ಕೆಲಸಗಳನ್ನು ಮೊದಲೇ ಯೋಜಿಸಿಕೊಳ್ಳಿ.

September Bank Holidays: 30 ದಿನಗಳಲ್ಲಿ 14 ದಿನ ಬ್ಯಾಂಕ್​ಗಳಿಗೆ ರಜೆ, ಕೆಲಸ ಕಾರ್ಯಗಳನ್ನು ಮೊದಲೇ ಪೂರೈಸಿಕೊಳ್ಳಿ
ಸಾಂಕೇತಿಕ ಚಿತ್ರImage Credit source: FILE PHOTO
TV9 Web
| Edited By: Rakesh Nayak Manchi|

Updated on:Aug 25, 2022 | 9:57 AM

Share

ಸೆಪ್ಟೆಂಬರ್ ತಿಂಗಳಲ್ಲಿ ಹತ್ತಕ್ಕೂ ಹೆಚ್ಚು ರಜಾ ದಿನಗಳಿದ್ದು, ಯಾವ ದಿನ ರಜೆಗಳಿವೆ ಎಂದು ಬ್ಯಾಂಕ್‌ಗಳಿಗೆ ಮೊದಲೇ ತಿಳಿದಿದರೆ ಗ್ರಾಹಕರು ಬ್ಯಾಂಕ್ ಕೆಲಸಕಾರ್ಯಗಳನ್ನು ಮೊದಲೇ ಯೋಜಿಸಬಹುದು. ಇಲ್ಲದಿದ್ದರೆ ತೊಂದರೆಗಳು ಎದುರಾಗುತ್ತವೆ. ಇದೇ ಕಾರಣಕ್ಕೆ ಭಾರತೀಯ ರಿಸರ್ವ್ ಬ್ಯಾಂಕ್ (RBI) ಪ್ರತಿ ತಿಂಗಳು ಬ್ಯಾಂಕ್ ರಜಾದಿನಗಳನ್ನು ಬಿಡುಗಡೆ ಮಾಡುತ್ತದೆ. ಸದ್ಯ ಐದು ದಿನಗಳು ಉರುಳಿದರೆ ಸೆಪ್ಟೆಂಬರ್ ತಿಂಗಳು ಆರಂಭವಾಗುತ್ತದೆ. ಸೆಪ್ಟೆಂಬರ್‌ನಲ್ಲಿ ಒಟ್ಟು 14 ದಿನಗಳ ಕಾಲ ಎಲ್ಲಾ ಬ್ಯಾಂಕ್‌ಗಳು ಮುಚ್ಚಲ್ಪಡುತ್ತವೆ. ಯಾವ ದಿನಗಳಲ್ಲಿ ರಜಾದಿನಗಳಿವೆ ಎಂದು ತಿಳಿದುಕೊಳ್ಳೋಣ.

ಆರ್‌ಬಿಐ ಕ್ಯಾಲೆಂಡರ್ ಪ್ರಕಾರ ಸೆಪ್ಟೆಂಬರ್‌ನಲ್ಲಿ 8 ದಿನಗಳ ರಜೆ ಇರುತ್ತದೆ. ಇವುಗಳಲ್ಲದೆ ಶನಿವಾರ, ಭಾನುವಾರ ಸೇರಿ 6 ದಿನಗಳಿವೆ. ಒಟ್ಟಾರೆಯಾಗಿ ಸೆಪ್ಟೆಂಬರ್ ತಿಂಗಳಲ್ಲಿ 14 ದಿನಗಳ ಕಾಲ ಬ್ಯಾಂಕ್‌ಗಳು ಬಂದ್ ಆಗಲಿವೆ. ಆದರೆ ವಾರಾಂತ್ಯದ ರಜಾ ದಿನಗಳನ್ನು ಹೊರತುಪಡಿಸಿ ಉಳಿದ ರಜಾದಿನಗಳು ರಾಜ್ಯದಿಂದ ರಾಜ್ಯಕ್ಕೆ ಬದಲಾಗುತ್ತವೆ. ಅಂದರೆ ಆಯಾ ರಾಜ್ಯಕ್ಕೆ ಸಂಬಂಧಿಸಿದ ಆಚರಣೆಗಳು, ಇತ್ಯಾದಿಗಳ ಮೇಲೆ ಅವಲಂಬಿತವಾಗಿರುತ್ತದೆ.

ಸೆಪ್ಟೆಂಬರ್ ತಿಂಗಳ ರಜಾದಿನಗಳ ಪಟ್ಟಿ

ಸೆಪ್ಟೆಂಬರ್ 1- ವಿನಾಯಕ ಚತುರ್ಥಿ (ಗೋವಾ), ಸೆಪ್ಟೆಂಬರ್ 4 – ಭಾನುವಾರ, ಸೆಪ್ಟೆಂಬರ್ 6 – ಕರ್ಮಪೂಜೆ, ಸೆಪ್ಟೆಂಬರ್ 7, 8 – ಓಣಂ (ಕೇರಳ) ಸೆಪ್ಟೆಂಬರ್ 9 – ಇಂದ್ರಜಾತ, ಸೆಪ್ಟೆಂಬರ್ 10 – ಶ್ರೀ ನರವಣ ಗುರು ಜಯಂತಿ ಮತ್ತು ಎರಡನೇ ಶನಿವಾರ, ಸೆಪ್ಟೆಂಬರ್ 11 – ಭಾನುವಾರ, ಸೆಪ್ಟೆಂಬರ್ 18 – ಭಾನುವಾರ, ಸೆಪ್ಟೆಂಬರ್ 21 – ಶ್ರೀ ನಾರಾಯಣ ಗುರು ಸಮಾಧಿ, ಸೆಪ್ಟೆಂಬರ್ 24 – ನಾಲ್ಕನೇ ಶನಿವಾರ, ಸೆಪ್ಟೆಂಬರ್ 25 – ಭಾನುವಾರ.

ಕರ್ಮ ಪೂಜೆಯ ಹಿನ್ನೆಲೆ ಜಾರ್ಖಂಡ್‌ನಲ್ಲಿ ಸೆಪ್ಟೆಂಬರ್ 6 ರಂದು ಬ್ಯಾಂಕ್​ಗಳಿಗೆ ರಜೆ ಇದ್ದು, ಓಣಂ ಪ್ರಯುಕ್ತ ಸೆಪ್ಟೆಂಬರ್ 7 ಮತ್ತು 8 ರಂದು ತಿರುವನಂತಪುರಂ ಮತ್ತು ಕೊಚ್ಚಿಯಲ್ಲಿ ಬ್ಯಾಂಕ್‌ಗಳು ಮುಚ್ಚಲ್ಪಡುತ್ತವೆ. ಸೆಪ್ಟೆಂಬರ್ 9 ರಂದು ಇಂದ್ರಜಾತದಿಂದಾಗಿ ಸಿಕ್ಕಿಂನ ಗ್ಯಾಂಗ್ಟಾಕ್​ನಲ್ಲಿ ಬ್ಯಾಂಕ್ ರಜೆ ಇರಲಿದೆ. ನಾರಾಯಣ ಗುರು ಸಮಾಧಿ ದಿನ ಹಿನ್ನೆಲೆ ಸೆ.21ರಂದು ಕೇರಳದ ತಿರುವನಂತಪುರಂ ಮತ್ತು ಕೊಚ್ಚಿಯ ಬ್ಯಾಂಕುಗಳಿಗೆ ರಜೆ ಇರಲಿದೆ. ನವರಾತ್ರಿ ಸ್ಥಾಪನೆ ಹಿನ್ನೆಲೆ ಸೆಪ್ಟೆಂಬರ್ 26 ರಂದು ಮಣಿಪುರದ ಜೈಪುರ ಮತ್ತು ಇಂಫಾಲ್​ನಲ್ಲಿ ಬ್ಯಾಂಕ್ ರಜೆ ಇರುತ್ತದೆ. ಸೆಪ್ಟೆಂಬರ್ 24 ರಂದು ನಾಲ್ಕನೇ ಶನಿವಾರ ಆಗಿರುವುದರಿಂದ ಬ್ಯಾಂಗ್​ಗಳಿಗೆ ರಜೆ ಇರುತ್ತದೆ.

ಮತ್ತಷ್ಟು ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:50 am, Thu, 25 August 22

Follow Us
Web contact
Web contact

TV9 Kannada

Read More
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​